BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರುದ್ರಭೂಮಿ ಲೋಕಾರ್ಪಣೆ – ಶ್ರೀಸಿದ್ದೇಶ್ವರಸ್ವಾಮಿ ದೇವಾಲಯದ ಪ್ರತಿಷ್ಠಾಪನೆ
ಇತರೆ ಸುದ್ಧಿಗಳು

ರುದ್ರಭೂಮಿ ಲೋಕಾರ್ಪಣೆ – ಶ್ರೀಸಿದ್ದೇಶ್ವರಸ್ವಾಮಿ ದೇವಾಲಯದ ಪ್ರತಿಷ್ಠಾಪನೆ

By News Desk BenkiyabaleUpdated:June 02, 2023 4:53 pm

ತುಮಕೂರು


ನಗರ ವೀರಶೈವ ಸಮಾಜ ಸೇವಾ ಸಮಿತಿವತಿಯಿಂದ ನಗರದ ಗಂಗಸಂದ್ರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವೀರಶೈವ – ಲಿಂಗಾಯಿತ ರುದ್ರಭೂಮಿ ಲೋಕಾರ್ಪಣೆ ಹಾಗೂ ಶ್ರೀಸಿದ್ದೇಶ್ವರಸ್ವಾಮಿ ದೇವಾಲಯದ ಪ್ರತಿಷ್ಠಾಪನಾ ಕಾರ್ಯಕ್ರಮ ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ, ಅಟವಿ ಸುಕ್ಷೇತ್ರದ ಶ್ರೀ ಅಟವಿ ಶಿವಲಿಂಗಸ್ವಾಮೀಜಿ, ಹಿರೇಮಠದ ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹಾಗೂ ಮಾಕನಹಳ್ಳಿ ಜಂಗಮ ಮಠದ ಶ್ರೀಗಂಗಾಧರಸ್ವಾಮೀಜಿ,ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.
ಕಾರ್ಯಕ್ರಮಕ್ಕೆ ಸಂಸದ ಜಿ.ಎಸ್.ಬಸವರಾಜು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಸಮಾಜ ಒಗ್ಗಟ್ಟಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ನಮ್ಮಲ್ಲಿ ನಾವೇ ಭಿನ್ನಮತ ಮೂಡಿಸಿಕೊಂಡರೆ ಏನನ್ನು ಸಾಧಿಸು ಸಾಧ್ಯವಿಲ್ಲ.ಸ್ವಲ್ಪ ಯಾಮಾರಿದರೂ ಇದದ್ದನ್ನು ಕಿತ್ತುಗೊಂಡು ಬಿಡುತ್ತಾರೆ.ಇದು ನಾನು ನಿಮಗೆ ನೀಡುತ್ತಿರುವ ಎಚ್ಚರಿಕೆ.ನನ್ನ ಕಾಲ ಮುಗಿಯಿತು.ಈಗಾಗಲೇ ಪಕ್ಷದ ಹೈಕಮಾಂಡ್‍ಗೆ ಮುಂದಿನ ಬಾರಿ ನಾನು ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿದ್ದೇನೆ.ಮುಂದೆ ಯಾರೇ ಬರಲಿ ಅವರ ಸಹಾಯ ಪಡೆದು, ಸಮಾಜವನ್ನು ಅಭಿವೃದ್ದಿಯ ಕಡೆಗೆ ತೆಗೆದುಕೊಂಡು ಹೋಗಿ ಎಂದು ಕಿವಿ ಮಾತು ಹೇಳಿದರು.
