BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆಂಪೇಗೌಡ ಪ್ರತಿಮೆ ಅನಾವರಣ – ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಪ್ರಧಾನಿ ವಾಗ್ದಾನ
ಇತರೆ ಸುದ್ಧಿಗಳು

ಕೆಂಪೇಗೌಡ ಪ್ರತಿಮೆ ಅನಾವರಣ – ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಪ್ರಧಾನಿ ವಾಗ್ದಾನ

By News Desk BenkiyabaleUpdated:November 11, 2022 4:27 pm

ಬೆಂಗಳೂರು

ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಬೆಂಗಳೂರಿನ ಅಭಿವೃದ್ಧಿಗೆ ಬದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
ನಗರದಲ್ಲಿ ಇಂದು ಬೆಂಗಳೂರಿನ ನಿರ್ಮಾರ್ತೃ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣ ಮತ್ತು ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಕೆಂಪೇಗೌಡರ ದೂರದೃಷ್ಟಿ ಅತ್ಯದ್ಭುತವಾಗಿತ್ತು.
ವ್ಯಾಪಾರದ ವ್ಯವಸ್ಥೆ ಬದಲಾಗಿದೆ. ನಾಡಪ್ರಭು ಕೆಂಪೇಗೌಡರ ಕೊಡುಗೆ ದೊಡ್ಡದು. ಗವಿ ಗಂಗಾಧರೇಶ್ವರ ಮಂದಿರ, ಬಸವನಗುಡಿಯ ಮಂದಿರ ಸೇರಿ ಬೆಂಗಳೂರಿನ ಸಾಂಸ್ಕøತಿಕತೆಯನ್ನು ಬಿಂಬಿಸುತ್ತದೆ ಎಂದು ತಿಳಿಸಿದರು.
ಬೆಂಗಳೂರು ಅಂತರರಾಷ್ಟ್ರೀಯ ನಗರವಾಗಿದೆ. ಆಧುನಿಕ ಮೂಲಸೌಕರ್ಯದ ಮೂಲಕ ನಗರವನ್ನು ಸಜ್ಜುಗೊಳಿಸಬೇಕಿದೆ ಎಂದು ಅವರು ತಿಳಿಸಿದರು. ಸಂಚಾರದ ವಿವಿಧ ಮಾಧ್ಯಮಗಳು ಒಂದಕ್ಕೊಂದು ಪೂರಕವಾಗಿರಬೇಕು. ಅದನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಭಾರತದ ವಿಕಾಸಕ್ಕೆ ಗರಿಷ್ಠ ಪ್ರಯತ್ನ ನಡೆಸಿದ್ದೇವೆ. ಇದಕ್ಕೆ ಕರ್ನಾಟಕದ ಡಬಲ್ ಎಂಜಿನ್ ಸರಕಾರವು ತನ್ನದೇ ಆದ ಕೊಡುಗೆ ನೀಡಿದೆ ಎಂದರು.
ಕರ್ನಾಟಕದಲ್ಲಿ 8 ಲಕ್ಷ ಮನೆ ನಿರ್ಮಿಸಿ ಕೊಟ್ಟಿದ್ದೇವೆ. ಜಲಜೀವನ್ ಮಿಷನ್ ಅಡಿ ಕರ್ನಾಟಕದಲ್ಲಿ 30 ಲಕ್ಷಕ್ಕೂ ಹೆಚ್ಚು ನಳ್ಳಿ ನೀರು ಸೌಲಭ್ಯ ಕೊಟ್ಟಿದ್ದೇವೆ. ಆಯುಷ್ಮಾನ್ ಯೋಜನೆ ಮೂಲಕ ಕರ್ನಾಟಕದ 30 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನ ಸಿಕ್ಕಿದೆ. ಮಹಿಳೆಯರು ಇದರ ಗರಿಷ್ಠ ಪ್ರಯೋಜನ ಪಡೆದಿದ್ದಾರೆ ಎಂದು ಸಂತಸ ಸೂಚಿಸಿದರು. ಬಡವರು ಸೇರಿ ಎಲ್ಲ ವರ್ಗದ ಜನರಿಗೆ ವಿವಿಧ ಯೋಜನೆಗಳ ಪ್ರಯೋಜನ ಲಭಸಿದೆ ಎಂದು ವಿವರ ನೀಡಿದರು.
