ತುಮಕೂರು: ದೇಶದಲ್ಲಿ ಜಾತಿ ಗಣತಿ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಹಾಗಾಗಿ ರಾಜ್ಯ ಸರ್ಕಾರದ ಜಾತಿ ಗಣತಿಗೆ ಬೆಲೆ ಇಲ್ಲ. ಈ ಜಾತಿ ಗಣತಿ ವರದಿ ತನ್ನಿಂದ ತಾನಾಗಿಯೇ ನಿಷ್ಕಿçÃಯವಾಗುತ್ತದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.
ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿಗೆ ಯಾವುದೇ ಕಿಮ್ಮತ್ತಿಲ್ಲ. ಹಾಗಾಗಿ ಈ ಸರ್ಕಾರದ ಜಾತಿ ಗಣತಿ ಹೊರಟು ಹೋಗಿದೆ. ದೇಶದ ಜಾತಿ ಗಣತಿಯನ್ನು ಕೇಂದ್ರ ಸರ್ಕಾರವೇ ಮಾಡಲಿದೆ ಎಂದು ಅವರು ತಿಳಿಸಿದರು.
ನಗರದಲ್ಲಿ ಶಾಸಕ ಜ್ಯೋತಿಗಣೇಶ್ ರವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ, ಮಹಿಳಾ ಮೀಸಲಾತಿ ಬಿಲ್, ಜಾತಿ ಗಣತಿ ಇವೆಲ್ಲಾ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿಯ ಚಿಂತನೆ. ರಾಜ್ಯ ಸರ್ಕಾರ ವಿನಾ ಕಾರಣ ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದು ಉತ್ತಮ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಕಾರ್ಯಕ್ರಮಗಳು ದೂರದೃಷ್ಠಿಯಿಂದ ಕೂಡಿದ್ದು, ಮತ್ತೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಜಾತಿ ಗಣತಿ ಮಾಡುವುದರಿಂದ ಎಲ್ಲರಿಗೂ ಒಂದು ಸಂದೇಶ ತಲುಪುತ್ತದೆ ಎಂದು ಅವರು ತಿಳಿಸಿದರು.
ನಮ್ಮದು ಜಾತ್ಯಾತೀತ ರಾಷ್ಟç. ಸುಮಾರು ವರ್ಷಗಳಿಂದ ಜಾತಿ ಗಣತಿ ಮಾಡಬೇಕು ಎಂಬ ಕೂಗಿತ್ತು. ಹಾಗಾಗಿ ಈಗ ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲು ಕ್ರಮ ಕೈಗೊಂಡಿದೆ. ಆದರೆ ಕಾಂಗ್ರೆಸ್ನವರು ಕೇಂದ್ರದಲ್ಲಿ ಇಷ್ಟು ವರ್ಷ ಅಧಿಕಾರದಲ್ಲಿದ್ದರಲ್ಲಾ ಅವರು ಏಕೆ ಜಾತಿ ಗಣತಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ದೇಶದ ಜ್ವಲಂತ ಸಮಸ್ಯೆಗಳಿಗೆ ಪ್ರಧಾನಿ ಮೋದಿಯವರು ಪರಿಹಾರ ಕಂಡುಕೊAಡಿದ್ದಾರೆ. ಈವರೆಗೆ ೨೫ ಕೋಟಿ ಕುಟುಂಬಗಳನ್ನು ಮೇಲ್ಪಂಕ್ತಿಗೆ ತಂದಿದ್ದಾರೆ ಎಂದರು.
ಕಾAಗ್ರೆಸ್ ಪಕ್ಷದಿಂದ ಮೋದಿ ವಿರುದ್ಧದ ಗಾಯಬ್ ಪೋಸ್ಟ್ ಮಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನವರು ಸಂಸ್ಕöÈತಿ, ಸಂಸ್ಕಾರ ಇಲ್ಲದವರು. ಹಾಗಾಗಿ ಹೀಗೆ ಮಾಡಿದ್ದಾರೆ. ದೇಶದ ಅರಿವಿಲ್ಲದವರಿಗೆ, ಇಂತಹ ಹುಚ್ಚರನ್ನು ಕಟ್ಟಿಕೊಂಡು ನಾವೇನು ಮಾಡಲಿಕ್ಕೂ ಆಗಲ್ಲ. ಹುಚ್ಚ ಆಸ್ಪತ್ರೆಯಲ್ಲಿದ್ದಾವರಾದರೂ ಮೇಲೂ, ಅದಕ್ಕಿಂತ ಕೀಳಾಗಿ ಕಾಂಗ್ರೆಸ್ನವರು ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.
ದೇಶದ ಪ್ರಧಾನಿ ಮೋದಿಯವರನ್ನು ಕಾಂಗ್ರೆಸ್ನವರು ಈ ರೀತಿ ಅಪಮಾನ ಮಾಡುವುದು ಸರಿಯಲ್ಲ. ಕಾಂಗ್ರೆಸ್ನಲ್ಲಿ ಕೀಳರಿಮೆ ಹೋಗುವ ತನಕ ಅವರು ಉದ್ದಾರ ಆಗುವುದಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಕೇವಲ ೧೦ ವರ್ಷದಲ್ಲಿ ದೇಶವನ್ನು ೫೦ ವರ್ಷ ಮುಂದಕ್ಕೆ ಕೊಂಡೊಯ್ದಿದ್ದಾರೆ. ೭ ದಶಕಗಳಿಗೂ ಹೆಚ್ಚು ಕಾಲ ದೇಶವನ್ನಾಳಿದ ಕಾಂಗ್ರೆಸ್ನವರು ಏನು ಮಾಡಿದ್ದಾರೆ ಎಂದು ಅವರು ಖಾರವಾಗಿ ಪ್ರಶ್ನಿಸಿದರು.