BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಿಂದೂಗಳ ಜಮೀನು ಕಬಳಿಸುವ ಹುನ್ನಾರ: ಬಿಜೆಪಿ
news

ಹಿಂದೂಗಳ ಜಮೀನು ಕಬಳಿಸುವ ಹುನ್ನಾರ: ಬಿಜೆಪಿ

By News Desk BenkiyabaleUpdated:November 05, 2024 6:29 pm

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ವಕ್ಫ್ ಆಸ್ತಿಗಾಗಿ ರಾಜ್ಯದ ರೈತರ, ಮಠಮಾನ್ಯಗಳ, ಹಿಂದೂಗಳ ಜಮೀನು ಕಬಳಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ಸರ್ಕಾರದ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ, ಮಠಮಾನ್ಯಗಳ, ಬಡವರ ಜಮೀನುಗಳ ಪಹಣಿಯಲ್ಲಿ ವಕ್ಫ್ ಎಂದು ಉಲ್ಲೇಖಿಸಲಾಗಿದೆ. ಸದ್ದು ಮಾಡದೆ ರಾಜ್ಯ ಸರ್ಕಾರ ವಕ್ಫ್ ಜೊತೆ ಸೇರಿಕೊಂಡು ಮುಸ್ಲೀಮರ ತುಷ್ಟೀಕರಣಕ್ಕಾಗಿ ಜನರ ಜಮೀನನ್ನು ಕಬಳಿಸುತ್ತಿದೆ ಎಂದು ಮುಖಂಡರು ಸರ್ಕಾರದ ವಿರುದ್ಧ ಹರಿಹಾಯ್ದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.
ಶಾಸಕ ಬಿ.ಸುರೇಶ್‌ಗೌಡ ಮಾತನಾಡಿ,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರೀಹಗರಣಗಳಲ್ಲೇ ಮುಳುಗಿದೆ. ವಾಲ್ಮೀಕಿ ನಿಗಮ, ಮುಡಾ ಹಗರಣಗಳ ನಂತರ ಈಗ ರೈತರ ಆಸ್ತಿ ಕಬಳಿಸುವ ವಕ್ಫ್ ವಿವಾದ ಆರಂಭಿಸಿದೆ. ಶಾಸಕರಿಗೆ ಅನುದಾನ ಕೊಡಲಾಗದಷ್ಟು ದಿವಾಳಿಯಾಗಿರುವ ಈ ಸರ್ಕಾರದ ಮಂತ್ರಿಗಳು ರಾಜ್ಯ ಅಭಿವೃದ್ಧಿಪಥದಲ್ಲಿ ಸಾಗುತ್ತಿದೆ ಎಂದು ದೊಡ್ಡದಾಗಿ ಭಾಷಣ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರ ನಾಟಕ ಜನರಿಗೆ ಅರ್ಥ ಆಗಿದೆ. ಪಾಠ ಕಲಿಸಲು ಸಮಯ ಕಾಯುತ್ತಿದ್ದಾರೆ ಎಂದರು.

ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿದ್ದ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗುತ್ತಿದೆ. ಸಚಿವ ಜಮೀರ್ ಅಹಮದ್ ಜಿಲ್ಲಾಧಿಕಾರಿಗಳಿಗೆ ಒತ್ತಡ ಹಾಕಿ ಹೀಗೆ ಮಾಡಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಗಮನಕ್ಕೆ ಬಾರದೆ ಇದೆಲ್ಲಾ ನಡೆಯಲು ಸಾಧ್ಯವಿಲ್ಲ, ವ್ಯವಸ್ಥಿತವಾಗಿ ರೈತರ ಜಮೀನನ್ನು ವಕ್ಫ್ ಬೋರ್ಡ್ಗೆ ಕಬಳಿಸಲು ಸರ್ಕಾರವೇ ಮುಂದೆ ನಿಂತಿದೆ. ಇಂತಹ ಸರ್ಕಾರದಿಂದ ಜನಸಾಮಾನ್ಯರಿಗೆ ನ್ಯಾಯ ಸಿಗಲು ಸಾಧ್ಯವೇ? ರೈತ ಜಮೀನು ಕಬಳಿಸಲು ಬಿಜೆಪಿ ಬಿಡುವುದಿಲ್ಲ, ಸಚಿವ ಜಮೀರ್ ಅಹಮದ್ ನಿನಗೆ ತಾಕತ್ತಿದ್ದರೆ ರೈತರ ಜಮೀನು ಮುಟ್ಟಿ ನೋಡು ಎಂದು ಸುರೇಶ್‌ಗೌಡ ಸವಾಲು ಹಾಕಿದರು.
40 ವರ್ಷ ರಾಜಕೀಯ ಜೀವನದಲ್ಲಿರುವ ಸಿದ್ದರಾಮಯ್ಯನವರೇ ಕಾಂಗ್ರೆಸ್‌ನವರೇ ನಿಮ್ಮನ್ನು ಅಧಿಕಾರದಿಂದ ಇಳಿಸಿ ಮನೆಗೆ ಕಳಿಸುತ್ತಾರೆ. ಕಡೆ ಕಾಲದಲ್ಲಿ ರಾಜ್ಯದ ಜನರಿಗೆ ಅನ್ಯಾಯ ಮಾಡಬೇಡಿ, ನ್ಯಾಯ ಕೊಡಿ, ಹಿಂದೂ-ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿರುವ ಜಮೀರ್‌ನನ್ನು ಸಚಿವ ಸ್ಥಾನದಿಂದ ಕಿತ್ತೊಗೆಯಿರಿ ಎಂದು ಒತ್ತಾಯಿಸಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ರಾಜ್ಯದಲ್ಲಿ ಕೆಟ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಮುಸ್ಲೀಮರ ಓಲೈಕೆ ಮೂಲಕ ನಿತ್ಯ ಒಂದಲ್ಲೊAದು ವಿವಾದ ಸೃಷ್ಟಿಸುತ್ತಾ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಈಗ ವಕ್ಫ್ ಬೋರ್ಡ್ಗೆ ಹಿಂದೂಗಳ ಜಮೀನು ಕಬಳಿಸುವ ಕುತಂತ್ರ ನಡೆಸಿದೆ. ದೇಶದ ಭದ್ರತೆ ಬದಿಗಿಟ್ಟು ಮುಸ್ಲೀಮರ ತುಷ್ಟೀಕರಣ ಮಾಡುತ್ತಾ ವೋಟಿಗಾಗಿ ದೇಶವನ್ನೇ ಅಡವಿಡಲು ಹೊರಟಿದೆ ಎಂದು ಟೀಕಿಸಿದರು.

ರೈತರ ಜಮೀನು ವಕ್ಫ್ಗೆ ಕಬಳಿಸಲು ಆದೇಶ ಮಾಡಿರುವುದು ಕಾಂಗ್ರೆಸ್ ಸರ್ಕಾರದ ಧೋರಣೆಗೆ ಸಾಕ್ಷಿಯಾಗಿದೆ. ರೈತರ ಒಂದಿಚೂ ಜಮೀನು ವಕ್ಫ್ ಬೋರ್ಡ್ಗೆ ಹೋಗಲು ಬಿಜೆಪಿ ಬಿಡುವುದಿಲ್ಲ, ರೈತರ ಜೊತೆ ನಾವಿರುತ್ತೇವೆ ಎಂದರು.

