BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಂವಿಧಾನ ದ್ರೋಹಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ
ತುಮಕೂರು

ಸಂವಿಧಾನ ದ್ರೋಹಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ

By News Desk BenkiyabaleUpdated:May 12, 2025 3:10 pm

ತುಮಕೂರು: ಸಂವಿಧಾನ ರಚನೆಯಾದಾಗಿನಿಂದ ಯಾರು ಸಂವಿಧಾನ ವಿರೋಧ ಮಾಡುತ್ತಿದ್ದರೋ ಅಂತಹ ಸಂವಿಧಾನ ದ್ರೋಹಿ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಅವರಿಂದು ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ತಿಪಟೂರು ಜನಸ್ಪಂದನ ಟ್ರಸ್ಟ್ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಡಿಗ್ರಿ ಕಾಲೇಜು ವಿದ್ಯಾಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಏರ್ಪಡಿಸಲಾಗಿದ್ದ ಸಂವಿಧಾನ ಅರಿವು ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಈಗ ನಮ್ಮ ಸಂವಿಧಾನವನ್ನು ರಕ್ಷಣೆ ಮಾಡಿ ಎಂದು ಕೇಳಿಕೊಳ್ಳುವಂತಹ ಪರಿಸ್ಥಿತಿ ಬಂದಿದೆ, ಸಂವಿಧಾನದಲ್ಲಿ ಸಮಾನತೆ ಕೊಟ್ಟಿರುವುದರಿಂದ ಒಂದು ಧರ್ಮದಂತೆ ಸಮಾಜ ನಡೆಯಬೇಕು ಎಂದು ಮನುವಾದ ಪ್ರತಿಪಾದಿಸುತ್ತಿದ್ದವರು ಈ ಸಂವಿಧಾನವನ್ನು ವಿರೋಧ ಮಾಡಿದರು. ಮನುಸ್ಮೃತಿ ಆಶಯದವರು ಕೆಲವರು ಮಾತ್ರ ವಿದ್ಯೆ, ಸಂಪತ್ತು, ಅಧಿಕಾರ ಅನುಭವಿಸಬೇಕು ಎಂದು ಸಮಾನತೆ ನೀಡದೆ ಲಿಂಗ ತಾರತಮ್ಯ ಇರಬೇಕು ಎಂದುಕೊAಡು ಸಂವಿಧಾನದ ಮೂಲ ಆಶಯಕ್ಕೆ ವಿರೋಧಿಗಳಾಗಿದ್ದಾರೆ ಎಂದರು.
ಸಂವಿಧಾನದಲ್ಲಿ ಜಾತ್ಯತೀತೆ ಹೇಳುತ್ತಿದ್ದು, ಸಮಾನವಾಗಿ ಬದುಕಬೇಕು ಎಂದು ಸಂವಿಧಾನ ಹೇಳಿದ್ದರೂ, ಒಂದು ಧರ್ಮ ಮಾತ್ರ ಬೇಕು ಎಂದು ಹೇಳಿದರೆ ಇತರೆ ಧರ್ಮದವರು ದ್ವಿತೀಯ ದರ್ಜೆ ಪ್ರಜೆಗಳಾಗಿ ಬದುಕಬೇಕಾಗುತ್ತದೆ, ಆದ್ದರಿಂದ ಸಂವಿಧಾನ ವಿರೋಧಿ ಶಕ್ತಿಗಳನ್ನು ವಿರೋಧಿಸಬೇಕು ಎಂದು ಹೇಳಿದರು.
ಒಂದು ದೇಶ ನಡಯಬೇಕೆಂದರೆ ಒಂದು ಚೌಕಟ್ಟಿರಬೇಕು, ಆ ಚೌಕಟ್ಟೇ ಸಂವಿಧಾನವಾಗಿದ್ದು, ಭಾರತ ದೇಶ ಹಲವು ಜಾತಿ, ಧರ್ಮಗಳನ್ನು ಹೊಂದಿರುವAತಹ ದೇಶ, ಈ ಹಿನ್ನೆಲೆಯಲ್ಲಿ ಎಲ್ಲಾ ತಾರತಮ್ಯಗಳನ್ನು ಒಗ್ಗೂಡಿಸಿಕೊಂಡು ವಿಶ್ವಾಸದಿಂದ ಬದುಕಲು ಸಂವಿಧಾನದಿAದ ಮಾತ್ರ ಸಾಧ್ಯ, ಸಂವಿಧಾನ ಒಂದು ದೇಶವನ್ನು ಸಮಾನತೆಯಿಂದ ನಡೆಸುವಂತಹವುದು, ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರಿಗೂ ಸಂವಿಧಾನದ ಅರಿವು ಅಗತ್ಯವಿದೆ ಎಂದು ಹೇಳಿದರು.
