BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
  • ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ
  • ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ
  • ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ
  • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ
  • ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
  • ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್
  • ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಾ. ರಾಜ್‌ಕುಮಾರ್ ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿ
ತುಮಕೂರು

ಡಾ. ರಾಜ್‌ಕುಮಾರ್ ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿ

“ರಾಜರಸ” ಸಂಗೀತ ಗಾಯನ ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್ ಬಣ್ಣನೆ
By News Desk BenkiyabaleUpdated:April 25, 2025 1:36 pm
ತುಮಕೂರು: ವರನಟ, ನಟ ಸಾರ್ವಭೌಮ ಡಾ: ರಾಜ್ ಕುಮಾರ್ ಅವರು ತಮ್ಮ ಅಮೋಘ ನಟನೆ, ಗಾಯನದ ಮೂಲಕ ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿಯಾಗಿದ್ದರೆಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಬಣ್ಣಿಸಿದರು.
ನಗರದ ಕನ್ನಡ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು,  ಡಾ:ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಡಾ: ರಾಜ್ ಕುಮಾರ್ ಜಯಂತಿ ಅಂಗವಾಗಿ ಏರ್ಪಡಿಸಿದ್ದ “ರಾಜರಸ” ಸಂಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಡು ಮುಟ್ಟದ ಸೊಪ್ಪಿಲ್ಲ ಎಂಬAತೆ ಡಾ: ರಾಜ್ ಅವರು ಅಭಿನಯಿಸದ ಪಾತ್ರಗಳಿಲ್ಲ. ಕರ್ನಾಟಕದಲ್ಲಿ ಡಾ: ರಾಜ್‌ಕುಮಾರ್ ಎಂದರೆ ಅಣ್ಣಾವ್ರು ಎಂದೇ ಪ್ರಸಿದ್ಧಿ. ಅವರ ಚಿತ್ರಗಳು ಇಡೀ ಕುಟುಂಬ ಒಟ್ಟಿಗೇ ಕುಳಿತು ವೀಕ್ಷಿಸುವಂತಹದಾಗಿದ್ದವು.  ಅವರು ನಟಿಸಿರುವ ಚಿತ್ರದ ಗೀತೆಗಳ ಸಾಹಿತ್ಯ ಅರ್ಥಪೂರ್ಣವಾಗಿರುತ್ತಿದ್ದವು.  ಅಣ್ಣಾವ್ರ ನಟನೆ ಹಾಗೂ ಗಾಯನಕ್ಕೆ ಅವರೇ ಸಾಟಿಯಾಗಿದ್ದರು ಎಂದು ತಿಳಿಸಿದರು.
ರಾಜ್‌ಕುಮಾರ್ ಅವರು ಗೋಕಾಕ್ ಚಳುವಳಿಯ ನೇತೃತ್ವವಹಿಸುವ ಮೂಲಕ ಕನ್ನಡ ನಾಡು-ನುಡಿಯ ಏಳಿಗೆಗಾಗಿ ಹೋರಾಟ ಮಾಡಿದ ಅಪ್ಪಟ ಕನ್ನಡಿಗರಾಗಿದ್ದರು.  ಕನ್ನಡ ಹೊರತುಪಡಿಸಿ ಇತರೆ ಯಾವುದೇ ಭಾಷೆಗಳಲ್ಲಿ ನಟಿಸದೆ ಕನ್ನಡಿಗರಿಗೆ ಮಾದರಿಯಾಗಿದ್ದರು.  ಕನ್ನಡ ನಾಡು-ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಡಾ: ರಾಜ್‌ಕುಮಾರ್ ಜಯಂತಿಯು ಇಂದಿನ ಯುವಕರಿಗೆ ದಾರಿ ದೀಪವಾಗಬೇಕೆಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಡಾ: ರಾಜ್‌ಕುಮಾರ್ ಅವರು ಸರಳ ಹಾಗೂ ಮೇರು ವ್ಯಕ್ತಿತ್ವ ಹೊಂದಿದ್ದರು. ಹೆಚ್ಚೇನು ವ್ಯಾಸಂಗ ಮಾಡದಿದ್ದರೂ ತಮ್ಮ ನಿರರ್ಗಳ ಕನ್ನಡದ ಮಾತುಗಳಿಂದ ವಾಗ್ದೇವಿ ಪುತ್ರರೆನಿಸಿಕೊಂಡಿದ್ದರಲ್ಲದೆ  ಕನ್ನಡಾಭಿಮಾನದಿಂದ ರಾಷ್ಟçದ ಗಮನ ಸೆಳೆದಿದ್ದರು ಎಂದು ತಿಳಿಸಿದರು.
