BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ
  •  ಜು.೨೯ರವರೆಗೆ ಮನೆ-ಮನೆ ಭೇಟಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ
  • ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
  • ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
  • ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಲ್ಲೆಯಲ್ಲಿ ಹೆಚ್ಚಿದ ಪರಿತ್ಯಕ್ತ ಮಕ್ಕಳ ಪ್ರಕರಣ : ನೋವಿನ ಸಂಗತಿ – ಸಿ.ಇ.ಓ. ಅನೀಸ್ ಕಣ್ಮಣಿ ಜಾಯ್.
ತುಮಕೂರು ಜಿಲ್ಲಾ ಸುದ್ಧಿಗಳು

ಜಿಲ್ಲೆಯಲ್ಲಿ ಹೆಚ್ಚಿದ ಪರಿತ್ಯಕ್ತ ಮಕ್ಕಳ ಪ್ರಕರಣ : ನೋವಿನ ಸಂಗತಿ – ಸಿ.ಇ.ಓ. ಅನೀಸ್ ಕಣ್ಮಣಿ ಜಾಯ್.

By News Desk BenkiyabaleUpdated:December 20, 2018 5:14 pm

ತುಮಕೂರು:

      ಜಿಲ್ಲೆಯಲ್ಲಿ ಕಳೆದ 3-4 ತಿಂಗಳುಗಳಿಂದ ಪರಿತ್ಯಕ್ತ ಮಕ್ಕಳ ಪ್ರಕರಣಗಳು ಹೆಚ್ಚಾಗುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ವಿಷಾದ ವ್ಯಕ್ತಪಡಿಸಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಶಾ/ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎ.ಎನ್.ಎಂ.ಗಳಿಗಾಗಿ ನಗರದ ಬಾಲಭವನದಲ್ಲಿಂದು ಆಯೋಜಿಸಿದ್ದ “ಪರಿತ್ಯಕ್ತ ಮಕ್ಕಳು ಮತ್ತು ರಕ್ಷಣೆ, ಕೌಟುಂಬಿಕ ದೌರ್ಜನ್ಯ ತಡೆ, ಬಾಲ್ಯ ವಿವಾಹ ನಿಷೇಧ, ವರದಕ್ಷಿಣೆ ನಿಷೇಧ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಣೆ ಮತ್ತು ಮಾರಾಟ ನಿಷೇಧ” ಕಾಯ್ದೆ ಕುರಿತು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಜಿಲ್ಲೆಯಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ ಒಂದು ದಿನದ ಹಸುಗೂಸಿನಿಂದ ಹಿಡಿದು 4 ತಿಂಗಳಿನ ಎಳೆ ಕಂದಮ್ಮಗಳವರೆಗೆ ಒಟ್ಟು 17 ಮಕ್ಕಳು ಬೀದಿಯಲ್ಲಿ, ಕಸದ ತೊಟ್ಟಿಯಲ್ಲಿ, ದೇವಸ್ಥಾನಗಳಲ್ಲಿ, ಗಿಡದ ಪೊದೆಗಳಲ್ಲಿ ದೊರೆತಿವೆ. ಜಿಲ್ಲೆಯಲ್ಲಿ ದೊರೆತಿರುವ 17 ಪರಿತ್ಯಕ್ತ ಮಕ್ಕಳ ಪೈಕಿ 11 ಮಕ್ಕಳು ಹೆಣ್ಣು ಶಿಶುಗಳಾಗಿರುವುದು ಮತ್ತಷ್ಟು ನೋವು ತಂದಿದೆ. ಇಂತಹ ಮಕ್ಕಳ ಪೋಷಕರನ್ನು ಗುರುತಿಸಲು ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ತಾಯಂದಿರು ಯಾವುದೇ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡಿದ್ದರೂ ಮಾನವೀಯ ದೃಷ್ಟಿಯಿಂದ ಮಗುವನ್ನು ಬೀದಿಗೆ ಬಿಸಾಡದೆ ಸರ್ಕಾರಿ ಆಸ್ಪತ್ರೆಗಳಲ್ಲಿರುವ “ಮಮತೆಯ ತೊಟ್ಟಿಲಿಗೆ” ಒಪ್ಪಿಸಬೇಕೆಂದು ಮನವಿ ಮಾಡಿದರು.

