ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆಯುತ್ತಿದ್ದ ಹೋರಾಟಗಾರರ ಮೇಲೆ ಎಫ್ ಐ ಆರ್ ಮಾಡಿರುವುದನ್ನು ವಿರೋಧಿಸಿ ತುಮಕೂರು ಎಸ್ಪಿ ಕಚೇರಿ ಎದುರು ಪ್ರತಿಭಟನೆಗೆ ಕರೆ ಕೊಟ್ಟ ಹಿನ್ನಲೆ, ಎಸ್ ಪಿ ಕಚೇರಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಬ್ಯಾರಿಕೇಡ್ ಹಾಕಿ ಪೊಲೀಸ್ ಬಿಗಿಭದ್ರತೆ ಮಾಡಲಾಗಿದೆ. ಇಂದು ಪ್ರತಿಭಟನೆ ನಡೆಸಲು ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಶಾಸಕ ಸುರೇಶ್ ಗೌಡ ಕರೆ ಕೊಟ್ಟಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಎಸ್ ಪಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪ್ರತಿಭಟನಾಕಾರರು ಯಾರು ಎಸ್ ಪಿ ಕಚೇರಿ ಒಳಹೋಗದಂತೆ ಭದ್ರತೆ ಮಾಡಲಾಗಿದೆ. ನೂರಾರು ಪೊಲೀಸ್ ಸಿಬ್ಬಂದಿಗಳನ್ನ ಹಾಕಿ ಭದ್ರತೆ ಮಾಡಲಾಗಿದೆ.
(Visited 1 times, 1 visits today)