BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
  • ‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’
  • ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ
  • ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ
  • ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
  • ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
  • ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ
  • ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪೌರ ಕಾರ್ಮಿಕರನ್ನು ಸಮಾಜ ಗೌರವಯುತವಾಗಿ ನಡೆಸಿಕೊಳ್ಳಬೇಕು : ಸಚಿವ
ಇತರೆ ಸುದ್ಧಿಗಳು

ಪೌರ ಕಾರ್ಮಿಕರನ್ನು ಸಮಾಜ ಗೌರವಯುತವಾಗಿ ನಡೆಸಿಕೊಳ್ಳಬೇಕು : ಸಚಿವ

By News Desk BenkiyabaleUpdated:July 28, 2023 5:25 pm

ತುಮಕೂರು


ಮಹಾನಗರಪಾಲಿಕೆ ತುಮಕೂರು ಒಳಗೊಂಡAತೆ, ಜಿಲ್ಲೆಯ ವಿವಿಧ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಒಟ್ಟು ೨೭೬ ಸಂಖ್ಯೆಯ ಪೌರ ಕಾರ್ಮಿಕರನ್ನು ವಿಶೇಷ ನೇರ ನೇಮಕಾತಿಯಡಿ ಖಾಯಂಗೊಳಿಸಲಾಗುತ್ತಿದ್ದು, ಈ ಪೈಕಿ ಇಂದು ಜಿಲ್ಲೆಯ ೨೦೮ ಕಾರ್ಮಿಕರಿಗೆ ನೇಮಕಾತಿ ಆದೇಶಪತ್ರ ವಿತರಿಸುತ್ತಿರುವುದು ಸಂತಸ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ: ಜಿ. ಪರಮೇಶ್ವರ್ ಅವರು ತಿಳಿಸಿದರು.
ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿAದು ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ, ಮಹಾನಗರಪಾಲಿಕೆಯ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಾ, ದಾಖಲಾತಿಗಳನ್ನು ಸಲ್ಲಿಸದಿರುವ ೬೮ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ನೀಡುವುದು ಬಾಕಿ ಇದ್ದು, ಸಿಂಧುತ್ವ ಹಾಗೂ ಇತರೆ ಪ್ರಮಾಣ ಪತ್ರಗಳನ್ನು ಸಲ್ಲಿಸುವ ಪೌರ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಖಾಯಂ ಮಾಡಲಾಗುವುದು ಎಂದರು.
ಸಮಾಜದ ಕೆಳಹಂತದಲ್ಲಿದ್ದುಕೊAಡು ಸಮಾಜಕ್ಕಾಗಿ ದುಡಿಯುವ ಜನರೇ ಪೌರಕಾರ್ಮಿಕರು. ನಗರ ಮತ್ತು ಪಟ್ಟಣ ಸ್ವಚ್ಛತಾ ಕಾರ್ಯದಲ್ಲಿ ಯಾವುದೇ ಕೀಳರಿಮೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ, ನಾವುಗಳು ಈ ಕೆಲಸವನ್ನು ಮಾಡಬೇಕೆ ಅಥವಾ ಮಾಡಬಾರದೆ ಎನ್ನುವಂತಹ ಯಾವುದೇ ಭಾವನೆಗಳಿಲ್ಲದೆ, ನಗರವನ್ನು ಸ್ವಚ್ಛವಾಗಿಡುವುದಕ್ಕೆ ತಮ್ಮನ್ನು ತಾವು ಮುಡಿಪಾಗಿಟ್ಟಿರುವ ಪೌರಕಾರ್ಮಿಕರನ್ನು ವಿಶೇಷವಾಗಿ ಅಭಿನಂದಿಸುವುದಾಗಿ ತಿಳಿಸಿದರು.
