BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
  • ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೋಲಿನಿಂದಲೇ ಗೆಲುವಿನ ಸೋಪಾನ
ಇತರೆ ಸುದ್ಧಿಗಳು

ಸೋಲಿನಿಂದಲೇ ಗೆಲುವಿನ ಸೋಪಾನ

By News Desk BenkiyabaleUpdated:September 12, 2022 5:17 pm

ತುಮಕೂರು


ಸೋಲು ಅವಮಾನವಲ್ಲ. ಸೋಲಿನಿಂದಲೇ ಗೆಲುವಿನ ಸೋಪಾನ ಎಂಬುದು ಬಹಳಷ್ಟು ಜನರಿಗೆ ತಿಳಿದಿಲ್ಲ. ವಿದ್ಯಾರ್ಥಿಗಳಿರಲಿ, ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿರಲಿ, ಸೋಲನ್ನು ಸವಾಲಾಗಿ ಸ್ವೀಕರಿಸಿದಾಗ ಖಂಡಿತ ಮುಂದೆ ಯಶಸ್ಸು ಸಿಗಲಿದೆ ಎಂದು ಶ್ರೀ ಸಿದ್ಧಾರ್ಥ ಮಹಾ ವಿದ್ಯಾಲಯದ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರು, ಖ್ಯಾತ ಮನೋವೈದ್ಯರಾದ ಡಾ.ಎಂ.ಟಿ.ಸತ್ಯನಾರಾಯಣ ವಿಶ್ಲೇಷಿಸಿದರು.
ವರದಕ್ಷಿಣೆ ವಿರೋಧಿ ವೇದಿಕೆ, ತುಮಕೂರು ನಗರ ಸಾಂತ್ವನ ಕೇಂದ್ರ, ವಾಸವಿ ವಿದ್ಯಾಪೀಠ ಇವರ ಸಂಯುಕ್ತಾಶ್ರಯದಲ್ಲಿ ಎಸ್.ಐ.ಟಿ. ಬಡಾವಣೆಯಲ್ಲಿರುವ ವಾಸವಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಮನೋವೈದ್ಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಸಮಸ್ಯೆಗಳು ಎಲ್ಲರಿಗೂ ಬರುತ್ತವೆ. ಇತ್ತೀಚಿನ ದಿನಗಳಲ್ಲಿ ಸಮಸ್ಯೆಗಳ ಆಗರವೇ ತುಂಬಿಕೊಳ್ಳುತ್ತಿದೆ. ವಿದ್ಯಾರ್ಥಿಗಳು ಇಂತಹ ವಿಷಯಗಳತ್ತ ಗಮನ ಹರಿಸಬಾರದು. ಓದು ಮುಗಿಯುವ ತನಕ ಬೇರೆ ಚಟುವಟಿಕೆಗಳತ್ತ ಓಗೂಡಬಾರದು. ಒಂದು ವೇಳೆ ಪರೀಕ್ಷೆಯಲ್ಲಿ ಅಂಕಗಳು ಕಡಿಮೆ ಬಂದರೂ ಸಹ ಅದೇ ಅಂತಿಮವಲ್ಲ. ಬದುಕಿನಲ್ಲಿ ಸಾಧಿಸುವುದು ಬಹಳಷ್ಟಿದೆ. ಹೋರಾಟದ ಮನೋಭಾವ ಮುಖ್ಯವಾಗಬೇಕು. ಎಲ್ಲದನ್ನೂ ಇಷ್ಟಪಟ್ಟು ಸ್ವೀಕರಿಸಿದರೆ ಕಷ್ಟವಾಗಲಾರದು ಎಂದವರು ಸಲಹೆ ನೀಡಿದರು.
ಪ್ರತಿಯೊಂದು ಸಮಸ್ಯೆಗೂ ಒಂದೊಂದು ಪರಿಹಾರ ಇದ್ದೇ ಇರುತ್ತದೆ. ಒಂದು ಬೀಗಕ್ಕೆ ಕೀ ಹೇಗೆ ಮುಖ್ಯವೋ ಹಾಗೆಯೇ ಸಮಸ್ಯೆಗಳಿಗೂ ಪರಿಹಾರಗಳು ಇರುತ್ತವೆ. ಅದನ್ನು ಹುಡುಕಿಕೊಳ್ಳುವ ಮನಸ್ಸು ಇರಬೇಕು. ಕೆಲವು ಸಮಸ್ಯೆಗಳಿಗೆ ಚಿಕಿತ್ಸೆಯ ಅಗತ್ಯ ಇರುತ್ತದೆ. ಹದಿಹರೆಯದವರಲ್ಲಿ ಪ್ರೇಮ ವೈಫಲ್ಯ ಹೆಚ್ಚುತ್ತಿದ್ದು, ಇಂತಹವರು ಮದ್ಯ ಮತ್ತು ಮಾದಕ ವಸ್ತುಗಳತ್ತ ಗಮನ ಹರಿಸುತ್ತಿದ್ದಾರೆ. ಇದು ಮತ್ತಷ್ಟು ದುಷ್ಪರಿಣಾಮಗಳಿಗೆ ಕಾರಣವಾಗಲಿದೆ. ಇದಕ್ಕೆ ಬದಲಾಗಿ ಆತ್ಮವಿಶ್ವಾಸ ಮೂಡಿಸಿಕೊಂಡು ಬದುಕಿನ ದಾರಿ ಕಂಡುಕೊಳ್ಳಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷೆ ಎಂ.ಸಿ. ಲಲಿತ ಮಾತನಾಡಿ ಮನಸ್ಸು ಯಾವತ್ತೂ ಕ್ರಿಯಾತ್ಮಕ ಚಟುವಟಿಕೆಗಳಿಂದ ಕೂಡಿರಬೇಕು. ಮಾನಸಿಕ ಸದೃಢತೆ ಇದ್ದರೆ ಶಾರೀರಿಕವಾಗಿಯೂ ಸದೃಢತೆ ಹೊಂದುತ್ತೇವೆ. ಆದರೆ ಕೆಲವರು ಸೋಲಿನಿಂದ ದೃತಿಗೆಡುತ್ತಾರೆ. ಮಾನಸಿಕವಾಗಿ ದುರ್ಬಲ ಮನಸ್ಸಿಗೆ ಅವಕಾಶ ಕೊಟ್ಟಾಗ ಮನಸ್ಸು ಘಾಸಿಗೆ ಒಳಗಾಗುತ್ತದೆ. ಇದೆಲ್ಲದರಿಂದ ಹೊರಬರಬೇಕಾದರೆ ಮಾನಸಿಕವಾಗಿ ಧೈರ್ಯ ತಂದುಕೊಳ್ಳುವ ಅಗತ್ಯತೆ ಇದೆ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಹಿರಿಯ ಲೇಖಕಿ ಬಾ.