ಪಿಎಂ ಕಿಸಾನ್ ಸಮ್ಮಾನ್ ಮೂಲಕ ಕರ್ನಾಟಕದಲ್ಲಿ 11 ಸಾವಿರ ಕೋಟಿ ನಿಧಿ ಲಭಿಸಿದೆ ಎಂದ ಅವರು, ಏಕ ಭಾರತ ಶ್ರೇಷ್ಠ ಭಾರತ ಚಿಂತನೆ ಜಾರಿಯಾಗಿದೆ. ಅಯೋಧ್ಯೆ, ಕಾಶಿ ಯಾತ್ರೆ, ಶಿರಡಿ ಯಾತ್ರೆ ಸುಖದ ಅನುಭವ ನೀಡುತ್ತಿದೆ. ಸಂತ ಕನಕದಾಸರು ಕುಲಕುಲವೆಂದು ಹೊಡೆದಾಡಿದರಿ ಎಂಬ ಸಂದೇಶ ಕೊಟ್ಟಿದ್ದಾರೆ.
ತೃಣಧಾನ್ಯದ ಮಹತ್ವವನ್ನು ಕನಕದಾಸರು ಸಾರಿ ಹೇಳಿದ್ದರು. ರಾಗಿಯ ಉದಾಹರಣೆ ನೀಡಿದ ಅವರು ಸಾಮಾಜಿಕ ಸಮಾನತೆಯ ಸಂದೇಶ ನೀಡಿದ್ದರು. ಡಿಜಿಟಲ್ ಕರೆನ್ಸಿ ಬಗ್ಗೆ 2014ರ ಮೊದಲು ಚಿಂತನೆಯೇ ನಡೆಯುತ್ತಿರಲಿಲ್ಲ. ಹಿಂದಿನ ಸರಕಾರವು ವೇಗವಾಗಿ ಚಲಿಸಲು ಬಯಸುತ್ತಿರಲಿಲ್ಲ. ನಾವು ವೇಗವಾಗಿ ಮುನ್ನಡೆಯಲು ಬಯಸುತ್ತಿದ್ದೇವೆ. ಪಿಎಂ ಗತಿಶಕ್ತಿ ಮೂಲಕ ದೇಶದ ವಿಕಾಸ ನಡೆದಿದೆ. ಮೂಲಸೌಕರ್ಯಕ್ಕೆ ಆದ್ಯತೆ ಕೊಡಲಾಗಿದೆ ಎಂದು ತಿಳಿಸಿದರು.
ಜಗತ್ತಿನಲ್ಲಿ ಭಾರತದ ಬಗ್ಗೆ ಗೌರವಾದರ ಹೆಚ್ಚಾಗಿದೆ. ಇದರ ಪ್ರಯೋಜನ ಕರ್ನಾಟಕಕ್ಕೂ ಲಭಿಸುತ್ತಿದೆ. ಎಫ್‍ಡಿಐ ಹೂಡಿಕೆ ಪ್ರಮಾಣವು ಕೇವಲ ಐಟಿಗೆ ಸೀಮಿತವಾಗಿಲ್ಲ. ಬಯೋ ಟೆಕ್ನಾಲಜಿ, ರಕ್ಷಣಾ ಕ್ಷೇತ್ರದಲ್ಲೂ ಹೂಡಿಕೆ ಹೆಚ್ಚಾಗಿದೆ ಎಂದು ಪ್ರಶಂಸಿಸಿದರು.
ಹೆಲಿಕಾಪ್ಟರ್, ಐಟಿ, ಎಲೆಕ್ಟ್ರಿಕ್ ವಾಹನ ಉತ್ಪಾದನೆ ಸೇರಿ ವಿವಿಧ ಕ್ಷೇತ್ರಗಳಿಗೆ ಕರ್ನಾಟಕದ ಕೊಡುಗೆ ದೊಡ್ಡದು. ಕರ್ನಾಟಕ ಫಾರ್ಚೂನ್ 500 ಕಂಪೆನಿಗಳಲ್ಲಿ ಕರ್ನಾಟಕದ ಪಾಲು ದೊಡ್ಡದಿದೆ. ಕರ್ನಾಟಕ ಡಬಲ್ ಎಂಜಿನ್ ತಾಕತ್ತಿನಿಂದ ಮುಂದೆ ಸಾಗುತ್ತಿದೆ ಎಂದು ತಿಳಿಸಿದರು.
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಯು ಭವಿಷ್ಯದ ಭಾರತದ ನಿರ್ಮಾಣಕ್ಕೆ ಪ್ರೇರಣೆ ನೀಡಲಿದೆ. ಸ್ಟಾರ್ಟಪ್‍ಗಳನ್ನು ಸಶಕ್ತಗೊಳಿಸುವಲ್ಲಿ ಬೆಂಗಳೂರಿನ ಕೊಡುಗೆ ಅತ್ಯಂತ ದೊಡ್ಡದು. ಒಂದೇ ಕಂಪೆನಿಯಿಂದ ಸ್ಟಾರ್ಟಪ್ ಆಗಲಾರದು. ಹೊಸತರ ಚಿಂತನೆ, ಅದರ ಅನುಷ್ಠಾನದ ಮೂಲಕ ವಿಶ್ವಾಸ ಮೂಡಿಸುವ ಕಾರ್ಯ ನಡೆಯಬೇಕು. ಅದನ್ನು ಇಲ್ಲಿ ಮಾಡಲಾಗುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.