ರಾಜ್ ಅವರ ಚಲನಚಿತ್ರ ಪಯಣ ತುಮಕೂರಿನ ಗುಬ್ಬಿ ವೀರಣ್ಣ ನಾಟಕ ಕಂಪನಿಯಿAದ ಪ್ರಾರಂಭವಾಯಿತೆAದು ಹೇಳಲು ಹೆಮ್ಮೆಯಾಗುತ್ತದೆ. ತಮ್ಮ ಕಲೆ ಮೂಲಕ ಸಮಾಜದ ಅಂಕು-ಡೊAಕುಗಳನ್ನು ತಿದ್ದಿದ್ದರು.  ದಾದಾ ಸಾಹೇಬ್ ಫಾಲ್ಕೆ, ಪದ್ಮಭೂಷಣದಂತಹ ಹಲವಾರು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದರು.  ನಟನೆಯಲ್ಲದೆ ಸಂಗೀತ ಕ್ಷೇತ್ರದಲ್ಲಿಯೂ ರಾಷ್ಟç ಮಟ್ಟದ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬಂದಿದ್ದವು. ರಾಷ್ಟçದಲ್ಲಿ ತ್ರಿಭಾಷಾ ನೀತಿ ಘೋಷಣೆಯಾದ ಸಂದರ್ಭದಲ್ಲಿ ಗೋಕಾಕ್ ಚಳುವಳಿ ಮೂಲಕ ಆಯಾ ಪ್ರಾದೇಶಿಕ ಭಾಷೆಯೇ ಮಾತೃಭಾಷೆಯಾಗಬೇಕೆಂದು ಹೋರಾಟ ನಡೆಸಿ ಕನ್ನಡಿಗರಿಗೆ ಪ್ರೇರಕ ಶಕ್ತಿಯಾಗಿದ್ದರೆಂದು ಡಾ: ರಾಜ್ ಅವರ ಸಾಧನೆಗಳ ಬಗ್ಗೆ ಹಾಡಿ ಹೊಗಳಿದರು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ ಡಾ: ರಾಜ್ ಅವರು ಸ್ವಯಂ ಸಾಧಕ. ಯಾವುದೇ ಬೆಂಬಲವಿಲ್ಲದೆ ತಮ್ಮ ಕಠಿಣ ಶ್ರಮದಿಂದ ಉನ್ನತ ಸ್ಥಾನಕ್ಕೇರಿ ಕನ್ನಡಿಗರ ಜನಮಾನಸದಲ್ಲಿ ಉಳಿದಿದ್ದಾರೆ. ಸಂಗೀತ ಹಾಗೂ ನಟನೆಯನ್ನು ಜೊತೆ ಜೊತೆಗೆ ತೊಡಗಿಸಿಕೊಂಡ ಬಹುಮುಖ ಪ್ರತಿಭೆ ಹೊಂದಿರುವ ಕನ್ನಡಿಗರಲ್ಲಿ ಇವರು ಅಗ್ರಗಣ್ಯರು. ಇವರ ಚಲನಚಿತ್ರಗಳು ಉತ್ತಮ ಸಾಮಾಜಿಕ ಸಂದೇಶವನ್ನು ಹೊಂದಿರುತ್ತಿದ್ದವು. ಇವರ ಅಭಿನಯದ ೨೦೦ಕ್ಕೂ ಹೆಚ್ಚು ಚಿತ್ರಗಳು ಸಮಾನತೆ, ಜೀತ ಮುಕ್ತ, ಶಿಕ್ಷಣದ ಮಹತ್ವ, ನಾಡು-ನುಡಿ, ಭಕ್ತಿ ಪ್ರಧಾನದಂತಹ ವಿಷಯ ವಸ್ತುಗಳಿಂದ ಕೂಡಿರುತ್ತಿದ್ದವು. ರಾಜ್ ಅವರ ಸಿನಿಮಾಗಳಿಂದ ಜನರಲ್ಲಿ ಸಕಾರಾತ್ಮಕ ಬದಲಾವಣೆ ಕಾಣಬಹುದಾಗಿತ್ತು ಎಂದು ತಿಳಿಸಿದರು.
ಕೇಂದ್ರ ಸಂಗೀತ ನಾಟಕ ಅಕಾಡೆಮಿ ರಾಷ್ಟç ಪ್ರಶಸ್ತಿ ಪುರಸ್ಕೃತ ಡಾ. ಲಕ್ಷö್ಮಣ್ ದಾಸ್ ಮಾತನಾಡಿ ಡಾ: ರಾಜ್‌ಕುಮಾರ್ ಅವರು ಗುಬ್ಬಿ ವೀರಣ್ಣ ನಾಟಕ ಕಂಪನಿಯಲ್ಲಿ ದೀರ್ಘ ಕಾಲ ನಾಟಕಗಳಲ್ಲಿ ಅಭಿನಯಿಸಿದ ನಂತರ ಚಿತ್ರರಂಗಕ್ಕೆ ಪ್ರವೇಶಿಸಿದರು. ಬೇಡರ ಕಣ್ಣಪ್ಪ ಚಿತ್ರದಲ್ಲಿ ನಾಯಕನಾಗಿ ಮೊದಲ ಅವಕಾಶ ಪಡೆದರು. ರಾಜ್‌ಕುಮಾರ್ ಅವರು ೨೨೦ ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಡಾ: ರಾಜ್‌ಕುಮಾರ್ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ನಟನೆ, ಗಾಯನ ಮತ್ತು ಚಿತ್ರ ನಿರ್ಮಾಣದ ಮೂಲಕ ವರನಟ, ನಟಸಾರ್ವಭೌಮ ಮೊದಲಾದ ಬಿರುದುಗಳನ್ನು ಪಡೆದುಕೊಂಡು  ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರೆನಿಸಿಕೊಂಡಿದ್ದರು ಎಂದು ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಕಾರ್ಯಕ್ರಮವನ್ನು ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ: ರಾಜ್ ಕುಮಾರ್ ಅವರ ಸರಳ-ಸಜ್ಜನಿಕೆ ಹಾಗೂ ಮೇರು ವ್ಯಕ್ತಿತ್ವ, ನಟನೆ, ಗಾಯನ, ಭಾಷಾಭಿಮಾನ, ಸಮಯ ಪಾಲನೆ, ಸೌಜನ್ಯತೆ, ಸಿನಿಪಯಣ, ಸಹ ನಟರೊಂದಿಗೆ ಸ್ನೇಹಭಾವಗಳ ಬಗ್ಗೆ ಪರಿಚಯಿಸಿದರು.
