ತುಮಕೂರು : ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಹಾಗೂ ರೈತರು ಸೇರಿದಂತೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಮತ್ತು ಯೋಜನೆ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಸೊಗಡು ಶಿವಣ್ಣ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಮರನಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಒಳಗೆ ಚಾಪೆ, ದಿಂಬು, ಹೊದಿಕೆಯೊಂದಿಗೆ ಉಪವಾಸ ಆರಂಭಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಮೊಕ್ಕಾಮ್ ಹೂಡಿದ್ದಾರೆ.
ಹೇಮಾವತಿ ಲಿಂಕ್ ಕೇನಾಲ್ ಯೋಜನೆ ವಿರೋಧಿಸಿ ಹೋರಾಟಕ್ಕೆ ಬೆಂಬಲಿಸಿ ಭಾಗಿಯಾಗಿದ್ದ ಸ್ವಾಮೀಜಿಗಳ ಮೇಲೆ ಎಫ್ ಐ ಆರ್ ದಾಖಲು ಮಾಡಿ ಸರ್ಕಾರ ಅವರನ್ನು ಹೆದರಿಸಲು ಮುಂದಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದಾರೆ.
ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರದ ನಿರ್ಧಾರ ಖಂಡಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೋರಾಟಗಾರರ ಮೇಲಿನ ಪೊಲೀಸರ ದೌರ್ಜನ್ಯ ನೋಡಲು ಆಗದೆ ಸಂಕಟ ವಾಗುತ್ತಿದೆ ಎಂದರು.
ಮಠಾಧೀಶರನ್ನು ಬಂಧಿಸುತ್ತೇವೆ ಎಂದರೆ ಅದು ದೇವಸ್ಥಾನಗಳ ಬಾಗಿಲನ್ನು ಹಾಕಿದಂತೆ. ಹೀಗಾಗಿ ಮೊದಲಿಗೆ ಲಿಂಕ್ ಕೆನಾಲ್ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಮತ್ತು ಮಠಾಧೀಶರ ಮೇಲೆ ದಾಖಲಿಸಿರುವ ಪ್ರಕರಣವನ್ನು ಪಡೆಯಬೇಕು ಅಲ್ಲಿಯವರೆಗೂ ಉಪವಾಸ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಹೇಮಾವತಿ ಲಿಂಕ್ ಯೋಜನೆ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಬೆಂಬಲಿಗರೊAದಿಗೆ ಘೋಷಣೆ ಕೂಗಲು ಆರಂಭಿಸುತ್ತಿದ್ದAತೆ ಪೊಲೀಸರು ಅಡ್ಡಿ ಪಡಿಸಿದರು.
ಸ್ಥಳದಲ್ಲಿದ್ದ ಡಿವೈಎಸ್ಪಿ ಚಂದ್ರಶೇಖರ್ ಜಿಲ್ಲಾಧಿಕಾರಿ ಕಚೇರಿ ಒಳಗೆ ಘೋಷಣೆ ಕೂಗದಂತೆ ತಾಕೀತು ಮಾಡಿದರು. ಕೆಲಕಾಲ ಪೊಲೀಸರು ಮತ್ತು ಉಪವಾಸ ಸತ್ಯಾಗ್ರಹ ನಿರತರ ನಡುವೆ ಮಾತಿನ ಚಕಮಕಿ ನಡೆಯಿತು.
ಇನ್ನೊಂದೆಡೆ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದ್ದು ಉಚಿತವಾಗಿ ಹೋರಾಟಗಾರರ ಪರ ವಕಾಲತ್ತು ವಹಿಸಲು ಗುಬ್ಬಿ ವಕೀಲರ ಸಂಘ ನಿರ್ಧರಿಸಿದೆ.
ಮೇ ೩೧ ರಂದು ತುಮಕೂರಿನ ಗುಬ್ಬಿಯ ಸಂಕಾಪುರದಲ್ಲಿ ಹೇಮಾವತಿ ಕೆನಾಲ್ ವಿರುದ್ಧ ಪ್ರತಿಭಟನೆ ನಡೆಸಿದ ಶಾಸಕರು, ಸ್ವಾಮೀಜಿಗಳು, ರೈತ ಮುಖಂಡರು, ರೈತರ ಮೇಲೆ ೧೧ ಪ್ರತ್ಯೇಕ ಎಫ್ ಐಆರ್ ದಾಖಲಿಸಿಕೊಂಡು ಈಗಾಗ್ಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಹೋರಾಟದಲ್ಲಿ ಪಾಲ್ಗೊಂಡ ನಾಲ್ವರು ಸ್ವಾಮೀಜಿಗಳ ಮೇಲೆ ಕೊಲೆ ಯತ್ನದ ಕೇಸ್ ಗೆ ಸಂಘ ಖಂಡನೆ ವ್ಯಕ್ತಪಡಿಸಿದೆ. ವಕೀಲ ಹಾಗೂ ಸಂಘದ ಕಾರ್ಯದರ್ಶಿ ಸುರೇಶ್ ಹೇಳಿಕೆ ನೀಡಿದ್ದು ಹೇಮಾವತಿ ಲಿಂಕಿAಗ್ ಕೆನಾಲ್ ನ ಯಾವುದೇ ಹೋರಾಟಕ್ಕೂ ಉಚಿತ ವಕಾಲತ್ತು ವಹಿಸೋದಾಗಿ ಘೋಷಣೆ ಮಾಡಿದ್ದಾರೆ
(Visited 1 times, 1 visits today)