BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹರಿಕಥೆ ಎನ್ನುವುದು ಜಾತ್ಯಾತೀತ ಕಲೆ
ತುಮಕೂರು

ಹರಿಕಥೆ ಎನ್ನುವುದು ಜಾತ್ಯಾತೀತ ಕಲೆ

ಹಿರಿಯ ಸುಗಮ ಸಂಗೀತ ಕಲಾವಿದ ಡಾ.ಆರ್.ಕೆ.ಪದ್ಮನಾಭನ್ ಹೇಳಿಕೆ
By News Desk BenkiyabaleUpdated:April 21, 2025 4:08 pm
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 5767168;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 41;

 

ತುಮಕೂರು: ಹರಿಕಥೆ ಎನ್ನುವುದು ಒಂದು ಜಾತ್ಯಾತೀತ ಕಲೆ. ಈ ಕಲೆಗೆ ಎಲ್ಲಾ ವರ್ಗದ ಪ್ರೇಕ್ಷಕರು ಇದ್ದಾರೆ.ಹಾಗಾಗಿ ಈ ಕಲೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಯುವಕ ಕಲಾವಿದರನ್ನು ಇತ್ತ ಸೆಳೆಯುವ ಕೆಲಸ ಆಗಬೇಕಿದೆ ಎಂದು ಹಿರಿಯ ಸುಗಮ ಸಂಗೀತ ಕಲಾವಿದರಾದ ಡಾ.ಆರ್.ಕೆ.ಪದ್ಮನಾಭನ್ ತಿಳಿಸಿದ್ದಾರೆ.
ನಗರದ ಕನ್ನಡ ಭವನದಲ್ಲಿ ಜಿ.ಸೋಮಶೇಖರದಾಸ್ ಪ್ರತಿಷ್ಠಾನ ಬೆಂಗಳೂರು ಇವರು, ಚಿರಂತ ಸಾಂಸ್ಕೃತಿಕ ಟ್ರಸ್ಟ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಹರಿದಾಸರ ಸಮಾವೇಶ-೨೦೨೫ ವನ್ನು ಉದ್ಭಾಟಿಸಿ ಮಾತನಾಡುತಿದ್ದ ಅವರು, ಸುಗಮ ಸಂಗೀತ, ನೃತ್ಯ,ಗಮಕ ಇಂತಹ ಕಲೆಗಳಿಗೆ ಅದರದ್ದೇ ಪ್ರೇಕ್ಷಕರ ವರ್ಗವಿದೆ.ಆದರೆ ಹರಿಕಥೆಗೆ ಎಲ್ಲಾ ವರ್ಗದ ಪ್ರೇಕ್ಷಕರು ಸಹ ಆಗಮಿಸಿ, ಕೇಳಿ ಆಸ್ವಾಧಿಸುತ್ತಾರೆ. ಹಾಗಾಗಿ ಇದೊಂದು ಜಾತ್ಯಾತೀತ ಕಲೆ. ಇದು ಉಳಿದು ಬೆಳೆಯಬೇಕಿದೆ ಎಂದರು.
ನಾನು ಸಹ ಬಾಲ್ಯದಿಂದಲೂ ಹರಿಕಥೆಯನ್ನು ಕೇಳಿ ಬೆಳದವ. ಕಾಲೇಜು ದಿನಗಳಲ್ಲಿ ಗುರುರಾಜುಲುನಾಯ್ಡು ಅವರ ಹರಿಕಥಾ ಕಾರ್ಯಕ್ರಮಕ್ಕೆ ತಪ್ಪದೇ ಹೋಗುತ್ತಿದ್ದೇ, ನನ್ನ ಗಾಯನದ ಮೇಲೆ ಹರಿಕಥೆಯ ಪ್ರಭಾವವಿದೆ.ಹರಿಕಥೆ ಮಾಡುವುದು ಸುಲಭವಲ್ಲ.