ಶಿರಾ: ವಿಶೇಷ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ತುಮುಲ್ ನಿರ್ದೇಶಕ ಎಸ್. ಆರ್.ಗೌಡ ಜಿಲ್ಲೆಯಲ್ಲೇ ಪ್ರಥಮ ಭಾರಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಗಳಿಗೆ ಶಿರಾ ನಗರದ ನಂದಿನಿ ಕ್ಷೀರ ಭವನದಲ್ಲಿ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ತುಮಕೂರು ಜಿಲ್ಲಾ ಸಹಕಾರ ಯೂನಿಯನ್ ನಿ., ತುಮಕೂರು ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ತುಮಕೂರು ಹಾಗೂ ಸಹಕಾರ ಇಲಾಖೆ, ತುಮಕೂರು ಇವರ ಸಹಯೋಗದಲ್ಲಿ ಅಮ್ಮಿಕೊಂಡಿದ್ದು, ಈ ವಿಶೇಷ ತರಬೇತಿಯನ್ನು ತಾಲ್ಲೂಕಿನ ಎಲ್ಲಾ ಹಾಲಿನ ಉತ್ಪಾದಕರ ಸಂಘದ ಕಾರ್ಯದರ್ಶಿಗಳು ಸದುಪಯೋಗ ಪಡಿಸಿಕೊಂಡು, ಈ ತರಬೇತಿ ಕಾರ್ಯಾಗಾರದಲ್ಲಿ ಮುಖ್ಯವಾಗಿ ಕಾರ್ಯದರ್ಶಿಗಳ ಕರ್ತವ್ಯ ಮತ್ತು ಜವಾಬ್ದಾರಿ, ಕಡತಗಳ ನಿರ್ವಹಣೆ ಹಾಗೂ ಸಹಕಾರ ಸಂಘಗಳ ಚುನಾವಣೆ ನಡೆಸುವ ವಿಧಿ ವಿಧಾನಗಳು ಮತ್ತು ಇತ್ತೀಚಿನ ಕಾನೂನು ತಿದ್ದುಪಡಿ ಅಂಶಗಳ ಹಾಗೂ ಪ್ರಮುಖವಾಗಿ ಶುದ್ಧ ಹಾಲು ಉತ್ಪಾದನೆ ಬಗ್ಗೆ ಕುರಿತು ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಈ ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಸಹಕಾರ ಸಂಘದ ನಿವೃತ್ತ ಅಪರ ನಿಬಂಧಕರಾದ ಹೆಚ್. ಎಸ್. ನಾಗರಾಜಯ್ಯ ರವರಿಂದ ಹಾಗೆ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವ್ಯವಸ್ಥಾಪಕರಾದ ಡಾ. ಟಿ. ವಿ. ಶ್ರೀನಿವಾಸ್ ರವರಿಂದ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ಎಸ್. ಆರ್. ಗೌಡ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು ಹಾಗೂ ತುಮಕೂರು ಜಿಲ್ಲಾ ಸಹಕಾರ ಯೂನಿಯನ್, ಅಧ್ಯಕ್ಷರಾದ ಬಿ. ಜಿ. ವೆಂಕಟೇಗೌಡ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು ಹಾಗೂ ತುಮಕೂರು ಜಿಲ್ಲಾ ಸಹಕಾರ ಯೂನಿಯನ್, ನಿರ್ದೇಶಕರಾದ ಹೆಚ್. ಕೆ. ರೇಣುಕಪ್ರಸಾದ್, ರಾಮಚಂದ್ರಯ್ಯ, ಪಿ. ಎಲ್. ಡಿ. ಬ್ಯಾಂಕ್, ಶಿರಾ ಅಧ್ಯಕ್ಷರಾದ ಕೆ. ಆರ್. ಜಗದೀಶ್, ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸನ್, ಶಿರಾ ತಾಲ್ಲೂಕು ಹಾಲು ಒಕ್ಕೂಟದ ಮುಖ್ಯಸ್ಥರಾದ ಗಿರೀಶ್, ವಿಸ್ತರಣಾಧಿಕಾರಿ ಚೈತ್ರ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ್ ಹಿರೇಮಠ ಹಾಗೂ ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಆಡಳಿತ ಮಂಡಳಿ ವರ್ಗದವರು ಉಪಸ್ಥಿತರಿದ್ದರು.

(Visited 1 times, 1 visits today)