BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾಲ್ತುಳಿತದಲ್ಲಿ ಮೃತಪಟ್ಟ ಕುಟಂಬಕ್ಕೆ ಸರ್ಕಾರದ ವತಿಯಿಂದ ೨೫ ಲಕ್ಷ ರೂ. ಪರಿಹಾರ ವಿತರಣೆ
  • ಸಾರಿಗೆ ಬಸ್ ತೊರೆದು ಖಾಸಗಿ ಬಸ್‌ನಲ್ಲಿ ಪ್ರಯಾಣ
  • ನಗರಕ್ಕೆ ಅರ್ಬನ್ ರೈಲು, ಮೆಟ್ರೋ ರೈಲು ಎರಡು ಬರಲಿ
  • ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಸುದೇಶ್ ಬಾಬು ಕರೆ
  • ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿರಿ: ಮಾಜಿ ಶಾಸಕ
  • ಸಾಮಂತ ರಾಜ್ಯಗಳನ್ನು ಸಾಮ್ರಾಟರಂತೆ ವೈಭವೀಕರಿಸುವುದು ಸಲ್ಲದು. – ಡಾ. ಚನ್ನಸ್ವಾಮಿ ಸೋಸಲೆ
  • ಶ್ರೀಕ್ಷೇತ್ರ ಸಿದ್ಧರಬೆಟ್ಟ ಮಠದ ೧೯ನೇ ವಾರ್ಷಿಕೋತ್ಸವ
  • ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಮನೋಭಾವವನ್ನು ಬೆಳೆಸಿಕೊಳ್ಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಗರಕ್ಕೆ ಅರ್ಬನ್ ರೈಲು, ಮೆಟ್ರೋ ರೈಲು ಎರಡು ಬರಲಿ
ತುಮಕೂರು

ನಗರಕ್ಕೆ ಅರ್ಬನ್ ರೈಲು, ಮೆಟ್ರೋ ರೈಲು ಎರಡು ಬರಲಿ

ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ, ಗೃಹ ಸಚಿವರ ಮನವಿ
By News Desk BenkiyabaleUpdated:June 09, 2025 3:14 pm

ಬೆಂಗಳೂರು/ತುಮಕೂರು: ತುಮಕೂರಿನ ರಾಷ್ಟಿçÃಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸುವ ಕುರಿತಂತೆ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವರಾದ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ.ಪರಮೇಶ್ವರ ಅವರು ತಿಳಿಸಿದರು.

ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನ ರಾಷ್ಟಿçÃಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಸ್ಮಾರ್ಟ್ ಸಿಟಿಯಿಂದ ೫ ಕೋಟಿ ರೂ. ಒದಗಿಸಿಕೊಂಡಿದ್ದೇವೆ. ರಾಷ್ಟಿçÃಯ ಹೆದ್ದಾರಿಯ ಸ್ಥಳೀಯ ನಿರ್ದೇಶಕರು ಆಗುವುದಿಲ್ಲ ಎಂದು ನಮಗೆ ತಿಳಿಸಿದ್ದರು. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿಯಾಗಬೇಕಿದೆ. ಕೇಂದ್ರದ ಸಚಿವರಾದ ವಿ.ಸೋಮಣ್ಣ ಅವರು ನಮ್ಮ ಜಿಲ್ಲೆಯ ಸಂಸದರು. ಕೇಂದ್ರದ ಭೂಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರಿಗೆ ವಿ.ಸೋಮಣ್ಣ ಅವರ ಮೂಲಕ ಮನವಿ ನೀಡಿ, ಅನುಮತಿಯನ್ನು ಕೊಡಿಸುವಂತೆ ಕೇಳಿದ್ದೇನೆ. ಅನುಮತಿ ಕೊಟ್ಟರೆ ತುಮಕೂರಿನ ಆರಂಭದಲ್ಲಿ ಸ್ವಾಗತ ಕಮಾನು ನಿರ್ಮಿಸುತ್ತೇವೆ ಎಂದು ತಿಳಿಸಿದರು.
ನಮ್ಮ ಜಿಲ್ಲೆಗೆ ಕೇಂದ್ರದ ಅನೇಕ ಯೋಜನೆಗಳು ಆಗಬೇಕಿದೆ. ಕುಡಿಯುವ ನೀರಿಗೆ ಸಂಬAಧಪಟ್ಟAತೆ ಅನೇಕ ಯೋಜನೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಇದರಲ್ಲಿ ನಮ್ಮ ತಾಲ್ಲೂಕು ಸೇರಿದ್ದು, ಅವರೊಂದಿಗೆ ಚರ್ಚಿಸಿದ್ದೇನೆ ಎಂದರು.
ತುಮಕೂರು ನಗರ ರಾಷ್ಟಿçÃಯ ಹೆದ್ದಾರಿ ಪಕ್ಕದಲ್ಲಿ ಇರುವುದರಿಂದ ಪ್ರಯಾಣದ ವೇಳೆ ಯಾರಿಗೂ ಗೊತ್ತಾಗುವುದಿಲ್ಲ. ಸ್ವಾಗತ ಕಮಾನು ನಿರ್ಮಿಸಿದರೆ ಗೊತ್ತಾಗುತ್ತದೆ. ಈ ನಿಟ್ಟಿನಲ್ಲಿ ೫ ಕೋಟಿ ರೂ. ಹಣ ಒದಗಿಸಿಕೊಂಡಿದ್ದೇವೆ ಎಂದು ಹೇಳಿದರು.
ತುಮಕೂರಿಗೆ ಮೆಟ್ರೋ ಯೋಜನೆ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನಗಳು ಏನಾಗುತ್ತದೆ ಎಂಬುದನ್ನು ನೋಡಿ ಸಚಿವ ವಿ.ಸೋಮಣ್ಣ ಮಾತನಾಡುತ್ತೇನೆ. ತುಮಕೂರಿಗೆ ಮೆಟ್ರೋ ಅಗತ್ಯ ಇದೆ ಎಂದು ಸೋಮಣ್ಣ ಅವರು ಹೇಳಿದ್ದಾರೆ. ಸಬ್ ಅರ್ಬನ್ ಯೋಜನೆಯು ಆಗಲಿ ಎಂದರು.
ತುಮಕೂರು ಅತಿ ವೇಗವಾಗಿ ಬೆಳೆಯುತ್ತಿದೆ. ೨೦ ಸಾವಿರ ಎಕರೆಯಲ್ಲಿ ಇಂಡಸ್ಟಿçÃಯಲ್ ಹಬ್ ಮಾಡಿದ್ದೇವೆ. ಬಹಳ ಜನ ತುಮಕೂರನ್ನು ವಿಸ್ತರಣೆ ಮಾಡಬೇಕು ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ. ಬೆಂಗಳೂರಿಗೆ ತುಮಕೂರು ೭೦ ಕಿ.ಮೀ.ನಲ್ಲಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಂಡರೆ ಅಭಿವೃದ್ಧಿ ದೃಷ್ಟಿಯಿಂದ ಅನುಕೂಲವಾಗುತ್ತದೆ. ನಾವು ಕೂಡ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಹೇಮಾವತಿ ಕೆನಾಲ್ ವಿಚಾರಕ್ಕೆ ಸಂಬAಧಿಸಿದAತೆ ಪ್ರತಿಭಟನೆ ಬೇಡ ಎಂದು ತಿಳಿಸಿದ್ದೇನೆ. ಸಭೆ ಕರೆಯಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಆನಂತರ ಸಭೆ ಕರೆಯುವುದರ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ ಎಂಬುದನ್ನು ಅಧಿಕಾರಿಗಳು ನನಗೆ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಆ ಭಾಗದ ಜನರು ಎನ್‌ಐಎ ತನಿಖೆಗೆ ವಹಿಸುವಂತೆ ಮಾತನಾಡುತ್ತಿದ್ದರು. ಯಾರಾದರು ಮನವಿ ಮಾಡಿರಬಹುದು. ಸಂಸದರು, ಶಾಸಕರು ಹೇಳಿಕೊಂಡಿರಬಹುದು. ಕೇಂದ್ರ ಗೃಹ ಇಲಾಖೆಯಿಂದ ನಮಗೆ ಪತ್ರ ಬಂದಿದೆ ಎಂದು ಸ್ಪಷ್ಟಪಡಿಸಿದರು.

ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರನ್ನು ಕೇಳಿಲ್ಲ
ನಾನು ಯಾವತ್ತು ಕೂಡ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಖಾತೆ ಬದಲಾವಣೆ ಕುರಿತಂತೆ ನಿಮಗೆ ಯಾರು ಹೇಳಿದರು. ಒಂದು ವೇಳೆ ನಿಮ್ಮ ಕಿವಿಗೆ ಬಿತ್ತು ಅಥವಾ ಯಾರೋ ಹೇಳಿದರು ಎಂಬ ಮಾತು ಬಂದಾಗ ನನ್ನನ್ನು ನೇರವಾಗಿ ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದಲ್ಲವೆ. ಸುದ್ದಿ ಮಾಡುವ ಮೊದಲು ನನ್ನನ್ನು ನೇರವಾಗಿ ಕೇಳಬಹುದಲ್ಲವೇ . ನಾನು ೩೦ ವರ್ಷದಿಂದ ನಿಮ್ಮೊಂದಿಗೆ ಸಂಯಮದಿAದ ನಡೆದುಕೊಂಡಿದ್ದೇನೆ. ನೀವು ಅಷ್ಟೇ ಗೌರವಿಸಿದ್ದೀರಿ. ಇದಕ್ಕೆ ನಾನು ಅಭಾರಿಯಾಗಿದ್ದೇನೆ. ವ್ಯಕ್ತಿಯ ವ್ಯಕ್ತಿತ್ವವನ್ನು ನಾಶ ಮಾಡುವುದು ಒಳ್ಳೆಯದಾಗಿ ಕಾಣಿಸುವುದಿಲ್ಲ, ಶೋಭೆ ತರುವುದಿಲ್ಲ.  ನಾನು ನನ್ನ ಶ್ರೀಮತಿಯವರು ಸೇರಿದಂತೆ ಯಾರ ಬಳಿಯೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಖಾತೆ ಬದಲಾಯಿಸುವಂತೆ ಆಪ್ತರ ಬಳಿ ಹೇಳಿದರು, ಮುಖ್ಯಮಂತ್ರಿಯವರ ಬಳಿ ಕೇಳಿದರು. ಅವರು ಸುಮ್ಮನೆ ಇರಿ ಎಂದು ಎಂದೆಲ್ಲ ಸುದ್ದಿ ಮಾಡಲಾಗಿದೆ. ಇದನ್ನು ಯಾರು ಹೇಳಿದರು. ಸುದ್ದಿ ಮಾಡುವ ಮೊದಲೇ ಸ್ಪಷ್ಟನೆ ಪಡೆದುಕೊಳ್ಳಬೇಕಿತ್ತು ಎಂದು ಹೇಳಿದರು.
ನಮ್ಮನ್ನು ಅಭಿಮಾನಿಗಳು, ಜನ ಅನುಕರಿಸುವವರು ಇದ್ದಾರೆ. ಕ್ಷೇತ್ರದ ಮತದಾರರು ಏನೆಂದುಕೊಳ್ಳುತ್ತಾರೆ. ಮುಂದೆ ಈ ರೀತಿ ಊಹಾಪೋಹಾ ಸುದ್ದಿ ನಿಮ್ಮ ಕಿವಿಗೆ ಬಿದ್ದಾಗ ನನ್ನನ್ನು ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದು ಎಂದು ಹೇಳಿದರು.

ಕಾಲ್ತುಳಿತ ಘಟನೆಯ ಬಗ್ಗೆ ನಾನು ಏನನ್ನು ಮಾತನಾಡುವುದಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಾದ ಮೈಕೆಲ್ ಡಿ.ಕುನ್ಹಾ ಅವರ ಏಕವ್ಯಕ್ತಿ ಆಯೋಗಕ್ಕೆ ವಹಿಸಿದ್ದೇವೆ. ಅವರು ತನಿಖೆ ಮಾಡಿ ವರದಿ ಕೊಡುತ್ತಾರೆ. ನಾವು ಹೇಳಿಕೆ ಕೊಟ್ಟರೆ ಬೇರೆ ರೀತಿಯ ಪರಿಣಾಮ ಬೀರುತ್ತದೆ. ತನಿಖೆ ವೇಳೆ ನಮ್ಮನ್ನು ಕೇಳಿದರೆ ಹೇಳುತ್ತೇವೆ. ಈಗ ಹೇಳಿಕೆ ನೀಡಿದರೆ ತನಿಖೆಯ ದಿಕ್ಕು ಬೇರೆ ಕಡೆ ಹೋಗುತ್ತದೆ ಎಂದರು.
ದೆಹಲಿಗೆ ಕರೆದಿಲ್ಲ: ಪಕ್ಷದ ವರಿಷ್ಟರು ನನ್ನನ್ನು ದೆಹಲಿಗೆ ಕರೆದಿಲ್ಲ. ಫೋನ್‌ನಲ್ಲಿ ಮಾತನಾಡುತ್ತಿರುತ್ತಾರೆ. ಘಟನೆಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೇಳುತ್ತಾರೆ. ಸಿಎಂ, ಡಿಸಿಎಂ ಅವರನ್ನು ಕೇಳಿ ಮಾಹಿತಿ ಪಡೆಯುತ್ತಾರೆ ಎಂದು ತಿಳಿಸಿದರು.