ಕಾರ್ಯಗಾರದ ಅಧ್ಯಕ್ಷತೆ ವಹಿಸಿದ್ದ ಹಿಂದುಳಿದ ವರ್ಗಗಳ ಅಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ಧ್ವಾರಕನಾಥ್ ಅವರು ಮಾತನಾಡಿ ನಾವೆಲ್ಲಾ ಎಂತಹ ಕರ್ಮಟ ವ್ಯವಸ್ಥೆಯಲ್ಲಿದ್ದೆವು ಎಂದರೆ ಹೆಣ್ಣು ಮಕ್ಕಳು ಮತ್ತು ದಲಿತ ಸಮುದಾಯದವರನ್ನು ಅಸ್ಪೃಶ್ಯರು ಎಂದು ನೋಡುತ್ತಿದಂತಹ ದೇಶದಲ್ಲಿದ್ದೆವು, ಅಂಬೇಡ್ಕರ್ ಬ್ರಿಟನ್ ಗೆ ದುಂಡು ಮೇಜಿನ ಪರಿಷತ್ ಸಭೆಗೆ ಹೋಗಿದ್ದಾಗ, ಬ್ರಿಟನ್ ಸರ್ಕಾರ ನಿಮ್ಮ ಅಜೆಂಡವೇನು ಎಂದು ಕೇಳಿದಾಗ, ಹೆಣ್ಣು ಮಕ್ಕಳಿಗೆ ಮತದಾನದ ಹಕ್ಕು ನೀಡುವುದು ಎಂದು ಹೇಳಿದಾಗ ಆಗ ಅಂಬೇಡ್ಕರ್ ಭಾರತದ ಹೆಣ್ಣು ಮಕ್ಕಳಿಗೆ ಮತದಾನದ ಹಕ್ಕು ಕೇಳುತ್ತಿದ್ದಾರೆಂದು ಬ್ರಿಟನ್ ಸರ್ಕಾರ ಮಹಿಳೆಯರಿಗೆ ಮತದಾನದ ಹಕ್ಕನ್ನು ತರಾತುರಿಯಲ್ಲಿ ನೀಡಿತು ಎಂದರು.
೧೯೪೭ ನವೆಂಬರ್ ೨೭ರಂದು ಆರ್ಗನೈಸ್ ಎಂಬ ಪತ್ರಿಕೆಯೊಂದು ಈ ಸಂವಿಧಾನ ಇನ್ನೂ ತೇಲಾಡುತ್ತಾ ಇದೆ ಎಂದು ಬರೆಯುತ್ತದೆ, ಆಗ ಅಂಬೇಡ್ಕರ್ ಅವರು ಹೌದು ಈ ಸಂವಿಧಾನ ತೇಲಾಡುವ ಸಂವಿಧಾನ ಇರಬಹುದು ಅದಕ್ಕೊಬ್ಬ ನಿರ್ದೇಶಕ ಇದ್ದಾನೆ, ಅದಕ್ಕೊಂದು ಗುರಿ ಇದೆ ಎಂದು ಉತ್ತರ ನೀಡುತ್ತಾರೆ ಎಂದು ಹೇಳಿದರು. ,
ಈಗ ಜಾತಿ ಸಮೀಕ್ಷೆ ಮತ್ತು ಗ್ಯಾರಂಟಿ ಯೋಜನೆಗಳ ಬಗ್ಗೆ ತುಂಬಾ ಚರ್ಚೆಗಳು ವಿರೋಧಗಳು ನಡೆಯುತ್ತಿದ್ದು, ಜಾತಿ ಸಮೀಕ್ಷೆಯನ್ನು ಮಾಡುವುದರಿಂದ ಜಾತಿ ಹೆಚ್ಚಾಗುತ್ತಾ ಎಂದು ಪ್ರಶ್ನಿಸಿದ ಅವರು, ಪ್ರತಿ ವರ್ಷ ಹುಲಿ, ಚಿರತೆಗಳನ್ನು ಸಮೀಕ್ಷೆ ಮಾಡುತ್ತಾರೆ, ಅವುಗಳ ಸಂಖ್ಯೆ ಜಾಸ್ತಿಯೇನು ಆಗಿಲ್ಲ, ಜಾತಿ ಸಮೀಕ್ಷೆ ಮಾಡುವುದು ಏಕೆಂದರೆ ಒಂದು ಸವಲತ್ತು ನೀಡಬೇಕಾದರೆ, ತಳ ಸಮುದಾಯಗಳಿಗೆ ಪ್ರಾತಿನಿಧ್ಯ ಕೊಡಬೇಕು, ಸಂವಿಧಾನದ ಆಶಯವು ಇದೇ ಆಗಿದೆ, ಆದರೆ ಸಂವಿಧಾನ ಎಂದ ಕೋಡಲೇ ಕೆಲವರಿವರಿಗೆ ದಲಿತರಿಗೆ ಮೀಸಲಾತಿ ಕೊಡುವುದು ಎಂಬ ಪೂರ್ವಗ್ರಹವಿತ್ತು, ಆದರೆ ಅಂಬೇಡ್ಕರ್, ಆರ್ಥಿಕವಾಗಿ ಹಿಂದುಳಿದವರಿಗೆ, ಹಿಂದುಳಿದ ವರ್ಗಗಳಿಗೆ, ಸಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಹೇಳಿದ್ದಾರೆ.

ಸಂವಿಧಾನದಲ್ಲಿ ಒಳಮೀಸಲಾತಿಗೆ ಬಗ್ಗೆ ಹೇಳಿಲ್ಲ ಎಂದು ಬಹಳ ಜನ ಹೇಳುತ್ತಾರೆ, ಒಳ ಮೀಸಲಾತಿ ಏಕೆ ಬೇಕಿದೆ ಎಂದರೆ ಮೀಸಲಾತಿ ಪಡೆದುಕೊಂಡವರಲ್ಲಿ ದೊಡ್ಡ ಸಮುದಾಯಗಳು ಅತಿ ಹೆಚ್ಚು ಪಾಲನ್ನು ಪಡೆದುಕೊಂಡಿದ್ದು, ಅತಿ ಸಣ್ಣ ಸಮುದಾಯಗಳು ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಿಲ್ಲದಿರುವುದರಿಂದ ಒಳಮೀಸಲಾತಿ ಕೊಡಬೇಕಾಗಿದೆ ಎಂಬುದು ಸಂವಿಧಾನದ ಆಶಯವಾಗಿದೆ ಎಂದು ಹೇಹೇಳಿದರು.
ಮೇಲ್ಜಾತಿಯವರಿಗೆ ಬುದ್ದಿವಂತಿಕೆ ಮೆದುಳಿನಲ್ಲಿದ್ದರೆ, ಕೆಳ ಸಮುದಾಯಗಳಿಗೆ ಬುದ್ದಿ ಇರುವುದು ಬೆರಳ ತುದಿಗಳಲ್ಲಿ ಕಂಬಳಿ ನೇಯುವವರು, ಕುಂಬಾರಿಕೆ, ಕಮ್ಮಾರಿಕೆ, ಕ್ಷೌರಿಕ ವೃತ್ತಿ, ಮಡಿವಾಳ ವೃತ್ತಿಗಳು ಅತ್ಯಂತ ಉತ್ತಮ ಕೆಲಸಗಳು ಇವುಗಳನ್ನು ಕೀಳು ಕೆಲಸಗಳೆಂದು ಭಾವಿಸಿ ಕೈಗಾರಿಕೆಗಳನ್ನು ತಂದು ಈ ಜನ ಸಮುದಾಯದ ವೃತ್ತಿಗಳನ್ನು ಕಳೆದು ಒಂದು ಮಾನವ ಸಂಬAಧದ ವಿಶ್ವಾಸವನ್ನು ಕಳೆದುಕೊಳ್ಳುವಂತಾಯಿತು, ಭಾದ್ದಿಕತೆಗೆ ಮಾತ್ರ ಮೀಸಲಾತಿ ಕೊಟ್ಟರು, ಆದರೆ ಕುಲ ಕಸುಬುಗಳ ಬುದ್ದಿವಂತಿಕೆಗೆ ಮೀಸಲಾತಿ ಸಿಗಲಿಲ್ಲ ಎಂದು ವಿಷಾಧಿಸಿದರು.