ಭಾರತೀಯ ಸನಾತನ ಸಂಸ್ಕøತಿಯಲ್ಲಿ ರುದ್ರಭೂಮಿಗಳಿಗೆ ವಿಶೇಷ ಸ್ಥಾನವಿದೆ.ಎಲ್ಲರೂ ಕೊನೆಗೆ ಒಂದು ದಿನ ಹೋಗಲೇಬೇಕು.ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿಯ ಅಧ್ಯಕ್ಷರಾದ ಟಿ.ಬಿ.ಶೇಖರ್, ಉಪಾಧ್ಯಕ್ಷರಾದ ಚಂದ್ರಮೌಳಿ ಅವರುಗಳು ರುದ್ರಭೂಮಿಯ ಪ್ರಸ್ತಾಪ ಮಾಡಿದ್ದರ ಹಿನ್ನೇಲೆಯಲ್ಲಿ ಗಂಗಸಂದ್ರದ ಶಿಂಷಾ ನದಿಯ ದಡದಲ್ಲಿ ಸುಮಾರು 5 ಎಕರೆ ಜಾಗದಲ್ಲಿ ತಲೆ ಎತ್ತಿರುವ ವೀರಶೈವ-ಲಿಂಗಾಯಿತ ರುದ್ರಭೂಮಿ ನಿರ್ಮಾಣಗೊಂಡಿದೆ. ವೀರಶೈವರಿ ಗಲ್ಲದೆ ಬೇರೆ ಸಮುದಾಯಗಳಿಗೂ ಇದರ ಅಕ್ಕ,ಪಕ್ಕದಲ್ಲಿ ಭೂಮಿ ನೀಡಲಾಗಿದೆ.ಇದರ ಸದ್ಬಳಕೆಯಾಗಬೇಕು ಎಂದು ಸಲಹೆ ನೀಡಿದರು.
ಗಡಿನಾಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ,ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್ ಮಾತನಾಡಿ,ಇಂದು ಲೋಕಾರ್ಪಣೆಗೊಂಡಿರುವ ವೀರಶೈವ-ಲಿಂಗಾಯಿತ ರುದ್ರಭೂಮಿಯ ಮಂಜೂರಾತಿಯ ಹಿಂದೆ ಸಂಸದ ಜಿ.ಎಸ್.ಬಸವ ರಾಜು ಅವರು ಶ್ರಮವಿದೆ.ತುಮಕೂರು ಜಿಲ್ಲೆಯ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಸಂಸದರ ನಿರಂತರ ಪ್ರಯತ್ನವಿದೆ. ಹುಟ್ಟಿದವನಿಗೆ ಸಾವು ನಿಶ್ಚಿತ. ಹುಟ್ಟು ಸಾವಿನ ನಡುವೆ ನಾಲ್ಕು ಜನರಿಗೆ ಅನುಕೂಲವಾಗುವಂತಹ ಕೆಲಸವನ್ನು ಮಾಡಿ, ಜೀವನವನ್ನು ಸಾರ್ಥಕ ಪಡಿಸಿಕೊಳ್ಳೋಣ ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿಯ ಅಧ್ಯಕ್ಷ ಟಿ.ಬಿ.ಶೇಖರ್,ಊರು ಬೆಳೆದು,ಜನಸಂಖ್ಯೆ ಹೆಚ್ಚಾದಂತೆ ಈಗಿರುವ ರುದ್ರಭೂಮಿ ಕಿರಿದಾದ ಹಿನ್ನೆಲೆಯಲ್ಲಿ ಊರಿನ ಹೊರವಲಯದಲ್ಲಿ ದೊಡ್ಡದಾದ ರುದ್ರಭೂಮಿಯ ಅಗತ್ಯವಿತ್ತು.ಹಾಗಾಗಿ ಇಂದು ಗಂಗಸಂದ್ರದಲ್ಲಿ ಸಂಸದ ಜಿ.ಎಸ್.ಬಸವರಾಜು, ಮಾಜಿಸಚಿವ ಸೊಗಡು ಶಿವಣ್ಣ ಅವರ ಸಹಕಾರದಿಂದ ಈ ಭೂಮಿಯನ್ನು ಪಡೆದು ವೀರಶೈವ ರುದ್ರಭೂಮಿಗೆ ಚಾಲನೆ ನೀಡಲಾಯಿತು. ಸಂಸದರು,ಶಾಸಕರ ನಿಧಿ ಹಾಗೂ ಸಾರ್ವಜನಿಕರ ಧೇಣಿಯಿಂದ ಇಂದು ಸುಸಜ್ಜಿತ ರುದ್ರಭೂಮಿ ತಲೆ ಎತ್ತಿದೆ.ಇಲ್ಲಿಗೆ ಬಂದವರಿಗೆ ಒಂದು ಆಹ್ಲಾದಕರ ವಾತಾವರಣ ನಿರ್ಮಾಣಕ್ಕೆ ರುದ್ರವನ, ಶ್ರೀಸಿದ್ದೇಶ್ವರಸ್ವಾಮಿ ದೇವಾಲಯ ಇದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಹಿರೇಮಠದ ಡಾ.ಶ್ರೀಶಿವಾನಂದಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ,