ವಿಧಾನಪರಿಷತ್ ಸದಸ್ಯ ಚಿದಾನಂದಗೌಡ ಮಾತನಾಡಿ, ಅನುಭವಿ ನಾಯಕ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಾರೆ ಎಂದು ಜನ ನಂಬಿದ್ದರು, ಜನರ ನಂಬಿಕೆಗೆ ದ್ರೋಹ ಮಾಡಿ ರೈತರ ಜಮೀನು ಕಬಳಿಸುವಂತಹ ಪ್ರಯತ್ನಕ್ಕೆ ಸರ್ಕಾರ ಇಳಿದಿರುವುದು ದುರಾದೃಷ್ಟಕರ. ಈ ಸರ್ಕಾರದ ಆಡಳಿತದಿಂದ ರಾಜ್ಯ ಅರಾಜಕತೆಯತ್ತ ಹೋಗುತ್ತಿದೆ. ವಕ್ಫ್ ಬೋರ್ಡ್ಗೆ ರೈತರ ಜಮೀನು ಪಡೆಯಲು ಒಮ್ಮೆ ಆದೇಶ ಮಾಡುವುದು, ಇನ್ನೊಮ್ಮೆ ಆ ಆದೇಶ ಹಿಂಪಡೆಯುವುದು, ಇದು ತುಘಲಕ್ ದರ್ಬಾರ್ ಆಗಿದೆ. ಕಾಂಗ್ರೆಸ್‌ಗೆ ರಾಜ್ಯದ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಮುಖಂಡರಾದ ಎಸ್.ಶಿವಪ್ರಸಾದ್, ವೈ.ಹೆಚ್.ಹುಚ್ಚಯ್ಯ ಮಾತನಾಡಿ, ರಾಜ್ಯ ಸರ್ಕಾರ ವೋಟಿಗಾಗಿ ಮುಸ್ಲೀಮರ ಓಲೈಕೆ ಮಾಡುತ್ತಾ ಹಿಂದುಗಳನ್ನು ನಿರ್ನಾಮ ಮಾಡಲು ಹೊರಟಿದೆ. ವಕ್ಫ್ ಆಸ್ತಿ ವಿವಾದ ಆರಂಭಿಸಿ ಎರಡು ಧರ್ಮದವರ ನಡುವೆ ಬೆಂಕಿ ಹಚ್ಚುವ ಕೆಲಸದಲ್ಲಿ ಸರ್ಕಾರ ಹಾಗೂ ಸಚಿವ ಜಮೀರ್ ಅಹಮದ್ ನಿರತರಾಗಿದ್ದಾರೆ. ಜಮೀರ್ ಅಹಮದ್‌ನನ್ನು ರಾಜಕಾರಣದಿಂದ ಒದ್ದೋಡಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿಯ ಮೂಲಕ ಆತಂಕಕ್ಕೆ ತಳ್ಳಿದೆ. ದೇಶದ ಜನರ ಹಿತದೃಷ್ಟಿಯಿಂದ, ವಕ್ಫ್ ಮಂಡಳಿಯಲ್ಲಿ ಆಗುತ್ತಿರುವ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡಿಸಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕ ಮೂಲಕ ದೇಶದಲ್ಲಿ ಸಾರ್ವಜನಿಕ ಆಸ್ತಿ ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡಿದೆ ಎಂದು ಆರೋಪಿಸಿದರು.

ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ರಾಜ್ಯ ಬಿಜೆಪಿ ವಕ್ತಾರ ಹೆಚ್.ಟಿ.ಚಂದ್ರಶೇಖರ್, ಮುಖಂಡರಾದ ದಿಲೀಪ್‌ಕುಮಾರ್, ಹೆಚ್.ಟಿ.ಭೈರಪ್ಪ, ಡಾ.ಪರಮೇಶ್, ಟಿ.ಹೆಚ್.ಹನುಮಂತರಾಜು, ಗಂಗರಾಜು, ಭೈರಣ್ಣ, ಸಂದೀಪ್‌ಗೌಡ, ಟಿ.ಆರ್.ಸದಾಶಿವಯ್ಯ, ಬಿ.ಜಿ.ಕೃಷ್ಣಪ್ಪ, ಸತ್ಯಮಂಗಲ ಜಗದೀಶ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಿದ್ದರಾಮಣ್ಣ, ಎಸ್ಸಿ ಮೋರ್ಚಾ ಅಧ್ಯಕ್ಷ ಆಂಜನಪ್ಪ, ಓಬಿಸಿ ಮೋರ್ಚಾ ಅಧ್ಯಕ್ಷ ಕೆ.ವೇದಮೂರ್ತಿ, ಯುವ ಮೋರ್ಚಾ ಅಧ್ಯಕ್ಷ ನವಚೇತನ್ ಸೇರಿದಂತೆ ನಗರಪಾಲಿಕೆ ಮಾಜಿ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

(Visited 1 times, 1 visits today)
ಕಾಂಗ್ರೆಸ್ ಬಿಜೆಪಿ ವಕ್ಫ್ ಹಿಂದೂ
Previous Articleಸಿದ್ಧಾರ್ಥ ದಂತ ವೈದ್ಯಕೀಯ ಆಸ್ಪತ್ರೆಯಿಂದ ದಂತ ತಪಾಸಣೆ
Next Article ಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ ಪ್ರತಿಭಟನೆ
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm news

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm news

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

By News Desk BenkiyabaleJune 17, 2026 5:31 pm

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ…

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.