BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ದಿವ್ಯಾಂಗರಿಗೂ ಭವ್ಯ ಭವಿಷ್ಯವಿದೆ: ಕಾವ್ಯ
  • ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು
  • ಮದ್ಯದಂಗಡಿ: ಕಾನೂನುಬಾಹೀರ ಪರವಾನಗಿ
  • ಪಲ್ಸ್ ಪೋಲಿಯೋ: ಮೈಕ್ರೋ ಪ್ಲಾನ್ ಸಿದ್ಧಪಡಿಸಿ
  • ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯ
  • ಅರ್ಥಪೂರ್ಣ ವಿಶ್ವ ವಿಕಲಚೇತನರ ದಿನಾಚರಣೆ
  • ದತ್ತಾತ್ರೇಯ ಕ್ಷೇತ್ರ ಯಾತ್ರೆ
  • ವಿಕಲಚೇತನರಿಗೆ ಬೇಕಾದುದು ಸಹಾನುಭೂತಿ ಅಲ್ಲ-ಸಮಾನ ಅವಕಾಶ ಅಗತ್ಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಭೆ, ಸಮಾರಂಭಗಳಲ್ಲಿ ನೀರು, ಮಜ್ಜಿಗೆ ನೀಡಲು ಮಾತ್ರ ಅವಕಾಶ
ಇತರೆ ಸುದ್ಧಿಗಳು

