BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹೊಯ್ಸಲಕಟ್ಟೆ ಅಸ್ಪತ್ರೆಯಲ್ಲಿ ಹೆಚ್ಚಾದ ಅಗತ್ಯ ಮೂಲ ಸೌಕರ್ಯದ ಕೊರತೆ: ರೋಗಿಗಳಿಗೆ ಖಾಸಗಿ ಆಸ್ಪತೆಯೇ ಗತಿ
ತುಮಕೂರು

ಹೊಯ್ಸಲಕಟ್ಟೆ ಅಸ್ಪತ್ರೆಯಲ್ಲಿ ಹೆಚ್ಚಾದ ಅಗತ್ಯ ಮೂಲ ಸೌಕರ್ಯದ ಕೊರತೆ: ರೋಗಿಗಳಿಗೆ ಖಾಸಗಿ ಆಸ್ಪತೆಯೇ ಗತಿ

By News Desk BenkiyabaleUpdated:March 19, 2025 4:06 pm

ಹುಳಿಯಾರು: ಈ ಆಸ್ಪತ್ರೆಗೆ ಕಾಯಂ ವೈದ್ಯರಿಲ್ಲ. ನಿಯೋಜನೆಗೊಂಡಿರುವ ವೈದ್ಯರೂ ನಿತ್ಯ ಬರೋದಿಲ್ಲ. ಪರಿಣಾಮ ಹತ್ತಾರು ಹಳ್ಳಿಗಳ ರೋಗಿಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ಅಗತ್ಯ ಮೂಲ ಸೌಕರ್ಯದ ಕೊರತೆಯಿಂದ ಆಸ್ಪತ್ರೆ ಭಣಗುಡುತ್ತಿದೆ. ಒಟ್ಟಾರೆ ಇಲ್ಲೊಂದು ಆಸ್ಪತ್ರೆ ಇದೆ ಎನ್ನುವುದನ್ನೇ ಜನ ಮರೆಯುವಂತಾಗಿದೆ.
ಹಳ್ಳಿ ಜನರಿಗೆ ತರ್ತು ಹಾಗೂ ಗುಣ ಮಟ್ಟದ ಚಿಕಿತ್ಸೆ ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಹುಳಿಯಾರು ಹೋಬಳಿಯ ಹೊಯ್ಸಲಕಟ್ಟೆ ಗ್ರಾಮದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಥಿತಿಯಿದು. ರಾಷ್ಟಿçÃಯ ಹೆದ್ದಾರಿ ೨೩೪ ಹಾದು ಹೋಗುವ ಮಾರ್ಗದಲ್ಲಿ ಈ ಗ್ರಾಮ ಬರುವುದರಿಂದ ಇಲ್ಲಿನ ಆರೋಗ್ಯ ಕೇಂದ್ರ ಮಹತ್ವದಾಗಿದೆ. ಆದರೆ ಇಲ್ಲಿನ ಆಸ್ಪತ್ರೆಗೆ ಚಿಕಿತ್ಸೆ ಕೊಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಕಾಯಂ ವೈದ್ಯರಿಲ್ಲದ ಕಾರಣದಿಂದ ಈ ಆಸ್ಪತ್ರೆಗೆ ದಸೂಡಿ ಆಸ್ಪತ್ರೆಯ ಡಾ.ಜುಬೇದ್ ಅವರನ್ನು ೪ ದಿನಗಳು ಹಾಗೂ ಗೋಡೆಕೆರೆಯ ಡಾ.ಶಂಕರ್ ಅವರನ್ನು ವಾರದಲ್ಲಿ ೨ ದಿನಗಳ ಕಾಲ ಡೆಪ್ಯೂಟೇಷನ್ ಮಾಡಲಾಗಿದೆ. ಆದರೆ ಇವರಿಬ್ಬರೂ ಯಾವಾಗ ಬಂದೋಗುತ್ತಾರೋ ತಿಳಿಯದಾಗಿದೆ. ಅಕಸ್ಮಾತ್ ಬಂದರೂ ಬೆಳಗ್ಗೆಯಿಂದ ಸಂಜೆಯವರೆಗೆ ಆಸ್ಪತ್ರೆಯಲ್ಲಿ ಇರುವುದಿಲ್ಲ. ಬೆಳಗ್ಗೆ ಬಂದು ಮಧ್ಯಾಹ್ನ ಆಗುವಷ್ಟರಲ್ಲೇ ಅಲ್ಲಿಂದ ಹೊರಟು ಹೋಗುತ್ತಾರೆ. ಮಧ್ಯಾಹ್ನದ ನಂತರ ಯಾವುದಾದರೂ ಅವಘಡ ಸಂಭವಿಸಿದರೇ ಎಲ್ಲಿಗೇ ಹೋಗಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ.
ರಾಷ್ಟಿçÃಯ ಹೆದ್ದಾರಿ ಹಾದು ಹೋಗುವುದರಿಂದ ರಸ್ತೆ ಅಪಘಾತಗಳಾದಾಗ ತುರ್ತು ಚಿಕಿತ್ಸೆಯೂ ಸಹ ಇಲ್ಲಿ ಸಿಗದಾಗಿದೆ. ಗರ್ಭಿಣಿ ಬಾಣಂತಿಯರಿಗೆ ಮಾಸಿಕ ಅಗತ್ಯ ಸಲಹೆ ಸೂಚನೆ, ಔಷಧೋಪಚಾರವೂ ಇಲ್ಲದಾಗಿದೆ. ಒಟ್ಟಾರೆ ವೈದ್ಯರಿಲ್ಲದ ಆಸ್ಪತ್ರೆ, ದೇವರಿಲ್ಲದ ಗರ್ಭಗುಡಿ ಎರಡೂ ವ್ಯರ್ಥ ಎಂಬ ಮಾತನ್ನು ಈ ಆಸ್ಪತ್ರೆ ನೋಡಿಯೇ ಹೇಳಿರಬೇಕು ಎನ್ನುವಂತಿದೆ. ಹಾಗಾಗಿ ಹೊಯ್ಸಲಕಟ್ಟೆ ಸೇರಿದಂತೆ ಹದಿನೈದಿಪ್ಪತ್ತು ಹಳ್ಳಿಗಳ ಜನತೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಬೇಕಾಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೂಡಲೇ ಕಾಯಂ ವೈದ್ಯರನ್ನು ನೇಮಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಸಿಬ್ಬಂದಿ ನೇಮಿಸಿ, ಔಷಧಿ ಪೂರೈಕೆ ಮಾಡಬೇಕು. ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.