ಜಿಲ್ಲೆಯ ತುಮಕೂರು ಪಾಲಿಕೆಯ ಸುಮಾರು ೧೨೧ ಪೌರ ಕಾರ್ಮಿಕರಿಗೆ ಒಂದು ಹೊಸ ಜೀವನ ಆರಂಭವಾಗುತ್ತಿದೆ ಎಂದು ನಾನು ಭಾವಿಸುತ್ತೇನೆ. ಅದರಲ್ಲೂ ವಿಶೇಷವಾಗಿ ಪಾಲಿಕೆಯ ೭೯ ಜನ ಇಂದು ಸಿಂಧುತ್ವ ಪ್ರಮಾಣ ಹಾಗೂ ಎಲ್ಲಾ ಬೇಕಾದಂತಹ ಕಾಗದ ಪತ್ರಗಳನ್ನು ಕೊಟ್ಟು ಅವರ ನೌಕರಿಯನ್ನು ಖಾಯಂ ಮಾಡುವಂತಹ ಆದೇಶವನ್ನು ನಾವಿಂದು ನೀಡುತ್ತಿದ್ದೇವೆ. ಬಹುಶಃ ಇಂದು ಈ ಪೌರ ಕಾರ್ಮಿಕರ ಜೀವನದಲ್ಲಿ ಹೊಸ ಬದಲಾವಣೆಯಾಗಿದೆ ಎಂದು ನಾನು ಭಾವಿಸುತ್ತೇನೆ ಎಂದರು.
ಎರಡು ವರ್ಷಗಳ ಹಿಂದೆ ಮೈಸೂರು ನಗರವನ್ನು ಸ್ವಚ್ಛ ನಗರ ಎಂದು ಘೋಷಿಸಿ ಪ್ರಶಸ್ತಿ ನೀಡಲಾಯಿತು. ತುಮಕೂರು ಸಹ ೨ನೇ ಸ್ಥಾನ ಪಡೆದಿದೆ. ಇದನ್ನೆಲ್ಲಾ ಮಾಡುವವರು ಯಾರು. ಹೀಗಾಗಿ ಇಂತಹ ನಗರಗಳನ್ನು ಸ್ವಚ್ಛವಾಗಿ ಸುಂದರವಾಗಿ ಕಾಣುವಂತೆ ಮಾಡುವವರೇ ಪೌರ ಕಾರ್ಮಿಕರು. ಇಂತಹ ಕಾರ್ಮಿಕರಿಗೆ ತಿಂಗಳಿಗೆ ೫ ರಿಂದ ೮ ಸಾವಿರ ರೂ. ಸಂಬಳ ಕೊಟ್ಟು ಜೀವನ ಮಾಡಿ ಎಂದು ಹೇಳುವುದು ಯಾವ ನ್ಯಾಯ. ಇವರಿಗೆ ಗೌರವಯುತವಾಗಿ ವೇತನ ಪಾವತಿಸುವುದೂ ಸಹ ಸರ್ಕಾರದ ಕರ್ತವ್ಯವಾಗಿದೆ ಎಂದರು.
ಇನ್ನೆರಡು ಮೂರು ತಿಂಗಳಲ್ಲಿ ೨ ರಿಂದ ೩ಸಾವಿರ ನಿವೇಶನಗಳನ್ನು ಹೆಚ್ಚಿಸಿ ಸಾರ್ವಜನಿಕರಿಗೆ ಹಂಚಬೇಕಾಗಿದೆ. ಹಿಂದೆ ಕುಡಿಯುವ ನೀರಿನ ಸಮಸ್ಯೆ ಇತ್ತು. ಆದರೆ ಇಂದು ಹೇಮಾವತಿ ನೀರಿನ ಹರಿಯುವಿಕೆಯಿಂದ ನೀರಿನ ಸಮಸ್ಯೆ ಬಗೆಹರಿದಿದೆ. ತುಮಕೂರು ಜಿಲ್ಲೆಗೆ ಮೆಟ್ರೋ ರೈಲು ತರುವ ಯೋಜನೆ ನಮ್ಮ ಸರ್ಕಾರದ ಮುಂದಿದೆ ಎಂದರು.
ನಗರದ ಮಧ್ಯ ಭಾಗ ೧೫೦-೨೦೦ ನಿವೇಶನಗಳು ಉಳಿದುಕೊಂಡಿದ್ದು, ಇವುಗಳನ್ನು ಹರಾಜು ಹಾಕುವ ಪ್ರಕ್ರಿಯೆ ಮಾಡಬೇಕಾಗಿದೆ. ಇದರಿಂದ ಪಾಲಿಕೆಗೆ ಹಣ ಬರಲಿದ್ದು, ಇದರಿಂದ ಅಭಿವೃದ್ಧಿ ಯೋಜನೆ ಕೈಗೊಳ್ಳಬಹುದಾಗಿದೆ. ಇಂತಹ ಕೆಲಸಗಳು ಮುಂದಿನ ದಿನಗಳಲ್ಲಿ ಆಗಬೇಕು ಎಂದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ಪೌರಕಾರ್ಮಿಕರನ್ನು ನಾವು ಗೌರವಯುತವಾಗಿ ನಡೆಸಿಕೊಳ್ಳುವ ಕುರಿತು ನಾವು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಿದೆ. ಪೌರ ಕಾರ್ಮಿಕರು ಕೈಗವಸು, ಶೂ, ಕೋಟು, ಮಾಸ್ಕ್, ಏಪ್ರಾನ್, ಮುಂತಾದ ಸುರಕ್ಷತಾ ಪರಿಕರ ಧರಿಸಿ ಕೆಲಸ ಮಾಡಬೇಕು. ಪೌರ ಕಾರ್ಮಿಕರಿಗೆ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಯಾವುದೇ ಸರ್ಕಾರ ಬರಲಿ ನೀಡಬೇಕಾಗುತ್ತದೆ. ಸ್ಲಂ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾಗುವ ಮನೆಗಳನ್ನು ಬಹುತೇಕ ಪಾಲನ್ನು ಪೌರ ಕಾರ್ಮಿಕರಿಗೆ ಮೀಸಲಿಡಬೇಕೆಂದು ಅವರು ಈ ಸಂದರ್ಭ ಮನವಿ ಮಾಡಿದರು.
