BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗಾಂಧೀಜಿಯವರ ಆದರ್ಶ ತತ್ವಗಳನ್ನು ಪಾಲಿಸಿ
ಇತರೆ ಸುದ್ಧಿಗಳು

ಗಾಂಧೀಜಿಯವರ ಆದರ್ಶ ತತ್ವಗಳನ್ನು ಪಾಲಿಸಿ

By News Desk BenkiyabaleUpdated:October 03, 2022 5:13 pm

ತುಮಕೂರು


ಅಹಿಂಸಾ ತತ್ವದ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟಂತಹ ಮಹಾನ್ ಚೇತನ, ಮಹಾತ್ಮಗಾಂಧೀಜಿಯವರು ನಡೆದಂತಹ ದಾರಿ, ನೀಡಿದ ಮಾರ್ಗದರ್ಶನ ನಮ್ಮೆಲ್ಲರಿಗೂ ಆದರ್ಶವಾಗಬೇಕಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಮಾಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾತ್ಮಗಾಂಧೀಜಿ ಭಾವಚಿತ್ರಕ್ಕೆ ಮಾತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದ ಅವರು, ಗಾಂಧೀಜಿ ಹೇಳುವಂತೆ ಅಹಿಂಸೆ ಹೇಡಿತನವಲ್ಲ. ಅವರು ಪ್ರತಿಪಾದಿಸಿದ ಅಹಿಂಸಾ ತತ್ವವನ್ನು ನಾವುಗಳು ಸರಿಯಾಗಿ ಅರ್ಥೈಸಿಕೊಳ್ಳಬೇಕಿದೆ ಎಂದರು.
ಗಾಂಧೀಜಿಯವರ ಕೇವಲ ಒಂದೆರಡು ಬರಹಗಳನ್ನು ಓದಿ ಅವರನ್ನು ಅರ್ಥೈಸಲಾಗದು. ಮಹಾತ್ಮಗಾಂಧೀಜಿ ಕೇವಲ ಭಾರತಕ್ಕೆ ಸೀಮಿತವಲ್ಲ, ಅವರು ವಿಶ್ವದ ನಾಯಕ. ಅಮೇರಿಕಾದಲ್ಲಿ ವರ್ಣಭೇಧ ನೀತಿಯ ವಿರುದ್ಧ ಹೋರಾಡಿದ ಮಾರ್ಟಿನ್ ಲೂಥರ್ ಕಿಂಗ್ ಅವರು, ಗಾಂಧೀಜಿ ಕುರಿತು ‘ಕ್ರೈಸ್ತ ನಮಗೆ ಬದುಕು ಕೊಟ್ಟರೆ, ಗಾಂಧೀಜಿಯವರು ಹೇಗೆ ಬದುಕಬೇಕು’ ಎಂದು ನುಡಿದಿದ್ದರು ಜಿಲ್ಲಾಧಿಕಾರಿಗಳು ತಿಳಿಸಿದರು.
ಗಾಂಧೀಜಿಯವರು ಸತ್ಯ, ಅಹಿಂಸೆಯ ದಾರಿಯಲ್ಲಿ ನಡೆದಂತೆ ಒಳ್ಳೆಯ ಶಿಕ್ಷಣವನ್ನು ನಮ್ಮ ಮಕ್ಕಳಿಗೆ ನೀಡಬೇಕು. ಮಹಾನ್ ವ್ಯಕ್ತಿಗಳ ಕುರಿತು ಕಿರು ಪುಸ್ತಕಗಳನ್ನು ಮಕ್ಕಳ ಜ್ಞಾನಾರ್ಜನೆಗೆ ಒದಗಿಸಬೇಕು, ಆಗ ಮಾತ್ರ ಅವರಲ್ಲಿ ರಾಷ್ಟ್ರಾಭಿಮಾನ ಮೂಡಿಸಲು ಸಾಧ್ಯ ಮತ್ತು ದೇಶಕ್ಕೆ ಉತ್ತಮ ಪ್ರಜೆ ದೊರಕಲು ಸಾಧ್ಯ ಎಂದು ತಿಳಿಸಿದರು.
ನಮ್ಮ ದೇಶದಲ್ಲಿ ವೇದ, ಉಪನಿಷತ್ತು, ಅರಣ್ಯಕ, ಬ್ರಾಹ್ಮಣಕ ಕುರಿತು ಅತ್ಯಂತ ಅಪಾರವಾದ ಜ್ಞಾನವಿದೆ. ಜ್ಞಾನಕ್ಕೆ ಕೊರತೆ ಇಲ್ಲ. ವೇದಗಳ ಕಾಲದಿಂದ ಶುರುವಾಗಿ ಕಗ್ಗಗಳ ಕಾಲದವರೆಗೂ ಜಗತ್ತಿನಲ್ಲಿರುವ ಎಲ್ಲಾ ತತ್ವಸಾರಗಳನ್ನು, ಜ್ಞಾನವನ್ನು ಎಲ್ಲರೂ ಹೇಳಿದ್ದಾರೆ. ಆದರೆ ಆಚರಣೆ ಮಾಡುವ ವ್ಯಕ್ತಿಗಳು ವಿರಳಾತಿವಿರಳ. ಮಹಾತ್ಮಗಾಂಧಿಜಿಯವರು. ಇಂತಹ ಕಾಲಘಟ್ಟದಲ್ಲಿ ತಮ್ಮ ಜ್ಞಾನಕ್ಕೆ ತಕ್ಕಂತೆ ಬದುಕಿ, ನುಡಿದಂತೆ ಬದುಕಿ, ನ್ಯಾಯ, ಅಹಿಂಸೆ, ಶಾಂತಿ, ಇತ್ಯಾದಿ ವಿಚಾರಗಳನ್ನು ಜಗತ್ತಿಗೆ ಸಾರಿದರು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಯಾವುದೇ ಧರ್ಮವನ್ನು ನಾವು ವಿಶ್ಲೇಷಣೆ ಮಾಡಿದಾಗ ಅಹಿಂಸೋ ಧರ್ಮೋಧರ್ಮ ಎಂಬುದು ತಿಳಿದು ಬರುತ್ತದೆ. ಮಾನವೀಯತೆ ಎಲ್ಲ ಧರ್ಮಗಳ ಮೂಲ ಆಶಯವಾಗಿದೆ. ಮಾನವೀಯತೆಯನ್ನು ಬುದ್ಧ, ಬಸವಣ್ಣನವರು