BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜು.೨೩ : ಗುರುವಂದನಾ ಮತ್ತು ಭೋವಿ ಸಮುದಾಯದ ಶಾಸಕರಿಗೆೆ ಅಭಿನಂದನಾ
ಇತರೆ ಸುದ್ಧಿಗಳು

ಜು.೨೩ : ಗುರುವಂದನಾ ಮತ್ತು ಭೋವಿ ಸಮುದಾಯದ ಶಾಸಕರಿಗೆೆ ಅಭಿನಂದನಾ

By News Desk BenkiyabaleUpdated:July 10, 2023 5:06 pm

ತುಮಕೂರು


ಜಿಲ್ಲಾ ಭೋವಿ ಸಂಘ(ರಿ)ವತಿಯಿAದ ಜುಲೈ ೨೩ರ ಭಾನುವಾರ ಚಿಕ್ಕನಾಯಕನಹಳ್ಳಿ ಪಟ್ಟಣದ ಕನ್ನಡ ವೇದಿಕೆ ಸಭಾಂಗಣದಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ ೩೮ನೇ ಜನ್ಮ ವರ್ಧಂತಿಯ ಅಂಗವಾಗಿ ಗುರುವಂದನಾ ಮತ್ತು ಸಮುದಾಯದ ನೂತನ ಶಾಸಕರುಗಳಿಗೆ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಭೋವಿ ಸಂಘದ ಜಿಲ್ಲಾಧ್ಯಕ್ಷ ಓಂಕಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಕಲ್ಲು ಒಡೆಯುವ,ಮಣ್ಣಿನ ಕೆಲಸ ಮತ್ತಿತರರ ಶ್ರಮಿಕ ಕೆಲಸಗಳಲ್ಲಿ ನಿರತವಾಗಿರುವ ಭೋವಿ ಸಮುದಾಯವನ್ನು ಸಂಘಟಿಸುವ ಉದ್ದೇಶದಿಂದ ತುಮಕೂರು ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನಮ್ಮ ಗುರುಗಳಾದ ಶ್ರೀಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿಗಳ ಗುರುವಂಧನಾ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದು,ಇದರ ಜೊತೆಗೆ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ಶಾಸಕರು, ಸಚಿವರುಗಳನ್ನು ಅಭಿನಂದಿಸುವ ಹಾಗೂ ನಗದು ಪುರಸ್ಕಾರದೊಂದಿಗೆ ಪ್ರತಿಭಾನ್ವಿತ ಮಕ್ಕಳನ್ನು ಸಹ ಸನ್ಮಾನಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಜಿಲ್ಲಾ ಭೋವಿ ಸಂಘ ಹೊಂದಿದೆ ಎಂದರು.
ತುಮಕೂರು ಜಿಲ್ಲಾ ಭೋವಿ ಸಂಘದವತಿಯಿAದ ೨೦೨೧ರಲ್ಲಿ ಗಾಜಿನಮನೆಯಲ್ಲಿ, ೨೦೨೨ರಲ್ಲಿ ಶಿರಾ ನಗರದಲ್ಲಿ ಗುರುವಂಧನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಬಾರಿ ಚಿಕ್ಕನಾಯಕನಹಳ್ಳಿಯ ಕನ್ನಡ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ವಿಧಾನಸಭೆಗೆ ಆಯ್ಕೆಯಾಗಿರುವ ಪಾವಗಡದ ಹೆಚ್.ವಿ.ವೆಂಕಟೇಶ್,ಅರವಿAದ ಲಿಂಬಾವಳಿ ಸೇರಿದಂತೆ ೭ ಶಾಸಕರು ಹಾಗೂ ವಿಧಾನಪರಿಷತ್‌ನಲ್ಲಿರುವ ಓರ್ವ ಶಾಸಕರು ಭಾಗವಹಿಸಲಿದ್ದಾರೆ.ಶೇ೮೦ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ಮಕ್ಕಳಿಗೆ ನಗದು ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ ಹಿಂದಿನಿAದಲೂ ಚಾಲ್ತಿಯಲ್ಲಿದೆ.