BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನಪ್ರತಿನಿಧಿಗಳು ಜಾತಿ ನಾಯಕರಾಗಬೇಡಿ : ಸಚಿವ ಕೆ.ಎನ್.ರಾಜಣ್ಣ
ತುಮಕೂರು

ಜನಪ್ರತಿನಿಧಿಗಳು ಜಾತಿ ನಾಯಕರಾಗಬೇಡಿ : ಸಚಿವ ಕೆ.ಎನ್.ರಾಜಣ್ಣ

By News Desk BenkiyabaleUpdated:October 21, 2024 6:07 pm

ತುಮಕೂರು


ಜನಪ್ರತಿನಿಧಿಗಳು ಜಾತಿ ನಾಯಕ ರಾಗುವು ದರಿಂದ ಜನನಾಯಕರಾಗಲು ಸಾಧ್ಯವಿಲ್ಲ.ಎಲ್ಲ ವರ್ಗದ ಜನರ ವಿಶ್ವಾಸ ಗಳಿಸಿದಾಗ ಮಾತ್ರ ಹೆಚ್ಚು ದಿನ ರಾಜಕೀಯ ಅಧಿಕಾರ ಅನುಭವಿಸಲು ಸಾಧ್ಯ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ನಗರದ ಎಂಪ್ರೆಸ್ ಕೆಪಿಎಸ್ ಶಾಲೆ ಸಭಾಂಗಣದಲ್ಲಿ ತುಮಕೂರು ಜಿಲ್ಲಾ ವಾಲ್ಮೀಕಿ ನಾಯಕರ ಕ್ಷೇಮಾಭಿವೃದ್ಧಿ ಸಂಘ (ರಿ) ,ಶ್ರೀ ವಾಲ್ಮೀಕಿ ವಿದ್ಯಾವರ್ಧಕ ಸಂಘ, ಜಿಲ್ಲ ನಾಯಕ ಮಹಿಳಾ ಸಮಾಜ, ಶಬರಿ ಮಹಿಳಾ ಪತ್ತಿನ ಸಹಕಾರ ಸಂಘ.ನಿ, ತುಮಕೂರು ವಾಲ್ಮೀಕಿ ಸಹಕಾರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ೨೦೨೩-೨೪ ನೇ ಸಾಲಿನ ವಾಲ್ಮೀಕಿ ಸಮಾಜದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ರಾಜಕೀಯ ಅಧಿಕಾರವೆಂಬುದು ಅತಿ ಮುಖ್ಯ ಅಂಗವಾಗಿದೆ.ಅಧಿಕಾರ ದೊರೆತ ಸಂದರ್ಭದಲ್ಲಿ ದ್ವನಿ ಇಲ್ಲದ ಸಮುದಾಯಗಳ ಪರವಾಗಿ ಕೆಲಸ ಮಾಡಿದಾಗ ಮಾತ್ರ ಜನರ ಪ್ರೀತಿಗಳಿಸಲು ಸಾಧ್ಯ ಎಂದರು.
ನಾಯಕ ಸಮುದಾಯದ ಮಕ್ಕಳು ಜಿಲ್ಲಾಮಟ್ಟದಲ್ಲಿ ೨೫೦ ಕ್ಕೂ ಹೆಚ್ಚು ಮಕ್ಕಳು ಶೇ ೮೦ ಫಲಿತಾಂಶ ಪಡೆದಿದ್ದಾರೆ.ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ,ಮಕ್ಕಳು ಹೆಚ್ಚು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ,ವಿದ್ಯೆ ಇಂದಿನ ಸಮಾಜದಲ್ಲಿ ಒಂದು ಪ್ರಮುಖ ಸಾದನ,ಸಮಾಜದಲ್ಲಿ ಗೌರವವನ್ನು ಸಂಪಾದನೆ ಮಾಡಬೇಕಾದರೆವಿದ್ಯೆ ಅನಿ ವಾರ್ಯ ಎಂದ ಅವರು, ಪ್ರತಿಯೊಬ್ಬರಿಗೂ ಸಮಾನಾದ ಬುದ್ಧಿಶಕ್ತಿ ಇರುತ್ತದೆ ಅದನ್ನು ಸರಿಯಾಗಿಬಳಸಿಕೊಳ್ಳಬೇಕು ಎಂದು ಸಚಿವ ರಾಜಣ್ಣ ಕಿವಿಮಾತು ಹೇಳಿದರು.
