BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ
ಇತರೆ ಸುದ್ಧಿಗಳು

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

ಡಾ.ಬಾಬು ಜಗಜೀವನ್ ರಾಂ ಪ್ರಶಸ್ತಿ ಪುರಸ್ಕೃತ ಹಿರಿಯ ಹೋರಾಟಗಾರ ಎನ್.ವೆಂಕಟೇಶ್ ಅಭಿಪ್ರಾಯ
By News Desk BenkiyabaleUpdated:June 16, 2025 1:56 pm

ತುಮಕೂರು: ಶೋಷಿತ ಸಮುದಾಯಗಳಲ್ಲಿ ಹೋರಾಟದ ಕಿಚ್ಚು ಹತ್ತಿಸಿದ ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಹಾದಿಯಲ್ಲಿ ಯುವ ಸಮುದಾಯ ಹೆಜ್ಜೆ ಹಾಕಬೇಕಿದೆ. ಶಿಕ್ಷಣ, ಸಂಘಟನೆಯ ಮೂಲಕ ಸಮುದಾಯದ ಅಭಿವೃದ್ಧಿ ಹೊಂದಬೇಕಿದೆ ಎಂದು ಡಾ.ಬಾಬು ಜಗಜೀವನ್ ರಾಂ ಪ್ರಶಸ್ತಿ ಪುರಸ್ಕೃತ ಹಿರಿಯ ಹೋರಾಟಗಾರ ಎನ್.ವೆಂಕಟೇಶ್ ಅಭಿಪ್ರಾಯಪಟ್ಟರು.
ನಗರದಲ್ಲಿ ಒಳಮೀಸಲಾತಿ ಹೋರಾಟ ಸಮಿತಿ ದಲಿತ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಪ್ರೊ.ಬಿ.ಕೃಷ್ಣಪ್ಪ ಜನ್ಮಾದಿನಾಚರಣೆ ಹಾಗೂ ಒಳಮೀಸಲಾತಿ ಮುಂದಿನ ಹೆಜ್ಜೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರೊ.ಬಿ.ಕೃಷ್ಣಪ್ಪ ಅವರು ಪ್ರಾರಂಭಿಸಿದ ದಲಿತ ಸಂಘರ್ಷ ಸಮಿತಿ ಶೋಷಿತ, ಹಿಂದುಳಿದ ವರ್ಗಗಳಲ್ಲಿ ಸ್ವಾಭಿಮಾನದ ಹೋರಾಟವನ್ನು, ತಾರತಮ್ಯದ ವಿರುದ್ಧ ಹೋರಾಡುವ ಶಕ್ತಿಯನ್ನು ತುಂಬಿತು. ಶೋಷಿತ ಮತ್ತು ಹಿಂದುಳಿದವರು ಇಂದು ಸಂಘಟಿತರಾಗಬೇಕಿದೆ ಎಂದರು.
ದಲಿತ ಸಂಘರ್ಷ ಸಮಿತಿ ಹಾಗೂ ವಿರೋಧ ಪಕ್ಷಗಳ ಬೆಂಬಲದೊAದಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪ್ರೊ.ಬಿ.ಕೃಷ್ಣಪ್ಪ ಅವರು ರಾಜೀವ್ ಗಾಂಧಿಯವರ ಸಾವಿನ ಕಾಂಗ್ರೆಸ್ ಪರ ಅನುಕಂಪದ ಅಲೆಯಲ್ಲಿ ಸೋಲನ್ನು ಅನುಭವಿಸಿದರು. ಸೋಲಿನ ನಂತರವೂ ಹೋರಾಟದಿಂದ ವಿಮುಖರಾಗಲಿಲ್ಲ.
ಚುನಾವಣಾ ರಾಜಕೀಯದಲ್ಲಿ ಸೋಲನ್ನು ಕಂಡ ಪ್ರೊ.ಬಿ.ಕೃಷ್ಣಪ್ಪ ಅವರು ದಲಿತ ಸಂಘರ್ಷ ಸಮಿತಿಯೊಂದಿಗೆ, ಬಹುಜನ ಸಮಾಜವಾದಿ ಪಕ್ಷವನ್ನು ರಾಜ್ಯದಲ್ಲಿ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರು. ತಮ್ಮ ೫೯ನೇ ವರ್ಷದಲ್ಲಿ ನಮ್ಮನ್ನು ಅಗಲುವ ಮೂಲಕ ಶೋಷಿತ, ದಲಿತ ವರ್ಗಗಳಲ್ಲಿ ಪ್ರಜ್ವಲಿಸಿದ ಸ್ವಾಭಿಮಾನದ ಜ್ಯೋತಿ ನಂದಿತು ಎಂದರು.
ಪ್ರೊ.ಬಿ.ಕೃಷ್ಣಪ್ಪ ಅವರು ತೋರಿದ ಹಾದಿಯಲ್ಲಿ ಇಂದಿನ ಯುವ ಸಮೂಹ ಸಾಗಬೇಕಿದೆ, ಶೋಷಿತ ಮತ್ತು ಹಿಂದುಳಿದವರಿಗೆ ಶಿಕ್ಷಣ ಮತ್ತು ಸಂಘಟನೆಯ ಶಕ್ತಿಯನ್ನು ತೋರಿಸುವ ಮೂಲಕ ಸಮಾಜವನ್ನು ಸರಿ ದಾರಿಯಲ್ಲಿ ಮುನ್ನೆಡೆಸಬೇಕಾದ ಮಹತ್ವದ ಜವಾಬ್ದಾರಿ ಇದೆ ಎನ್ನುವುದನ್ನು ಅರಿಯಬೇಕು ಎಂದರು.