ಜಿಲ್ಲೆಯಲ್ಲಿ ಸುಮಾರು ೯೦ ಸಾವಿರ ಜನಸಂಖ್ಯೆಯನ್ನು ಹೊಂದಿರುವ ಭೋವಿ ಸಮುದಾಯ ಇತ್ತೀಚಗಷ್ಟೇ ಶೈಕ್ಷಣಿಕವಾಗಿ ಪ್ರಗತಿ ಹೊಂದು ತ್ತಿದ್ದು,ಇದರ ವೇಗವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ,ಗುರುವಂಧನಾ ಕಾರ್ಯಕ್ರಮದ ನಂತರ ಜಾಗೃತಿ ಆಂದೋಲನವನ್ನು ಭೋವಿ ಕಾಲೋನಿಗಳಲ್ಲಿ ಕೈಗೊಳ್ಳಲಾಗುತ್ತಿದೆ.ಪ್ರತಿ ಭೋವಿ ಕಾಲೋನಿಗಳಿಗೆ ನಾಮಫಲಕ ಅಳವಡಿಸಿ,ಜನಸಂಖ್ಯೆಯ ಜೊತೆಗೆ, ಅವರ ಅರ್ಥಿಕ, ಸಾಮಾಜಿಕ ಸ್ಥಿತಿಗತಿಯ ಕುರಿತು ಮಾಹಿತಿ ಸಂಘ್ರಹಿಸಲಾಗುವುದು ಎಂದು ಓಂಕಾರ್ ತಿಳಿಸಿದರು.
ಈ ಹಿಂದಿದ್ದ ಸರಕಾರ ಭೋವಿ,ಲಂಬಾಣಿ,ಕೊರಮ,ಕೊರಚ ಇನ್ನಿತರ ಪರಿಶಿಷ್ಟ ಜಾತಿಗಳ ಜನರ ವಿರೋಧದ ನಡುವೆಯೂ ಸದನದಲ್ಲಿ ಒಳಮೀಸಲಾತಿ ಕರಡು ಮಂಡಿಸಿ,ಒಪ್ಪಿಗೆ ಪಡೆದು ಜನರಲ್ಲಿ ಸಾಕಷ್ಟು ಗೊಂದಲವನ್ನು ಉಂಟು ಮಾಡಿದೆ. ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯಲ್ಲಿರುವ ನಮ್ಮ ಸಮುದಾಯದ ಜನಸಂಖ್ಯೆ ಲೆಕ್ಕಕ್ಕೂ,ವಾಸ್ತವದಲ್ಲಿ ಇರುವ ಜನಸಂಖ್ಯೆ ಲೆಕ್ಕಕ್ಕೂ ಅಜಗಜಾಂತರ ವೆತ್ಯಾಸವಿದೆ. ಹಾಗಾಗಿಯೇ ೨೦೨೩ರ ಜನವರಿ ೧೦ ರಂದು ಒಳಮೀಸಲಾತಿ ಜಾರಿ ವಿರುದ್ದ ಮೇಲಿನ ಎಲ್ಲಾ ಸಮುದಾಯಗಳ ಬೃಹತ್ ಸಂಖ್ಯೆಯಲ್ಲಿ ಪಕ್ಷಾತೀತವಾಗಿ ಸೇರಿ ಪ್ರತಿಭಟನೆ ನಡೆಸಿದ್ದರು.ಆದರೆ ಕಾನೂನು ಸಚಿವರು ಎ.ಜೆ.ಸದಾಶಿವ ಆಯೋಗದ ವರದಿಯಲ್ಲಿನ ಕೆಲಸ ಅಂಕಿ ಅಂಶಗಳನ್ನು ಬದಲಾಯಿಸಿ ಮೀಸಲಾತಿ ಹೆಚ್ಚಳ ಮಾಡಿತ್ತು.ಇದಕ್ಕೆ ನಮ್ಮ ವಿರೋಧವಿದೆ ಎಂದು ಓಂಕಾರ್ ತಿಳಿಸಿದರು.
ಜುಲೈ೨೩ರ ಭಾನುವಾರ ಚಿಕ್ಕನಾಯಕನಹಳ್ಳಿ ಕನ್ನಡ ಸಭಾಂಗಣದಲ್ಲಿ ನಡೆಯುವ ಗುರುವಂದನೆ, ನೂತನ ಶಾಸಕರಿಗೆ ಸನ್ಮಾನ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಭೋವಿ ಸಮಾಜ ಬಂಧುಗಳು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕೋರಿದ ಅವರು, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವವರು ಜುಲೈ ೨೦ರೊಳಗೆ ರಾಕೇಶ್ ೯೫೩೫೯೫೮೫೧೭, ಹುಲುಗಪ್ಪ ೯೬೨೦೧೬೯೨೧೧, ಈಶ್ವರ್ ೯೭೪೩೯೯೨೩೪೦ ಅವರುಗಳಿಗೆ ಸಂಪರ್ಕಿಸುವAತೆ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ತುಮಕೂರು ಜಿಲ್ಲಾ ಭೋವಿ ಸಂಘದ ಉಪಾಧ್ಯಕ್ಷ ಶಿರಾ ಗೋವಿಂದರಾಜು,ಕುಣಿಗಲ್‌ನ ಲಕ್ಕಪ್ಪ,ಪಾವಗಡದ ಹನುಮಂತರಾಯಪ್ಪ, ಲೋಕೇಶ್, ಶಿರಾದ ಕೆಂಚಪ್ಪನಹಳ್ಳಿ ರಮೇಶ್, ದುರ್ಗಪ್ಪ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಮಠದಲ್ಲಿ ವಿದ್ಯಾರ್ಥಿನಿಲಯಕ್ಕೆ ಶಂಕುಸ್ಥಾಪನೆ
Next Article ಜು.೧೦ರಿಂದ ಕೊಲ್ಲಾಪುರದಮ್ಮ ಜಾತ್ರೆ
News Desk Benkiyabale

Related Posts

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.