ಕರ್ತವ್ಯದ ಅವಧಿಯಲ್ಲಿ, ವಿಷಮ ವಾತಾವರಣದಲ್ಲಿ ಕೆಲಸ ನಿರ್ವಹಿಸುವ ವೇಳೆ ಹಲವು ಪೌರ ಕಾರ್ಮಿಕರು ಮೃತಪಟ್ಟಿದ್ದು, ಇಂತಹ ಕಾರ್ಮಿಕ ಕುಟುಂಬಗಳನ್ನು ಗುರುತಿಸಿ ಸರ್ಕಾರದಿಂದ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು.
ಪಾಲಿಕೆ ಆಯುಕ್ತೆ ಅಶ್ವಿಜ ಬಿ.ವಿ. ಮಾತನಾಡಿ, ‘ನನ್ನ ಕಸ ನನ್ನ ಹೊಣೆ’ ಎಂಬ ಮನೋಭಾವನೆ ನಾಗರೀಕರಾದ ನಮ್ಮಲ್ಲಿ ಮೂಡಬೇಕು. ಪಾಲಿಕೆಗೆ ೫೦೭ ಪೌರ ಕಾರ್ಮಿಕ ಹುದ್ದೆಗಳು ಮಂಜೂರಾಗಿದ್ದು, ಸಧ್ಯ ೧೦೭ ಖಾಯಂ ಪೌರ ಕಾರ್ಮಿಕರು, ೩೩೫ ಮಂದಿ ನೇರ ಪಾವತಿ ಆ ಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪಾಲಿಕೆಯ ೧೨೧ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ದಾಖಲೆಗಳನ್ನು ಸಲ್ಲಿಸಿರುವ ೭೮ ಮಂದಿ ಹಾಗೂ ೧ ಸಾಮಾನ್ಯ ಅಭ್ಯರ್ಥಿಗೆ ಇಂದು ನೇಮಕಾತಿ ಆದೇಶ ಪ್ರತಿ ನೀಡಲು ಸಂತಸವಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿ.ಪಂ. ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್‌ವಾಡ್, ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಅದು ಸಿದ್ದರಾಮಯ್ಯ ಅವರ ಸೊಸೆ/ ಹೆಂಡತಿಗೆ ಆಗಿದ್ರೆ ಹೀಗೆ ಹೇಳಿದ್ರಾ ಎಂದ ಬಿಜೆಪಿ ಕಾರ್ಯಕರ್ತೆಯ ಬಂಧನ
Next Article ಸುಳ್ಳು ಸುದ್ದಿಗಳು ಸಮಾಜಕ್ಕೆ ಅಪಾಯಕಾರಿ : ಗೃಹ ಸಚಿವ
News Desk Benkiyabale

Related Posts

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm
ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
ತುಮಕೂರು

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm
ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm
Our Youtube Channel
Our Picks

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

August 01, 2025 1:37 pm

ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ

August 01, 2025 1:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

By News Desk BenkiyabaleAugust 04, 2025 4:02 pm

ತುಮಕೂರು: ಯಂಗ್ ಚಾಲೆಂಜರ್ಸ್ ಸಂಸ್ಥೆ ಭಾನುವಾರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಿರಿಯ ಕ್ರೀಡಾಪಟು ದಿ.ಕೆ.ಎಸ್.ಶಂಕರ್ ಸ್ಮರಣಾರ್ಥ ಪ್ರೌಢಶಾಲಾ…

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.