ತುಮಕೂರು: ಕಾಶ್ಮೀರದ ಪಹಲ್ಗಾಮ್ ಘಟನೆ ಯಿಂದ ಮುಂದೂಡಲ್ಪಟ್ಟಿದ್ದ ಸಹಕಾರಿ ಸಚಿವ ಕೆ.ಎನ್. ರಾಜಣ್ಣರವರ ಗೌರವ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಜೂನ್. ೨೧ ರಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಗೌರವ ಗ್ರಂಥ ಬಿಡುಗಡೆ ಸಮಾರ ಂಭದ ವೇದಿಕೆ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೇ ೧೩ ರಂದು ಆಯೋಜಿಸಿದ್ದ ಕಾರ್ಯಕ್ರಮ ಇನ್ನೆರಡು ದಿನ ಇದೆ ಎನ್ನುವಾಗ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಪ್ರಾರಂಭಿಸಲಾಗಿತ್ತು. ದೇಶದೆಲ್ಲೆಡೆ ಬಿಗುವಿನ ವಾತಾವರಣ ಇದ್ದ ಪರಿಣಾಮ ಹಿರಿಯರ ಮಾರ್ಗದರ್ಶನದಂತೆ ಕಾರ್ಯಕ್ರಮ ಮುಂದೂಡಿದ್ದು, ಕೆ.ಎನ್.ಆರ್. ಅಮೃತ ಮಹೋತ್ಸವ ಅಭಿನಂದನಾ ಸಮಿತಿ ತೀರ್ಮಾನದಂತೆ ಜೂನ್. ೨೧ ಕ್ಕೆ ಆಯೋಜಿಸಲಾಗುತ್ತಿದೆ ಎಂದರು.
ಸಹಕಾರಿ ಸಚಿವರಾಗಿರುವ ಕೆ.ಎನ್.ರಾಜಣ್ಣ ಅವರು ಸಹಕಾರಿ ಕ್ಷೇತ್ರದಲ್ಲಿ ಹೆಸರು ಮಾಡಿದವರು. ಹಾಗಾಗಿ ಇಡೀ ರಾಜ್ಯದ ಮೂಲೆ ಮೂಲೆಗಳಿಂದ ಒಂದೂವರೆ ಲಕ್ಷಕ್ಕೂ ಅಧಿಕ ಸಹಕಾರಿಗಳು, ಕೆ.ಎನ್.ಆರ್ ಹಿತೈಷಿಗಳು, ಸಾರ್ವಜನಿಕರು ಬರುವ ನಿರೀಕ್ಷೆ ಇದೆ. ಹಾಗಾಗಿ ಬೃಹತ್ ಶಾಮಿಯಾನ ವ್ಯವಸ್ಥೆ ಮಾಡಬೇಕಿದೆ. ಅಲ್ಲದೆ ಕಾರ್ಯಕ್ರಮಕ್ಕೆ ಯಾವುದೇ ವಿಘ್ನ ಬಾರದಂತೆ ಭೂಮಿ ಪೂಜೆ ಮಾಡಿ ವೇದಿಕೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಆದಿಯಾಗಿ ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕರು, ಸಂಸದರು ಭಾಗವಹಿಸಲಿದ್ದಾರೆ. ಜಿಲ್ಲೆಯ ಮಟ್ಟಿಗೆ ಇದೊಂದು ಅವಿಸ್ಮರಣೀಯ ಕಾರ್ಯಕ್ರಮವಾಗಿ ಜನರ ಮನಸ್ಸಿನಲ್ಲಿ ಉಳಿಯಲಿದೆ. ಕೆ.ಎನ್.ರಾಜಣ್ಣ ಅವರಿಗೆ ೭೫ ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರ ಅಮೃತ ಮಹೋತ್ಸವ ಹಾಗೂ ಗೌರವ ಗ್ರಂಥ ಬಿಡುಗಡೆ ಕಾರ್ಯಕ್ರವವನ್ಬು ಅಮೃತ ಮಹೋತ್ಸವ ಅಭಿನಂದನಾ ಗ್ರಂಥ ಸಮಿತಿ ಆಯೋಜಿಸಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಬೇಕು ಎಂದು ಅವರು ಮನವಿ ಮಾಡಿದರು.
