BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್
  • ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ
  • ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ
  • ಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ
  • ನಾಲ್ಕು ದಿನಕ್ಕೊಮ್ಮೆ ನೀರು: ಶಾಲೆಯ ಬಿಸಿಯೂಟಕ್ಕೂ ತಟ್ಟಿದ ಸಂಕಷ್ಟ
  • ಶನಿವಾರ, ಭಾನುವಾರವೂ ಎಸ್‌ಐಆರ್ ಪ್ರಕ್ರಿಯೆ
  • ದೇಶದ ಶಿಕ್ಷಣ ವ್ಯವಸ್ಥೆ ರಾಜಕಾರಣದಷ್ಟೇ ಕಲುಷಿತಗೊಂಡಿದೆ
  • ಕೊಲ್ಲಾಪುರದಮ್ಮ, ಕರುಗಲ್ಲಮ್ಮ ಜಾತ್ರಾ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲು ಒತ್ತಾಯ
ತುಮಕೂರು ಜಿಲ್ಲಾ ಸುದ್ಧಿಗಳು

ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲು ಒತ್ತಾಯ

By News Desk BenkiyabaleUpdated:December 24, 2018 4:06 pm

ತುಮಕೂರು:

       ಕಟ್ಟಡ ಕಾರ್ಮಿಕರು ಸುರಕ್ಷತೆ ಇಲ್ಲದೆ ಅನಾರೋಗ್ಯದಿಂದ ನರಳುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಹೀಗಾಗಿ ಕಲ್ಯಾಣ ಮಂಡಳಿಯಿಂದ ದೊರೆಯುವ ಸೌಲಭ್ಯಗಳು ಸಹ ಸರಿಯಾದ ವೇಳೆಗೆ ದೊರೆಯದೆ ಸಾಲದ ಸುಳಿಗೂ ಸಹ ಸಿಲುಕುತ್ತಿದ್ದಾರೆ. ಆದ್ದರಿಂದ ಸರ್ಕಾರ ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಿಐಟಿಯು ಜಿಲ್ಲಾಧ್ಯಕ್ಷ ಬಿ.ಉಮೇಶ್ ಒತ್ತಾಯಿಸಿದ್ದಾರೆ.

      ತುಮಕೂರು ತಾಲೂಕು ಹೊಬ್ಬೂರು ಹೋಬಳಿಯ ಸಿರಿವರ ಗ್ರಾಮದಲ್ಲಿ ಪಂಚಾಯಿತಿ ಮಟ್ಟಡ ಕಟ್ಟಡ ಕಾರ್ಮಿಕರ ಸಮಾವೇಶ ದಲ್ಲಿ ಮಾತನಾಡಿದರು. 1996ರಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಜಾರಿಗೊಂಡ ಕಟ್ಟಡ ಕಾರ್ಮಿಕರ ಸೌಲಭ್ಯಗಳು ಕಲ್ಯಾಣ ಮಂಡಳಿಯ ಅಡಿಯಲ್ಲಿ ಸಿಗುವಂತೆ ಕಾನೂನು ರೂಪಿಸಲಾಗಿ 2006ರಲ್ಲಿ ರಾಜ್ಯದಲ್ಲೂ ಜಾರಿಗೆ ಬಂದಿದೆ. ಕಾರ್ಮಿಕರನ್ನು ತಲುಪುವಲ್ಲಿ ಸಂಪೂರ್ಣ ಯಶಸ್ವಿಯಾಗಿಲ್ಲ. ಇದಕ್ಕೆ ಸಿಬ್ಬಂದಿ ಕೊರತೆ, ಇಚ್ಛಾಶಕ್ತಿ ಕೊರತೆ, ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ಮತ್ತು ಸರ್ಕಾರ ಪರಸ್ಪರ ಸಹಕಾರವಿಲ್ಲದೆ ನಿಧಾನಗತಿಯಲ್ಲಿ ಸವಲತ್ತು ಸಿಗುತ್ತಿವೆ. ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದ ಹಿಂದಿನ ಅವಧಿ ಈ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಹಾಗಾಗಿ ಮತ್ತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಇರುವುದರಿಂದ ಈ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸುವಂತೆ ಆಗ್ರಹಿಸಿದರು.

      ಕಟ್ಟಡ ಕಾರ್ಮಿಕರಿಗೆ ವಸತಿ ಯೋಜನೆ, ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ, ಹೊಸ ಉದ್ಯೋಗಗಳ ಸೃಷ್ಟಿಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶ, ಮರಳು ಸಮಸ್ಯೆ ಪರಿಹಾರ, ಏರುತ್ತಿರುವ ಕಟ್ಟಡ ಸಾಮಗ್ರಿಗಳ ಬೆಲೆ ತಡೆಯುವ ಮೂಲಕ ಕೃಷಿಯ ನಂತರ ಉದ್ಯೋಗ ನೀಡಿರುವ ನಿರ್ಮಾಣ ವಲಯವನ್ನು ರಕ್ಷಿಸಬೇಕೆಂದು ತಿಳಿಸಿದರು.