ಪತ್ರಕರ್ತ ಎಸ್.ನಾಗಣ್ಣ ಮಾತನಾಡಿ ಪ್ರೊ.ಬಿ.ಕೃಷ್ಣಪ್ಪ ಅವರು ದಲಿತ ಸಮುದಾಯವನ್ನು ಸಂಘಟಿಸುವ ಮೂಲಕ ದಲಿತ ಸಮುದಾಯಗಳಲ್ಲಿ ರಾಜಕೀಯ, ಶಿಕ್ಷಣದ ಅರಿವನ್ನು ಮೂಡಿಸಿದರು. ಇಂದಿನ ಕಾಲಘಟ್ಟದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಗಳು ಒಂದಾಗಿ ಹೋರಾಟ ನಡೆಸಬೇಕಾದ ಅವಶ್ಯಕತೆ ಇದೆ ಎಂದರು.
ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ದೊರಕಬೇಕಾಗಿದ್ದು, ಹಿಂದುಳಿದ ವರ್ಗಗಳಿಗೂ ಜನಸಂಖ್ಯೆಗೆ ಅವಶ್ಯಕವಾದ ಮೀಸಲಾತಿಯನ್ನು ಪಡೆಯುವ ಅವಶ್ಯಕತೆ ಇದೆ. ಹಿಂದುಳಿದ ವರ್ಗಗಳಿಗೂ, ದಲಿತ ಸಮುದಾಯಗಳಿಗೂ ಮೀಸಲಾತಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಪಟ್ಟಭದ್ರರ ಹುನ್ನಾರಗಳು ನಡೆಯುತ್ತಿರುವುದರ ವಿರುದ್ಧ ಎಚ್ಚರಿಕೆಯನ್ನು ವಹಿಸಬೇಕಿದೆ ಎಂದರು.
ಒಳಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ ರಾಜ್ಯದ ದಲಿತರ ಪಾಲಿಗೆ ಪ್ರೊ.ಬಿ.ಕೃಷ್ಣಪ್ಪ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಂತೆ ಪ್ರಭಾವ ಬೀರಿದ ಮಹಾನ್ ನಾಯಕ, ಚಂದ್ರಗುತ್ತಿ ರಾಜ್ಯದಲ್ಲಿ ಅನೇಕ ಅನಿಷ್ಠ ಆಚರಣೆಗಳನ್ನು ನಿಲ್ಲಿಸಲು ದಲಿತ ಸಂಘರ್ಷ ಸಮಿತಿ ಹಾಗೂ ಪ್ರೊ.ಬಿ.ಕೃಷ್ಣಪ್ಪ ಕಾರಣ ಎಂದರು.
ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಸಮೀಕ್ಷೆಯನ್ನು ನಡೆಸುತ್ತಿರುವುದರ ಬೆನ್ನಲ್ಲೆ ಹೊಸದಾಗಿ ಜಾತಿ ಗಣತಿಯನ್ನು ನಡೆಸಲು ತೀರ್ಮಾನಿಸಿದೆ. ಒಳ ಮೀಸಲಾತಿ ಗಣತಿ ಈಗಾಗಲೇ ಬಹುತೇಕ ಮುಗಿಯುವ ಹಂತದಲ್ಲಿ ಇರುವುದರಿಂದ ಮೊದಲು ಒಳ ಮೀಸಲಾತಿಯನ್ನು ನೀಡಿದ ಬಳಿಕ ಜಾತಿಗಣತಿಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎನ್.ವೆಂಕಟೇಶ್, ಪ್ರೊ.ಕೆ.ದೊರೈರಾಜು ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆಂಚಮಾರಯ್ಯ, ನಗರಸಭಾ ಮಾಜಿ ಅಧ್ಯಕ್ಷ ವಾಲೆಚಂದ್ರಯ್ಯ, ನಗರಸಭೆ ಮಾಜಿ ಸದಸ್ಯ ನರಸೀಯಪ್ಪ, ಹನುಮಂತರಾಯಪ್ಪ, ಟೂಡಾ ಮಾಜಿ ಸದಸ್ಯ ಜಯಮೂರ್ತಿ, ಜಿ.ಪಂ.ಸಿಎಒ ನರಸಿಂಹಮೂರ್ತಿ, ಹೋರಾಟಗಾರ ನರಸಿಂಹಯ್ಯ, ನಾಗಾರ್ಜುನ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶಿವನಂಜಪ್ಪ ಸೇರಿದಂತೆ ಇತರರಿದ್ದರು.

(Visited 1 times, 1 visits today)
Previous Articleರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
Next Article ಕ್ಯಾತ್ಸಂದ್ರದಲ್ಲಿ ಡ್ರಗ್ಸ್ ವಿರುದ್ಧಯುವಕರ ಜಾಗೃತಿ ನಡಿಗೆ
News Desk Benkiyabale

Related Posts

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.