BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
  • ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಮಾಜಿಕ ನ್ಯಾಯದ ಪರಿಕಲ್ಪನೆ ಬಿತ್ತಿದವರು ಬಸವಣ್ಣ
ಇತರೆ ಸುದ್ಧಿಗಳು

ಸಾಮಾಜಿಕ ನ್ಯಾಯದ ಪರಿಕಲ್ಪನೆ ಬಿತ್ತಿದವರು ಬಸವಣ್ಣ

By News Desk BenkiyabaleUpdated:November 12, 2022 4:31 pm

ತುಮಕೂರು


ಕಾರ್ಲ್ ಮಾಕ್ಸ್ ಅವರಿಗಿಂತ ಮೊದಲೇ 12ನೇ ಶತಮಾನದಲ್ಲಿಯೇ ವರ್ಗ,ವರ್ಣ,ಲಿಂಗಭೇಧ ರಹಿತ ಸಮ ಸಮಾಜದ ಕನಸಿನೊಂದಿಗೆ, ಸಾಮಾಜಿಕ ನ್ಯಾಯದ ಪರಿಕಲ್ಪನೆ ಬಿತ್ತಿದವರು ಅಣ್ಣ ಬಸವಣ್ಣ ಅವರು, ವೀರಶೈವ,ಲಿಂಗಾಯಿತರು ಇಂತಹ ಸಮುದಾಯದಲ್ಲಿ ಹುಟ್ಟಿದವರೆಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದು ಶಾಸಕ ಹಾಗೂ ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಸಿದ್ದಗಂಗಾ ಮಠದ ವಸ್ತುಪ್ರದರ್ಶನದ ಆವರಣದಲ್ಲಿ ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾವತಿಯಿಂದ ಆಯೋಜಿಸಿದ್ದ ಬೆಂಗಳೂರು ವಿಭಾಗೀಯ ಮಟ್ಟದ ಮಹಿಳಾ ಮತ್ತು ಯುವ ಕಾರ್ಯಕರ್ತರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಎಲ್ಲಾ ಧರ್ಮ, ಜಾತಿಗಳಿಗೂ ಪ್ರಪಂಚದ ಮೊದಲ ಸಂಸತ್ತು ಎನಿಸಿಕೊಂಡಿರುವ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದವರು ಬಸವೇಶ್ವರರು.ಮೌಡ್ಯದಿಂದ ಸಮಾಜವನ್ನು ಹೊರತರಬೇಕೆಂಬುದು ಅವರ ಕನಸಾಗಿತ್ತು. ಇಂತಹ ಕನಸನ್ನು ನನಸು ಮಾಡಲು ನಾವೆಲ್ಲರೂ ಕಟಿಬದ್ದರಾಗಬೇಕಿದೆ ಎಂದರು.
ಹಾಗನಲ್ ಕುಮಾರಸ್ವಾಮಿಗಳಿಂದ ಸಮಾಜದ ಐಕ್ಯತೆ ಮತ್ತು ಅಭಿವೃದ್ದಿಯ ಮಂತ್ರದೊಂದಿಗೆ ಆರಂಭವಾದ ಅಖಿಲ ಭಾರತ ಲಿಂಗಾಯಿತ ಮಹಾಸಭಾ ಅಲ್ಪಸಂಖ್ಯಾತರನ್ನು ಒಳಗೊಂಡಂತೆ ಎಲ್ಲಾ ಧರ್ಮಿಯರಿಗೂ ಮಾರ್ಗದರ್ಶನ ಮಾಡುತ್ತಾ ಬಂದಿದೆ.ಶೈಕ್ಷಣಿಕವಾಗಿ,ಅರ್ಥಿಕವಾಗಿ ಮುಂದುವರೆದ ಸಮಾಜ ಒಂದು ರೀತಿಯಲ್ಲಿ ನಿಂತ ನೀರಾಗಿದೆ.ಇದನ್ನು ಮತ್ತೆ ಪುನಶ್ಚೇತನಗೊಳಿಸಿ,ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂಚೂಣಿಗೆ ತರುವುದು ಮಹಾಸಭಾದ ಉದ್ದೇಶವಾಗಿದೆ.ಪಾಶ್ಚಾತ್ಯ ಸಂಸ್ಕøತಿ ಅನುಸರಿಸುತ್ತಿರುವ ನಮ್ಮ ಯುವಜನಾಂಗಕ್ಕೆ ಸರಿಯಾದ ಮಾರ್ಗದರ್ಶನ ಮಾಡಿ ಅವರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವ ಕೆಲಸ ಆಗಬೇಕಿದೆ.ಇದರ ಜೊತೆಗೆ ಕೇಂದ್ರ ಒಬಿಸಿ ಪಟ್ಟಿಗೆ ಸೇರಿಲ್ಲದ ಶೇ90ರಷ್ಟು ವೀರಶೈವ,ಲಿಂಗಾಯಿತ ಒಳಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಿ, ಉನ್ನತ ಹುದ್ದೆಗಳಲ್ಲಿ ನಮ್ಮ ಮಕ್ಕಳಿಗೂ ಅವಕಾಶ ದೊರೆಯುವಂತೆ ಮಾಡುವುದು ಮಹಾಸಭಾದ ಪ್ರಮುಖ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದು ಈಶ್ವರ ಖಂಡ್ರೆ ನುಡಿದರು.
ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಉಪಾಧ್ಯಕ್ಷ ವೀರಣ್ಣ ಮಾತನಾಡಿ,ಪ್ರಸ್ತುತ 2.50ಲಕ್ಷದಷ್ಟಿರುವ ಸದಸ್ಯರನ್ನು 10 ಲಕ್ಷಕ್ಕೆ ಹೆಚ್ಚಿಸುವ ಗುರಿ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ಸದಸ್ಯತ್ವದ ಅರ್ಜಿಗಳ ವಿತರಣೆ ಆರಂಭವಾಗಿದೆ. ಎಲ್ಲರೂ ಸದಸ್ಯತ್ವ ಪಡೆದುಕೊಳ್ಳಬೇಕಿದೆ.ಮಹಾಸಭಾದ 23ನೇ ಅಧಿವೇಶನದ ಮುಂದಿನ ಡಿಸೆಂಬರ್ 24-25 ಮತ್ತು 26 ರಂದು ದಾವಣಗೆರೆಯಲ್ಲಿ ನಡೆಯಲಿದೆ. ಆ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗಸ್ವಾಮೀಜಿ ಅಶೀರ್ವಚನ ನೀಡಿ, ವೀರಶೈವ, ಲಿಂಗಾಯಿತ ಸಮುದಾಯದ ಭವಿಷ್ಯದ ಚಿಂತನೆಯೊಂದಿಗೆ ಆರಂಭಗೊಂಡ ಈ ಸಂಸ್ಥೆಗೆ ಒಂದು ಶತಮಾನ ಕಳೆದಿದೆ. ಅರ್ಥಿಕ,ಸಾಮಾಜಿಕ,ಶೈಕ್ಷಣಿಕ,ಕೈಗಾರಿಕಾ ಕ್ಷೇತ್ರ ವೀರಶೈವ, ಲಿಂಗಾಯಿತ ಸಮುದಾಯ ಸಾಕಷ್ಟು ಕೊಡುಗೆ ನೀಡಿದೆ. ಆದರೂ ಇನ್ನು ಬಲಗೊಳ್ಳುವ ಅಗತ್ಯವಿದೆ.ಹೆಸರಿಗೆ ಮಾತ್ರ ಲಿಂಗಾಯಿತರಾದರೆ ಸಾಲದು,ಆಚರಣೆಯಲ್ಲಿಯೂ ಲಿಂಗಾಯಿತರಾಗ ಬೇಕು. ಸಂಸ್ಕಾರಯುತ ಬದುಕು ನಮ್ಮದಾಗಬೇಕು.ಸ್ವಧರ್ಮ ನಿಷ್ಠೆ,ಪರಧರ್ಮ ಸಹಿಷ್ಠತೆ ನಮ್ಮ ಮಂತ್ರವಾಗಬೇಕು, ಐಕ್ಯತೆ ಮಂತ್ರ ನಮ್ಮದಾಗಬೇಕೆಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಬೆಂಗಳೂರು ವಿಭಾಗೀಯ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿ ನಟರಾಜು ಸಾಗರನಹಳ್ಳಿ, ಮಹಿಳೆಯರು ಮತ್ತು ಯುವಕರಿಗೆ ನಮ್ಮ ಸಂಸ್ಕøತಿ, ಪರಂಪರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಆಯೋಜಿಸಲಾಗಿದೆ. ಇದರಲ್ಲಿ ಕೃಷಿ, ಕೈಗಾರಿಕೆ, ಸಂಸ್ಕøತಿ, ಪರಂಪರೆಗಳ ಕುರಿತು ಗೋಷ್ಠಿಗಳು ನಡೆಯಲಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಹಿರಿಯ ಉಪಾಧ್ಯಕ್ಷ ಡಾ.ಎನ್.ತಿಪ್ಪಣ್ಣ ವಹಿಸಿದ್ದರು.ಕಾರ್ಯಾಗಾರ ಸಮಿತಿಯ ಅಧ್ಯಕ್ಷ ಎಸ್.ಕೆ.ರಾಜಶೇಖರ್,ಯುವ ಘಟಕದ ಅಧ್ಯಕ್ಷ ಮನೋಹರ್ ಅಬ್ಬಿಗೆರೆ,ಮಹಿಳಾ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ಅರುಣಾದೇವಿ,ಟಿ.ಬಿ.ಶೇಖರ್,ಎಂ.ಎನ್.ಶಶಿಧರ್, ಗೋವರ್ಧನ್, ಲೋಕೇಶ್ವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯಿಂದ ವಸ್ತುಪ್ರದರ್ಶನದ ಆವರಣದವರೆಗೂ ಬೆಳ್ಳಿ ರಥದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಹಿರಿಯ ಉಪಾಧ್ಯಕ್ಷ ಡಾ.ಎನ್.ತಿಪ್ಪಣ ರವರನ್ನು ್ಣ ಮತ್ತು ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಮುಖೇನ ಕರೆದೊಯ್ಯಲಾಯಿತು.

(Visited 4 times, 1 visits today)
tumkur
Previous Articleಅಧಿಕಾರಿಯ ಮೇಲೆ 18 ಕೋಮಿನ ಮುಖಂಡರ ಆಕ್ರೋಶ
Next Article ಸರ್ವಕಡೆಯಲ್ಲೂ ದಾಸ ಸಾಹಿತ್ಯ ಸ್ವೀಕಾರ
News Desk Benkiyabale

Related Posts

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm news

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm news

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm news
ತಾಜಾ ಸುದ್ಧಿಗಳು

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm
Our Youtube Channel
Our Picks

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

By News Desk BenkiyabaleJune 20, 2026 5:11 pm

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ…

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.