BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾರ್ಮಿಕರ ಸಾಮಾಜಿಕ ಭದ್ರತೆಯನ್ನು ಕಿತ್ತುಕೊಳ್ಳುವ ಕೆಲಸವಾಗುತ್ತಿದೆ
ತುಮಕೂರು

ಕಾರ್ಮಿಕರ ಸಾಮಾಜಿಕ ಭದ್ರತೆಯನ್ನು ಕಿತ್ತುಕೊಳ್ಳುವ ಕೆಲಸವಾಗುತ್ತಿದೆ

ಕಾರ್ಮಿಕರ ದಿನಾಚರಣೆಯಲ್ಲಿ ಚಲನಚಿತ್ರ ನಿರ್ದೇಶಕ, ನಟ ಬಿ. ಸುರೇಶ್ ಅಭಿಪ್ರಯ
By News Desk BenkiyabaleUpdated:May 02, 2025 2:35 pm

 

ತುಮಕೂರು: ದೇಶದ ಆರ್ಥಿಕ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಹೆಚ್ಚು ಉತ್ತೇಜನ ನೀಡಲು ಪ್ರಾರಂಭವಾದಗಿನಿAದ ಸಾರ್ವಜನಿಕ ಉದ್ದಿಮೆಗಳು, ಸಾರ್ವಜನಿಕ ಆಸ್ತಿಗಳ ಮೇಲೆ ಪಕ್ಷಬೇದವಿಲ್ಲದೆ ಆಡಳಿತ ನಡೆಸಿದವರು ಹೊಸ ರೀತಿಯ ಮೊಳೆಗಳನ್ನು ಹೊಡೆಯಲು ಪ್ರಾರಂಭವಾಗಿದೆ. ೧೯೮೩ರಲ್ಲಿ ಗ್ಯಾಟ್ ಒಪ್ಪಂದ, ಡೆಂಕಲ್ ಒಪ್ಪಂದಕ್ಕೆ ಸಹಿ ಹಾಕಿದಾಗ ಆರಂಭವಾದ ಖಾಸಗೀಕರಣ, ಜಾಗತೀಕರಣ, ಉದಾರೀಕರಣದಂತಹ ಅತಂಕರಣಗಳಿಲ್ಲದೆ ಕರಣಗಳು ಪ್ರಾರಂಭವಾಗಿ ಉದ್ಯೋಗ, ಸಾಮಾಜಿಕ ಭದ್ರತೆಗಳನ್ನು ಕಿತ್ತುಕೊಳ್ಳುವ ಕೆಲಸಗಳು ನಡೆಯುತ್ತಿವೆ. ಈ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳು ನಿರಂತರವಾಗಿ ಸಾಮಾಜಿಕ ಭದ್ರತೆಗಾಗಿ ಹೋರಾಟಗಳನ್ನು ನಡೆಸುತ್ತಿವೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ, ರಂಗಕರ್ಮಿ, ನಟ ಬಿ. ಸುರೇಶ್ ಅಭಿಪ್ರಯಪಟ್ಟರು.
ಅವರು ವಿಶ್ವಕಾರ್ಮಿಕರ ದಿನಾಚರಣೆಯ (ಮೇ ದಿನಾಚರಣೆ) ಅಂಗವಾಗಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಿಐಟಿಯು ತುಮಕೂರು ನಗರದ ಟೌನ್‌ಹಾಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಪ್ರಸ್ತುತ ಕಾರ್ಮಿಕರನ್ನು ನಿಶಸ್ತçಗೊಳಿಸುವುದರ ವಿರುದ್ಧ ವಿಶ್ವ ಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದರು.
