ಕೊರಟಗೆರೆ: ಸರ್ಕಾರ ೧೯೬೦ರ ಇಸವಿಯಲ್ಲಿ ಶ್ರೀ ಚೆಲುವ ಚೆನ್ನಿಗರಾಯ ದೇವಾಲಯಕ್ಕೆ ಸರ್ವೇ ನಂ. ೧೩೦ರಲ್ಲಿ ೪ ಎಕೆರೆ ೬ ಗುಂಟೆ ಜಮೀನು ಮಂಜೂರು ಮಾಡಿದೆ. ಈ ದೇವಾಲಯ ಮುಜರಾಯಿ ಇಲಾಖೆ ಒಳಪಡಲಿದ್ದು. ಇಲಾಖೆಗೆ ಗೊತ್ತಿಲ್ಲದೆ ಅರ್ಚಕರ ಕುಟುಂಬ ನೆಲಮಂಗಲದ ಮಹಿಳೆಗೆ ಕ್ರಯ ಮಾಡಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ.
ಕೊರಟಗೆರೆ ತಾಲ್ಲೂಕಿನ ಹೊಳವಹಳ್ಳಿ ಹೋಬಳಿ ತೊಗರಿಘಟ್ಟ ಗ್ರಾಮದ ಶ್ರೀ ಚೆನ್ನಿಗರಾಯ ಸ್ವಾಮಿ ದೇವಾಲಯ ಮುಜರಾಯಿ ಇಲಾಖೆ ಸೇರಿದೆ. ಸರ್ಕಾರದ ಜಮೀನನ್ನು ಕ್ರಯ ಮಾಡುವ ಮುನ್ನ ಇಲಾಖೆ ಗಮನಕ್ಕೆ ತರದೇ ನೆಲಮಂಗಲ ಭಾಗ್ಯಮ್ಮ ಮತ್ತು ದೀಪ.ಜೆ ಎಂಬುವವರಿಗೆ ಮಾರಾಟ ಮಾಡಿದ್ದು, ಒತ್ತಡಕ್ಕೆ ಮಣಿದ ಕುಣಿಗಲ್ ಉಪ ನೋಂದಾಣಾಧಿಕಾರಿಗಳು ಜಮೀನಿನ ದಾಖಲೆಗಳನ್ನು ಪರಿಶೀಲಿಸದೆ ಕ್ರಯ ಮಾಡಿದ್ದರೆಂದು ತಾಲ್ಲೂಕು ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆಯಲ್ಲಿ ಆಕ್ರೋಶ ಹೊರ ಹಾಕಿದರು.
ಸರ್ಕಾರದಿಂದ ದೇವಾಲಯಕ್ಕೆ ಜಮೀನು ಮಂಜುರಾದ ವೇಳೆ ಲ್ಯಾಂಡ್ ಟ್ಯೂಬುನಲ್ ಅಡಿಯಲ್ಲಿ ಸದರಿ ದೇವಾಲಯದ ಅರ್ಚಕ ಚೆನ್ನಕೇಶವಚಾರ್ ಮತ್ತು ಪತ್ನಿ ಪುಟ್ಟಲಕ್ಷಮ್ಮನವರು ಖಾತೆ,ಪಹಣಿ ಮಾಡಿಸಿಕೊಂಡಿದ್ದರು, ಇವರ ಮರಣದ ನಂತರ ಸೊಸೆ ಸುಶೀಲಮ್ಮ ಕೋಂ ಲೇಟ್ ಶ್ರೀರಂಗಮೂರ್ತಿ ರವರ ಹೆಸರಿಗೆ ಎಂ ಆರ್ ಎಚ್ ೫೪/೨೦೧೯ – ೨೦ ರಲ್ಲಿ ಖಾತೆ ಮತ್ತು ಪಹಣಿಯಾಗಿದ್ದು, ಗ್ರಾಮಸ್ಥರು ಇದನ್ನು ವಿರೋಧಿಸಿ ಜಮೀನಿನ ಮೇಲೆ ಭೂನ್ಯಾಯಮಂಡಳಿಯಲ್ಲಿ ಕೇಸು ದಾಖಲಿಸಿದ್ದು, ಜಮೀನು ವಿಚಾರಣೆಯ ಸಂಭAದ ಪಟ್ಟಂತೆ ಪಹಣಿಯಲ್ಲಿ ಉಲ್ಲೇಖವಾಗಿದೆ.
ಕೊರಟಗೆರೆ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಮತ್ತು ಉಚ್ಚ ನ್ಯಾಯಾಲಯ ದೇವಾಲಯದ ಹೆಸರಿಗೆ ಖಾತೆ ಬದಲಾವಣೆ ಮಾಡುವಂತೆ ಆದೇಶ ಮಾಡಿದೆ. ನ್ಯಾಯಾಲಯ ಆದೇಶವನ್ನೇ ಉಲ್ಲಂಘಿಸಿ ಸುಶೀಲಮ್ಮ ರವರ ಮಗ ನರಸಿಂಹಮೂರ್ತಿ ಮತ್ತು ಸೊಸೆ ಅಶ್ವಿನಿ ಬಿ.ಎ ಕುಣಿಗಲ್ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ೧೨ ಮೇ ೨೦೨೫ ರಂದು ನೆಲಮಂಗಲದ ಭಾಗ್ಯಮ್ಮ ಮತ್ತು ದೀಪ ಜೆ ಎಂಬುವವರಿಗೆ ಕ್ರಯ ಮಾಡಿರುವುದು ಕಂಡು ಬಂದಿದೆ.
ಕೂಡಲೇ ಎಂ.ಆರ್ ವಜಾಗೊಳಿಸುವಂತೆ ಕೋರಿ ತಹಶೀಲ್ದಾರ್ ಕೆ.ಮಂಜುನಾಥ್ ಗೆ ಊರಿನ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಗ್ರಾಮಸ್ಥರಾದ ಎಚ್.ನಾರಾಯಣಪ್ಪ, ಟಿ.ಎಚ್ ಕೃಷ್ಣಮೂರ್ತಿ, ಸಂಜೀವರೆಡ್ಡಿ, ಗ್ರಾ.ಪಂ ಸದಸ್ಯ ಸಿದ್ದಲಿಂಗಪ್ಪ, ನರಸಿಂಹಮೂರ್ತಿ, ಲಕ್ಷ್ಮಿಕಾಂತ್, ಅರ್ಚಕ ನಟರಾಜ್ ಆರಾಧ್ಯ, ಗೋವಿಂದಪ್ಪ, ಮರೀಸ್ವಾಮಿ, ನರೇಂದ್ರಬಾಬು, ಲಿಂಗರಾಜು, ನಾರಾಯಣ ಸ್ವಾಮಿ, ಅನಂತರಾಮು, ಪಾಪೇಗೌಡ ಸೇರಿದಂತೆ ಇತರರು ಇದ್ದರು.
(Visited 1 times, 1 visits today)