ಕೊರಟಗೆರೆ:  ತುಮಕೂರು ಪಟ್ಟಣದಲ್ಲಿ ಮೇ ೧೩ ರಂದು ನಡೆಯುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ನವರ ೭೫ನೇ ಜನ್ಮದಿನದ ಅಮೃತ್ಸವ ಕಾರ್ಯಕ್ರಮದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರöಮವನ್ನು ಅದ್ದೂರಿಯಾಗಿ ಆಚರಿಸಲ್ಲಿದ್ದು ಸಚಿವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಧನ್ಯ ಕುಮಾರ್ ಮನವಿ ಮಾಡಿದ್ದಾರೆ.
ಅವರು ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗಗಳ ಜನಾಂಗದವರು ತಿರ್ಮಾನದಂತೆ ಮೇ.೧೩ ರಂದು ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ತುಮಕೂರು ನಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನವಾಗಿದ್ದು ಕಲ್ಪತರು ನಾಡು ತುಮಕೂರು ಜಿಲ್ಲೆಯ ರೈತರು ಸೇರಿದಂತೆ, ಸಾಮಾಜಿಕ, ಸಹಕಾರ ವಲಯದ ಸಮಗ್ರ ಅಭಿವೃದ್ದಿಗೆ ಬದ್ದತೆಯಿಂದ ತೊಡಗಿಸಿಕೊಂಡಿರುವ ಜನಪ್ರಿಯ ನಾಯಕ ಸಹಕಾರ ರಂಗದ ಪ್ರತಿಷ್ಠಿತ ಸಹಕಾರ ರತ್ನ ಪುರಸ್ಕೃತರು, ಕರ್ನಾಟಕ ಸರ್ಕಾರದ ಸಹಕರ ಸಚಿವರಾದ ಕೆ.ಎನ್.ರಾಜಣ್ಣ ನವರು ೭೫ನೇ ವರ್ಷಕ್ಕೆ ಕಾಲಿರಿಸಿದ್ದಾರೆ, ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಬೆಳ್ಳಾವಿ ಶಾಸಕರಾಗಿ, ಪ್ರಸ್ತುತ ಎರಡನೇ ಅವಧಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಕೆ.ಎನ್.ರಾಜಣ್ಣ ನವರ ಸೇವೆ ಬಹಳ ಅಪಾರ ಎಂದು ತಿಳಿಸಿದರು.
ತುಮಕೂರು ಡಿಸಿಸಿ ಬ್ಯಾಂಕ್‌ನಲ್ಲಿ ಕಳೆದ ೩ ದಶಕಗಳಿಂದ ಅಧ್ಯಕ್ಷರಾಗಿ ಜಿಲ್ಲೆಯ ರೈತರ ಹಿತೈಷಿಯಾಗಿ ಅತ್ಯುತ್ತಮ ಸಹಕಾರ ನೀಡುತ್ತಿದ್ದಾರೆ, ನೇರ ನಡೆ ನುಡಿಯ ಕೆ.ಎನ್. ರಾಜಣ್ಣ ರವರು ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ರೈತರ ಅಬಲರ, ಶೋಷಿತರ ಹಾಗೂ ಎಲ್ಲಾ ಜಾತಿಯಲ್ಲಿರುವ ಬಡವರ ಏಳಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ, ಮಾಜಿ ಪ್ರದಾನಿ ಇಂದಿರಾ ಗಾಂಧಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಹಾಗೂ ಬಂಗಾರಪ್ಪ ಮತ್ತು ಪ್ರಚಲಿತ ರಾಜಕಾರಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರುಗಳ ಆದರ್ಶದಂತೆ ಸಮಾಜ ಸೇವೆ ಹಾಗೂ ಬಡ ಕುಟುಂಬಗಳ ನಿರುದ್ಯೋಗಿ ವಿದ್ಯಾವಂತರಿಗೆ ಉದ್ಯೋಗ ಮತ್ತು ಸಮಾಜದ ಬಗ್ಗೆ ಕಳಕಳಿ ಇರುವ ಯುವ ನಾಯಕರನ್ನು ಸೃಷ್ಟಿಸುವಲ್ಲಿ ಹೆಚ್ಚು ಶ್ರಮಿಸುತ್ತಿರು ವುದರೊಂದಿಗೆ ಸಹಕಾರ ಕ್ಷೇತ್ರದ ಬಲವರ್ಧನೆಗೆ ತಮ್ಮ ದುರದೃಷ್ಠಿ ಚಿಂತನೆಗಳೊAದಿಗೆ ಹಲವು ಸಾಮಾಜಿಕ ಆರ್ಥಿಕ ಬೆಳವಣಿಗೆಗೆ ಬದ್ದರಾಗಿದ್ದಾರೆ ಎಂದು ತಿಳಿಸಿದರು.
