BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಜಕೀಯ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ರಾಜಮಾರ್ಗ
  • ದುಷ್ಟರ ಸಂಹಾರಕ್ಕಾಗಿ ಸೋಮೇಶ್ವರ ದೇವಾಲಯದಲ್ಲಿ ಹೋಮ
  • ಸಂವಿಧಾನ ದ್ರೋಹಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ
  • ವೆಂಕಟಾಪುರ ಗ್ರಾಪಂನಲ್ಲಿ ಅಭಿವೃದ್ಧಿ ಕುಂಟಿತ: ಆರೋಪ
  • ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ
  • ಭಾರತ-ಪಾಕಿಸ್ತಾನ ಯುದ್ಧ ಸಂದರ್ಭ
  • ಜಿಲ್ಲೆಯ ಅತಿ ಸೂಕ್ಷö್ಮ ಪ್ರದೇಶಗಳಲ್ಲಿ ಹಾಟ್ ಲೈನ್ ಸಹಾಯವಾಣಿ ಕೇಂದ್ರ ಸ್ಥಾಪನೆ: ಡಿಸಿ ಆದೇಶ
  • ‘ಸಹಕಾರ ಸಂಸ್ಥೆಗಳಿಗೆ ಆತ್ಮವಿಶ್ವಾಸ, ಸದಸ್ಯರ ವಿಶ್ವಾಸ ಅಗತ್ಯ’
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದುಷ್ಟರ ಸಂಹಾರಕ್ಕಾಗಿ ಸೋಮೇಶ್ವರ ದೇವಾಲಯದಲ್ಲಿ ಹೋಮ
ಇತರೆ ಸುದ್ಧಿಗಳು

ದುಷ್ಟರ ಸಂಹಾರಕ್ಕಾಗಿ ಸೋಮೇಶ್ವರ ದೇವಾಲಯದಲ್ಲಿ ಹೋಮ

ಭಾರತೀಯ ಸೈನ್ಯಕ್ಕೆ ಹೆಚ್ಚಿನ ಶಕ್ತಿ ತುಂಬುವAತೆ ದೇವರಲ್ಲಿ ಶ್ರೀಗಳ ಪ್ರಾರ್ಥನೆ
By News Desk BenkiyabaleUpdated:May 12, 2025 3:11 pm