ಸಭೆ, ಸಮಾರಂಭಗಳಲ್ಲಿ ನೀರು, ಮಜ್ಜಿಗೆ ನೀಡಲು ಮಾತ್ರ ಅವಕಾಶ

By News Desk BenkiyabaleUpdated:April 04, 2023 4:43 pm

ತುಮಕೂರು


ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳು ಸಭೆ/ಸಮಾರಂಭಗಳನ್ನು ಏರ್ಪಡಿಸುವ ಮುನ್ನ ಕಡ್ಡಾಯವಾಗಿ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಸಭೆ/ಸಮಾರಂಭಗಳಲ್ಲಿ ಕುಡಿಯುವ ನೀರು/ಮಜ್ಜಿಗೆ ನೀಡಲು ಮಾತ್ರ ಅವಕಾಶವಿದೆ. ಆಹಾರ ನೀಡಿದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ನಂತರ ಅಭ್ಯರ್ಥಿಯು ಅನುಮತಿ ಪಡೆದು ಬಹಿರಂಗ ಸಭೆ, ಸಮಾರಂಭ ನಡೆಸಲು ಅವಕಾಶವಿದೆ. ನಾಮಪತ್ರಕ್ಕಿಂತ ಪೂರ್ವದಲ್ಲಿ ಕೇವಲ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳು ಚುನಾವಣಾಧಿಕಾರಿಗಳ ಅನುಮತಿ ಪಡೆದು ಪಕ್ಷದ ಪರವಾಗಿ ಪ್ರಚಾರ ಮಾಡಬಹುದಾಗಿದೆ. ಆದರೆ ಒಬ್ಬ ಅಭ್ಯರ್ಥಿ ಪರವಾಗಿ ಕಾರ್ಯಕ್ರಮ ಮಾಡಿದರೆ ಅದರ ಸಂಪೂರ್ಣ ವೆಚ್ಚವನ್ನು ಅಭ್ಯರ್ಥಿಯ ವೆಚ್ಚದ ಖಾತೆಗೆ ದಾಖಲು ಮಾಡಲಾಗುವುದು. ಸಭೆ/ಸಮಾರಂಭ/ರ್ಯಾಲಿಗಳನ್ನು ಸಾರ್ವಜನಿಕ/ಖಾಸಗಿ ಸ್ಥಳಗಳಲ್ಲಿ ಕೈಗೊಳ್ಳಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.
ಚುನಾವನಾ ಪ್ರಚಾರಕ್ಕಾಗಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಸಲು ಅವಕಾಶವಿಲ್ಲ. ಚುನಾವಣಾ ಪ್ರಚಾರದ ಅವಧಿ ಮುಗಿದ ನಂತರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ವಿಧಾನಸಭಾ ಕ್ಷೇತ್ರದ ಮತದಾರರಲ್ಲದವರು ಚುನಾವಣಾ ಮುಕ್ತಾಯವಾಗುವ 48 ಗಂಟೆಗಳ ಮುಂಚೆ ಕ್ಷೇತ್ರವನ್ನು ತೊರೆಯಬೇಕು ಎಂದು ತಿಳಿಸಿದರು.
ಚುನಾವಣೆಯ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಒಬ್ಬ ಅಭ್ಯರ್ಥಿ 3 ವಾಹನಗಳನ್ನು ಮಾತ್ರ ಬಳಸಲು ಅವಕಾಶವಿದೆ. ನಾಮಪತ್ರ ಸಲ್ಲಿಕೆಯಾದ ನಂತರ ಅನುಮತಿ ಪಡೆದು ತಮ್ಮ ಇಚ್ಛೆಯನುಸಾರ ವಾಹನಗಳನ್ನು ಬಳಸಬಹುದು. ಆದರೆ ವಾಹನ ಬಳಸುವ ಬಗ್ಗೆ ಅಭ್ಯರ್ಥಿಗಳು ಚುನಾವಣಾ ವೆಚ್ಚ ತಂಡಕ್ಕೆ ಮಾಹಿತಿ ನೀಡಬೇಕು. ಅನುಮತಿ ಮೇರೆಗೆ ಚುನಾವಣಾ ಪ್ರಚಾರಕ್ಕೆ ರಿಕ್ಷಾ ಮತ್ತು ಬೈಸಿಕಲ್‍ಗಳನ್ನು ಬಳಸಲು ಅವಕಾಶವಿದೆ ಎಂದು ತಿಳಿಸಿದರಲ್ಲದೆ, ಚುನಾವಣೆ ದಿನದಂದು ಅಭ್ಯರ್ಥಿ ಉಪಯೋಗಕ್ಕಾಗಿ 1, ಅಭ್ಯರ್ಥಿಯ ಚುನಾವಣಾ ಏಜೆಂಟ್ ಉಪಯೋಗಕ್ಕಾಗಿ 1 ಹಾಗೂ ಅಭ್ಯರ್ಥಿಯ ಕಾರ್ಯಕರ್ತರ ಉಪಯೋಗಕ್ಕಾಗಿ 1 ವಾಹನ ಸೇರಿದಂತೆ 3 ವಾಹನಗಳನ್ನು ಬಳಸಲು ಅವಕಾಶವಿದೆ ಎಂದು ಹೇಳಿದರು.