ಈ ಕಾರ್ಯಕ್ರಮವೂ ಬೆಂಗಳೂರಿನ ಹೆಸರನ್ನು ಉಜ್ವಲಗೊಳಿಸಲಿದೆ. ಮುಂದಿನ ದಿನಗಳಲ್ಲಿ ಭಾರತದ ಸಂಚಾರ ವ್ಯವಸ್ಥೆಯ ಪ್ರತೀಕವಾಗಿ ವೇಗದ ರೈಲು ಉದ್ಘಾಟನೆಯಾಗಿದೆ. ಮುಂದಿನ 8-10 ವರ್ಷಗಳಲ್ಲಿ ಭಾರತೀಯ ರೈಲಿನ ಕಾಯಕಲ್ಪವನ್ನು ಗಮನಿಸಿ ಮುಂದಡಿ ಇಡುತ್ತಿದ್ದೇವೆ. 400ಕ್ಕೂ ಹೆಚ್ಚು ವೇಗದ ರೈಲುಗಳು, ವಿಸ್ತಾಡೋಮ್ ರೈಲು ಉದ್ಘಾಟನೆ ನೆರವೇರಲಿದೆ ಎಂದು ತಿಳಿಸಿದರು.
ರೈಲ್ವೆ ನಿಲ್ದಾಣಗಳ ನವೀಕರಣ, ದ್ವಿಪಥದ ಮೂಲಕ ಹಳಿಗಳನ್ನು ಆಧುನೀಕರಣಗೊಳಿಸುವ ಕಾರ್ಯ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್, ಯಶವಂತಪುರ ರೈಲ್ವೆ ನಿಲ್ದಾಣಗಳ ಆಧುನೀಕರಣ ನಡೆಯುತ್ತಿದೆ ಎಂದರು.
ವಿಮಾನನಿಲ್ದಾಣಗಳ ಸಂಖ್ಯೆ ಹೆಚ್ಚಳದ ಬೇಡಿಕೆಯೂ ಇದೆ. ಇಲ್ಲಿನ ಹೊಸ ಟರ್ಮಿನಲ್ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. ದೇಶ ಮುನ್ನಡೆಯುತ್ತಿದೆ. ವಿಮಾನನಿಲ್ದಾಣದಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚುತ್ತಿದೆ. 2014ಕ್ಕೆ ಮೊದಲು ದೇಶದಲ್ಲಿ 70 ಹತ್ತಿರ ಇದ್ದ ವಿಮಾನನಿಲ್ದಾಣದ ಸಂಖ್ಯೆ 140ಕ್ಕೂ ಹೆಚ್ಚಾಗಿದೆ ಎಂದು ವಿವರಿಸಿದರು.
ಕರ್ನಾಟಕಕ್ಕೆ ಮೊದಲ ವಂದೇ ಭಾರತ್ ರೈಲು ಲಭಿಸಿದೆ. ಇದು ಚೆನ್ನೈ- ಸ್ಟಾರ್ಟಪ್ ನಗರ ಬೆಂಗಳೂರು- ಮೈಸೂರನ್ನು ಇದು ಜೋಡಿಸಲಿದೆ. ಅಯೋಧ್ಯೆ, ಪ್ರಯಾಗ್‍ರಾಜ್, ಕಾಶಿ ದರ್ಶನಕ್ಕೆ ರೈಲಿಗೂ, ವಿಮಾನನಿಲ್ದಾಣದ ಟರ್ಮಿನಲ್ 2ರ ಉದ್ಘಾಟನೆ ನೆರವೇರಿದೆ. ಇವೆಲ್ಲ ಬೆಂಗಳೂರಿನ ಜನರ ಹಳೆಯ ಬೇಡಿಕೆಯಾಗಿತ್ತು ಎಂದು ತಿಳಿಸಿದರು.