ಬಹಳ ಕ್ಲಿಷ್ಟಕರವಾದ ಕಲೆ. ಶರೀರದ ಜೊತೆಗೆ, ಶಾರೀರವೂ ಮುಖ್ಯ. ನವರಸಗಳನ್ನು ಒಳಗೊಂಡು ಒಂದು ಸಂಕೀರ್ಣ ಕಲೆ. ಹಾಗಾಗಿ ಪುರಾಣಗಳು, ರಾಮಾಯಣ, ಮಹಾಭಾರತ, ಗೀತೆ ಸೇರಿದಂತೆ ಸಾಹಿತ್ಯಗಳ ಅಧ್ಯಯನ, ನಿರಂತರ ಪರಿಶ್ರಮದಿಂದ ಮಾತ್ರ ಈ ಕ್ಷೇತ್ರದಲ್ಲಿ ಯಶಸ್ಸುಗಳಿಸಲು ಸಾಧ್ಯ.ಆಗ ಮಾತ್ರ ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪಲು ಸಾಧ್ಯ ಎಂದು ಆರ್.ಕೆ.ಪದ್ಮನಾಭನ್ ತಿಳಿಸಿದರು.
ಹರಿದಾಸರಿಗೆ ಕನ್ನಡವೇ ಆರಾಧ್ಯ ಧೈವ. ನಮ್ಮ ಭಾಷೆಯ ಮೇಲೆ ಹಿಡಿತ ಸಾಧಿಸಿದರೆ, ಇತರೆ ಭಾಷೆಗಳಲ್ಲಿ ಕಾರ್ಯಕ್ರಮ ನೀಡುವಷ್ಟು ಪ್ರೌಢಿಮೆ ಬೆಳೆಸಿಕೊಳ್ಳಬಹುದು. ಹೆಸರಿಗಷ್ಟೇ ಹರಿದಾಸರಾದರೆ ಸಾಲದು, ನಿಜ ಜೀವನದಲ್ಲಿಯೂ ಹರಿದಾಸರಾಗಿ, ನಾಲ್ವರಿಗೆ ಬೇಕಾದ ಮನುಷ್ಯರಾಗಿ ಬದುಕಿ ಎಂದು ಸಲಹೆ ನೀಡಿದ ಅವರು,ಯುವಕರನ್ನು ಈ ಕ್ಷೇತ್ರಕ್ಕೆ ಕರೆತರುವ ನಿಟ್ಟಿನಲ್ಲಿ ಯುವ ಹರಿಕಥಾ ವಿದ್ವಾಂಸ ಸಮಾವೇಶ ನಡೆಸಿದರೆ, ನನ್ನ ಕೈಲಾದ ಧನ ಸಹಾಯ ಮಾಡುವ ಭರವಸೆಯನ್ನು ಆರ್.ಕೆ.ಪದ್ಮನಾಭನ್ ನುಡಿದರು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷರಾದ ಶುಭ ಧನಂಜಯ್ ಮಾತನಾಡಿ,ನಮ್ಮ ಆಕಾಡೆಮಿಯ ಅಡಿಯಲ್ಲಿ ಸಂಗೀತ, ನೃತ್ಯ ಸೇರಿದಂತೆ ಆರು ಪ್ರಮುಖ ಕಲೆಗಳು ಬರುತ್ತವೆ. ಅದರೆ ಸರಕಾರ ನೀಡುವ ಅನುದಾನದಲ್ಲಿ ಈ ಕಲೆಗಳನ್ನು ಪ್ರೋತ್ಸಾಹಿಸುವುದು ಕಷ್ಟ ಸಾಧ್ಯ. ಆದರೂ ಅಕಾಡೆಮಿ ಶಕ್ತಿ ಮೀರಿ ಕೆಲಸ ಮಾಡುತ್ತಿದೆ.ಹರಿಕಥೆಗೆ ಚೌಕಟ್ಟು ಎಂಬುದಿಲ್ಲ.ನವರಸಗಳನ್ನು ಒಳಗೊಂಡಿದೆ.ಇAತಹ ಕಲೆಗಳಿಗೆ ನಿರಂತರ ವೇದಿಕೆ ಸಿಗಬೇಕು.ಮಕ್ಕಳು ಸಹ ಪಠ್ಯದ ಜೊತೆ ಜೊತೆಯಲ್ಲಿಯೇ ಪಠ್ಯೇತರ ಚಟುವಟಿಕೆಗಳಾದ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚುಟವಟಿಕೆಗಳತ್ತ ಗಮನಹರಿಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ಕಲೆಗಳನ್ನು ಮೈಗೂಡಿಸಿಕೊಂಡರೆ ಹೆಚ್ಚು ಏಕಾಗ್ರತೆ ರೂಢಿಯಾಗುತ್ತದೆ.ಅವರು ಹೆಚ್ಚು ಅಂಕಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿ.ಸೋಮಶೇಖರದಾಸ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಕಾರ್ಯಕ್ರಮದ ಆಯೋಜಕರಾದ ಜಿ.ಸೋಮಶೇಖರದಾಸ್, ಹರಿಕಥಾ ಕ್ಷೇತ್ರಕ್ಕೆ ಅದರದ್ದೆ ಆದ ಪುರಾತನ ಪರಂಪರೆ ಇದೆ.ತಂಬೂರ ನಾರದರಿಂದ ಆರಂಬವಾಗುವ ಹರಿದಾಸ ಪರಂಪರೆ ತ್ಯಾಗರಾಜರು, ಪುರಂದರ ದಾಸರು, ಕನಕದಾಸರ ಹೀಗೆ ಮುಂದುವರೆದುಕೊAಡು ಬರುತ್ತಿದೆ.ಆದರೆ ಇತ್ತೀಚಿನ ಸಾಮಾಜಿಕ ಮಾಧ್ಯಮಗಳ ಹಾವಳಿಯಿಂದ ಹರಿಕಥೆ ಕೇಳುವವರು, ಮಾಡುವವರು ಇಬ್ಬರು ಕಡಿಮೆಯಾಗಿದ್ದಾರೆ.ಜಗಕ್ಕೆ ಒಳ್ಳೆಯ ಸಂದೇಶ ನೀಡುವ ಇಂತಹ ಕಲೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ನಮ್ಮ ಪ್ರತಿಷ್ಠಾನ ಪ್ರತಿವರ್ಷ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹರಿದಾಸರಿಗೆ ವೇದಿಕೆ ಕಲ್ಪಿಸುವುದರ ಜೊತೆಗೆ, ಯುವ ಕಲಾವಿದರಿಗೆ ಅವಕಾಶ ಕಲ್ಪಿಸುವ ಕೆಲಸ ಮಾಡುತ್ತಿದೆ.ಇದರ ಜೊತೆಗೆ ವಾದ್ಯ ಕಲಾವಿದರು ಮತ್ತು ಹರಿದಾಸರ ಸಮನ್ವಯದ ಕೊಂಡಿಯಾಗಿ ಈ ಸಮಾವೇಶ ಕೆಲಸ ಮಾಡಲಿದೆ. ದಾಸ ಸಾಹಿತ್ಯ, ಶರಣ ಸಾಹಿತ್ಯ, ಸನಾತನ ಧರ್ಮದ ಉಳಿವಿಗೆ ಹರಿಕಥೆ ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲಾಶ್ರೀ ಡಾ.ಲಕ್ಷö್ಮಣದಾಸ್ ಮಾತನಾಡಿ,ಅಕಾಡೆಮಿ ಇಂತಹ ಕಲೆಯನ್ನು ಉಳಿಸಿ, ಬೆಳೆಸಲು ಮುಂದಾಗಬೇಕು. ಕನಿಷ್ಠ ತಿಂಗಳಿಗೆ ಒಂದು ಕಾರ್ಯಕ್ರಮವನ್ನಾದರೂ ಅಕಾಡೆಮಿ ವತಿಯಿಂದ ನೀಡುವ ಮೂಲಕ ವೇದಿಕೆ ಕಲ್ಪಿಸಬೇಕು.ಹರಿಕಥಾ ವಿದ್ವಾನ್ ಸೋಮಶೇಖರದಾಸ್ ತನ್ನ ಸ್ವಂತ ಹಣದಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸಿ, ನಮ್ಮೆಲ್ಲರನ್ನು ಕಲೆ ಹಾಕಿ, ಆತ್ಮಾವಲೋಕಕ್ಕೆ ಅವಕಾಶ ಕಲ್ಪಿಸಿದ್ದಾರೆ. ಇಂತಹವರ ಸಂಖ್ಯೆ ಹೆಚ್ಚಾಗಲಿ, ಇದಕ್ಕೆ ಸಹಕಾರಿ ನೀಡಿದ ಎಲ್ಲರನ್ನು ಸ್ಮರಿಸುವುದಾಗಿ ತಿಳಿಸಿದರು.
