BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯ ತಂತ್ರಜ್ಞಾನಗಳಲ್ಲಿ ಅಭಿವೃದ್ಧಿ ಹೊಂದಿದೆ : ಈಶ್ವರ್ ಖಂಡ್ರೆ
ಇತರೆ ಸುದ್ಧಿಗಳು

ರಾಜ್ಯ ತಂತ್ರಜ್ಞಾನಗಳಲ್ಲಿ ಅಭಿವೃದ್ಧಿ ಹೊಂದಿದೆ : ಈಶ್ವರ್ ಖಂಡ್ರೆ

By News Desk BenkiyabaleUpdated:September 12, 2022 5:07 pm

ತುಮಕೂರು


ರಾಜ್ಯ ಶಿಕ್ಷಣ, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ
ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಅತ್ಯಂತ ಮುಂದುವರೆದಿದ್ದರೆ ಅದಕ್ಕೆ ಕರ್ನಾಟಕದಲ್ಲಿರುವ ವೀರಶೈವ ಲಿಂಗಾಯಿತ ಮಠ ಮಾನ್ಯಗಳ ಕೊಡುಗೆ ಆಪಾರವಾಗಿದೆ ಎಂದು ವೀರಶೈವ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ನಗರದ ಎಸ್.ಐ.ಟಿ.ಯ ಬಿರ್ಲಾ ಸಭಾಂಗಣದಲ್ಲಿಂದು ವೀರಶೈವ, ಲಿಂಗಾಯಿತ ಸೇವಾ ಸಮಿತಿವತಿಯಿಂದ ಆಯೋಜಿಸಿದ್ದ ಪ್ರತಿಭಾಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತಿದ್ದ ಅವರು,ವೀರಶೈವ ಮತ್ತು ಲಿಂಗಾಯಿತ ಸಮಾಜದ ಇತಿಹಾಸ ಮತ್ತು ಪರಂಪರೆ ಬಹಳ ದೊಡ್ಡದಾಗಿದೆ.ವೀರಕ್ತ ಮತ್ತು ರಾಜಾಶ್ರಯದ ಮಠಗಳು,ಜಾತಿ, ಧಮದ ಭೇಧ ಮಾಡದೆ ಎಲ್ಲಾ ಮಕ್ಕಳಿಗೂ ಊಟ, ವಸತಿಯೊಂದಿಗೆ ಶಿಕ್ಷಣ ನೀಡುವ ಮೂಲಕ ಪ್ರಪಂಚ ಮೂಲೆ ಮೂಲೆಗಳಲ್ಲಿಯೂ ಭಾರತೀಯರು ದೊರೆಯುವಂತೆ ಮಾಡಿದ್ದಾರೆ ಎಂದರು.
ನಮ್ಮ ಸಮಾಜದಲ್ಲಿ ಪ್ರತಿಭಾವಂತರಿಗೆ ಕೊರತೆಯಿಲ್ಲ.ಆದರೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ಆದರೆ ಹೆಚ್ಚಿನದನ್ನು ಸಾಧಿಸಬಹುದು ಎಂದರು.
21ನೇ ಶತಮಾನ ಭಾರತೀಯರ ಯುಗ. ಏಕೆಂದರೆ ದೇಶದಲ್ಲಿ ಅತ್ಯಂತ ಸಶಕ್ತ ಯುವಜನತೆ ಇದೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳುವಂತಹ ಕಾರ್ಯಕ್ರಮಗಳು ಆಗಬೇಕಿದೆ. ಪ್ರತಿಭೆಯ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಂಡು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡರೆ, ನಿಮಗೆ ವಿದ್ಯೆ ಕಲಿಸಿದ ಗುರುಗಳು, ಜನ್ಮ ನೀಡಿದ ತಂದೆ ತಾಯಿಗಳು ಹಾಗೂ ಅಶ್ರಯ ನೀಡಿದ ಮಠ, ಮಾನ್ಯಗಳಿಗೂ ಕೀರ್ತಿ ತಂದಂತಾಗುತ್ತದೆ.ದೈಹಿಕ ಆರೋಗ್ಯದ ಜೊತೆಗೆ, ಮಾನಸಿಕ ಸದೃಢತೆಯನ್ನು ನಿವೆಲ್ಲರೂ ಹೊಂದುವ ಅಗತ್ಯವಿದೆ. ಈ ವರ್ಷದಲ್ಲಿಯೇ ವೀರಶೈವ ಮಹಾಸಭಾವತಿಯಿಂದ ಸುಮಾರು 1.20 ಕೋಟಿ ರೂಗಳನ್ನು ಖರ್ಚು ಮಾಡಿ, ಇಡೀ ರಾಜ್ಯದ ವೀರಶೈವ, ಲಿಂಗಾಯಿತ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದು ವೀರಶೈವ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಘೋಷಿಸಿದರು.
ಎನ್.ಎ.ಎಲ್.ನ ವಿಜ್ಞಾನಿ ಡಾ.ಸಿ.ಎಂ.ಮಂಜುನಾಥ್ ಮಾತನಾಡಿ, ಪ್ರತಿಭಾಪುರಸ್ಕಾರವೆಂಬುದು ಇನ್ನೊಬ್ಬರಿಗೆ ಸ್ಪೂರ್ತಿ ನೀಡುವ ಉದ್ದೇಶದಿಂದ ಮಾಡುವ ಗೌರವ. 12ನೇ ಶತಮಾನದಲ್ಲಿ ಬಸವಣ್ಣನವರು ಕಾಯಕವೇ ಕೈಲಾಸ ಎಂಬ ನೀತಿಯನ್ನು ನಮ್ಮ ಮುಂದಿಟ್ಟಿದ್ದಾರೆ. ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಎಂಬುದು ಆರಂಭವಷ್ಟೇ, ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ.ಅದನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಸಂಸದ ಜಿ.ಎಸ್.ಬಸವರಾಜು ಮಾತನಾಡಿ,ವೀರಶೈವ ಸಮಾಜದ ಎಂದಿಗೂ ಭೇಧ,ಭಾವ ಮಾಡಿದ ಸಮಾಜವಲ್ಲ. ಹಾಗಾಗಿ ಯುವಜನರು ಸಹ ಎಲ್ಲರನ್ನು ಒಳಗೊಳ್ಳುವ ಕೆಲಸವನ್ನು ಮಾಡಬೇಕು. ಗುಂಪುಗಾರಿಕೆಯಿಂದ ಸಮಾಜದ ಏಳಿಗೆ ಸಾಧ್ಯವಿಲ್ಲ. ಪ್ರತಿಭಾವಂತರು ಉದ್ಯೋಗ ಹುಡುಕದೆ, ತಾವೇ ನಾಲ್ವರಿಗೆ ಉದ್ಯೋಗ ನೀಡುವಂತಹ ಉದ್ದಿಮೆದಾರರಾಗಿ ಬೆಳೆಯಬೇಕೆಂದು ಸಲಹೆ ನೀಡಿದರು.
ವಿಟಿಯು ಸಿಂಡಿಕೇಟ್ ಸದಸ್ಯ ಡಾ.ಡಿ.ಎಸ್.ಸುರೇಶಕುಮಾರ್, ಬುದ್ದಿವಂತಿಕೆಯ ಜೊತೆಗೆ, ಸಾಮಾಜಿಕ ಜ್ಞಾನವೂ ಕೂಡ ನಿಮ್ಮ ಜೀವನವನ್ನು ಸುಂದರವಾಗಿ ರೂಪಿಸಬಲ್ಲದು, ಸ್ವಯಂ ಶಿಸ್ತಿನ ಜೊತೆಗೆ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ, ಪರಿಶ್ರಮ, ಆತ್ಮವಿಶ್ವಾಸ ನಿಮ್ಮನ್ನು ಮೇಲ್ಮುಖವಾಗಿ ತೆಗೆದುಕೊಂಡು ಹೋಗಲಿದೆ ಎಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಸಿದ್ದಗಂಗೆಯ ಶ್ರೀಶ್ರೀಸಿದ್ದಲಿಂಗಸ್ವಾಮೀಜಿ ಮಾತನಾಡಿ, ಯುವಜನರು ಸೇರಿ ವೀರಶೈವ ಲಿಂಗಾಯಿತ ಸೇವಾ ಸಮಿತಿಯನ್ನು ರಚಿಸಿಕೊಂಡು, ಪ್ರತಿಭಾವಂತರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಸಂತೋಷದ ಕೆಲಸ, ಪ್ರಯತ್ನ, ಪರಿಶ್ರಮ, ವಿಶ್ವಾಸ ಈ ಮೂರು ಅಂಶಗಳು ನಿಮ್ಮನ್ನು ರೂಪಿಸಬಲ್ಲವು.ಶಿಕ್ಷಣದ ಗುರಿ ಸರ್ಟಿಪಿಕೇಟ್ ಅಲ್ಲ, ಚಾರಿತ್ರ ನಿರ್ಮಾಣ ಎಂಬುದನ್ನುನಾವೆಲ್ಲರೂ ಆರ್ಥ ಮಾಡಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವೆಯ ಶ್ರೀಕಾರದ ವೀರಬಸವ ಸ್ವಾಮೀಜಿಗಳು ಆಶೀರ್ವಚನ ನೀಡಿದರು.ವೇದಿಕೆಯಲ್ಲಿ ಪಾಲನೇತ್ರಯ್ಯ, ಕರುನಾಡ ವಿಜಯಸೇನೆ ರಾಜ್ಯಾಧ್ಯಕ್ಷ ಹೆಚ್.ಎನ್.ದೀಪಕ್, ಎಸ್.ಡಿ.ದಿಲೀಪ್ ಕುಮಾರ್,ಶಶಿಹುಲಿಕುಂಟೆ, ಪಾಲಿಕೆ ಸದಸ್ಯ
ಮಹೇಶ್,ಟಿ.ಆರ್.ಸದಾಶಿವಯ್ಯ, ಕೊಪ್ಪಳ್ ನಾಗರಾಜು, ಹೆಚ್.ಎಂ.ರವೀಶಯ್ಯ, ಬೆಸ್ಕಾಂ ಎಸ್‍ಇ ನಟರಾಜು, ವೀರಶೈವ,ಲಿಂಗಾಯಿತ ಸೇವಾ ಸಮಿತಿಯ ಅಧ್ಯಕ್ಷ ದರ್ಶನಕುಮಾರ್,
ಪ್ರಧಾನ ಕಾರ್ಯದರ್ಶಿ ಹೆಚ್.ಎಂ.ರವೀಶ್, ಕಾರ್ಯಾಧ್ಯಕ್ಷ ಎಂ.ಎನ್.ಗುರುಪ್ರಸಾದ್ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

(Visited 3 times, 1 visits today)
BJP Congress tumkur
Previous Articleಘನಪುರಿ ಗಣೇಶೋತ್ಸವ : ಸುರೇಶ್ ಗೌಡ
Next Article ಆರ್ಥಿಕತೆಗೆ ಶಕ್ತಿ ನೀಡಿ ದೇಶಕ್ಕೆ ಮಾದರಿ ನಾಡಪ್ರಭು ಕೆಂಪೇಗೌಡ
News Desk Benkiyabale

Related Posts

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.