ಇಂದಿನ ಕಾರ್ಯಕ್ರಮದಲ್ಲಿ ಸಮಾಜದ ಹಿತ ಬಯಸುವವರು,ಸಮಾಜ ಕಟ್ಟಿ ಬೆಳಸುವ ಎಲ್ಲರೂ ಒಂದು ಕಡೆ ಸೇರಿರುವುದು ಖುಷಿಕೊಟ್ಟಿದೆ.ಸಮಾಜದ ಮಕ್ಕಳನ್ನು ಪ್ರೊತ್ಸಾಹಿಸುವ ಉದ್ದೇಶದಿಂದ ಪ್ರತಿ ತಾಲೂಕಿನಲ್ಲೂ ಮುಂದಿನ ವರ್ಷದಿಂದ ಪ್ರತಿಭಾ ಪುರಸ್ಕಾರ ನಡೆಸಿದರೆ ಹೆಚ್ಚಿನ ಮಕ್ಕಳಿಗೆ ಸ್ಪೂರ್ತಿ ನೀಡಿದಂತಾಗುತ್ತದೆ ಎಂದ ಅವರು,ಪ್ರತಿಯೊಬ್ಬರು ರಾಜಕೀಯವಾಗಿ ಬೆಳಯಲು ಅಸಾಧ್ಯ,ರಾಜಕೀಯವಾಗಿ ಬೆಳದವರು,ಜನಾಂಗದವರ ಹಿತ ಕಾಪಾಡಬೇಕು.ರಾಜಕೀಯ ಅಧಿಕಾರವನ್ನು ಎಲ್ಲಾರ ಜೊತೆ ಹಂಚಿಕೊAಡರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತಾರೆ,ಇಲ್ಲವೆಂದರೆ ಸೋಲುತ್ತಾರೆ.ಇಂದಿನ ಚುನಾವಣೆಗಳು ಬಾರಿ ದುಬಾರಿಯಾಗಿವೆ,ಸಮಾಜದವರು ಎಲ್ಲಾ ರಾಜಕೀಯ ಪಕ್ಷದಲ್ಲೂ ಗುರುತಿಸಿ ಕೊಂಡು ಬೆಳೆಯರಿ,ಸಮಾಜದ ವಿಚಾರ ಬಂದಾಗ ಸಂಘಟಿತರಾಗಿ ರಾಜಕೀಯ ಅಧಿಕಾರ ಪಡೆಯಿರಿ ಎಂದು ಸಲಹೆ ನೀಡಿದರು.
ಮರ್ಹಷಿ ವಾಲ್ಮೀಕಿಯನ್ನು ದರೋಡೆಕೋರ ಎನ್ನುವವರು ಆಯೋಗ್ಯರು,ಮೇಲ್ವರ್ಗದ ಜನ ಸುಖ ಸುಮ್ಮನೆ ತಳ ಸಮುದಾಯದ ಜನರನ್ನು ಕೀಳುಮಟ್ಟದಿಂದ ಕಾಣುವ ಪರಿಸ್ಥಿತಿ ಹೋಗಬೇಕು.ವಾಲ್ಮೀಕಿ ದರೋಡೆಕೋರ ಎಂದು ಯಾರಾದರೂ ಸಭೆಗಳಲ್ಲಿ ಹೇಳಿದರೆ ಅಲ್ಲೇ ಖಂಡನೆ ಮಾಡಿ,ತಳ ಸಮುದಾಯಗಳಪರ ನಾಯಕತ್ವ ವಹಿಸಿ ಅಸಹಾಯಕ ಸಮುದಾಯದವರ ಬೆನ್ನಿಗೆ ನಿಂತು ನಾವು ನಾಯಕರಾಗಿ ಬೆಳಯಬೇಕು ಎಂದು ಯುವ ರಾಜಕಾರಣಿಗಳಿಗೆ ಕಿವಿ ಮಾತು ಹೇಳಿದರು. ಉಪನ್ಯಾಸಕ ಡಾ.ಎಲ್.ಪಿ.ರಾಜು ಮಹರ್ಷಿ ವಾಲ್ಮೀಕಿಗಳ ಕುರಿತು ವಿಶೇಷ ಉಪನ್ಯಾಸ ನೀಡಿ,ದ್ರೋಣರಿಗೆ ಗುರುಕಾಣಿಕೆಯಾಗಿ ತನ್ನ ಹೆಬ್ಬೆರಳು ನೀಡಿದ ಏಕಲವ್ಯ,ಭಕ್ತಿಗಾಗಿ ಶಿವನಿಗೆ ಕಣ್ಣು ನೀಡಿದ ಬೇಡರ ಕಣ್ಣಪ್ಪನ ಸಮುದಾಯ ನಮ್ಮದು.ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯ ರಚಿಸಿದ ರಾಮಾಯಣ ಇಡೀ ಜಗತ್ತಿಗೆ ದಾರಿದೀಪವಾಗಿದೆ.ವಾಲ್ಮೀಕಿ ಬಗ್ಗೆ ಸಂಪೂರ್ಣವಾಗಿ ಅಧ್ಯಯನ ಮಾಡದ ಮನುವಾದಿಗಳು ವಾಲ್ಮೀಕಿಯನ್ನು ದರೋಡೆಕಾರ ಎಂದು ಬಿಂಬಿಸಿದ್ದಾರೆ. ವಾಲ್ಮೀಕಿಯನ್ನು ತೇಜೋವದೆ ಮಾಡುತ್ತಾ ರಾಮನನ್ನು ವೈಭವೀಕರಣ ಮಾಡುವ ಕೆಲಸವಾಗುತ್ತಿದೆ.