ತುಮಕೂರು: ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆ ಕೈಗೊಂಡಿರುವ ಆಪರೇಷನ್ ಸಿಂಧೂರವನ್ನು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ನಗರ ವೀರಶೈವ ಸಮಾಜದ ವತಿಯಿಂದ ಬೆಂಬಲಿಸಿ ನಗರದ ಭದ್ರಮ್ಮ ವೃತ್ತದಲ್ಲಿರುವ ಶ್ರೀ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಹೋಮ, ಹವನ ಹಾಗೂ ಪೂಜೆಯನ್ನು ನೆರವೇರಿಸಿ, ಭಾರತೀಯ ಸೈನ್ಯಕ್ಕೆ ಹೆಚ್ಚಿನ ಶಕ್ತಿ ತುಂಬುವAತೆ ಪ್ರಾರ್ಥಿಸಲಾಯಿತು.
ಶ್ರೀ ಸೋಮೇಶ್ವರ ದೇವಾಲಯದಲ್ಲಿ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಹಿರೇಮಠಾಧ್ಯಕ್ಷರಾದ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿಯ ಕಾರದ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ದೇಶದ ಒಳಿತಿಗಾಗಿ ಹೋರಾಡುತ್ತಿರುವ ಸೈನಿಕರ ಆರೋಗ್ಯಕ್ಕಾಗಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಲಾಯಿತು.
ದೇಶದ ಪ್ರಧಾನಮಂತ್ರಿ ಸೇರಿದಂತೆ ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬ ಸೈನಿಕರಿಗೂ ಆಯಸ್ಸು ಹಾಗೂ ಆರೋಗ್ಯ ಹಾಗೂ ಹೋರಾಡುವ ಶಕ್ತಿ ಕರುಣಸಲಿ ಎಂದು ಇದೇ ಸಂದರ್ಭದಲ್ಲಿ ದೇವರಲ್ಲಿ ಪ್ರಾರ್ಥಿಸಲಾಯಿತು.
ದುಷ್ಟರ ಸಂಹಾರಕ್ಕಾಗಿ ಮಹಾಗಣಪತಿ ಹೋಮ, ಜಯಾಧಿಹೋಮ, ಶೋಭ ರಹಿತ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಹೋಮದಲ್ಲಿ ಪಾಲ್ಗೊಂಡಿದ್ದ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಪಹಲ್ಗಾಮ್ ಪ್ರಕರಣದ ನಂತರ ಭಾರತ ದೇಶ ಒಂದು ದೃಢ ನಿರ್ಧಾರ ಕೈಗೊಂಡಿದೆ. ಅಮಾಯಕರನ್ನು ಅತ್ಯಂತ ಹೀನಾಯವಾಗಿ ಹತ್ಯೆ ಮಾಡಿರುವುದರ ವಿರುದ್ಧ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು, ಭಯೋತ್ಪಾದಕತೆಯನ್ನು ನಿರ್ಮೂಲನೆ ಮಾಡಲು ದೃಢ ನಿರ್ಧಾರ ಕೈಗೊಂಡಿರುವುದು ಉತ್ತಮ ಬೆಳವಣಿಗೆ ಎಂದರು.
ಭಾರತೀಯರೆಲ್ಲರೂ ಐಕ್ಯತೆಯಿಂದ ಹೋರಾಡಿ ಪಾಕಿಸ್ತಾನದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಬೇಕು. ಭಾರತ ಯಾವತ್ತೂ ಕೂಡ ಯಾರ ಮೇಲೆ ಆಕ್ರಮಣ ಮಾಡಿದ ದೇಶವಲ್ಲ. ಎಲ್ಲ ಕಡೆ ಶಾಂತಿ ಹಂಚುವAತಹ ದೇಶ ನಮ್ಮದು. ಯಾರ ಮೇಲೂ ಬಂಡೆತ್ತಿ ಹೋಗಿರುವ ಉದಾಹರಣೆ ಇತಿಹಾಸದಲ್ಲಿ ಇಲ್ಲ ಎಂದು ಹೇಳಿದರು.
ನಮ್ಮ ದೇಶ ಮೊನ್ನೆಯೂ ಸಹ ಭಯೋತ್ಪಾದನೆಯ ನೆಲೆಗಳನ್ನು ಧ್ವಂಸ ಮಾಡಿದೆಯಷ್ಟೇ, ಯಾವುದೇ ನಾಗರಿಕರಿಗೆ ತೊಂದರೆ ಮಾಡಿಲ್ಲ. ಆದರೂ ಪಾಕಿಸ್ತಾನ ಬುದ್ಧಿಯನ್ನು ಕಲಿಯದೇ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಇದು ಆ ದೇಶದ ನರಿ ಬುದ್ಧಿಯನ್ನು ತೋರ್ಪಡಿಸುತ್ತದೆ ಎಂದರು.