ತುಮಕೂರಿನಲ್ಲಿ 1902ರಲ್ಲಿ ವೀರಶೈವ-ಲಿಂಗಾಯಿತರ ರುದ್ರಭೂಮಿ ಇತ್ತು.1957ರಲ್ಲಿ ಬನಶಂಕರಿಯಲ್ಲಿ ಒಂದು ರುದ್ರಭೂಮಿ ಆರಂಭವಾಯಿತು. ಪ್ರಸ್ತುತ ಗಂಗಸಂದ್ರದಲ್ಲಿ ರುದ್ರಭೂಮಿ ಆರಂಭಗೊಂಡಿದೆ.ಇದು ವೀರಶೈವ ಸಮಾಜದ ದೂರದೃಷ್ಟಿಯ ಫಲ.ಇದು ಸ್ಮಶಾನವಲ್ಲ.ಜೋರ್ತಿಲಿಂಗ.ಭಾರತೀಯರಲ್ಲಿ ರುದ್ರಭೂಮಿ ಎಂದರೆ ಪೈಶಾಚಿಕ ಶಕ್ತಿಗಳು ಇರುವ ಜಾಗ ಎಂಬಕಲ್ಪನೆ ಇದೆ. ಆದರೆ ವಿದೇಶಿಯರಲ್ಲಿ ಆ ಭಾವನೆ ಇಲ್ಲ. ಅಲ್ಲಿ ರುದ್ರಭೂಮಿಗಳನ್ನು ರುದ್ರವನಗಳಾಗಿ ಅಭಿವೃದ್ದಿ ಪಡಿಸಿ,ಅಹ್ಲಾದಕರ ವಾತಾವರಣ ನಿರ್ಮಾಣ ಮಾಡಿರುತ್ತಾರೆ.ಅದೇ ಪರಿಕಲ್ಪನೆಯಲ್ಲಿ ಇದನ್ನು ನಿರ್ಮಿಸಲಾಗಿದೆ. ಪ್ರತಿಯೊಬ್ಬರು ಇಲ್ಲಿಗೆ ಬರಲೇಬೇಕು.ಯಾವುದೆ ಗೊಂದಲವಿಲ್ಲದೆ ಇದನ್ನು ಬಳಕೆ ಮಾಡುವಂತಹ ವಾತಾವರಣ ನಿರ್ಮಾಣವಾಗಲಿದೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಪೂಜಾ ಕೈಂಕರ್ಯಗಳು ನೆರವೇರಿದವು.ವೇದಿಕೆಯಲ್ಲಿ ಶಾಸಕ ಜಿ.ಬಿ.ಜೋತಿಗಣೇಶ್,
ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್, ಉಪಾಧ್ಯಕ್ಷ ಚಂದ್ರಮೌಳಿ, ಮುಖಂಡರಾದ ಸಿ.ವಿ.ಮಹದೇವಯ್ಯ, ಕೆ.ಜೆ.ರುದ್ರಪ್ಪ, ಮೋಹನ್‍ಕುಮಾರ್ ಪಟೇಲ್, ಎಸ್.ಎಂ.ರಾಜು, ವೀಣಾ, ಕೋರಿ ಮಂಜುನಾಥ್, ಭಸ್ಮಾಂಗಿ ರುದ್ರಯ್ಯ, ಓಹಿಲೇಶ್ವರ್, ಪಾಲಿಕೆ ಸದಸ್ಯರಾದ ಮಂಜುಳ ಆದರ್ಶ, ಮಹೇಶ್, ದೀಪಶ್ರೀ ಮಹೇಶ್ ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಿದೇರ್ಶಕರುಗಳು ಉಪಸ್ಥಿತರಿದ್ದರು.

(Visited 3 times, 1 visits today)
tumkur
Previous Articleನಮಗೆ ಆಹಾರ ಬೇಕು ತಂಬಾಕು ಬೇಡ
Next Article 10 ನಿಮಿಷದಲ್ಲಿ ಆಸ್ತಿ ನೋಂದಣಿ : ಕಾವೇರಿ- 2.0 ತಂತ್ರಾಂಶ ಅಳವಡಿಕೆ
News Desk Benkiyabale

Related Posts

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm news
ತಾಜಾ ಸುದ್ಧಿಗಳು
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
Our Youtube Channel
Our Picks

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

By News Desk BenkiyabaleAugust 04, 2026 9:55 pm

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ…

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.