BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ
  • ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ
  • ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು
  • ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ
  • ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ
  • ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಊರುಕೆರೆ ಗ್ರಾ.ಪಂ. ಗೆ ಬೇಕಿದೆ ಮೇಜರ್ ಸರ್ಜರಿ
ಇತರೆ ಸುದ್ಧಿಗಳು

ಊರುಕೆರೆ ಗ್ರಾ.ಪಂ. ಗೆ ಬೇಕಿದೆ ಮೇಜರ್ ಸರ್ಜರಿ

By News Desk BenkiyabaleUpdated:July 15, 2023 4:29 pm

ತುಮಕೂರು


ಮಹಾನಗರದಿಂದ ಕೂಗಳೆತೆ ದೂರದಲ್ಲಿರುವ ಊರುಕೆರೆ ಗ್ರಾಮವು ಇತ್ತೀಚೆಗೆ ಬಹು ವೇಗವಾಗಿ ಬೆಳೆಯುತ್ತಿರುವ ಗ್ರಾಮವಾಗಿದೆ, ಈ ಗ್ರಾಮಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ನಗರದ ಜನರು ಈ ಭಾಗದಲ್ಲಿ ಸೈಟುಗಳನ್ನು ಕೊಂಡು ಇಲ್ಲೇ ಮನೆಗಳನ್ನು ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದ್ದು, ಸೈಟುಗಳ ಬೆಲೆಯೂ ಸಹ ಗಗನಕ್ಕೇರಿದೆ. ಮೊದಲು ಈ ಭಾಗದಲ್ಲಿ ಕೇಳುವವರೇ ಇಲ್ಲದ ಜಾಗಗಳು ಇದೀಗ ಅವುಗಳಿಗೆ ಚಿನ್ನದ ಬೆಲೆ ಬಂದಿದೆ, ಅದಕ್ಕೆ ಕಾರಣ ವಸಂತನರಸಾಪುರ ಕೈಗಾರಿಕಾ ವಲಯ, ಏಕೆಂದರೆ ವಸಂತನರಸಾಪುರ ಮತ್ತು ತುಮಕೂರು ಮಧ್ಯದಲ್ಲಿ ಇರುವ ಈ ಗ್ರಾಮ ಎರಡಕ್ಕೂ ಸಂಪರ್ಕ ಸೇತುವೆಯಾಗಿದೆ.
ಹೀಗಿರುವಲ್ಲಿ ಈ ಗ್ರಾಮ ಪಂಚಾಯಿತಿ ಕಾರ್ಯವೈಖರಿ ಮಾತ್ರ ಶೂನ್ಯ ಎಂಬುದು ಇಲ್ಲಿನ ಹೊಸ ನಿವಾಸಿಗಳ ಆಗ್ರಹವಾಗಿದೆ, ಏಕೆಂದರೆ ಈ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಮನೆಗಳು ಎಲ್ಲಾ ಊರುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುತ್ತಿವೆ, ಪ್ರತಿಯೊಂದು ಸಂಪರ್ಕ ಪಡೆಯಲು ಗ್ರಾಮ ಪಂಚಾಯಿತಿಯ ಅನುಮೋದನೆ ಪಡೆದೇ ಮಾಡಬೇಕಾಗಿದೆ, ಜೊತೆಗೆ ಇಂತಿಷ್ಟು ತೆರಿಗೆಯನ್ನು ಸಹ ಕಟ್ಟಿಯೇ ಅವರು ಅಂಕಿತ ನೀಡುತ್ತಿದ್ದಾರೆ, ಜೊತೆಗೆ ನೂತನ ಗ್ರಾಮ ಪಂಚಾಯಿತಿ ಕಾರ್ಯಲಯವು ಸಹ ತುಂಬಾ ಚೆನ್ನಾಗಿದ್ದು, ಸಕಲ ಸೌಕರ್ಯವನ್ನು ಹೊಂದಿದೆ.
ಇನ್ನು ಈ ಗ್ರಾಮ ಪಂಚಾಯಿತಿಯ ಸದಸ್ಯರು, ಅಧ್ಯಕ್ಷರು ಮಾತ್ರ ಕಣ್ಣಿದ್ದರೂ ಕುರುಡರಂತೆ ವರ್ತಿಸುತ್ತಿರುವುದು ಮಾತ್ರ ಶೋಚನೀಯ ಸಂಗತಿ, ಏಕೆಂದರೆ ಗ್ರಾಮ ಪಂಚಾಯಿತಿಯ ಎದುರುಗಡೆಯೇ ಅವ್ಯವಸ್ಥೆಯ ಗೂಡಾಗಿದೆ, ಇದರಿಂದ ಊರುಕೆರೆಯ ಹೊಸ ಬಡಾವಣೆಗಳ ನಿವಾಸಿಗಳಿಗೆ ಬೇಸರ ಮೂಡಿಸಿರುವುದಲ್ಲದೇ ಪಂಚಾಯಿತಿಯ ಮೇಲೆ ಅಸಹ್ಯ ಹುಟ್ಟಿಸುವಂತೆ ಮಾಡಿದೆ, ಜೊತೆಗೆ ದಿನನಿತ್ಯ ಪಂಚಾಯಿತಿಗೆ ಶಾಪ ಹಾಕಿಕೊಂಡು, ಒಳಗೊಳಗೆ ಬೈದಾಡಿಕೊಂಡು ಓಡಾಡುವ ಪರಿಸ್ಥಿತಿ ಬಂದೊದಗಿದೆ.