ಸರ್ಕಾರ ಕೊಟ್ಟಿರುವ ಗ್ಯಾರಂಟಿಗಳ ಬಗ್ಗೆ ಬಿಟ್ಟಿ ಚಾಕರಿ ಯೋಜನೆಗಳು ಎಂದು ಕೆಲವರು ಜರಿಯುತ್ತಾರೆ, ಸಂವಿಧಾನದ ೩೮ ಮತ್ತು ೩೮ಎ ಪರಿಚ್ಛೇದದ ಪ್ರಕಾರ ಎಲ್ಲಾರಿಗೂ ಆರ್ಥಿಕ ಮತ್ತು ಸಾಮಾಜಿಕ ಸಮಾನತೆ ನೀಡಬೇಕೆಂದಿದೆ, ದೇಶದಲ್ಲಿ ಎಲ್ಲಾರ ಆಧಾಯ ಸಮಾನವಾಗಿಲ್ಲ, ಅದಾನಿಯ ಆದಾಯ ಒಂದು ದಿನಕ್ಕೆ ೧೬೦೦ ಕೋಟಿಯಾದರೆ ಒಬ್ಬ ಸಾಮಾನ್ಯ ಮನುಷ್ಯನ ಆದಾಯ ೭೫ ರೂಪಾಯಿಗಳು, ಈ ಅಸಮಾನತೆಯನ್ನು ಹೇಗೆ ಸರಿದೂಗಿಸುವುದು, ಈ ತಾರತಮ್ಯ ಹೋಗಲಾಡಸಿ ಸಮಾನತೆ ತರುವ ನಿಟ್ಟಿನಲ್ಲಿ ಅಕ್ಕಿ, ಹಣ ಕೊಡುವ ಯೋಜನೆಗಳನ್ನು ಸರ್ಕಾರ ತಂದಿತು, ಗ್ಯಾರಂಟಿ ಯೋಜನೆಗಳನ್ನು ಸಂವಿಧಾನದತ್ತವಾಗಿ ಕೊಡುತ್ತಿರುವುದೇ ವಿನಃ ಯಾವುದೇ ಸರ್ಕಾರ, ಸಿದ್ದರಾಮಯ್ಯ ಕೊಡುತ್ತಿರುವುದಲ್ಲ ಯಾರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಸಮಾನತೆಗೊಳಗಾಗಿದ್ದಾರೋ ಅವರನ್ನು ಇತರರ ಜೊತೆ ತೆಗೆದುಕೊಂಡು ಹೋಗಲು ತಂದಿರುವ ಯೋಜನೆಗಳು ಎಂದು ಅಭಿಪ್ರಾಯ ಪಟ್ಟರು.
ಜನಸ್ಪಂದನ ಟ್ರಸ್ಟ್ ಅಧ್ಯಕ್ಷರಾದ ಸಿ.ಬಿ.ಶಶಿಧರ್(ಟೂಡಾ) ಪ್ರಾಸ್ತಾವಿಕ ಮಾತಗಳನ್ನಾಡಿದರು.
ಸಭೆಯಲ್ಲಿ ತುಮಕೂರು ವಿ.ವಿ.ಯ ಉಪಕುಲಪತಿಗಳಾದ ಎಂ.ವೆAಕಟೇಶ್ವರಲು, ಸಿ.ಜೆ.ಲಕ್ಷಿö್ಮÃಪತಿ, ಬೆಂಗಳೂರು ವಿ.ವಿ. ಕುಲಸಚಿವರಾದ ರಮೇಶ್, ಎಸ್.ನಾಗಣ್ಣ ಉಪಸ್ಥಿತರಿದ್ದರು.

 

(Visited 1 times, 1 visits today)
tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು
Previous Articleವೆಂಕಟಾಪುರ ಗ್ರಾಪಂನಲ್ಲಿ ಅಭಿವೃದ್ಧಿ ಕುಂಟಿತ: ಆರೋಪ
Next Article ದುಷ್ಟರ ಸಂಹಾರಕ್ಕಾಗಿ ಸೋಮೇಶ್ವರ ದೇವಾಲಯದಲ್ಲಿ ಹೋಮ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.