‘ಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು’ ಎಂದು ಜನರ ಹರ್ಷೋದ್ಗಾರದ ನಡುವೆ ಪ್ರಧಾನಿಯವರು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಸಂತ ಕನಕದಾಸ ಅವರು ಸಮಾಜಕ್ಕೆ ಮಾರ್ಗದರ್ಶನ ನೀಡಿದರು. ಗೌರವಾನ್ವಿತ ಮಹಿಳೆ ಒನಕೆ ಓಬವ್ವ ಅವರಿಗೂ ನಮನಗಳು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಪ್ರಧಾನಿಯವರು ರಾಜ್ಯದ ಮಹನೀಯರು, ಸಂತರಿಗೆ ಗೌರವ ಸಲ್ಲಿಸಿದ್ದಾರೆ. ವಿಜಯನಗರ ಸಾಮ್ರಾಜ್ಯದ ಸುವರ್ಣ ಯುಗದ ದರ್ಶನಕ್ಕೆ ಕೆಂಪೇಗೌಡರು ಕಾರಣರು. ಯೋಜನಾಬದ್ಧ ನಗರವನ್ನು ಅವರು ಕಟ್ಟಿದ್ದಾರೆ. ಅವರಿಗೆ ಗೌರವ ಸಲ್ಲಿಸುವ ಕರ್ತವ್ಯವನ್ನು ನೆರವೇರಿಸಿದ್ದೇವೆ. ಕೆಂಪೇಗೌಡರ ಚಿಂತನೆ, ವಿಚಾರಧಾರೆಯಲ್ಲಿ ನಾಡು ಕಟ್ಟುವ ಸಂಕಲ್ಪ ಮಾಡುತ್ತೇವೆ ಎಂದು ತಿಳಿಸಿದರು.
ಪ್ರಧಾನಿಯವರು ಬಲಿಷ್ಠ ಭಾರತ ನಿರ್ಮಿಸಿದ್ದಾರೆ. ಅಭಿವೃದ್ಧಿಯಲ್ಲಿ ಎಲ್ಲರಿಗೂ ಅವಕಾಶ ನೀಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಉನ್ನತ ಮಟ್ಟಕ್ಕೆ ಏರಿಸಿದ್ದಾರೆ. ವಿಕಾಸಪುರುಷನಾಗಿ ಅವರು ನಮ್ಮ ಮುಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಕೊಡುಗೆ ಕೊಡುತ್ತಿರುವ ಪ್ರಧಾನಿಯವರಿಗೆ ಧನ್ಯವಾದ ಸಮರ್ಪಿಸಿದರು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸ್ವಾಗತಿಸಿದರು. ಕೆಂಪೇಗೌಡರ ಕುರಿತಾದ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ನಾಡಪ್ರಭು ಕೆಂಪೇಗೌಡ, ವೀರ ವನಿತೆ ಒನಕೆ ಓಬವ್ವ, ಸಂತ ಕನಕದಾಸರ ಭಾವಚಿತ್ರಕ್ಕೆ ಪ್ರಧಾನಿಯವರು ಮತ್ತು ಗಣ್ಯರು ಪುಷ್ಪನಮನ ಸಲ್ಲಿಸಿದರು.
ಆದಿಚುಂಚನಗಿರಿ ಸಂಸ್ಥಾನ ಮಠದ ನಿರ್ಮಲಾನಂದ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ರಾಜ್ಯಪಾಲ ಥಾವರ್ ಸಿಂಗ್ ಗೆಹಲೋತ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ- ರಾಜ್ಯದ ಸಚಿವರು, ಶಾಸಕರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮೊದಲು ಕನಕದಾಸರು ಮತ್ತು ವಾಲ್ಮೀಕಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಅವರು, ಭಾರತ್ ಗೌರವ್ ಕಾಶಿ ದರ್ಶನ, ಅತ್ಯಂತ ವೇಗವಾಗಿ ಚಲಿಸುವ ರೈಲು ‘ಮೈಸೂರು- ಚೆನ್ನೈ ವಂದೇ ಭಾರತ್ ಎಕ್ಸ್‍ಪ್ರೆಸ್’ ಗೂ ಚಾಲನೆ ನೀಡಿದರು. ಮೋದಿಯವರು ತೆರಳುವ ಮಾರ್ಗಮಧ್ಯದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಪ್ರಧಾನಿಗೆ ಅದ್ದೂರಿ ಸ್ವಾಗತ ಲಭಿಸಿತು. ‘ಮೋದಿ ಮೋದಿ’ ಘೋಷಣೆಗಳನ್ನು ಕೂಗುತ್ತ ಜನರು ಪ್ರಧಾನಿಯವರನ್ನು ಸಂಭ್ರಮದಿಂದ ಸ್ವಾಗತಿಸಿದರು.

(Visited 8 times, 1 visits today)
tumkur
Previous Articleನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಇಲ್ಲದ ಆಹ್ವಾನ : ಜೆಡಿಎಸ್‌ ಟ್ವಿಟ್‌
Next Article ಒನಕೆ ಓಬವ್ವÀ ಮಹಿಳೆಯರಿಗೆ ಸ್ಪೂರ್ತಿಯಾಗಲಿ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.