(Visited 1 times, 1 visits today)
tumkur
Previous Articleಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಸುದೇಶ್ ಬಾಬು ಕರೆ
Next Article ಸಾರಿಗೆ ಬಸ್ ತೊರೆದು ಖಾಸಗಿ ಬಸ್‌ನಲ್ಲಿ ಪ್ರಯಾಣ
News Desk Benkiyabale

Related Posts

ಕಾಲ್ತುಳಿತದಲ್ಲಿ ಮೃತಪಟ್ಟ ಕುಟಂಬಕ್ಕೆ ಸರ್ಕಾರದ ವತಿಯಿಂದ ೨೫ ಲಕ್ಷ ರೂ. ಪರಿಹಾರ ವಿತರಣೆ

June 09, 2025 3:19 pm ತುಮಕೂರು

ಸಾರಿಗೆ ಬಸ್ ತೊರೆದು ಖಾಸಗಿ ಬಸ್‌ನಲ್ಲಿ ಪ್ರಯಾಣ

June 09, 2025 3:17 pm ತುಮಕೂರು

ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಸುದೇಶ್ ಬಾಬು ಕರೆ

June 07, 2025 3:55 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕಾಲ್ತುಳಿತದಲ್ಲಿ ಮೃತಪಟ್ಟ ಕುಟಂಬಕ್ಕೆ ಸರ್ಕಾರದ ವತಿಯಿಂದ ೨೫ ಲಕ್ಷ ರೂ. ಪರಿಹಾರ ವಿತರಣೆ

June 09, 2025 3:19 pm
ತುಮಕೂರು

ಸಾರಿಗೆ ಬಸ್ ತೊರೆದು ಖಾಸಗಿ ಬಸ್‌ನಲ್ಲಿ ಪ್ರಯಾಣ

June 09, 2025 3:17 pm
ತುಮಕೂರು

ನಗರಕ್ಕೆ ಅರ್ಬನ್ ರೈಲು, ಮೆಟ್ರೋ ರೈಲು ಎರಡು ಬರಲಿ

June 09, 2025 3:14 pm
ತುಮಕೂರು

ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಸುದೇಶ್ ಬಾಬು ಕರೆ

June 07, 2025 3:55 pm
ತುಮಕೂರು

ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿರಿ: ಮಾಜಿ ಶಾಸಕ

June 07, 2025 3:54 pm
ತುಮಕೂರು

ಸಾಮಂತ ರಾಜ್ಯಗಳನ್ನು ಸಾಮ್ರಾಟರಂತೆ ವೈಭವೀಕರಿಸುವುದು ಸಲ್ಲದು. – ಡಾ. ಚನ್ನಸ್ವಾಮಿ ಸೋಸಲೆ

June 07, 2025 3:52 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕಾಲ್ತುಳಿತದಲ್ಲಿ ಮೃತಪಟ್ಟ ಕುಟಂಬಕ್ಕೆ ಸರ್ಕಾರದ ವತಿಯಿಂದ ೨೫ ಲಕ್ಷ ರೂ. ಪರಿಹಾರ ವಿತರಣೆ

By News Desk BenkiyabaleJune 09, 2025 3:19 pm

ತುಮಕೂರು: ಜೂ.೪ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಐಪಿಎಲ್ ಪಂದ್ಯ ವೀಕ್ಸಿಸಲು ಹೋಗಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಣಿಗಲ್ ಅಮೃತೂರಿನ ಮನೋಜ್…

ಸಾರಿಗೆ ಬಸ್ ತೊರೆದು ಖಾಸಗಿ ಬಸ್‌ನಲ್ಲಿ ಪ್ರಯಾಣ

June 09, 2025 3:17 pm

ನಗರಕ್ಕೆ ಅರ್ಬನ್ ರೈಲು, ಮೆಟ್ರೋ ರೈಲು ಎರಡು ಬರಲಿ

June 09, 2025 3:14 pm

ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಸುದೇಶ್ ಬಾಬು ಕರೆ

June 07, 2025 3:55 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.