ಮುಂದುವರುದು ದಿನಕ್ಕೆ ೧೬ ರಿಂದ ೧೮ ಗಂಟೆಗಳ ಕಾಲ ದುಡಿಸಿಕೊಳ್ಳುತ್ತಿದ್ದ ಬಂಡವಾಳಗಾರರ ವ್ಯವಸ್ಥೆಯ ವಿರುದ್ದ ದಿನಕ್ಕೆ ೮ ಗಂಟೆಯ ಕೆಲಸಕ್ಕೆ ಆಗ್ರಹಿಸಿ ನಡೆಸಿದ ಹೋರಾಟಕ್ಕೆ ಸುಮಾರು ೨೫೦ ವರ್ಷಗಳ ಇತಿಹಾಸವಿದೆ. ತಮಗೆ ಧಕ್ಕಬೇಕಾದ ಪ್ರಸ್ತುತ ಸವಲತ್ತುಗಳ ಬಗ್ಗೆ ಕಾರ್ಮಿಕರು ಮಾತನಾಡದ ರೀತಿಯಲ್ಲಿ ಹಲವು ರೀತಿಯ ಬೀಗಗಳನ್ನು ಹಾಕಲಾಗುತ್ತಿದೆ. ಕಾನೂನಿನ ಬೀಗ, ಭಯದ ಬೀಗ, ಸಬಂಳದ ಬೀಗ, ವಜಾಗೊಲಿಸುವ ಬೀಗ ಇಂತಹ ಸಂಧರ್ಭದಲ್ಲಿ ಕಾರ್ಮಿಕರ ಹಕ್ಕುಗಳ ಬಗ್ಗೆ ಧ್ವನಿ ಎತ್ತುವ ರೀತಿಯಲ್ಲಿ ಕಾರ್ಮಿಕ ದಿನಾಚರಣೆಯ ಮೂಲಕ ಜಾಗೃತಗೊಳಿಸುವ ಕೆಲಸಗಳನ್ನು ಕಾರ್ಮಿಕ ಸಂಘಟನೆಗಳು ಇಂದು ಮಾಡುತ್ತಿವೆ ಎಂದರು.
ಇದೇ ತುಮಕೂರು ನಗರದಲ್ಲಿ ಸುಮಾರು ೧೫ ರಿಂದ ೨೦ ಸಾವಿರ ಮಂದಿಗೆ ಉದ್ಯೋಗ ನೀಡಿದ್ದ ಹೆಚ್.ಎಂ.ಟಿ. ಕೈಗಡಿಯಾರ ಕಾರ್ಖಾನೆ ಇಂದು ಖಾಸಗೀಕರಣದ ಉತ್ತೇಜನದಿಂದ ನಾಶವಾಗಿದೆ ಇದರಿಂದ ಸಾಮಾಜಿಕ ಭದ್ರತೆ, ಉದ್ಯೋಗ ಭದ್ರತೆ ಇಲ್ಲದಂತಾಗಿದೆ ಕನಿಷ್ಠ ವೇತನವಿಲ್ಲದೆ ದುಡಿಯುತ್ತಿದ್ದ ಪೌರಕಾರ್ಮಿಕರಿಗೆ ಕನಿಷ್ಠ ಕೂಲಿ ಜಾರಿಗೆ ಆಗ್ರಹಿಸಿ ಸಂಘ ಸುಮಾರು ೨೦ ವರ್ಷಗಳಿಂದ ನಿರಂತರ ಹೋರಾಟದ ಭಾಗವಾಗಿ ಪೌರಕಾರ್ಮಿಕರಿಗೆ ೧೮ ಸಾವಿರ ಕನಿಷ್ಠ ಕೂಲಿ ಜಾರಿಗೆ ಕೋರ್ಟ್ ಆದೇಶ ನೀಡಿದರೆ ಅವರನ್ನು ಗುತ್ತಿಗೆ ಆಧಾರದಲ್ಲಿ ದುಡಿಸಿಕೊಳ್ಳುವ ಕೆಲಸಕ್ಕೆ ದೂಡುತ್ತಿದೆ. ಜಿಡಿಪಿಯಲ್ಲಿ ಸಾಮಾಜಿಕ ಕಲ್ಯಾಣಕ್ಕಾಗಿ ಮೀಸಲಿಡುತ್ತಿದ್ದ ಶೇ. ೮ ರಷ್ಟು ಹಣದಲ್ಲಿ ಕೇವಲ ಶೇ.೨ ಕ್ಕೆ ಬಂದು ನಿಂತಿದೆ. ಇದರಿಂದ ಶಿಕ್ಷಣ, ಆರೋಗ್ಯ, ಸೇರಿದಂತೆ ಹಲವು ವಿಭಾಗಗಳು ಸಾಮಾನ್ಯ ಜನರಿಗೆ ಕೈಗೆ ಸಿಗದಂತಾಗಿದೆ ಎಂದರು
ಇಂದು ಪ್ರತಿಯೊಂದ ಕೆಲಸಕ್ಕೂ ಪ್ರತಿಯೊಂದ ಯೋಜನೆಗೆ ಸ್ಮಾರ್ಟ್ ಪೋನ್ ಅಗತ್ಯವಾಗಿ ಬೇಕಾಗಿದೆ ಆದರೆ ಇದೇ ಸ್ಮಾರ್ಟ್ ಪೋನ್ ಇದ್ದರೆ ಬಡವನ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ. ಒಂದು ಕಾಲದಲ್ಲಿ ಹಲವು ಜನರಿಗೆ ಉದ್ಯೋಗ ನೀಡಿದ್ದ ಬಿಪಿಎಲ್ ಟಿವಿ ಇಂದು ಹೇಳಲು ಹೆಸರಿಲ್ಲದಂತಾಗಿದೆ ಬೇರೆ ದೇಶದ ವಸ್ತುಗಳಿಗೆ ಭಾರತದ ಲೆಬಲ್ ಹಾಕಲಾಗುತ್ತಿದ್ದೆ ಸಂವಿಧಾನ ನೀಡಿರುವ ಬದುಕುವ ಹಕ್ಕಿನ ಉಳಿವಿಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಕಾರ್ಮಿಕರಿಗೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್‌ಮುಜೀಬ್ ಜನರನ್ನು ಭಾವನಾತ್ಮಕವಗಿ ವಿಭಜನೆಯ ಮೂಲಕ ಧ್ವೇಷ ಬೆಳೆಸಿ ಜನರಮೂಲಭುತವದ ಉದ್ಯೋಗ, ಬಡತನ, ಅಪೌಷ್ಠಿಕತೆ, ವಸತಿ, ಮಹಿಳೆಯರ ಮತ್ತುದಲಿತರ ಮೇಲಿನ ದೌರ್ಜನ್ಯ, ಬೆಲೆ ಏರಿಕೆಸೇರಿದಂತೆ ಮುಂತಾದ ಜ್ವಲಂತ ಸಮಸ್ಯೆಗಳನ್ನು ಮರೆಮಾಚಲಾಗುತ್ತಿದೆ. ಶ್ರಮ ಶಕ್ತಿಯನ್ನು ಅಪಮಾನಿಸಲಾಗುತ್ತಿದ್ದು ದುಡಿಯುವ ಜನರು ಇದರ ವಿರುದ್ದಸಂಘಟಿತರಾಗಿ ಮೇ ೨೦ ರಂದು ನಡೆಯುವ ಅಖಿಲ ಭಾರತ ಮುಷ್ಕರವನ್ನು ಯಶಸ್ವಿಗೊಳಿಸಲು ಆಗ್ರಹಿಸಿದರು. ಸಿಐಟಿಯು ಜಿಲಾ ್ಲಕಾರ್ಯದರ್ಶಿ ಜಿ.ಕಮಲ, ಎ. ಲೋಕೇಶ್. ಹೆಚ್.ಡಿ.ನಾಗೇಶ್, ಬಿ.ಉಮೇಶ್, ಗುಲ್ಜಾರ್‌ಭಾನು, ನಾಗರಾಜು, ಅನಸೂಯ ಮಹಿಳಾ ಸಂಘಟನೆಯ ಮುಖಂಡರಾದ ಕಲ್ಪನ, ಶಿವಕುಮರಸ್ವಾಮಿ, ಕೊಳಗೇರಿ ಸಂಘಟನೆಯ ಎ. ನರಿಂಹಮೂರ್ತಿ, ಸ್ಟಾö್ಯನ್ಲಿ ಸುಕುಮಾರ್, ಮಧುಸೂದನ್, ವಸೀಂಅಕ್ರA, ಇಂತು, ಗಣಪತಿ, ಮಂಜುನಾಥ್, ಶ್ರೀನಿವಾಸ್, ಮಹೇಶ್, ಗಂಗಮ್ಮ, ಸೇರಿದಂತೆ ಇತರರು ಉಪಸ್ಥಿತರಿದ್ದರು. ಖಲೀಲ್ ಸ್ವಾಗತಿಸಿ ಎನ್.ಕೆ.ಸುಬ್ರಮಣ್ಯ ನಿರೂಪಿಸಿ ಎ.ಲೋಕೇಶ್ ವಂದಿಸಿದರು. ಪುಷ್ಪ ಮತ್ತು ಸಂಗಡಿಗರು ಕ್ರಾಂತಿಗೀತೆಗಳನ್ನು ಹಾಡಿದರು. ರಂಗಧಾಮಯ್ಯ, ಸುಜೀತ್, ಪುಷ್ಪ, ಆಧಿಲಕ್ಷಿö್ಮÃ, ನಾಗಸುಂದರರವರ ನೇತೃತ್ವದಲ್ಲಿ ನಡೆದ ವಿವಿದ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

(Visited 1 times, 1 visits today)
tumkur
Previous Articleಎಸ್‌ಎಸ್‌ಎಲ್‌ಸಿಯ ಫಲಿತಾಂಶ: ಹರಿಪ್ರಿಯಾಳ ಉತ್ತಮ ಸಾಧನೆ
Next Article ದೇವಾಲಯ ಜೀರ್ಣೋದ್ಧಾರಕ್ಕೆ ಭಕ್ತರ ಸಹಕಾರ ಅಗತ್ಯ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.