ಹ.ರಮಾಕುಮಾರಿ ಮಾತನಾಡಿ ಬಹಳಷ್ಟು ಮಂದಿ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇದರಿಂದ ಹೊರಬರುವ ದಾರಿಗಳಿದ್ದರೂ ಅತ್ತ ಮನಸ್ಸು ಮಾಡುತ್ತಿಲ್ಲ. ವಿದ್ಯಾರ್ಥಿಗಳಿಂದ ಹಿಡಿದು ವಯೋವೃದ್ಧರವರೆಗೆ ಒಂದೊಂದು ಸಮಸ್ಯೆಗಳು ಕಾಡುತ್ತವೆ. ವರದಕ್ಷಿಣೆ ವಿರೋಧಿ ವೇದಿಕೆಯು ಇಂತಹ ಸಮಸ್ಯೆಗಳಿಗೆ ಪರಿಹಾರಾತ್ಮಕವಾಗಿ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ ಎಂದು ವಿವರಿಸಿದರು.
ತುಮಕೂರು ನಗರ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಸಂರಕ್ಷಣಾಧಿಕಾರಿ ಕಲ್ಪನ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿ ಮಾನಸಿಕ ಸದೃಢತೆಗೆ ಯೋಗ, ಧ್ಯಾನದಂತಹ ಸಕ್ರಿಯ ಚಟುವಟಿಕೆಗಳಿಗೆ ಗಮನ ಹರಿಸಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಹೆಚ್.ವಿ.ಚಂದ್ರಶೇಖರ ಆರಾಧ್ಯ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಸಮಾರಂಭದಲ್ಲಿ ವರದಕ್ಷಿಣೆ ವಿರೋಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ ಮತ್ತಿತರರು ಮಾತನಾಡಿದರು. ಪದಾಧಿಕಾರಿಗಳಾದ ಲಲಿತ ಮಲ್ಲಪ್ಪ, ಗೀತಾ ನಾಗೇಶ್, ನರೇಂದ್ರಬಾಬು ಮತ್ತಿತರರಿದ್ದರು. ಸಾಂತ್ವನ ಕೇಂದ್ರದ ಪಾರ್ವತಮ್ಮ, ಗಂಗಲಕ್ಷ್ಮಿ, ರಾಧ ಅವರ ತಂಡ ಅರಿವಿನ ಗೀತೆಗಳನ್ನು ಹಾಡಿದರು. ವರ್ಷ ಮತ್ತು ಹಿಮರಶ್ಮಿ ಪ್ರಾರ್ಥಿಸಿದರು. ಜೀವಶಾಸ್ತ್ರ ಉಪನ್ಯಾಸಕ ಬೆಂಕಿ ವಸಂತಕುಮಾರ್ ಸ್ವಾಗತಿಸಿದರು. ದೈಹಿಕ ಶಿಕ್ಷಕ ವಿನೋದ್ ವಂದಿಸಿದರು. ಗಣಿತ ಶಿಕ್ಷಕ ಜಿ.ಹನುಮಂತಯ್ಯ ನಿರೂಪಿಸಿದರು.

(Visited 2 times, 1 visits today)
tumkur
Previous Articleಆರ್ಥಿಕತೆಗೆ ಶಕ್ತಿ ನೀಡಿ ದೇಶಕ್ಕೆ ಮಾದರಿ ನಾಡಪ್ರಭು ಕೆಂಪೇಗೌಡ
Next Article ಲಾಂಚನ ಚಿತ್ರ ಬರೆಯುವ ಸ್ಪರ್ಧೆ
News Desk Benkiyabale

Related Posts

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm news

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm news

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm news
ತಾಜಾ ಸುದ್ಧಿಗಳು

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm
Our Youtube Channel
Our Picks

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

By News Desk BenkiyabaleJune 20, 2026 5:11 pm

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ…

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.