ಇಲ್ಲಿನ ಶೌಚಾಲಯಕ್ಕೆ ನೀರೇ ಬರೋದಿಲ್ಲ:
ಆಸ್ಪತ್ರಗೆ ಬರುವ ರೋಗಿಗಳು ಮತ್ತು ಅವರ ಸಹಾಯಕರ ಅನುಕೂಲಕ್ಕಾಗಿ ಎರಡು ಶೌಚಾಲಯ ನಿರ್ಮಿಸಿದ್ದಾರೆ. ಆದರೆ ಈ ಶೌಚಾಲಯಕ್ಕೆ ನೀರೇ ಬರೋದಿಲ್ಲ. ಗ್ರಾಮ ಪಂಚಾಯ್ತಿಯವರು ಇಲ್ಲಿನ ಆಸ್ಪತ್ರೆ ಸಂಪ್‌ಗೆ ನಿತ್ಯ ನೀರು ಪೂರೈಸುತ್ತಾರೆ. ಆದರೆ ಸಂಪ್‌ನಿAದ ಶೌಚಾಲಯ ಹಾಗೂ ಆಸ್ಪತ್ರೆಗೆ ಲ್ಯಾಬ್‌ಗೆ ನೀರು ಪೂರೈಸುವ ಸಿಂಟೆಕ್ಸ್ಗೆ ನೀರು ತುಂಬಿಸದೆ ಶೌಚಾಲಯಕ್ಕೆ ಬೀಗ ಜಡಿದಿದ್ದಾರೆ. ಪರಿಣಾಮ ಆಸ್ಪತ್ರೆಗೆ ಬರುವ ಜನರಿಗೆ ಬಯಲು ಶೌಚಾಲಯವೇ ಗತಿ.


ಕುಡುಕರ ಅಡ್ಡೆಯಾದ ಆಸ್ಪತ್ರೆ:
ಕಾಯಂ ವೈದ್ಯರಿಲ್ಲ, ರಾತ್ರಿ ಪಾಳಿಯಲ್ಲಿ ಸಿಬ್ಬಂದಿ ಇರೋದಿಲ್ಲ ಎನ್ನುವ ಕಾರಣದಿಂದಾಗಿ ಆಸ್ಪತ್ರೆಯ ಆವರಣ ಕುಡುಕರ ಅಡ್ಡೆಯಾಗಿ ಮಾರ್ಪಟ್ಟಿದೆ. ಸುತ್ತಲೂ ಕಾಂಪೌAಡ್ ಇರುವುದರಿಂದ ಕಾಂಪೌAಡ್ ಹಾರಿ ಬಂದು ಇಲ್ಲಿ ಮದ್ಯಪಾನ ಮಾಡಿದರೆ ಯಾರಿಗೂ ಕಾಣೋದಿಲ್ಲ ಎನ್ನುವ ಕಾರಣದಿಂದ ಕುಡುಕರು ನಿತ್ಯ ಇಲ್ಲಿ ಪಾರ್ಟಿ ಮಾಡಿ ಹೋಗುತ್ತಿದ್ದಾರೆ. ನಿತ್ಯ ಮುಂಜಾನೆ ಇಲ್ಲಿನ ಡಿ ಗ್ರೂಪ್ ನೌಕರನಿಗೆ ಮದ್ಯದ ಬಾಟಲಿ, ಕುರುಕಲು ತಿಂಡಿಯ ಕವರ್ ಕ್ಲೀನ್ ಮಾಡುವ ಅನಿವಾರ್ಯ ಕರ್ಮ ನಿರ್ಮಾಣವಾಗಿದೆ.


