BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ೧೨೦೦ಕೋಟಿ ಹಂಚಿಕೆ
ತುಮಕೂರು

ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ೧೨೦೦ಕೋಟಿ ಹಂಚಿಕೆ

ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಲು ಗೃಹ ಮಂತ್ರಿ ಜಿ.ಪರಮೇಶ್ವರ ಸೂಚನೆ
By News Desk BenkiyabaleUpdated:May 14, 2025 4:34 pm

ಚಿಕ್ಕನಾಯಕನಹಳ್ಳಿ :ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಹಾಗೂ ಗಣಿ ಬಾದಿತ ಪ್ರದೇಶಾಭಿವೃದ್ದಿ ಹಣದಲ್ಲಿ ತಾಲ್ಲೂಕಿಗೆ ಹಂಚಿಕೆಯಾಗಿರುವ ಹಣವನ್ನು ಸಮರ್ಪಕವಾಗಿ ಬಳಸಿ ಅಭಿವೃದ್ದಿ ಪಡಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಗೃಹ ಮಂತ್ತಿ ಜಿ.ಪರಮೇಶ್ವರ್ ತಿಳಿಸಿದರು.
ಪಟ್ಟಣದ ತೀನಂಶ್ರೀ ಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಮಾತನಾಡಿದ ಅವರು ಕೃಷಿ, ತೋಟಗಾರಿಕೆ ರೇಷ್ಮೆ , ಪಶು ಸಂಗೋಪನೆ ಇಲಾಖೆಗಳು ಸೇರಿದಂತೆ ಶಿಕ್ಷಣ ಇಲಾಖೆಗಳು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಲು ಸೂಚನೆ ನೀಡಿದ ಅವರು ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾಗಿರುವಂತಹ ಬಿತ್ತನೆ ಬೀಜ, ರಸಗೊಬ್ಬರದ ಸಮಸ್ಯೆ ಬಾರದಂತೆ ಕ್ರಮವಹಿಸವಂತೆ ತಿಳಿಸಿದರು, ಆಹಾರ ಇಲಾಖೆಯಿಂದ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಪ್ಪಿಸಲು ಕ್ರಮಕೈಗೊಳ್ಳುವಂತೆ ತಿಳಿಸಿದರು, ಈ ತಾಲ್ಲೂಕಿಗೆ ಭದ್ರಮೇಲ್ದಂಡೆ, ಎತ್ತಿನಹೊಳೆ, ಹೇಮಾವತಿ ಮೂರು ನೀರಾವರಿ ಯೋಜನೆಗಳಿದ್ದು ಅವುಗಳು ಸಮಪರ್ಕವಾಗಿ ಆಗಬೇಕಾಗಿದ್ದು ಈ ಬಗ್ಗೆ ಗಮನಹರಿಸುವಂತೆ ತಿಳಿಸಿ ಶಾಲೆಗಳ ಅಭಿವೃದ್ದಿಗೆ ೯೦ಕೋಟಿ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ೭೮ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆಯಾಗಿದ್ದು ಕೂಡಲೇ ಶಾಲೆಗಲ ಕಟ್ಟಡಗಳು ಸೇರಿದಂತೆ ಅಗತ್ಯವಾಗಿರುವಂತಹ ಕಾಮಗಾರಿಗಳನ್ನು ನಿಗದಿತಅವಧಿಯೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು, ತಾಲ್ಲೂಕಿಗೆ ಆರೋಗ್ಯ ಕ್ಷೇಮ ಕೇಂದ್ರಗಳಿಗೆ ಒಟ್ಟು ೬೫ಲಕ್ಷ ವೆಚ್ಚದಲ್ಲಿ ಒಟ್ಟು ೧೪ಕಾಮಗಾರಿಗಳು ಮಂಜೂರಾಗಿದ್ದು ಅವುಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು. ತಾಲ್ಲೂಕಿನಲ್ಲಿರುವ ನಿವೇಶನ ರಹಿತರು ಮನೆ ರಹಿತರಿಗೆ ಮನೆಗಳನ್ನು ನೀಡಲು ಸರ್ಕಾರ ಯೊಜನೆ ರೂಪಿಸಿದ್ದು ಅದಕ್ಕೆ ಕೂಡಲೇ ಮಾಹಿತಿ ಸಂಗ್ರಹಿಸಿ ಸರಿಯಾದಅಂಕಿ ಅಂಶಗಳನ್ನು ನೀಡುವಂತೆ ತಿಳಿಸಿದಅವರು ೧೫೦ಮನೆಗಳು ಈಗಾಗಲೇ ಗಣಿಹಣದಲ್ಲಿ ಮಂಜೂರಾಗಿದ್ದು ಪ್ರತಿಮನೆಗೆ ೭.೫ಲಕ್ಷ ಮಂಜೂರಾಗಿದ್ದು ಇದನ್ನು ಕೂಡಲೇ ಅನುಷ್ಠಾನಗೊಳಿಸಿ ಎಂದರು.
