BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
  • ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆಕರ್ಷಣೆಗೆ ಒಳಗಾದರೆ ಸಂಕಷ್ಟದ ಜೀವನ
ಕರ್ನಾಟಕ ಸುದ್ಧಿಗಳು

ಆಕರ್ಷಣೆಗೆ ಒಳಗಾದರೆ ಸಂಕಷ್ಟದ ಜೀವನ

By News Desk BenkiyabaleUpdated:January 04, 2025 6:44 pm

ತುಮಕೂರು: ಯುವಜನರು, ಅದರಲ್ಲಿಯೂ ಹೆಣ್ಣು ಮಕ್ಕಳು ಓದುವ ಸಮಯದಲ್ಲಿ ಇನ್ನಿಲ್ಲದ ಆಕರ್ಷಣೆಗೆ ಒಳಗಾಗಿ, ದಾರಿ ತಪ್ಪಿದರೆ, ಬದುಕಿನದ್ದಕ್ಕೂ ಸಂಕಷ್ಟದ ಜೀವನ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಶ್ರೀಮತಿ ನೂರುನ್ನಿಸಾ ಎಚ್ಚರಿಸಿದ್ದಾರೆ.
ನಗರದ ಮಳೆಕೋಟೆಯ ಧಾನಿಶ್ ಸಭಾಂಗಣದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ತೆಹ್ರಿರಿಕ್‌ಎ ಉರ್ದು ಆದಬ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೌಲಾನ ಅಬ್ದುಲ್ ಕಲಾಂ ಆಜಾದ್ ಶಾಲೆಯ ಮಕ್ಕಳಿಗೆ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಮೊಬೈಲ್, ಇನ್ನಿತರ ಅಕರ್ಷಣೆಗಳಿಂದ ದೂರವಿದ್ದು,ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಂಡರೆ,ಸಾಧಕರ ಪಟ್ಟಿಯಲ್ಲಿ ನಿಲ್ಲಬಹುದು.ಇದಕ್ಕೆ ನನ್ನ ಜೀವನವೇ ಉದಾಹರಣೆ ಎಂದರು.
ನಮ್ಮ ತಂದೆ, ತಾಯಿ, ನಮಗೆ ಬೇಕಾದನ್ನು ಕೊಡಿಸಲಿಲ್ಲ,ಒಳ್ಳೆಯ ಶಾಲೆಗೆ ಸೇರಿಸಲಿಲ್ಲ ಎಂದು ದೂರುವ ಬದಲು ಇರುವುದರಲ್ಲಿಯೇ ಕಷ್ಟಪಟ್ಟು ಓದಿ,ಒಳ್ಳೆಯ ಅಂಕ ಪಡೆದು,ಇರುವ ಅವಕಾಶಗಳನ್ನು ಬಳಸಿಕೊಂಡರೆ ನೀವು ಕೂಡ ನಮ್ಮಂತೆ ನ್ಯಾಯಾಧೀಶರೋ,ವಕೀಲರೋ,ಅಧಿಕಾರಿಗಳೋ ಆಗಬಹುದು.ಮನೆಯಲ್ಲಿ ಅಪ್ಪ, ಅಮ್ಮ ನಮಗೆ ಸಮಯ ನೀಡುತ್ತಿಲ್ಲ ಎಂದು ಸೊಷಿಯಲ್ ಮೀಡಿಯಾದಲ್ಲಿ ಗೆಳೆಯರನ್ನು ಹುಡುಕುವ ಬದಲು ಅದೇ ಸಮಯವನ್ನು ಓದಿಗೆ ನೀಡಿದರೆ ಸಕಲವೂ ನಿಮ್ಮ ಬಳಿ ಬರುತ್ತದೆ.ಅರ್ಥಿಕ ಸ್ವಾವಲಂಭಿಗಳಾದರೆ,ನಿಮ್ಮ ಪೋಷಕರು ಈಡೇರಿಸಲಾಗದ ಬೇಡಿಕೆ ಗಳನ್ನು ನೀವೇ ಸ್ವತಃ ಈಡೇರಿಸಿಕೊಳ್ಳುವ ಅವಕಾಶ ದೊರೆಯುತ್ತದೆ.ಅದೇ ರೀತಿ ಪೋಷಕರು ಸಹ ನಿಮ್ಮ ಮಕ್ಕಳನ್ನು ಇನ್ನೊಂದು ಮಗುವಿನೊಂದಿಗೆ ತಾಳೆ ಹಾಕಿ ನೋಡುವ ಬದಲು,ಆತ ಒಳ್ಳೆಯ ಮಾನವೀಯತೆ ಉಳ್ಳ ಮನುಷ್ಯನಂತಾಗಲು ಪ್ರೇರೆಪಿಸಬೇಕೆಂದು ನ್ಯಾ.ನೂರುನ್ನಿಸಾ ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬೀರ ಅಹ್ಮದ್ ಸರ್ಜಾಪುರ ಮಾತನಾಡಿ, ಇಲಾಖೆಯಿಂದ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಅದಲ್ಲದೆ ಮೌಲಾನ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ ನೀಗಿಸಲು ಶಿಕ್ಷಕರ ಹುದ್ದೆ ಭರ್ತಿಗೆ ಪ್ರಕ್ರಿಯೆ ಆರಂಭವಾಗಿವೆ.ತುರ್ತು ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಂದ ಕಾರ್ಯಭಾರ ನಿರ್ವಹಿಸಲಾಗುತ್ತಿದೆ.ಅಬ್ದುಲ್ ಕಲಾಂ ಅವರ ಆಶಯದೊಂದಿಗೆ ಉದಾತ್ತ ಗುರಿಯೊಂದಿಗೆ ಮುನ್ನೆಡೆಯಿರಿ, ನಿಮೊಂದಿಗೆ ಇಲಾಖೆ ಕೈಜೋಡಿಸಲಿದೆ ಎಂದರು. ವೇದಿಕೆಯಲ್ಲಿ ಕೆಎಂಡಿಸಿಯ ಜಿಲ್ಲಾ ವ್ಯವಸ್ಥಾಪಕ ಅಲೀಮ್ ಉಲ್ಲಾ, ಮೌಲಾನ ಅಜಾದ್ ಶಾಲೆಯ ಪ್ರಾಂಶುಪಾಲರಾದ ಹರೀಶ್, ಎಸ್.ಎಂ, ಇಆರ್‌ಓ ಅಫ್ಜಲ್‌ಖಾನ್ ಮತ್ತಿತರರು ಉಪಸ್ಥಿತರಿದ್ದರು. 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಅಭಿನಂದಿಸಲಾಯಿತು.

(Visited 1 times, 1 visits today)
ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನ್ಯಾ.ಶ್ರೀಮತಿ ನೂರುನ್ನಿಸಾ
Previous Articleಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರ 5ನೇ ವರ್ಷದ ಪುಣ್ಯಸ್ಮರಣೆ
Next Article ಮೈಕ್ರೋ ಫೈನಾನ್ಸ್ ನಿಂದ ದೂರವಿರಿ
News Desk Benkiyabale

Related Posts

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm news
ತಾಜಾ ಸುದ್ಧಿಗಳು
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm
Our Youtube Channel
Our Picks

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

By News Desk BenkiyabaleAugust 07, 2026 5:03 pm

ತುಮಕೂರು: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್‌ಅವರು ನಗರದ ಅಸಹಾಯಕ ಒಬ್ಬಂಟಿ ಮಹಿಳೆ, ವಿಕಲಚೇತನೆಯಾದ ಬ್ರಾಹ್ಮಣ ಸಮುದಾಯದ…

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.