ಹೌದು ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರೇ ಕೆಸರು ಗದ್ದೆಯಂತಾಗಿದೆ, ಈ ಭಾಗದಲ್ಲಿ ಓಡಾಡುವ ಜನರು ಇಲ್ಲಿರುವ ಗುಂಡಿಗಳಿAದ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಹ ಸ್ಥಿತಿ ಬಂದಿದೆ, ಇನ್ನು ಇದೀಗ ಮಳೆಗಾಲ ಶುರುವಾಗಿದೆ, ಈಗಲಂತೂ ಈ ಗುಂಡಿಗಳಲ್ಲಿ ನೀರು ತುಂಬಿರುತ್ತದೆ, ಯಾವ ಗುಂಡಿ ಎಷ್ಟು ಆಳ ಇದೆ ಎಂಬುದೇ ಗೊತ್ತಾಗದ ಹಾಗೆ ಇರುತ್ತದೆ ಇನ್ನು ಎಷ್ಟೋ ಜನ ಈ ಗುಂಡಿಗಳೊಳಗೆ ಬಿದ್ದು ಎದ್ದು ಪಂಚಾಯಿತಿಗೆ ಶಾಪಾ ಹಾಕಿಕೊಂಡು ಓಡಾಡುತ್ತಿದ್ದಾರೆ, ರಾತ್ರಿಯೊತ್ತಂತೂ ಈ ಗುಂಡಿಗಳು ಯಮ ಕಿಂಕರರAತೆ ಗೋಚರಿಸುತ್ತವೆ, ಏಕೆಂದರೆ ಈ ಭಾಗಗಳಲ್ಲಿ ಸರಿಯಾದ ಬೀದಿ ದೀಪದ ವ್ಯವಸ್ಥೆಯಾಗಲೀ, ರಸ್ತೆ (ಪಕ್ಕಾ ರಸ್ತೆಯಲ್ಲದೇ ಹೋದರೂ ಕಚ್ಛಾ ರಸ್ತೆಯೂ ಇರುವುದಿಲ್ಲ) ಯಮ ಸ್ವರೂಪಿಯಾದ ಈ ಗುಂಡಿಗಳು ತಮ್ಮ ಬಲಿಗಾಗಿ ಬಾಯಿ ತೆರೆದು ನಿಂತಿರುತ್ತವೆ.
ಇನ್ನು ಈ ಪಂಚಾಯಿತಿಗೆ ಹಲವಾರು ಜನ ಸಾರ್ವಜನಿಕರು ರಸ್ತೆ ಮತ್ತು ಮೂಲ ಸೌಕರ್ಯಗಳಿಗಾಗಿ ಮೌಖಿಕವಾಗಿ, ಲಿಖಿತ ರೂಪವಾಗಿ ಸಾಕಷ್ಟು ಭಾರಿ ಮನವಿ ಮಾಡಿದ್ದರೂ ಸಹ ಪ್ರಯೋಜನವಾಗಿಲ್ಲ, ಜೊತೆಗೆ ಹಾಲಿ ಅಧ್ಯಕ್ಷರು ಸಿದ್ಧಲಿಂಗಸ್ವಾಮಿಯವರು ನವ ಉತ್ಸಾಹಿ ಯುವಕ ಎಂದೇ ಬಿಂಬಿತವಾಗಿದ್ದರು (ಈ ಮೊದಲು), ಆದರೆ ಆತ ಅಧ್ಯಕ್ಷನಾದ ಮೇಲೆ ಉತ್ಸಾಹ ಕಡಿಮೆ ಆಯಿತೇನೋ ಗೊತ್ತಿಲ್ಲ, ಏಕೆಂದರೆ ಸ್ವಾಮಿ ಅಧ್ಯಕ್ಷನಾದ ಹೊಸದರಲ್ಲಿ ತಾನು ಈ ಭಾಗವನ್ನು ಸಂಪೂರ್ಣವಾಗಿ ಬದಲಾವಣೆ ಮಾಡುತ್ತೇನೆ, ತಾನೊಬ್ಬ ಮಾದರಿ ಅಧ್ಯಕ್ಷನಾಗುತ್ತೇನೆ ಎಂತೆಲ್ಲಾ ಹೇಳಿದ್ದೂ ಸಹ ಉಂಟು ಆದರೆ ಅದೆಲ್ಲ ಪೊಳ್ಳು ಭರವಸೆಯಾಗಿಯೇ ಉಳಿದಿದೆ.
ಈ ಹಿಂದೆ ಅಂದರೆ ಕಳೆದ ಎರಡು ಮೂರು ವರ್ಷಗಳಿಂದ ಕೆಲವು ಸದಸ್ಯರು ಹೇಳುತ್ತಾ ಬಂದಿದ್ದು ಏನೆಂದರೆ ಊರುಕೆರೆ ಪಂಚಾಯಿತಿಯು ಬಿಜೆಪಿ ಪಕ್ಷದ ಬೆಂಬಲಿತ ಪಂಚಾಯಿತಿಯಾಗಿದೆ, ಗ್ರಾಮಾಂತರ ಶಾಸಕರು ಜೆಡಿಎಸ್ ಪಕ್ಷದವರಾಗಿದ್ದು, ಅವರು ಈ ಭಾಗಕ್ಕೆ ಸರಿಯಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ, ನಾವು ಏನು ಮಾಡೋದು, ಪಂಚಾಯಿತಿಯಲ್ಲಿಯೂ ಸಹ ಹಣವಿಲ್ಲ ಎಲ್ಲಿಂದ ತರೋಣ ಎಂದು ಹೇಳುತ್ತಿದ್ದರು, ಆದರೆ ಇದೀಗ ಬಿಜೆಪಿ ಅಭ್ಯರ್ಥಿಯಾದ ಸುರೇಶ್ ಗೌಡ ಅವರೇ ಗ್ರಾಮಾಂತರ ಶಾಸಕರಾಗಿ ಆಡಳಿತಕ್ಕೆ ಬಂದಿದ್ದಾರೆ ಅವರನ್ನು ಕೇಳಿ ಅನುದಾನ ಹಾಕಿಸಿಕೊಳ್ಳಿ ಎಂದು ಕೇಳಿದರೆ ಏನೇನೋ ಕುಂಟು ನೆಪಗಳನ್ನು ಹೇಳುತ್ತಾ ಕಾಲ ಕಳೆಯುತ್ತಿದ್ದಾರೆ.