Displaying DSC_2177.JPG

      ಗ್ರಾಮೀಣ ಪ್ರದೇಶಗಳಲ್ಲಿ ಪರಿತ್ಯಕ್ತ ಮಕ್ಕಳ ಪ್ರಕರಣಗಳು ಹೆಚ್ಚಿದ್ದು, ಅಂಗನವಾಡಿ/ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿರುವ ಗರ್ಭಿಣಿ ಸ್ತ್ರೀಯರ ಮೇಲೆ ನಿಗಾ ಇಟ್ಟಿರಬೇಕು. ಸರ್ಕಾರಿ ನಿಯಮಗಳನ್ವಯ ಪ್ರತಿ ಗರ್ಭಿಣಿ ಸ್ತ್ರೀಯರು ಅಂಗನವಾಡಿ/ ಆರೋಗ್ಯ ಇಲಾಖೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಆಶಾ/ ಅಂಗನವಾಡಿ ಕಾರ್ಯಕರ್ತೆಯರಿಗೆ ತಮ್ಮ ವ್ಯಾಪ್ತಿಯ ಜನಸಂಖ್ಯೆ, ಕುಟುಂಬಗಳು ಗರ್ಭಿಣಿಯರು, ಮಕ್ಕಳು, ಬಾಣಂತಿಯರ, ಹೊರಗಿನಿಂದ ಗ್ರಾಮಗಳಿಗೆ ಬಂದು ಹೋಗುವವರ ಮಾಹಿತಿ ಹೊಂದಿರುತ್ತಾರೆ ಎನ್ನುವ ದೃಷ್ಟಿಯಿಂದ ಸರ್ಕಾರವು ಸ್ಥಳೀಯರನ್ನೇ ನೇಮಕ ಮಾಡುತ್ತದೆ ಎಂದು ಹೇಳಿದರಲ್ಲದೆ ಪರಿತ್ಯಕ್ತ ಮಕ್ಕಳ ಪ್ರಕರಣಗಳು ಹೆಚ್ಚದಂತೆ ಅಧಿಕಾರಿಗಳಿಗೆ ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈಗಾಗಲೇ ಸಭೆ ನಡೆಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕೆಂದರು.

      ಜಿಲ್ಲೆಯಲ್ಲಿ ದೊರೆತಿರುವ ಪರಿತ್ಯಕ್ತ ಮಕ್ಕಳ ತಾಯಂದಿರ ಬಗ್ಗೆ ಅಂಗನವಾಡಿ/ಆರೋಗ್ಯ ಇಲಾಖೆಯಲ್ಲಿ ನೋಂದಣಿಯಾಗಿರುವುದಿಲ್ಲ. ಜಿಲ್ಲೆಯನ್ನು ಹೊರತುಪಡಿಸಿ ಬೇರೆಲ್ಲೋ ಜನಿಸಿದ ಮಕ್ಕಳನ್ನು ಇಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆಯಿದೆ. ಪರಿತ್ಯಕ್ತ ಮಕ್ಕಳಿಗೆ ಜನ್ಮ ನೀಡಿದ ತಾಯಂದಿರು ಮಗುವಿಗೆ ಜನ್ಮ ನೀಡಿದ ವಿಷಯವನ್ನು ಮರೆಮಾಚುತ್ತಿರುವುದರಿಂದ ಇಂಥ ಪ್ರಕರಣಗಳು ಹೆಚ್ಚಾಗುತ್ತಿವೆ. ಅತ್ಯಾಚಾರದಿಂದಲೋ, ವಿವಾಹೇತರ/ ವಿವಾಹ ಪೂರ್ವ ಅನೈತಿಕ ಸಂಬಂಧಗಳಿಂದಲೋ ಮಹಿಳೆಯು ಗರ್ಭ ಧರಿಸಿದಾಗ ಜನಿಸಿದ ಮಗುವನ್ನು ಈ ರೀತಿ ಪರಿತ್ಯಜಿಸುವ ಸಾಧ್ಯತೆಯಿದೆ. ಅನೈತಿಕ ಸಂಬಂಧಗಳಿಂದ ಜನಿಸುವ ಮಗುವನ್ನು ಪೋಷಿಸಲು ಸಮಾಜವನ್ನು ಎದುರಿಸಲಾಗದೆ ಬೀದಿ ಪಾಲು ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಗರ್ಭ ಧರಿಸಿದ ಸ್ತ್ರೀಯರನ್ನು ಕಾರ್ಯಕರ್ತೆಯರು ಗೌಪ್ಯವಾಗಿ ಸಮಾಲೋಚನೆ ನಡೆಸಿ ಧೈರ್ಯ ತುಂಬು ಜನಿಸಿದ ಮಗುವನ್ನು ಆಸಕ್ತ ಪೋಷಕರಿಗೆ ದತ್ತು ನೀಡಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮನವರಿಕೆ ಮಾಡಬೇಕೆಂದು ತಿಳಿಸಿದರು.

      ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಪರಿತ್ಯಕ್ತ ಮಕ್ಕಳನ್ನು ಕಾನೂನು ಬಾಹಿರವಾಗಿ ಪೋಷಿಸುವುದು, ದತ್ತು ತೆಗೆದುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗುತ್ತದೆ. ಅನಿವಾರ್ಯ ಸಂದರ್ಭಗಳಲ್ಲಿ ಯಾವುದೇ ತಾಯಿ ತಾನು ಹೆತ್ತ ಮಗುವನ್ನು ಪರಿತ್ಯಜಿಸದೆ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಮಮತೆಯ ತೊಟ್ಟಿಲಿಗೆ ಒಪ್ಪಿಸಿದಲ್ಲಿ ಕಾನೂನಾತ್ಮಕವಾಗಿ ನೋಂದಾಯಿಸಿಕೊಂಡವರಿಗೆ ದತ್ತು ನೀಡಲಾಗುವುದು. ಎಂದು ತಿಳಿಸಿದರು.  

      ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗರಾಜ್, ಸಿಡಿಪಿಓಗಳಾದ ಸತ್ಯನಾರಾಯಣ, ಶ್ರೀಧರ, ಸಂಪನ್ಮೂಲ ವ್ಯಕ್ತಿ ಕವಿತ, ಮಮತ, ಮತ್ತಿತರರು ಪಾಲ್ಗೊಂಡಿದ್ದರು.

(Visited 28 times, 1 visits today)
Previous Articleಸರ್ಕಾರದ ಸೌಲಭ್ಯಗಳನ್ನು ವಿಕಲಚೇತನರು ಸದ್ಭಳಕೆ ಮಾಡಿಕೊಳ್ಳಬೇಕು – ಜಿ.ಪಂ.ಅಧ್ಯಕ್ಷೆ
Next Article ಗದ್ದುಗೆಯಿಂದ ಮೋದಿ ಸರ್ಕಾರವನ್ನು ಉರುಳಿಸಿ : ಮಾಜಿ ಸಚಿವ ಟಿ.ಬಿ.ಜಯಚಂದ್ರ
News Desk Benkiyabale

Related Posts

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm news

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm news

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm news
ತಾಜಾ ಸುದ್ಧಿಗಳು

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

July 01, 2026 5:01 pm

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm
Our Youtube Channel
Our Picks

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

July 01, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

By News Desk BenkiyabaleJuly 01, 2026 5:13 pm

ತುಮಕೂರು : ಇಂದು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋಲನ ಕರ್ನಾಟಕದಿಂದ ನಗರದ ಕನ್ನಡ…

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.