      ಜಿಲ್ಲಾ ಸಹಕಾರ್ಯದರ್ಶಿ ರಾಮಣ್ಣ ಮಾತನಾಡಿ, ಕಾರ್ಮಿಕರು ಫಲಾನುಭವಿ ಗುರುತು ಚೀಟಿಯನ್ನು ಪಡೆದ ನಂತರ ಸಕಾಲಕ್ಕೆ ನವೀಕರಿಸಿ ಸೌಲಭ್ಯಗಳ ಸಂಬಂಧದ ಅರ್ಜಿಗಳನ್ನು ಸಂಘಟನೆಯ ಮೂಲಕ ಸಲ್ಲಿಸಿ ಸೌಲಭ್ಯದ ಹಣವನ್ನು ಪಡೆಯಬೇಕು ಎಂದರು.
ಶ್ರಮಿಕ ಕಟ್ಟಡ ಕಾರ್ಮಿಕ ಸಂಘಟನೆ ಮುಖಂಡ ಕೃಷ್ಣರಾಜು ಮಾತನಾಡಿ, ಮಹಾನ್ ವ್ಯಕ್ತಿಗಳ ತಂದೆ ಮತ್ತು ತಾಯಿಗಳು ಕಾರ್ಮಿಕರಾಗಿರುವುದೇ ಹೆಮ್ಮೆಯ ವಿಷಯವಾಗಿದೆ. ಕಾರ್ಮಿಕರು ತಮ್ಮಲ್ಲಿ ಅರಿವು ಮೂಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹೇಳಿದರು.

      ಸಂಘದ ಗೌರವಾಧ್ಯಕ್ಷ ಟಿ.ಎಂ.ಗೋವಿಂದರಾಜು ಮಾತನಾಡಿ, ನಿರಂತರ ಸಭೆ, ಸಮಾವೇಶಗಳ ಮೂಲಕ ಕಾರ್ಮಿಕರು ಒಂದಾಗಬೇಕಾದ ಅಗತ್ಯವಿದೆ ಎಂದು ತಿಳಿಸಿದರು. ಜಿಲ್ಲಾ ಮುಖಂಡರಾದ ಲಕ್ಷ್ಮಣ್ ಮಾತನಾಡಿ ಕಾರ್ಮಿಕರು ದುಡಿಮೆಯ ಜೊತೆ ಸಾಂಸ್ಕøತಿಕತೆಯನ್ನು ಮೈಗೂಡಿಸಿಕೊಳ್ಳಬೇಕು. ಸ್ಥಳೀಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವಂತೆ ಕರೆ ನೀಡಿದರು.

      ಸಭೆಯ ಅಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ ಕಾರ್ಮಿಕರು ಕಷ್ಟಪಟ್ಟು ದುಡಿಯುವುದೊಂದೇ ಕೆಲಸವಾಗಬಾರದು. ಕುಟುಂಬದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಜಿಲ್ಲಾ ಉಪಾಧ್ಯಕ್ಷ ಶಂಕರಪ್ಪ, ಲಕ್ಷ್ಮಣ್ ಕಚೇರಿ ಸಹಾಯಕ ನಾಗರಾಜು, ಘಟಕದ ಉಪಾಧ್ಯಕ್ಷ ಗೋಪಾಲಕೃಷ್ಣ, ಮಹಿಳಾ ಮುಖಂಡರಾದ ಲಲಿತಮ್ಮ, ಸತ್ಯಮ್ಮ, ಲಕ್ಷ್ಮಮ್ಮ, ಮಂಜಮ್ಮ ಉಪಸ್ಥಿತರಿದ್ದರು.

(Visited 39 times, 1 visits today)
Previous Articleವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಯುವಕ ಸಾವು
Next Article ಸರ್ಕಾರ ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ಕೊಡದೆ ಬದುಕು ದುಸ್ಥರವಾಗಿದೆ
News Desk Benkiyabale

Related Posts

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm news

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm news

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

July 31, 2026 4:55 pm news
ತಾಜಾ ಸುದ್ಧಿಗಳು
news

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm
news

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm
news

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

July 31, 2026 4:55 pm
news

ಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ

July 31, 2026 4:53 pm
news

ನಾಲ್ಕು ದಿನಕ್ಕೊಮ್ಮೆ ನೀರು: ಶಾಲೆಯ ಬಿಸಿಯೂಟಕ್ಕೂ ತಟ್ಟಿದ ಸಂಕಷ್ಟ

July 31, 2026 4:52 pm
news

ಶನಿವಾರ, ಭಾನುವಾರವೂ ಎಸ್‌ಐಆರ್ ಪ್ರಕ್ರಿಯೆ

July 31, 2026 4:50 pm
Our Youtube Channel
Our Picks

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

July 31, 2026 4:55 pm

ಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ

July 31, 2026 4:53 pm

ನಾಲ್ಕು ದಿನಕ್ಕೊಮ್ಮೆ ನೀರು: ಶಾಲೆಯ ಬಿಸಿಯೂಟಕ್ಕೂ ತಟ್ಟಿದ ಸಂಕಷ್ಟ

July 31, 2026 4:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

By News Desk BenkiyabaleJuly 31, 2026 5:01 pm

ತುಮಕೂರು: ಐತಿಹಾಸಿಕ ಮತ್ತು ಚಾರಿತ್ರಿಕ ವಿಷಯಗಳ ಬಗ್ಗೆ ಸಂಶೋಧನೆಗಳು ಕಡಿಮೆ. ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ…

ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ

July 31, 2026 4:58 pm

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

July 31, 2026 4:55 pm

ಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ

July 31, 2026 4:53 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.