ಫಿಲ್ಟರ್ ಅಂತಾರಾದರೂ ಹಾಗೆ ಕಾಣೋದಿಲ್ಲ: 
ಈ ಆಸ್ಪತೆಯ ಹಿಂಭಾಗ ಮೇಲೆ ಕೆಳಗೆ ೨ ನೀರಿನ ಕ್ಯಾನ್ ಇಟ್ಟಿದ್ದಾರೆ. ಇದಕ್ಕೆ ಮೇಲಿನ ಕ್ಯಾನ್‌ನಿಂದ ಕೆಳಗಿನ ಕ್ಯಾನ್‌ಗೆ ಪೈಪ್ ಅಳವಡಿಸಿದ್ದಾರೆ. ಕೆಳಗಿನ ಕ್ಯಾನ್‌ನಿಂದ ನೆಲಕ್ಕೆ ಮತ್ತೊಂದು ಪೈಪ್ ಅಳವಡಿಸಿದ್ದಾರೆ. ಇದೇನೆಂದು ಸಿಬ್ಬಂದಿ ಕೇಳಿದರೆ ಫಿಲ್ಟರ್ ಅನ್ನುತ್ತಾರೆ. ಇಲ್ಲಿಗೆ ಎಲ್ಲಿಂದ ನೀರು ಬರುತ್ತದೆ. ಹೇಗೆ ಫಿಲ್ಟರ್ ಆಗುತ್ತದೆ ಎಂದು ಮರು ಪ್ರಶ್ನಿಸಿದರೆ ಮೌನಕ್ಕೆ ಶರಣಾಗುತ್ತಾನೆ. ಒಟ್ಟಾರೆ ಇದೊಂದು ದುಡ್ಡು ಮಾಡುವ ಸ್ಕೀಂ ಇರಬಹುದಾಗಿದೆ. ಇದೇನೆಂದು ವೈದ್ಯಾಧಿಕಾರಿಗಳೇ ಹೇಳಬೇಕಿದೆ. ಯಾಕೆ ಬಳಸುತ್ತಿಲ್ಲ ಎನ್ನುವುದನ್ನೂ ಇವರೇ ಹೇಳಬೇಕಿದೆ.
ವಾರದಲ್ಲಿ ನೀರಿನ ಸಮಸ್ಯೆ ಪರಿಹಾರ
ಶೌಚಾಲಯಕ್ಕೆ ನೀರು ಬರೋದಿಲ್ಲ ಎನ್ನುವ ಸಮಸ್ಯೆ ನನ್ನ ಗಮನಕ್ಕೆ ಬಂದಿಲ್ಲ. ಪಂಚಾಯ್ತಿ ಅವರೊಂದಿಗೆ ಮಾತನಾಡಿ ಎರಡ್ಮೂರು ದಿನಗಳ ಒಳಗಾಗಿ ಸಮಸ್ಯೆ ಪರಿಹರಿಸುತ್ತೇನೆ. ಅಲ್ಲದೆ ನಿಯೋಜನೆಗೊಂಡಿರುವ ಇಬ್ಬರು ವೈದ್ಯರಿಗೂ ನಿತ್ಯ ಬಂದೋಗುವAತೆ ತಿಳಿಸುತ್ತೇನೆ.
ಡಾ.ವೈ.ಎಚ್.ಮಧು, ಪ್ರಭಾರ ಆರೋಗ್ಯಾಧಿಕಾರಿ, ಹೊಯ್ಸಕಟ್ಟೆ ಪಿಎಚ್‌ಸಿ

(Visited 1 times, 1 visits today)
Ambedkar BJP Chikkanayakanahalli Congress DC Gubbi madhugiri Mla Mla jyothiganesh pavagada Police tumkur Tumkur mahanagara palike ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
Previous Articleಮಾ.೨೧ ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ-೧: ಸಕಲ ಸಿದ್ಧತೆ
Next Article ಅಧ್ಯಯನ ಪೀಠಗಳು ಬಡ್ಡಿ ಪೀಠಗಳಾಗುತ್ತಿವೆ: ನೀಲಾಂಬಿಕೆ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.