ಇನ್ನು ಈ ಕುರಿತು ಹಾಲಿ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮಿಯವರು ಏನು ಹೇಳ್ತಾರೆ ಅಂದರೆ ಪಂಚಾಯಿತಿಯಲ್ಲಿ ದುಡ್ಡು ಇಲ್ಲ ನಾವು ಹೇಗೆ ಮಾಡಿಸೋಣ ಎಂಬ ಹಾರಿಕೆಯ ಉತ್ತರ ನೀಡುತ್ತಾರೆ, ಒಮ್ಮೆ ಇದೇ ಅಧ್ಯಕ್ಷರು ಮನಸ್ಸು ಮಾಡಿದರೆ ಅವರದೇ ಸ್ವಂತ ಕ್ರಷರ್ ಇದೆ, ಆ ಕ್ರಷರ್‌ನಲ್ಲಿ ಸಂಗ್ರಹವಾಗಿರುವ ವೇಸ್ಟ್ ಆಗಿರುವ ಮಣ್ಣನ್ನು ಇಲ್ಲಿ ತಂದು ಸುರಿಸಿದ್ದರೂ ಸಹ ಈ ಭಾಗದ ಗುಂಡಿಗಳು ಎಂದೋ ಮುಚ್ಚಿ ಹೋಗುತ್ತಿದ್ದವು, ಅವರಿಗೆ ಕೆಲಸ ಮಾಡುವ ಹುಮ್ಮಸ್ಸು ಇಲ್ಲ, ಬರೀ ಅಧಿಕಾರದ ದಾಹ ಎಂಬAತೆ ಕಾಣುತ್ತಿದೆ.
ಎಲ್ಲರಿಗೂ ಅಧಿಕಾರ ಬೇಕೇ ಹೊರತು, ಜನರಿಗೆ ಕೆಲಸ ಮಾಡಿಕೊಡಬೇಕು ಎನ್ನುವ ಹಂಬಲವಿಲ್ಲ, ಜನರ ತೆರಿಗೆ ಹಣವನ್ನು ತಮ್ಮ ಖರ್ಚಿಗೆ ಬೇಕೇ ಹೊರತು, ಜನರಿಗಾಗಿ ಒಳಿತು ಮಾಡಬೇಕು ಎನ್ನುವ ಹುಮ್ಮಸ್ಸು ಇಲ್ಲ, ಜನರ ವೋಟು ಬೇಕೇ ಹೊರತು, ಜನರ ಹಿತಕಾಪಾಡುವ ಮನಸ್ಸು ಇಲ್ಲ. ಇಂತಹ ದುರಾಡಳಿತದಲ್ಲಿ ನಾವುಗಳು ಜೀವನ ಮಾಡಬೇಕಾಗಿದೆ.

(Visited 1 times, 1 visits today)
tumkur
Previous Articleಜೈನಮುನಿ ಹತ್ಯೆ : ಹಂತಕರನ್ನು ಬಂಧಿಸಲು ಪ್ರತಿಭಟನೆ
Next Article ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು
News Desk Benkiyabale

Related Posts

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm
ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm
ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm
ತುಮಕೂರು

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
ತುಮಕೂರು

ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ

June 20, 2025 3:36 pm
ತುಮಕೂರು

ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್

June 20, 2025 3:35 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

By News Desk BenkiyabaleJune 20, 2025 3:41 pm

ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು…

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.