ತುಮಕೂರು: ನಗರದ ಅರ್ಬನ್ ರೆರ್ಸಾಟ್‌ನಲ್ಲಿ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್‌ನ ಕಾರ್ಯಕಾರಿಣಿ ಸಭೆಯನ್ನು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಯುವಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ ಮಾತನಾಡಿ, ಚುನಾವಣೆಗಳಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿರುತ್ತದೆ. ಹಾಗಾಗಿ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್‌ನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ.ಈಗಾಗಲೇ ಪಕ್ಷದ ಅಂತರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಶೀಘ್ರವೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತುಂಬಲಾಗುವುದು.ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಶೀಘ್ರವೇ ಪಟ್ಟಿಯನ್ನು ಜಿಲ್ಲಾ ಸಂಘಕ್ಕೆ ಕಳುಹಿಸುವಂತೆ ಸೂಚನೆ ನೀಡಿದ ಅವರು,ಕಾಂಗ್ರೆಸ್ ಪಕ್ಷದಲ್ಲಿ ಯುವ ಘಟಕವನ್ನು ಸದೃಢವಾಗಿ ಕಟ್ಟಲು ಇದು ಸಹಕಾರಿಯಾಗಲಿದೆ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಹಿಲಾಯಿ ಸಿಖಂದರ್ ಮಾತನಾಡಿ,ಜಿಲ್ಲೆಯಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಆಯ್ಕೆಯಾಗಿರುವ ವ್ಯಕ್ತಿಗಳು ತಮ್ಮ ಕ್ಷೇತ್ರದ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಲಹೆ ಪಡೆದು,ಯೂತ್ ಕಾಂಗ್ರೆಸ್‌ನಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅಗತ್ಯ ಪಟ್ಟಿಯನ್ನು ಕಳುಹಿಸಿಕೊಡಬೇಕೆಂದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿಗಳಾದ ಸಂದೀಪ್,ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ರಿಯಾನ ರಾಜು, ಪ್ರಧಾನ ಕಾರ್ಯದರ್ಶಿ ಹಿಲಾಹಿ ಸಿಖಂದರ್,ರಾಜ್ಯ ಕಾರ್ಯದರ್ಶಿ ಪ್ರಶಾಂತ್ ಮತ್ತಿತರರು ವೇದಿಕೆಯಲ್ಲಿದ್ದರು.

(Visited 1 times, 1 visits today)