ಅಭ್ಯರ್ಥಿಯು ನಾಮಪತ್ರ ಸಲ್ಲಿಸಿದ ನಂತರ ವಿಡಿಯೋ ವ್ಯಾನ್ ಬಳಸಲು ಜಿಲ್ಲಾ ಮಟ್ಟದ ಎಂಸಿಎಂಸಿ(ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ) ತಂಡದಿಂದ ವೀಡಿಯೋದಲ್ಲಿನ ಮಾಹಿತಿ ಕುರಿತು ಅನುಮತಿ ಪಡೆದು ನಂತರ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಬೇಕು ಎಂದು ತಿಳಿಸಿದರು.
ಮುದ್ರಣಾಲಯದವರು ಚುನಾವಣಾ ಕರಪತ್ರ ಮುದ್ರಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕಲ್ಲದೆ, ಚುನಾವಣಾ ಕರಪತ್ರದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು, ಮುದ್ರಣ ಮಾಡಿದ ಪ್ರಮಾಣದ ವಿವರಗಳನ್ನು ನಮೂದಿಸಬೇಕು ಹಾಗೂ 4 ಪ್ರತಿಗಳಲ್ಲಿ ಅಪೆಂಡಿಕ್ಸ್-ಎ ಮತ್ತು ಬಿ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಚುನಾವಣಾ ಕರಪತ್ರದಲ್ಲಿ ವಿಷಯಗಳನ್ನು ಮುದ್ರಣ ಮಾಡಬೇಕಾದ ಸಂದರ್ಭದಲ್ಲಿ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಎಂಸಿಎಂಸಿ ಸಮಿತಿಯಿಂದ ಅನುಮತಿ ಪಡೆಯಬೇಕು. ಅಭ್ಯರ್ಥಿಗಳು ತಮ್ಮ ಅಥವಾ ಯಾವುದೇ ದೇವರ ಫೋಟೋ ಹೊಂದಿರುವ ಡೈರಿ, ಕ್ಯಾಲೆಂಡರ್, ಸ್ಟಿಕರ್‍ಗಳ ಮುದ್ರಣ ಹಾಗೂ ಹಂಚಿಕೆ ಮಾಡುವಂತಿಲ್ಲ.
ಚುನಾವಣಾ ಪ್ರಚಾರಕ್ಕಾಗಿ ಚುನಾವಣಾಧಿಕಾರಿಗಳ ಅನುಮತಿ ಪಡೆದು ಪಕ್ಷ/ ಅಭ್ಯರ್ಥಿಗಳಿಗೆ ತಾತ್ಕಾಲಿಕ ಕಚೇರಿ ತೆರೆಯಲು ಅವಕಾಶವಿದೆ. ಯಾವುದೇ ಧಾರ್ಮಿಕ ಸ್ಥಳ/ಶೈಕ್ಷಣಿಕ ಸ್ಥಳ/ ಆಸ್ಪತ್ರೆ/ ಮತಗಟ್ಟೆ ಸಮೀಪ 200 ಮೀ. ಒಳಗೆ ಕಚೇರಿ ತೆರೆಯಲು ಅವಕಾಶವಿಲ್ಲ. ಪ್ರಚಾರ ಸಂದರ್ಭದಲ್ಲಿ ಕ್ಯಾಪ್, ಮಾಸ್ಕ್, ಸ್ಕಾರ್ಫ್ ವಿತರಿಸಲು ಅವಕಾಶವಿದ್ದು, ಅದರ ವೆಚ್ಚವನ್ನು ಅಭ್ಯರ್ಥಿಯ ವೆಚ್ಚಕ್ಕೆ ದಾಖಲಿಸಲಾಗುವುದು. ಆದರೆ ಸೀರೆ/ಟೀ-ಷರ್ಟ್/ ಶರ್ಟ್ ನೀಡಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚೆಕ್‍ಪೋಸ್ಟ್‍ಗಳಲ್ಲಿ ಈವರೆಗೂ ಸಿಸಿ ಟಿವಿ ಅಳವಡಿಸದೆ ಇರುವವರು ಕೂಡಲೇ ಅಳವಡಿಸಬೇಕು. ಏಪ್ರಿಲ್ 11ರಂದು ಎಲ್ಲಾ ಕ್ಷೇತ್ರಗಳಲ್ಲಿ ಚುನಾವಣಾ ಅಧಿಕಾರಿ/ಸಿಬ್ಬಂದಿಗಳಿಗೆ ತರಬೇತಿ ನೀಡಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ಸ್ಟ್ರಾಂಗ್‍ರೂಂನಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಬೇಕು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪವಿಭಾಗಾಧಿಕಾರಿ ಹೆಚ್. ಶಿವಪ್ಪ, ಪಾಲಿಕೆ ಆಯುಕ್ತ ಹೆಚ್.ವಿ.ದರ್ಶನ್, ತುಮಕೂರು ವಿವಿ ಕುಲ ಸಚಿವೆ ನಹೀದಾ ಜಂಜಂ, ತಹಶೀಲ್ದಾರ್ ಸಿದ್ದೇಶ್, ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