ಪ.ಪಂ.ಸದಸ್ಯ ಹಾಗೂ ಕೆಪಿಸಿಸಿ ಸದಸ್ಯ ಎ.ಡಿ.ಬಲರಾಮಯ್ಯ ಮಾತನಾಡಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ನವರ ೭೫ನೇ ಜನ್ಮದಿನವನ್ನು ಬಹಳ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಗಿದ್ದು ಕೊರಟಗೆರೆ ತಾಲೂಕಿನಿಂದ ಪಕ್ಷಾತೀತವಾಗಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದ್ದರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ ಕೆ.ಎನ್.ರಾಜಣ್ಣ ರವರು ಕಳೆದ ೫೦ ವರ್ಷಗಳಿಂದ ಸಾಮಾಜಿಕ, ಸಹಕರ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸಿ ಅವರ ಬದುಕಿನ ಸಾರ್ಥಕತೆಯ ೭೫ನೇ ಜನ್ಮದಿನದ ಅಂಗವಾಗಿ ತುಮಕೂರು ಜಿಲ್ಲೆಯ ಆತ್ಮೀಯ ಅಭಿಮಾನಿಗಳು, ಹಿತೈಷಿಗಳು ಬಿಡುಗಡೆ ಗೊಳಿಸುತ್ತಿರುವ ಕೆ.ಎನ್. ಆರ್.ಅಭಿನಂದನಾ ಗ್ರಂಥ ಬಿಡುಗಡೆ ಮಾಡುತ್ತಿರುವುದು ಅಭಿನಂದನಾರ್ಹವಾಗಿದೆ ಎಂದರು.
ಕಾರ್ಯದರ್ಶಿ ಶಿವಣ್ಣ ಮಾತನಾಡಿ ಮೇ.೧೩ ನಡೆಯುವ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ಸಹಾಯಕ ರೈಲ್ವೇ ಮತು ಜಲಶಕ್ತಿ ಸಚಿವ ವಿ.ಸೋಮಣ್ಣ, ಸೇರಿದಂತೆ ರಾಜ್ಯ ಸರ್ಕಾರದ ಸಚಿವರುಗಳು ಜಿಲ್ಲೆಯ ಎಲ್ಲಾ ಶಾಸಕರುಗಳು ಹಾಗೂ ಹಿರಿಯ ನಾಯಕರು ಸೇರಿದಂತೆ ಸಹಕಾರಿ ಮುಖಂಡರುಗಳು, ಗಣ್ಯರು ಭಾಗವಹಿಸುವರು ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್, ಬೋರಣ್ಣ, ಮಂಜೇಶ್, ಶಾಂತಕುಮಾರ್, ಪುರುಷೋತ್ತಮ್, ಪವನ್‌ಕುಮಾರ್, ಆಂಜನೇಯುಲು, ರುದ್ರೇಶ್, ಅಶ್ವತ್ಥನಾರಾಯಣ್‌ರಾಜು, ಗಟ್ಲಹಳ್ಳಿ ಕುಮಾರ್, ವಿನಯ್‌ಕುಮಾರ್, ಕೇಶವಮೂರ್ತಿ, ಗೋವಿಂದರಾಜು, ಚಿಕ್ಕಣ್ಣ, ದಾಕ್ಷಾಯಿಣಿ, ದೊಡ್ಡಣ್ಣ, ಓಬಳರಾಜು, ಶಶಿಕುಮಾರ್, ರಾಜೇಶ್‌ದೊಡ್ಡಮುನಿ, ಚಿನ್ನಿವೆಂಕಟಶೆಟ್ಟಿ, ಶಶಿಕುಮಾರ್, ಮಂಜುನಾಥ್, ಗೌರಿಶಂಕರ್, ಆನಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
(Visited 1 times, 1 visits today)