BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
  • ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
  • ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಒಳ್ಳೆಯ ಕೆಲಸಗಳಿಗೆ ಸ್ಪೂರ್ತಿ ನೀಡುವಂತಹದ್ದು ಸಿದ್ದಗಂಗಾ ಮಠ
ಇತರೆ ಸುದ್ಧಿಗಳು

ಒಳ್ಳೆಯ ಕೆಲಸಗಳಿಗೆ ಸ್ಪೂರ್ತಿ ನೀಡುವಂತಹದ್ದು ಸಿದ್ದಗಂಗಾ ಮಠ

By News Desk BenkiyabaleUpdated:May 15, 2023 4:41 pm

ತುಮಕೂರು


ಸಿದ್ದಗಂಗಾ ಮಠ ಒಳ್ಳೆಯ ಕೆಲಸಗಳಿಗೆ ಸ್ಪೂರ್ತಿ ನೀಡುವಂತಹ ಮಠ. ಹಾಗಾಗಿಯೇ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದು ನನ್ನ ಶಾಸಕ ಜವಾಬ್ದಾರಿಯನ್ನು ಇಂದಿನಿAದ ಆರಂಭಿಸುತ್ತಿದ್ದೇನೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ತಿಳಿಸಿದರು.
ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಹಿರಿಯ ಶ್ರೀಗಳಾದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ೨೦೦೮ರಲ್ಲಿ ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿಯೂ ಡಾ. ಶ್ರೀ ಶಿವಕುಮಾರಸ್ವಾಮಿಜೀಗಳ ಆಶೀರ್ವಾದ ಪಡೆದು ಕೆಲಸ ಆರಂಭಿಸಿದ್ದೆ. ಈಗಲೂ ಕೂಡ ಅದೇ ಕೆಲಸವನ್ನು ಮುಂದುವರೆಸಿದ್ದೇನೆ ಎಂದರು.
ಸಿದ್ದಗAಗಾ ಮಠದ ಆಶೀರ್ವಾದಿಂದ ೨೦೦೮ ಮತ್ತು ೨೦೧೩ ರಲ್ಲಿ ಶಾಸಕನಾಗಿ ಆಯ್ಕೆಯಾಗಲು ಅವಕಾಶವಾಯಿತು. ಆ ವೇಳೆ ಕ್ಷೇತ್ರದ ಜನರು ಬಹುದಿನದ ಬೇಡಿಕೆಯಾಗಿದ್ದ ಹೆಬ್ಬೂರು-ಗೂಳೂರು ಏತನೀರಾವರಿ ಜಾರಿ, ಶಾಲೆಗಳ ಅಭಿವೃದ್ದಿ, ರೈತರಿಗೆ ನಿರಂತರ ವಿದ್ಯುತ್ ಹೀಗೆ, ಹತ್ತು ಹಲವು ಅಭಿವೃದ್ದಿ ಕಾರ್ಯಕ್ರಮಗಳನ್ನು ಕ್ಷೇತ್ರದಲ್ಲಿ ನಡೆಸಲು ಸಹಕಾರಿಯಾಯಿತು. ಇದಕ್ಕೆಲ್ಲಾ ಸ್ಫೂರ್ತಿ ನೀಡಿದ್ದು ಸಿದ್ದಗಂಗಾ ಮಠ ಎಂದರು.
ಹಿರಿಯ ಶ್ರೀಗಳಿದ್ದ ಸಂದರ್ಭದಲ್ಲಿ ಮಠಕ್ಕೆ ಬಂದರೆ ಕ್ಷೇತ್ರದ ನೀರಾವರಿ ಯೋಜನೆಗಳು, ರೈತರ ಪರವಾಗಿ ನಿಲ್ಲುವಂತೆ, ಗ್ರಾಮೀಣ ಭಾಗದಲ್ಲಿಯೂ ಉತ್ತಮ ಗುಣಮಟ್ಟದ ಶಾಲೆಗಳನ್ನು ತೆರೆದು ಬಡವರಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಬೇಕೆಂದು ಶ್ರೀಗಳು ಸಲಹೆ ನೀಡುತ್ತಿದ್ದರು. ಅದರಂತೆ ಈ ಬಾರಿಯೂ ಸಹ ಉತ್ತಮವಾಗಿ ಕೆಲಸ ಮಾಡಲು ಮುಂದಾಗಿರುವುದಾಗಿ ಹೇಳಿದರು.
ಭಕ್ತರಿಂದ ನಡೆದಾಡುವ ದೇವರು ಎಂದು ಕರೆಸಿಕೊಂಡಿದ್ದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ನನ್ನಂತಹ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದಾರೆ. ಹಾಗಾಗಿಯೇ ಇಂದಿಗೂ ಅವರ ಗುದ್ದುಗೆಗೆ ದಿನಕ್ಕೆ ಸಾವಿರಾರು ಜನರು ಭೇಟಿ ನೀಡಿ, ಪೂಜೆ ಸಲ್ಲಿಸಿ ದರ್ಶನ ಪಡೆಯುತ್ತಾರೆ. ಹಾಗೆಯೇ ನಾನು ಸಹ ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದು, ಇಂದಿನಿAದ ಗ್ರಾಮಾಂತರ ಕ್ಷೇತ್ರದಲ್ಲಿ ನನ್ನ ಕೆಲಸ ಆರಂಭಿಸಿದ್ದೇನೆ. ಹಾಗೇಯ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಸಹ ನನ್ನ ಮೇಲಿದೆ ಎಂದರು.