ಎತ್ತಿ ಹಿಡಿದಿರುತ್ತಾರೆ. ಮನುಷ್ಯನಿಗಿರುವ ವಿಶಿಷ್ಟವಾದ ಗುಣವೇ ಮನುಷ್ಯತ್ವ. ಶಾಂತಿ, ಸಹನೆ, ತಾಳ್ಮೆ, ಇತ್ಯಾದಿಗಳನ್ನು ಅಸ್ತ್ರಗಳನ್ನಾಗಿ ಮಾಡಿಕೊಂಡು ಬಲಿಷ್ಠ ಬ್ರಿಟಿಷ್ ಸಾಮ್ರಾಜ್ಯವನ್ನು ದೇಶದಿಂದ ಹೊರದೂಡಿ, ಭಾರತ ಮಾತೆಯ ಮಕ್ಕಳಿಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟಂತಹ ಮೇರು ವ್ಯಕ್ತಿತ್ವ, ಪುಣ್ಯ ಪುರುಷ ಗಾಂಧಿಜಿಯವರು. ಗಾಂಧೀಜಿಯವರ ಹೋರಾಟ, ತ್ಯಾಗಗಳಿಂದಾಗಿ ನಾವಿಂದು ಸ್ವಾತಂತ್ರವಾಗಿ ನಮ್ಮ ಜೀವನವನ್ನು ನಡೆಸುತ್ತಿದ್ದೇವೆ ಎಂದರು.
ಮಹಾತ್ಮಗಾಂಧಿಜಿಯವರ ಅಸ್ಮಿತತೆ ಇಂದು ಜಗತ್ತಿನಾದ್ಯಂತ ಪ್ರಸರಿಸುತ್ತಿದೆ. ಅವರಿಂದಾಗಿ ಜಗತ್ತಿನಾದ್ಯಂತ ಭಾರತೀಯರಿಗೆ ಗೌರವ ಸಲ್ಲುತ್ತಿದೆ. ಮನುಷ್ಯ ಯಾವ ರೀತಿ ಬದುಕಬೇಕು ಎಂಬುದರ ಕುರಿತು ಮಾಹಾತ್ಮ ಗಾಂಧೀಜಿಯವರು ಭಾಷಣ ಮಾಡಿಲ್ಲ, ಬದಲಾಗಿ ಬದುಕಿ ತೋರಿಸಿಕೊಟ್ಟಿದ್ದಾರೆ. ಕೃಷಿ, ಸಾವಯುವ ಕೃಷಿ, ಗ್ರಾಮಸ್ವರಾಜ್ಯ, ಶಿಕ್ಷಣ, ರಾಜಕೀಯ ನೀತಿ, ವಿಜ್ಞಾನ, ತಂತ್ರಜ್ಞಾನಗಳ ಬಗ್ಗೆ ಗಾಂಧೀಜಿಯವರು ತಮ್ಮದೇ ಆದ ವಿಚಾರಧಾರೆಗಳನ್ನು ಪ್ರತಿಪಾದಿಸಿದ್ದಾರೆ. ಮಹಾತ್ಮಗಾಂಧಿ ಜಯಂತಿ ಎಂದರೆ, ರಜೆಯ ದಿನ ಎನ್ನುವುದು ತಪ್ಪು ಕಲ್ಪನೆ. ಇದು ಅತ್ಯಂತ ಪುಣ್ಯವಾದ ದಿನ. ಜಗತ್ತಿಗೆ ಬೆಳಕು ನೀಡಿದ ಮಹಾನ್ ವ್ಯಕ್ತಿಯನ್ನು ನೆನೆಯುವ ದಿನ. ಇದೇ ನಾವು ಮಾಹಾತ್ಮಗಾಂಧೀಜಿಯವರಿಗೆ ನೀಡುವ ಗೌರವ ಎಂದು ಅಪರ ಜಿಲ್ಲಾಧಿಕಾರಿಗಳು ನುಡಿದರು.
ಮಹಾತ್ಮಗಾಂಧಿಜಿ ಜಯಂತಿ ಅಂಗವಾಗಿ ಲಲಿತಾಚಲಂ ಅವರಿಂದ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು.
ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ವಿ.ಅಜಯ್, ತಹಶೀಲ್ದಾರ್ ಮೋಹನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೇಮಾ, ಡಿಡಿಪಿಐ ನಂಜಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಅ.30 : ಹಿಂದುಳಿದ ವರ್ಗಗಳ ಬೃಹತ್ ಜಾಗೃತಿ ಸಮಾವೇಶ
Next Article ಗ್ರಾ.ಪಂ ಸಿಬ್ಬಂದಿಗಳ ಮೇಲೆ ಹಲ್ಲೆ : ಕರ್ತವ್ಯಕ್ಕೆ ಅಡ್ಡಿ
News Desk Benkiyabale

Related Posts

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm news

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm news
ತಾಜಾ ಸುದ್ಧಿಗಳು

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am
Our Youtube Channel
Our Picks

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

By News Desk BenkiyabaleJune 25, 2026 5:38 pm

ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯ…

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.