ಆರ್.ಸಿ.ಬಿ ವಿಜಯೋತ್ಸವದ ವೇಳೆ ಜರುಗಿದ ದುರ್ಘಟನೆಗೆ ಸರ್ಕಾರ, ಆರ್.ಸಿ.ಬಿ ತಂಡ. ಕಾರ್ಯಕ್ರಮ ಆಯೋಜಕರು ಎಲ್ಲರದ್ದೂ ತಪ್ಪಿದೆ. ಕಪ್ ಗೆದ್ದ ಮಾರನೇಯ ದಿನವೇ ಕಾರ್ಯಕ್ರಮ ಆಯೋಜಿಸುವ ಅಗತ್ಯ ಇರಲಿಲ್ಲ. ಈ ಪ್ರಕರಣದಲ್ಲಿ ಗುಪ್ತಚರ ವಿಭಾಗದ ಎಡಿಜಿಪಿ ಅವರನ್ನು ಅಮಾನತ್ತು ಮಾಡಬೇಕು. ಬಹೃತ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸರಿಯಾದ ಮಾಹಿತಿಯನ್ನು ಸರ್ಕಾರಕ್ಕೆ ಗುಪ್ತಚರ ವಿಭಾಗ ತಲುಪಿಸಬೇಕಿತ್ತು. ಈ ಲೋಪವೇ ಇಷ್ಟೆಲಾ ಅನಾಹುತಕ್ಕೆ ಕಾರಣವಾಯಿತು ಎಂದ ಅವರು ಹೇಳಿದರು.
ಕೆ.ಎನ್.ರಾಜಣ್ಣ ಅವರ ಇಷ್ಷದ ಖಾತೆ ಸಹಕಾರ. ಅದೇ ಖಾತೆ ಸಿಕ್ಕಿದೆ. ಮುಂದಿನ ಮೂರು ವರ್ಷ ಅದೇ ಖಾತೆಯಲ್ಲಿ ಮುಂದುವರೆಯಲಿದ್ದಾರೆ. ಗೃಹ ಸಚಿವರಾಗುತ್ತಾರೆ ಎನ್ನುವುದು ನನಗೆ ತಿಳಿಯದು ಎಂದರು.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್‌ಗೆ ವೈಯು ಕ್ತಿಕವಾಗಿ ನನ್ನ ವಿರೋಧವಿದೆ. ಕೇವಲ ಕುಣಿಗಲ್ ಒಂದರ ಅಂಕಿ ಅಂಶ ತೋರಿಸಿ ಯೋಜನೆ ಮಾಡಲು ಹೊರಟಿದ್ದಾರೆ. ಅದೇ ವರ್ಷಗಳಲ್ಲಿ ತುಮಕೂರು, ಗುಬ್ಬಿ, ಮಧುಗಿರಿ, ಕೊರಟಗೆರೆ, ಸಿರಾ, ತುಮಕೂರು ಗ್ರಾಮಾಂತರ ಕ್ಷೇತ್ರಗಳಿಗೆ ಎಷ್ಟು ನೀರು ಹರಿದಿದೆ ಎಂಬ ಮಾಹಿತಿ ನೀಡಲಿ. ಅದನ್ಬು ಬಿಟ್ಟು, ಒಂದು ತಾಲ್ಲೂಕಿನ ಅಂಕಿ ಅಂಶದ ಮೇಲೆ ಎಕ್ಸ್ಪ್ರೆಸ್ ಕೆನಾಲ್ ಯೋಜನೆ ರೂಪಿಸಿರುವುದು ಸರಿಯಲ್ಲ ಎಂದು ಆರ್.ರಾಜೇಂದ್ರ ಆಕ್ಷೇಪಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ಆರ್.ರವೀಂದ್ರ, ಅಭಿನಂದನಾ ಸಮಿತಿಯ ಮುಖ್ಯಸ್ಥರಾದ ಎಸ್.ನಾಗಣ್ಣ, ಮುರು ಳೀಕೃಷ್ಣಪ್ಪ, ಟಿ.ಆರ್. ಆಂಜಿನಪ್ಪ, ಡಾ.ಶೈಲಾ ನಾಗರಾಜು, ಎಂ.ಹೆಚ್. ನಾಗರಾಜು, ಡಿ.ಸಿ.ಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಜಂಗಮಪ್ಪ, ಕಲ್ಲಹಳ್ಳಿ ದೇವರಾಜು, ಗಂಗಣ್ಣ, ಪುರುಷೋತ್ತಮ, ಪಿ.ಮೂರ್ತಿ, ವೆಂಕಟೇಗೌಡ, ಧನಿಯಕುಮಾರ್. ಮಂಜೇಶ್, ಎಂ.ವಿ. ರಾಘವೇಂದ್ರಸ್ವಾಮಿ, ನಾರಾಯಣಗೌಡ, ಪಾತಣ್ಣ, ಟಿ.ಪಿ.ಮಂಜುನಾಥ್, ಲಕ್ಷಿ÷್ಮÃನಾರಾಯಣ, ಲಕ್ಷ÷್ಮಣ ಮಡಿವಾಳ ಮತ್ತಿತರರು ಉಪಸ್ಥಿತರಿದ್ದರು

 

(Visited 1 times, 1 visits today)