ಭಾರತದ ಹೆಮ್ಮೆ ಎಂದರೆ ನಮ್ಮ ಸೈನಿಕರು. ಹಗಲಿರುಳು ಹೋರಾಟ ಮಾಡುತ್ತಿದ್ದಾರೆ. ಅವರ ಹೋರಾಟ ಫಲ ನಾವಿಂದು ಶಾಂತಿಯಿAದ, ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದರು.
ಪ್ರಧಾನಮಂತ್ರಿಗಳು, ಗೃಹ ಸಚಿವರು, ರಕ್ಷಣಾ ಸಚಿವರು ಹಾಗೂ ಭಾರತೀಯ ಸೇನೆ ದಿಟ್ಟವಾಗಿ ಪಾಕಿಸ್ತಾನದ ದಾಳಿಯನ್ನು ಎದುರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.
ಹಿರೇಮಠಾಧ್ಯಕ್ಷರಾದ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪಾಕಿಸ್ತಾನದಲ್ಲಿ ನಂಬಿಕೆ, ವಿಶ್ವಾಸ, ಪ್ರಾಮಾಣಿಕತೆ, ಪಾದರ್ಶಕತೆ, ಕರುಣೆ, ದಯೆ ಎಂಬ ಪದಗಳಿಗೆ ಅರ್ಥವೇ ಇಲ್ಲ. ಭಯೋತ್ಪಾದಕರನ್ನು ಉತ್ಪಾದನೆ ಮಾಡುವಂತಹ ದೇಶ ಪಾಕಿಸ್ತಾನ. ಹಾಗಾಗಿ ಅವರ ಭಾಷೆಯಲ್ಲೇ ಉತ್ತರಿಸಬೇಕು ಎಂದರು.
ದೇಶದ ಮನೋಬಲ, ಆತ್ಮಸ್ಥೆöÊರ್ಯವನ್ನು ಹೆಚ್ಚಿಸುವುದಾಗಿ ನಾವೆಲ್ಲರೂ ಒಂದಾಗಬೇಕು. ನಾವೆಲ್ಲರೂ ದೇಶದ ಜತೆ, ಸೈನಿಕರ ಜತೆ ಇರಬೇಕು ಎಂದರು.
ಪಾಕಿಸ್ತಾನ ಬುದ್ಧಿ ಕಲಿಯುವ ದೇಶವಲ್ಲ. ಈ ದೇಶಕ್ಕೆ ವಿಶ್ವದಲ್ಲೇ ಮಾನ್ಯತೆ ಇಲ್ಲ. ಕದನ ವಿರಾಮ ಉಲ್ಲಂಘಿಸಿ ಮತ್ತೆ ದಾಳಿ ಮಾಡಿರುವುದರಿಂದ ಈ ದೇಶದ ಬಗ್ಗೆ ಅನುಕಂಪ ತೋರಬಾರದು. ಪಾಕಿಸ್ಥಾನದ ನರಿ ಬುದ್ಧಿಗೆ ಅಂತ್ಯ ಕಾಣಿಸಬೇಕು ಎಂದರು.
ಬೆಳ್ಳಾವಿ ಕಾರದ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ಮಾತನಾಡಿ, ಭಾರತ ಅತ್ಯಂತ ಪವಿತ್ರವಾದ ರಾಷ್ಟç. ನಮ್ಮ ರಾಷ್ಟçದಲ್ಲಿ ಹೆಣ್ಣಿಗೆ ಪ್ರಾತಿನಿಧ್ಯ ಕೊಟ್ಟಿದೆ. ನಾವೆಲ್ಲೂ ಭಾರತಾಂಬೆಯ ಮಕ್ಕಳು. ನಮ್ಮ ಹೆಣ್ಣು ಮಕ್ಕಳನ್ನು ಕೆಣಕಿದ ಪಾಕಿಸ್ತಾನದವರಿಗೆ ನಮ್ಮ ದೇಶದ ಶಕ್ತಿಯನ್ನು ಪ್ರಧಾನಿಗಳು, ರಕ್ಷಣಾ ಸಚಿವರು, ಗೃಹ ಸಚಿವರು ಹಾಗೂ ಸೈನಿಕರು ತೋರಿಸುತ್ತಿದ್ದಾರೆ ಎಂದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಎಸ್. ಪರಮೇಶ್ ಮಾತನಾಡಿ, ಡಾ. ಎಸ್. ಪರಮೇಶ್ ಮಾತನಾಡಿ, ಪಾಕಿಸ್ತಾನದವರು ನಮ್ಮ ದೇಶದ ಅಮಾಯಕರನ್ನು ಅವರ ಹೆಸರು, ಜಾತಿಯನ್ನು ಕೇಳಿ ಹೊಡೆದು ಕೊಂದರು. ಅದಕ್ಕೆ ಪ್ರತ್ಯುತ್ತರಾಗಿ ನಮ್ಮ ದೇಶದ ಪ್ರಧಾನಿಗಳು, ರಕ್ಷಣಾ ಸಚಿವರು, ಗೃಹ ಸಚಿವರು ಕಾರ್ಯತಂತ್ರನ್ನು ರೂಪಿಸಿ ಪಾಕಿಸ್ತಾನದ ಉಗ್ರನೆಲೆಗಳನ್ನು ಧ್ವಂಸ ಮಾಡಿದ್ದಾರೆ. ಇದಾದ ಬಳಿಕವೂ ಪಾಕ್ ದೇಶದ ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಈ ದಾಳಿಗೆ ನಮ್ಮ ದೇಶದ ಸೈನಿಕರು ದಿಟ್ಟ ಪ್ರತ್ಯುತ್ತರ ನೀಡುತ್ತಿದ್ದಾರೆ. ನಮ್ಮ ಸೈನಿಕರ ಒಳಿತಿಗಾಗಿ ಪ್ರಾರ್ಥಿಸಿ ಇಂದು ಸೋಮೇಶ್ವರ ದೇಗುಲದಲ್ಲಿ ಹೋಮ, ಹವನ, ಪೂಜೆಯನ್ನು ನೆರವೇರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಟಿ.ಸಿ. ಓಹಿಲೇಶ್ವರ್, ಮಂಜುನಾಥ್ ಬಾವಿಕಟ್ಟೆ, ದರ್ಶನ್ ಕೆ.ಎಲ್., ಕೊಪ್ಪಲ್ ನಾಗರಾಜು, ಮಹೇಶ್, ಪ್ರದೀಪ್, ಮಾಜಿ ಯೋಧ ನಾಗರಾಜು, ಸತ್ಯಮಂಗಲ ಜಗನ್ನಾಥ್ ಮತ್ತಿತರರು ಪಾಲ್ಗೊಂಡಿದ್ದರು.

