ಮಂಗಳವಾರ ಬೆ.೪ಗಂಟೆ ಸುಮಾರಿಗೆ ಪಟ್ಟಣದ ಶನೇಶ್ವರ ಸ್ವಾಮಿ ದೇವಾಲಯ ರಸ್ತೆಯಿಂದ ಶಿವಗಂಗಾ ಚಿತ್ರಮಂದಿರ ರಸ್ತೆ ಕಡೆಗೆ ದಾಟುತ್ತಿರುವ ವಿಡಿಯೋ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದ್ದು ಮುಂಜಾನೆ ವಾಯುವಿಹಾರಕ್ಕೆಂದು ಹೊರ ಬಂದ ಕೆಲ ಜನರು ಭಯಬೀತರಾಗಿದ್ದಾರೆ.
ಅರಣ್ಯಾಧಿಕಾರಿಗಳ ಬೇಜಾವಬ್ದಾರಿ ತನದಿಂದ ಕೊರಟಗೆರೆ ತಾಲ್ಲೂಕಿನ ಸುತ್ತಮುತ್ತ ಅರಣ್ಯ ಪ್ರದೇಶಗಳ ನಾಶ ಜೊತೆಗೆ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಆಗುತ್ತಿರುವ ಬ್ಲಾಸ್ಟಿಂಗ್ ಶಬ್ದಕ್ಕೆ ರಾತ್ರಿ ಹಗಲೆಗನ್ನದೆ ಪದೇ ಪದೇ ಜನವಸತಿ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳು ಸಂಚರಿಸುತ್ತಿವೆ.
ಮುAಜಾನೆ ಕಾಣಿಸಿಕೊಂಡು ಕರಡಿಯಿಂದ ಯಾವೊಬ್ಬ ವ್ಯಕ್ತಿಗೂ ಯಾವುದೇ ಪ್ರಾಣಹಾನಿಯಾಗಿಲ್ಲಾ, ಅಪಾಯ ಎದುರಾಗುವ ಮುನ್ನ ಅರಣ್ಯಾಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಅಕ್ರಮ ಕಲ್ಲು ಗಣಿಗಾರಿಕೆಯಿಂದ ನಡೆಯುತ್ತಿರುವ ಬ್ಲಾಸ್ಟಿಂಗ್ ಶಬ್ಬಕ್ಕೆ ಕಡಿವಾಣ ಹಾಕುವಂತೆ ಸೋಷಿಯಲ್ ಮೀಡಿಯಾದಲ್ಲಿ ಪ್ರಜ್ಞಾವಂತ ನಾಗರೀಕರು ಅಭಿಪ್ರಾಯ ಹಂಚಿಕೊAಡಿದ್ದಾರೆ.