(Visited 3 times, 1 visits today)
tumkur
Previous Articleಭಗವಾನ್ ಮಹಾವೀರರ ಜಯಂತಿ ಆಚರಣೆ
Next Article ದೊಡ್ಡಕಾಯಪ್ಪ ದೇವಾಲಯಕ್ಕೆ ಅರ್ಚಕರಿಂದ ಬೀಗ
News Desk Benkiyabale

Related Posts

ದಿವ್ಯಾಂಗರಿಗೂ ಭವ್ಯ ಭವಿಷ್ಯವಿದೆ: ಕಾವ್ಯ

December 04, 2025 4:18 pm ಇತರೆ ಸುದ್ಧಿಗಳು

ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು

December 04, 2025 4:16 pm ಇತರೆ ಸುದ್ಧಿಗಳು

ಮದ್ಯದಂಗಡಿ: ಕಾನೂನುಬಾಹೀರ ಪರವಾನಗಿ

December 04, 2025 4:14 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ದಿವ್ಯಾಂಗರಿಗೂ ಭವ್ಯ ಭವಿಷ್ಯವಿದೆ: ಕಾವ್ಯ

December 04, 2025 4:18 pm
ಇತರೆ ಸುದ್ಧಿಗಳು

ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು

December 04, 2025 4:16 pm
ಇತರೆ ಸುದ್ಧಿಗಳು

ಮದ್ಯದಂಗಡಿ: ಕಾನೂನುಬಾಹೀರ ಪರವಾನಗಿ

December 04, 2025 4:14 pm
ಇತರೆ ಸುದ್ಧಿಗಳು

ಪಲ್ಸ್ ಪೋಲಿಯೋ: ಮೈಕ್ರೋ ಪ್ಲಾನ್ ಸಿದ್ಧಪಡಿಸಿ

December 04, 2025 4:12 pm
ಇತರೆ ಸುದ್ಧಿಗಳು

ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯ

December 04, 2025 4:10 pm
ಇತರೆ ಸುದ್ಧಿಗಳು

ಅರ್ಥಪೂರ್ಣ ವಿಶ್ವ ವಿಕಲಚೇತನರ ದಿನಾಚರಣೆ

December 04, 2025 4:09 pm
Our Youtube Channel
Our Picks

ದಿವ್ಯಾಂಗರಿಗೂ ಭವ್ಯ ಭವಿಷ್ಯವಿದೆ: ಕಾವ್ಯ

December 04, 2025 4:18 pm

ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು

December 04, 2025 4:16 pm

ಮದ್ಯದಂಗಡಿ: ಕಾನೂನುಬಾಹೀರ ಪರವಾನಗಿ

December 04, 2025 4:14 pm

ಪಲ್ಸ್ ಪೋಲಿಯೋ: ಮೈಕ್ರೋ ಪ್ಲಾನ್ ಸಿದ್ಧಪಡಿಸಿ

December 04, 2025 4:12 pm

ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯ

December 04, 2025 4:10 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ದಿವ್ಯಾಂಗರಿಗೂ ಭವ್ಯ ಭವಿಷ್ಯವಿದೆ: ಕಾವ್ಯ

By News Desk BenkiyabaleDecember 04, 2025 4:18 pm

ತುಮಕೂರು: ವಿವಿಧ ಅಂಗವೈಕಲ್ಯತೆಯಿ0ದ ಸಮಾಜದ ಮುಖ್ಯವಾಹಿನಿಗೆ ಬರದೆ ಸಮಾಜದ ಮುಖ್ಯವಾಹಿನಿಯಿಂದ ದೂರವಿರುವ ದಿವ್ಯಾಂಗರಿಗೂ ಭವ್ಯ ಭವಿಷ್ಯವಿದೆ ಎಂಬುದನ್ನು ತಾವು…

ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು

December 04, 2025 4:16 pm

ಮದ್ಯದಂಗಡಿ: ಕಾನೂನುಬಾಹೀರ ಪರವಾನಗಿ

December 04, 2025 4:14 pm

ಪಲ್ಸ್ ಪೋಲಿಯೋ: ಮೈಕ್ರೋ ಪ್ಲಾನ್ ಸಿದ್ಧಪಡಿಸಿ

December 04, 2025 4:12 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.