 

(Visited 1 times, 1 visits today)
Previous Articleಸಂವಿಧಾನ ದ್ರೋಹಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ
Next Article ರಾಜಕೀಯ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ರಾಜಮಾರ್ಗ
News Desk Benkiyabale

Related Posts

ಜಿಲ್ಲೆಯ ಅತಿ ಸೂಕ್ಷö್ಮ ಪ್ರದೇಶಗಳಲ್ಲಿ ಹಾಟ್ ಲೈನ್ ಸಹಾಯವಾಣಿ ಕೇಂದ್ರ ಸ್ಥಾಪನೆ: ಡಿಸಿ ಆದೇಶ

May 12, 2025 3:05 pm ಇತರೆ ಸುದ್ಧಿಗಳು

ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್‌: ಡೀಸಿ ಖಡಕ್ ಸೂಚನೆ

May 10, 2025 3:39 pm ಇತರೆ ಸುದ್ಧಿಗಳು

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು

ರಾಜಕೀಯ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ರಾಜಮಾರ್ಗ

May 12, 2025 3:13 pm
ಇತರೆ ಸುದ್ಧಿಗಳು

ದುಷ್ಟರ ಸಂಹಾರಕ್ಕಾಗಿ ಸೋಮೇಶ್ವರ ದೇವಾಲಯದಲ್ಲಿ ಹೋಮ

May 12, 2025 3:11 pm
ತುಮಕೂರು

ಸಂವಿಧಾನ ದ್ರೋಹಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ

May 12, 2025 3:10 pm
ತುಮಕೂರು

ವೆಂಕಟಾಪುರ ಗ್ರಾಪಂನಲ್ಲಿ ಅಭಿವೃದ್ಧಿ ಕುಂಟಿತ: ಆರೋಪ

May 12, 2025 3:09 pm
ತುಮಕೂರು

ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ

May 12, 2025 3:08 pm
ತುಮಕೂರು

ಭಾರತ-ಪಾಕಿಸ್ತಾನ ಯುದ್ಧ ಸಂದರ್ಭ

May 12, 2025 3:06 pm
Our Youtube Channel
Our Picks

ದುಷ್ಟರ ಸಂಹಾರಕ್ಕಾಗಿ ಸೋಮೇಶ್ವರ ದೇವಾಲಯದಲ್ಲಿ ಹೋಮ

May 12, 2025 3:11 pm

ಜಿಲ್ಲೆಯ ಅತಿ ಸೂಕ್ಷö್ಮ ಪ್ರದೇಶಗಳಲ್ಲಿ ಹಾಟ್ ಲೈನ್ ಸಹಾಯವಾಣಿ ಕೇಂದ್ರ ಸ್ಥಾಪನೆ: ಡಿಸಿ ಆದೇಶ

May 12, 2025 3:05 pm

ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್‌: ಡೀಸಿ ಖಡಕ್ ಸೂಚನೆ

May 10, 2025 3:39 pm

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm

ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

May 08, 2025 2:08 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರಾಜಕೀಯ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ರಾಜಮಾರ್ಗ

By News Desk BenkiyabaleMay 12, 2025 3:13 pm

ತುಮಕೂರು: ರಾಜಕೀಯ ಅಧಿಕಾರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ರಾಜಮಾರ್ಗವಾಗಿದ್ದು, ರಾಜಕೀಯ ಅಧಿಕಾರಕ್ಕಾಗಿ ಅವಕಾಶ ವಂಚಿತ ಎಲ್ಲ ತಳಸಮುದಾಯಗಳು ಒಗ್ಗೂಡುವ…

ದುಷ್ಟರ ಸಂಹಾರಕ್ಕಾಗಿ ಸೋಮೇಶ್ವರ ದೇವಾಲಯದಲ್ಲಿ ಹೋಮ

May 12, 2025 3:11 pm

ಸಂವಿಧಾನ ದ್ರೋಹಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ

May 12, 2025 3:10 pm

ವೆಂಕಟಾಪುರ ಗ್ರಾಪಂನಲ್ಲಿ ಅಭಿವೃದ್ಧಿ ಕುಂಟಿತ: ಆರೋಪ

May 12, 2025 3:09 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.