ತುಮಕೂರು: ನಗರದ ಮಹಾಲಕ್ಷ್ಮಿ ಬಡಾವಣೆ ವಾಸಿ ಶಿವಣ್ಣ ಟೈರ್ಸ್ ಮಾಲಿಕರಾದ ಕಾರ್ತಿಕ್ ರವರ ಕಟ್ಟಡ ಕಾರ್ಮಿಕರ ಶೆಡ್ ನಲ್ಲಿ ಕಾಣಿಸಿಕೊಂಡ ೪೩ ಕೊಳಕುಮಂಡಲ (ರಸೆಲ್ಸ್ ವೈಪರ್) ಮರಿಗಳು ಹಾಗೂ ೪ ಅಡಿ ಉದ್ದದ ತಾಯಿ ಕೊಳಕುಮಂಡಲ ಹಾವು ಕಾಣಿಸಿಕೊಂಡಿದೆ.
ಈ ಹಾವುಗಳು ನವೆಂಬರ್ ಡಿಸೆಂಬರ್ ನಲ್ಲಿ ಮಿಲನಗೊಂಡು ಪೂರ್ವ ಮುಂಗಾರು ಸಮಯದಲ್ಲಿ ಸಂತಾನೋತ್ಪತಿ ಮಾಡುತ್ತವೆ. ಕೊಳಕುಮಂಡಲ ಹಾವುಗಳು (ಔvoviviಠಿಚಿಡಿous) ಅಂದರೆ ತಾಯಿಯ ದೇಹದೊಳಗೆ ಮೊಟ್ಟೆಗಳು ಬೆಳೆದು ಹೊಟ್ಟೆ ಒಳಗಿನಿಂದಲೆ ಜೀವಂತ ಮರಿಗಳು ಹೊರಬಂದಿವೆ.
ಈ ವಿಷಯ ತಿಳಿದ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ (ವಾರ್ಕೊ) ಉರಗ ರಕ್ಷಕರಾದ ಚಂದನ್, ಮನು ಅಗ್ನಿವಂಶಿ ಮತ್ತು ಕಾರ್ತಿಕ್ ಸಿಂಗ್ ರವರು ಸುರಕ್ಷಿತವಾಗಿ ಹಾವಿನ ಮರಿಗಳನ್ನು ರಕ್ಷಸಿ ಸಮೀಪದ ದೇವರಾಯನ ದುರ್ಗಾ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ತುಮಕೂರು ನಗರ ಹಾಗೂ ಹೊರವಲಯಗಳಲ್ಲಿ ಈ ಪ್ರಕ್ರಿಯೆ ಪ್ರಸ್ತುತ ಪ್ರಾರಂಭವಾಗಿದ್ದು ಸಾರ್ವಜನಿಕರು ಹೆಚ್ಚು ಜಾಗೃತವಾಗಿರಬೇಕು, ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಸಂಜೆ ಕತ್ತಲು ಸಮಯದಲ್ಲಿ ಟಾರ್ಚ್ ಬಳಸಿ ಹಾಗೂ ಶೂ ಗಳನ್ನು ಧರಿಸುವ ಮುನ್ನ ಪರೀಕ್ಷಿಸಬೇಕಿದೆ.

(Visited 1 times, 1 visits today)