ಚುನಾವಣೆಗೆ ಮೊದಲು ಜನಸಮುದಾಯಕ್ಕಾಗಿ ನಮ್ಮ ಪ್ರಣಾಳಿಕೆಯನ್ನು ತಯಾರಿಸಿದ್ದು ನಾನೇ ಕೇಲವು ನಿರ್ದೀಷ್ಠ ಉದ್ದೇಶಗಳನ್ನೊಳಗೊಂಡು ಅದನ್ನು ಮಾಡಿದ್ದು ಬಡವರು ಬಡತನ ರೇಖೆಗಿಂತ ಮೇಲೆ ಬರಬೇಕೆಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಮದ್ಯಪ್ರದೇಶದಂತಹ ರಾಜ್ಯಗಳಲ್ಲಿ ಇನ್ನು ಅಭಿವೃದ್ದಿಯನ್ನು ಹೊಲಿಸಿದರೆ ನಾವು ಮುಂದೆಇದ್ದೇವೆ ಅನಿಸುತ್ತದೆ ಅದರೂ ಇನ್ನು ಕೇಲವು ತಾಲ್ಲೂಕುಗಳಲ್ಲಿ ನೀರು, ಶಿಕ್ಷಣ, ರಸ್ತೆ ವಿದ್ಯುತ್ ಸಮಸ್ಯೆಗಳಿವೆ ಅವುಗಳನ್ನು ಇನ್ನು ಬಗೆಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸೌಲಭ್ಯಗಳನ್ನು ನೇರವಾಗಿ ಸಮುದಾಯಗಳನ್ನು ತಲುಪಿಸಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಅದರ ಯಶಸ್ವಿಯಾಗುವ ಬಗ್ಗೆ ಕಾರ್ಯ ನಿರ್ವಹಿಸುವಂತಹ ಇಲಾಖೆಗಳಾದ ಕೃಷಿ ಇಲಾಖೆ, ತೋಟಗಾರಿಕೆ, ಪಶುಇಲಾಖೆ, ರೇಷ್ಮೆ, ಶಿಕ್ಷಣ, ಬೆಸ್ಕಾಂ, ಆಹಾರ ಇಲಾಖೆ ಗಳ ಪ್ರಗತಿಯ ಬಗ್ಗೆ ಪರಿಶಿಲೆನೆ ಮಾಡಿದ ಅವರು ಗಣಿಬಾದಿತ ಪ್ರದೇಶಾಭಿವೃದ್ದಿಯಿಂದ ಸಾಕಷ್ಟು ಹಣ ಇದ್ದು ಅಧಿಕಾರಿಗಳು ಉತ್ತಮವಾಗಿ ಸದ್ಬಳಕೆ ಮಾಡಿ ಅಭಿವೃದ್ದಿಕೆಲಸಗಳನ್ನು ಮಾಡಬೇಕಿದೆ ಇಂದು ತುಮಕೂರು ಜಿಲ್ಲೆ ಅಭಿವೃದ್ದಿ ಆಳತೆಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು ಅದು ಮೊದಲನೇ ಸ್ಥಾನಕ್ಕೆ ಬರಬೇಕಾದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು
ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕ ಸಿ.ಬಿ.ಸುರೇಶ್ ಬಾಬು ಕ್ಷೇತ್ರದಅಭಿವೃದ್ದಿ ಸೆರಿದಂತೆ ಆಗಲೇ ಬೇಕಾದಂತಹ ಯೋಜನೆಗಳ ಬಗ್ಗೆ ಉಸ್ತುವಾರಿ ಮಂತ್ರಿಗಳ ಬಳಿ ವಿವರಿಸಿ ಮಾತನಾಡಿ ತಾಲ್ಲೂಕಿಗೆ ಹರಿಯುತ್ತಿರುವಂತಹ ಹೇಮಾವತಿ ನಾಲೆಗೆ ಕಟ್ ಆಂಡ್ ಕವರ್ ಕಾಮಗಾರಿಗೆ ೧೫೦ಕೋಟಿ ಮಂಜೂರು ಮಾಡಬೇಕು ಹಾಗೂ ವೈದ್ಯಾಧಿಕಾರಿಗಳ ಹುದ್ದೆ ಖಾಲಿ ಇವೆ , ಇದರೊಂದಿಗೆ ಪಶು ಇಲಾಖೆಯ ಪಶು ಆಸ್ಪತ್ರೆಗಳನ್ನು ಮಂಜೂರು ಮಾಡಬೆಕು ಅದು ದಸೂಡಿ ಭಾಗಕ್ಕೆ ಮಂಜೂರು ಆಗಬೇಕು , ಕಂದಿಕೆರೆ ಭಾಗಕ್ಕೆ ಹೇಮಾವತಿ ನೀರು ಹರಿಸಬೇಕಾಗಿದೆ ಇದಕ್ಕೆ ಕೆಲವು ತಾಂತ್ರಿಕ ತೊಂದರೆಯಾಗಿದ್ದು ಅದನ್ನು ಸರಿಪಡಿಸಿ ಹಣ ಬಿಡುಗಡೆ ಮಾಡಬೇಕಾಗಿದ್ದು ಇದರಿಂದ ಚಿಕ್ಕನಾಯಕನಹಳ್ಳಿ, ನವಿಲೆ, ಕಂದಿಕೆರೆ ಭಾಗಕ್ಕೆ ನೀರು ಹರಿಸಬಹುದಾಗಿದೆ , ಹಾಗೂ ಕೆಎಸ್ ಆರ್ ಟಿಸಿ ಬಸ್ ಡಿಪೊ ಜಾಗಕ್ಕೆ ಸಂಬAಧಿಸಿದAತೆ ಜಾಗದ ಸಮಸ್ಯೆ ಇದ್ದು ಅದನ್ನು ಬಗೆಹರಿಸಬೆಕಿದೆ ಇದರೊಂದಿಗೆ ನಮ್ಮ ಸರ್ಕಾರಿ ಆಸ್ಪತ್ರೆಗೆ ೧೬ಕೋಟಿ ಎಲ್ಲಾ ಉಪಕರಣಗಳ ಬಗ್ಗೆ ಟೆಂಡರ್ ಬಗ್ಗೆ ತಡವಾಗಿದೆ ಈ ಬಗ್ಗೆ ಪರಿಶಿಲೆ ಮಾಡಬೇಕಾಗಿದ್ದು ಇದರೊಂದಿಗೆ ಹೊಯ್ಸಲಕಟ್ಟೆ ಭಾಗಕ್ಕೆ ಒಂದು ಪೊಲೀಸ್ ಠಾಣೆ ಮಾಡುವುದು ಸೇರಿದಂತೆ ಹುಳಿಯಾರು ಭಾಗದಲ್ಲಿ ಅಗ್ನಿ ಅವಘಡಗಳಿಂದ ತೊಂದರೆಯಾಗುತ್ತಿದ್ದು ಆ ಭಾಗಕ್ಕೆ ಒಂದು ಅಗ್ನಿಶಾಮಕ ಠಾಣೆ ಮಂಜೂರು ಮಾಡಬೆಕೆಂದು ಇದರೊಂದಿಗೆ ಆ ಇಲಾಕೆಗೆ ಹೊಸ ವಾಹನಗಳನ್ನು ವ್ಯವಸ್ಥೆ ಮಾಡಬೇಕು, ಎಂದ ಅವರು ಈ ಗಾಗಲೇ ಇಲಾಖೆವಾರು ಪ್ರತಿವಾರ ಕಳೆದ ೬೬ವಾರಗಳಿಂದ ಜನರಿಗೆ ಅನುಕೂಲವಾಗಲೆಂದು ಜನಸಂಪರ್ಕ ಸಭೆಯನ್ನು ಇದರೊಂದಿಗೆ ಮನೆಬಾಗಿಲಿಗೆ ಮನೆ ಮಗ ಎಂಬ ಕಾರ್ಯಕ್ರಮದೊಂದಿಗೆ ಗ್ರಾಮ ಗ್ರಾಮಗಳಿಗೆ ಬೇಟಿ ನೀಡಿ ಮನೆಮನೆಗಳಿಗೆ ಬೇಟಿ ನೀಡಲಾಗುತ್ತಿದೆ ಇದರೊಂದಿಗೆ ನಮ್ಮ ತಾಲ್ಲೂಕು ಎಸ್ ಎಸ್ ಎಲ್ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು ನಮಗೆ ಹೆಮ್ಮೆಯಾಗಿದ್ದು ಪಟ್ಟಣದಲ್ಲಿರುವಂತಹ ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂದು ಈ ಬಗ್ಗೆ ಗಮನಹರಿಸಬೇಕು ಎಂದು ಹಾಗೂ ತಾಲ್ಲೂಕಿನ ವಾಣಿಜ್ಯಬೆಳೆಯಾದ ತೆಂಗು ಬೆಳೆಗೆ ಬಿಳಿಹುಳರೋಗ, ಕೊರೆಯುವ ರೋಗದಂತಹ ಕೀಟಬಾದೆಯನ್ನು ತಪ್ಪಿಸಲು ಸೂಕ್ತ ಔಷಧಿ ಸಿಂಪಡನೆಗೆ ಕ್ರಮ ಕೈಗೊಂಡು ಸರ್ಕಾರದಿಂದ ಹಣ ಮಂಜೂರು ಮಾಡಿಸುವಂತೆ ತಿಳಿಸಿದ ಅವರು ತಾಲ್ಲೂಕಿನ ಅಭಿವೃದ್ದಿಗೆ ಆಗಬೇಕಾಗಿರುವಂತಹ ಕೆಲಸಗಳ ಬಗ್ಗೆ ಅಂಕಿ ಅಂಶಗಳನ್ನು ಸಚಿವರ ಗಮನಕ್ಕೆ ತಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಸಿಇಒ ಪ್ರಭು ಜಿ, ಅಪರ ಪೊಲೀಸ್ ಅಧೀಕ್ಷಕ ಗೋಪಾಲ್, ಅಪರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅದ್ಯಕ್ಷ ಚಂದ್ರಶೇಖರ್,ಕೆಡಿಪಿ ಸಭೆಯ ಸದಸ್ಯರುಗಳಾದ ದೇವರಾಜು, ರಾಮಚಂದ್ರಯ್ಯ, ದೇವರಾಜು, ಶೇಕ್ ಗೌಸ್, ಮಧು ಸೇರಿದಂತೆ ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ, ತಹಸೀಲ್ದಾರ್ ಪುರಂದರ ಕೆ, ಇಒ ದೊಡ್ಡಸಿದ್ದಯ್ಯ, ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

(Visited 1 times, 1 visits today)
BJP Congress tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleರಾಜಕೀಯ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ರಾಜಮಾರ್ಗ
Next Article ಪೋಕೋ ಪ್ರಕರಣ: ಆರೋಪಿಗೆ ೪೦ ವರ್ಷ ಜೈಲು ಶಿಕ್ಷೆ, ೨ ಲಕ್ಷ ೫೦ ಸಾವಿರ ರೂ. ದಂಡ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.