ಇದೇ ವೇಳೆ ಕಲಾವಿದರಾದ ಡಾ.ಕಲ್ಕೆರೆ ನರಸಿಂಹಮೂರ್ತಿ, ಜಗದೀಶ್ ಆಚಾರ್, ಬಾಬು, ಕೃಷ್ಣಮೂರ್ತಿ ಕೆಂಗನಹಳ್ಳಿ, ವಿ.ಎನ್.ಅಶ್ವಥ್, ಡಿ.ಡಿ.ಕೃಷ್ಣಪ್ಪ, ನಂಜಪ್ಪ ಶೆಟ್ರು, ಡಿ.ಎನ್.ರಾಮಯ್ಯದಾಸರು, ಶಿವಕುಮಾರಾಚಾರ್, ಶ್ರೀಮತಿ ರಾಜೇಶ್ವರಿ ಅವರುಗಳನ್ನು ಅಭಿನಂದಿಸಲಾಯಿತು.
ಕರ್ನಾಟಕ ಕೀರ್ತನ ಕಲಾ ಪರಿಷತ್ತಿನ ಅಧ್ಯಕ್ಷರಾದ ಎಸ್.ಎಲ್.ಲೋಕೇಶದಾಸ್,ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ಕೆ.ಸಿ.ನರಸಿಂಹಮೂರ್ತಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪ,ಜನಪದ ಅಕಾಡೆಮಿ ಸದಸ್ಯರಾದ ಕೆಂಕೆರೆ ಮಲ್ಲಿಕಾರ್ಜುನ್ ಅವರುಗಳು ಮಾತನಾಡಿದರು.ವೇದಿಕೆಯಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ಉಗಮ ಶ್ರೀನಿವಾಸ್, ಜಾನಪದ ಅಕಾಡೆಮಿ ಸದಸ್ಯರಾದ ಮಲ್ಲಿಕಾರ್ಜುನ ಕೆಂಕರೆ, ಹರಿಕಥಾ ವಿದ್ವಾನ್ ಶೀಲಾ ನಾಯ್ಡು, ಎಂ.ವಿ.ನಾಗಣ್ಣ ಮತ್ತಿತರರು ವೇದಿಕೆಯಲ್ಲಿದ್ದರು.

 

(Visited 1 times, 1 visits today)
tumkur
Previous Articleನೀರಿಗಾಗಿ ಹೋರಾಟ ನಡೆಸಿದ ಹೋರಾಟಗಾರರಿಗೆ ಸನ್ಮಾನ ಸಮಾರಂಭ
Next Article ಕೊರಟಗೆರೆ ಕ್ಷೇತ್ರದಲ್ಲಿ ನೀರಾವರಿ ಜಲಕ್ರಾಂತಿ
News Desk Benkiyabale

Related Posts

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm news
ತಾಜಾ ಸುದ್ಧಿಗಳು
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
Our Youtube Channel
Our Picks

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

By News Desk BenkiyabaleAugust 26, 2026 4:35 pm

ಮಧುಗಿರಿ: ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ (ರಿ) ೨೫ನೇ ವರ್ಷದ ರಜತ ಮಹೋತ್ಸವ, ಬೃಹತ್ ಜನಜಾಗೃತಿ ಸಮಾವೇಶ ಹಾಗೂ…

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.