ಪಂಜಾಬ್ ಹೈಕೋರ್ಟು ಸಹ ವಾಲ್ಮೀಕಿ ದರೋಡಕೊರ ಅಲ್ಲ,ಆತ ಬೇಡ ಕುಲದ ವ್ಯಕ್ತಿ ಎಂದು ತಿರ್ಪು ನೀಡಿದೆ.ರಾಮನ ವಿಜೃಂಭಣೆಯಲ್ಲಿ ಹಾಗೂ ರಾಮನಬೇಕು,ಬೇಡಗಳ ಮಧ್ಯದಲ್ಲಿ ವಾಲ್ಮೀಕಿಯನ್ನು ನೇಪಥ್ಯಕ್ಕೆ ತಳಲಾಗಿದೆ ಎಂದು ಹೇಳಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ತುಮಕೂರು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಶ್ರೀಮತಿ ಶಾಂತಲರಾಜಣ್ಣ,ಸಮುದಾಯವನ್ನು ಶೈಕ್ಷಣಿಕವಾಗಿ ಬೆಳೆಸುವ ನಿಟ್ಟಿನಲ್ಲಿ ಸಂಘಟನೆ ಕೆಲಸ ಮಾಡುತ್ತಿದೆ.ಪ್ರಾಮಾಣಿಕವಾಗಿ ಶಿಕ್ಷಣಕ್ಕೆ ಹಣಕಾಸಿನ ಕೊರತೆ ಇದ್ದರೆ ಸಂಘ ನಿಮಗೆ ಸ್ಪಂದಿಸಿ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಕೆ.ಆರ್.ರಾಜಕುಮಾರ್ ಇಲಾಖೆಯಿಂದ ಶೈಕ್ಷಣಿಕ ಅಭಿವೃದ್ದಿಗಾಗಿ ದೊರೆಯುವ ಸೌಲಭ್ಯಗಳ ಕುರಿತು ವಿವರ ನೀಡಿ,ಪ್ರಬುದ್ದ ಯೋಜನೆಯ ಮೂಲಕ ವಿದೇಶದಲ್ಲಿ ಕಲಿಯಲು ಅವಕಾಶವಿದೆ ಎಂದು ತಿಳಿಸಿದರು.
ಇದೇ ವೇಳೆ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಶೇ೮ಕ್ಕೀಂತಲು ಅತಿ ಹೆಚ್ಚು ಅಂಕ ಪಡೆದ ೨೨೦ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪುರುಷೋತ್ತಮ್ ವಹಿಸಿದ್ದರು.
ವೇದಿಕೆಯಲ್ಲಿ ಸಿರಾ ಮಾಜಿ ಶಾಸಕ ಸಾ.ಲಿಂಗಯ್ಯ,ತುಮಕೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಬಿ.ಜಿ ಕೃಷ್ಣಪ್ಪ,ತುಮಕೂರು ಜಿಲ್ಲಾ ವಾಲ್ಮೀಕಿ ನಾಯಕರ ಕ್ಷೇಮಾಭಿವೃದ್ದಿ ಸಂಘ ಅಧ್ಯಕ್ಷೆ ಶ್ರೀಮತಿ ಶಾಂತಲರಾಜಣ್ಣ,ಮಾಜಿ ಜಿ.ಪಂ.ಸದಸ್ಯ ರಾಮಚಂದ್ರಪ್ಪ, ಅಧಿಕಾರಿಗಳಾದ ಡಾ.ಕೆ.ಆರ್.ರಾಜಕುಮಾರ್,ಕೆ.ಎಸ್.ಗಂಗಾಧರ್,ಡಿ.ಸಿ ಸಿ ಬ್ಯಾಂಕನ ಜಂಗಮಪ್ಪ,ಸಮಾಜದ ಮುಖಂಡರಾದ ಪ್ರತಾಪ್,ಸಿಂಗದಳ್ಳಿ ರಾಜಕುಮಾರ್,ನಿವೃತ್ತ ಬಿ ಇ ಓ,ಬಸವರಾಜ ಮತ್ತಿತರರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಪೊಲೀಸರ ಸೇವೆ ಶ್ಲಾಘನೀಯ
Next Article ಅಬ್ಬರದ ಮಳೆಗೆ ಬೆಳೆನಾಶ : ರೈತ ಕಂಗಾಲು
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.