ಡಾ: ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಕೆ. ರಾಜಶೇಖರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಸಿದ್ಧಲಿಂಗಪ್ಪ, ಸರಿಗಮಪ ಖ್ಯಾತಿ ಡಾ: ಶ್ರಾವ್ಯ, ವಾರ್ತಾ ಇಲಾಖೆಯ ಆರ್. ರೂಪಕಲಾ ಹಾಜರಿದ್ದರು.
ಡಾ: ರಾಜ್‌ಕುಮಾರ್ ಅಭಿನಯದ ಚಲನಚಿತ್ರ ಗೀತ ಗಾಯನದ ರಾಜರಸ ಸಂಗೀತ ಕಾರ್ಯಕ್ರಮದಲ್ಲಿ ಸೂರಜ್ ಅವರ ‘ಹೃದಯ ಸಮುದ್ರ ಕಲಕಿ-ಹೊತ್ತಿದೆ ದೇಶದ ಬೆಂಕಿ’, ಮಲ್ಲಸಂದ್ರ ಪಂಚಾಯತಿ ಅಧ್ಯಕ್ಷೆ ರತ್ನಮ್ಮ ಅವರ ‘ಬಾಳ ಬಂಗಾರ ನೀನು-ಹಣೆಯ ಸಿಂಗಾರ ನೀನು’, ಎಸ್. ಸಿದ್ದೇಶ್ ಅವರ ‘ನಾವಾಡುವ ನುಡಿಯೇ ಕನ್ನಡ ನುಡಿ’, ಸೂರಜ್ ಹಾಗೂ ಚಂದನ ಅವರ ‘ಜೀವ ಹೂವಾಗಿದೆ-ಭಾವ ಜೇನಾಗಿದೆ’ ಗೀತೆಗಳು ಕೇಳುಗರ ಮನ ತಣಿಸಿದರು.  ಚಿಣ್ಣರು ಹೆಜ್ಜೆ ಹಾಕಿದ ರಾಜ್ ಗೀತೆಗಳ ರೀಮಿಕ್ಸ್ ಹಾಡುಗಳು ನೋಡುಗರ ಕಣ್ಮನ ಸೆಳೆದವು.
(Visited 1 times, 1 visits today)
Mla jyothiganesh tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಅರಣ್ಯ ಇಳಾಖೆಯ ಸಿಬ್ಬಂದಿಯನ್ನು ಅಮಾನತ್ತು ಮಾಡಲು ಮನವಿ
Next Article ಪೋಕೋ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು ೧ ಲಕ್ಷ ರೂಪಾಯಿಗಳ ದಂಡ
News Desk Benkiyabale

Related Posts

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm
ಇತರೆ ಸುದ್ಧಿಗಳು

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm
ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm
ಇತರೆ ಸುದ್ಧಿಗಳು

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
ಇತರೆ ಸುದ್ಧಿಗಳು

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

October 27, 2025 1:23 pm
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm
Our Youtube Channel
Our Picks

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

October 27, 2025 1:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

By News Desk BenkiyabaleOctober 29, 2025 2:01 pm

ತುರುವೇಕೆರೆ: ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದರು. ಪಟ್ಟಣದ ಎಪಿಎಂಸಿ…

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.