ಸರ್ಕಾರ ಯಾವುದಿದ್ದರೇನು, ಅನುದಾನ ತರುವ ತಾಕತ್ತು ನನಗಿದೆ. ಸರ್ಕಾರ ಒಂದು ರೀತಿಯಲ್ಲಿ ಬಾವಿಯಿದ್ದಂತೆ. ಯಾರಿಗೆ ಶಕ್ತಿ ಇದೆಯೋ ಅವರು ಹೆಚ್ಚು ನೀರು ಸೇದಿಕೊಳ್ಳುತ್ತಾರೆ. ಈ ಹಿಂದೆ ೨೦೧೩ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗಲೂ ಕೇತ್ರದ ಅಭಿವೃದ್ದಿಗೆ ೮೦೦ ಕೋಟಿ ಅನುದಾನ ತಂದಿದ್ದೆ. ಈ ಬಾರಿಯೂ ಪ್ರಬಲ ವಿರೋಧ ಪಕ್ಷವಾಗಿ ಕ್ಷೇತ್ರದ ಅಭಿವೃದ್ದಿಗೆ ಬೇಕಾದ ಅನುದಾನ ತರಲಿದ್ದೇನೆ. ನಾನು ಅನುದಾನವನ್ನು ನನ್ನ ಮನೆಗೆ ಕೇಳೋದಿಲ್ಲ. ಬಡವರಿಗೆ ಮನೆ, ಬಗರಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಸೇರಿದಂತೆ ಎಲ್ಲವನ್ನು ಅದ್ಯತೆಯ ಮೇರೆಗೆ ಮಾಡಲಿದ್ದೇನೆ ಎಂದರು.
ಕ್ಷೇತ್ರವನ್ನು ಹಾಗೂ ಶಾಲೆಗಳನ್ನು ಸಿ.ಎಸ್.ಆರ್.ನಿಧಿಯಿಂದ ಅಭಿವೃದ್ದಿ ಪಡಿಸುವ ಯೋಚನೆ ಇದೆ. ಮುಂದಿನ ಐದು ವರ್ಷಗಳಲ್ಲಿ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಒಂದೊAದು ಶಾಲೆಯನ್ನು ಮಾದರಿ ಶಾಲೆ ಮಾಡಬೇಕೆಂಬ ಮಹದಾಸೆ ಇದೆ. ಈಗಾಗಲೇ ಆಕ್ಷನ್ ಪ್ಲಾನ್ ಇದೆ. ಮಾಜಿ ಶಾಸಕರ ಕಾಲದಲ್ಲಿ ಹಾಳಾಗಿರುವ, ನೆನೆಗುದಿಗೆ ಬಿದ್ದಿರುವ ಎಲ್ಲಾ ಯೋಜನೆಗಳನ್ನು ಒಂದು ತಿಂಗಳ ಒಳಗೆ ಸರಿದಾರಿಗೆ ತಂದು ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ದಿ ಪಡಿಸುವತ್ತ ಗಮನ ಹರಿಸುತ್ತೇನೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಶಾಸಕ ಸುರೇಶ್‌ಗೌಡ ಅವರು ಹಳೇ ಮಠಕ್ಕೆ ತೆರಳಿ ನೂತನ ಉತ್ತರಾಧಿಕಾರಿ ಶ್ರೀ ಶಿವ ಸಿದ್ದೇಶ್ವರ ಸ್ವಾಮಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮುಖಂಡರಾದ ಮೈದಾಳ ಗ್ರಾ.ಪಂ.ಅಧ್ಯಕ್ಷ ಮಾಲಾ ಮಂಜುನಾಥ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಶಂಕರಣ್ಣ, ಉಮಾಶಂಕರ್, ಗೂಳೂರು ಶಿವಕುಮಾರ್, ಅರಕೆರೆ ರವೀಶ್, ನಾರಾಯಣಪ್ಪ, ಗೂಳೂರು ವಿಜಯಕುಮಾರ್, ಗಂಗಾAಜನೇಯ, ಪಂಚೆ ರಾಮಚಂದ್ರಪ್ಪ, ಊರುಕೆರೆ ಆರ್. ವಿಜಯಕುಮಾರ್, ಹೊನ್ನೇಶಕುಮಾರ್, ಹೆತ್ತೇನಹಳ್ಳಿ ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

(Visited 2 times, 1 visits today)
tumkur
Previous Articleಚುನಾವಣೆ : ಸಕಲ ಸಿದ್ಧತೆ
Next Article ಬಿ.ವೈ.ವಿಜಯೇಂದ್ರ ಮಠಕ್ಕೆ ಭೇಟಿ
News Desk Benkiyabale

Related Posts

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm news
ತಾಜಾ ಸುದ್ಧಿಗಳು
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm
news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm
news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
Our Youtube Channel
Our Picks

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

By News Desk BenkiyabaleAugust 28, 2026 5:44 pm

ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ.ಬಿ.ವಿ ಅವರು ಜಿಲ್ಲಾ ಪಂಚಾಯತಿಯಲ್ಲಿAದು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್…

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.