BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಡಿಕೆ ತೋಟದಲ್ಲಿ ಪತ್ತೆಯಾಯಿತು ಶಾಸನ
  • ಎಸ್‌ಐಆರ್: ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸುತ್ತಿರುವ ಬಿಎಲ್‌ಒಗಳು
  • ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ
  • ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ
  • ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು
  • ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ
  •  ಜು.೨೯ರವರೆಗೆ ಮನೆ-ಮನೆ ಭೇಟಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಬರಿ ಮಲೆಗೆ ಮಹಿಳೆಯರ ಪ್ರವೇಶ : ಪ್ರತಿಭಟನೆ
Trending

ಶಬರಿ ಮಲೆಗೆ ಮಹಿಳೆಯರ ಪ್ರವೇಶ : ಪ್ರತಿಭಟನೆ

By News Desk BenkiyabaleUpdated:January 03, 2019 3:50 pm

 ತುಮಕೂರು:

      ಮಹಿಳೆಯರು ಶಬರಿಮಲೆ ದೇಗುಲವ ಪ್ರವೇಶಿಸಿರುವುದು ದಾಖಲೆಗಷ್ಟೇ ಹೊರತು ಅವರಿಗೆ ದೇವರ ದರ್ಶನವಾಗಿಲ್ಲ, ಮಹಿಳೆಯರನ್ನು ಕರೆದುಕೊಂಡು ಹೋಗಿ ದರ್ಶನ ಮಾಡಿಸುವಂತಹ ಅಚಾತುರ್ಯವನ್ನು ಕೇರಳ ಸರ್ಕಾರ ಮಾಡಿರುವುದು ಸರಿಯಲ್ಲ ಎಂದು ಅಯ್ಯಪ್ಪಸ್ವಾಮಿ ಸೇವಾ ಸಮಾಜಂನ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್ ಹೇಳಿದರು.

      ನಗರದ ಟೌನ್‍ಹಾಲ್ ಸರ್ಕಲ್‍ನಲ್ಲಿ ಶಬರಿಮಲೆಗೆ ಮಹಿಳೆಯ ಪ್ರವೇಶಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ನಡೆಸಿದ ಮಾನವ ಸರಪಳಿ ನಿರ್ಮಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಶಬರಿಮಲೆಗೆ ಮಹಿಳೆಯರನ್ನು ಕರೆದುಕೊಂಡು ಹೋಗಿ ದರ್ಶನ ಮಾಡಿಸಿರುವ ಪಿಣರಾಯಿ ಅವರ ಕಮ್ಯುನಿಸ್ಟ್ ಸರ್ಕಾರ ಅಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆಯನ್ನು ಮಾಡಿದೆ, ಪಿಣರಾಯಿ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ, ಎಲ್ಲ ಸಂಘಟನೆಗಳೊಂದಿಗೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

      ಕಮ್ಯುನಿಸ್ಟ್ ಸರ್ಕಾರದ ವಿರುದ್ಧ ಈಗಾಗಲೇ ಕೇರಳದಲ್ಲಿ ಅಯ್ಯಪ್ಪಸ್ವಾಮಿ ಆ್ಯಕ್ಷನ್ ಕೌನ್ಸಿಲ್ ಮೂಲಕ ಹೋರಾಟಕ್ಕೆ ಮುಂದಾಗಿದೆ. ಈ ಕೌನ್ಸಿಲ್‍ನ ಹೆಸರಲ್ಲಿನ ಇಂದು ಕೇರಳ ಬಂದ್‍ಗೆ ಕರೆ ನೀಡಲಾಗಿದೆ, 14 ರಾಜ್ಯಗಳಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಕೇರಳಬಂದ್‍ಗೆ ಬೆಂಬಲ ನೀಡಲಾಗುತ್ತಿದೆ. ಪಿಣರಾಯಿ ಸರ್ಕಾರಕ್ಕೆ ಇದು ಕೊನೆಗಾಲವಾಗಿದ್ದು, ಹಿಂದೂ ಭಾವನೆಗಳ ಮೇಲೆ ನಡೆಸುತ್ತಿರುವ ದಬ್ಬಾಳಿಕೆ ನಿಲ್ಲಿಸದೇ ಹೋದಲ್ಲಿ ತೀವ್ರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅಯ್ಯಪ್ಪಸ್ವಾಮಿ ಸೇವಾ ಸಮಾಜಂನ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್ ತಿಳಿಸಿದರು.

      ಹಿಂದೂ ಜಾಗರಣ ವೇದಿಕೆಯ ಜಿ.ಎಸ್.ಬಸವರಾಜು ಮಾತನಾಡಿ, ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶದ ಹಿಂದೆ ಅಂತರಾಷ್ಟ್ರೀಯ ಕುತಂತ್ರವಿದ್ದು, ಕಮ್ಯುನಿಸ್ಟ್ ಸರ್ಕಾರ ಈ ಕುತಂತ್ರಕ್ಕೆ ಕುಮ್ಮಕ್ಕು ನೀಡುವ ಮೂಲಕ ಅನ್ಯಧರ್ಮಿಯ ಮಹಿಳೆಯರನ್ನು ಶಬರಿಮಲೆ ದೇಗುಲ ಪ್ರವೇಶಿಸುವಂತೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದರು.

      ಭಾರತದಲ್ಲಿರುವ 24 ಲಕ್ಷ ದೇಗುಲಗಳಲ್ಲಿ ಕೆಲವೇ ಕೆಲವು ದೇಗುಲಗಳಿಗಷ್ಟೇ ಮಹಿಳೆಯರ ಪ್ರವೇಶವನ್ನು ನಿಷೇಧಿಸಲಾಗಿದೆ, ಹಾಗೆಯೇ ಕೆಲವು ದೇಗುಲಗಳಿಗೆ ಪುರುಷರ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ ಈ ದೇಗುಲಗಳ ಪ್ರವೇಶಕ್ಕೆ ಯಾರು ಸುಪ್ರೀಂಕೋರ್ಟ್ ಮೊರೆ ಹೋಗುವುದಿಲ್ಲ, ದಕ್ಷಿಣ ಭಾರತದಲ್ಲಿಯೇ 4-5 ಕೋಟಿ ಭಕ್ತರು ಪ್ರತಿ ವರ್ಷ ಹೋಗುವ ಶಬರಿ ಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಮೊರೆ ಹೋಗುವ ಮೂಲಕ, ದೇಗುಲದ ಪಾವಿತ್ರ್ಯತೆಯನ್ನು ಹಾಳು ಮಾಡುವ ಪ್ರಯತ್ನವನ್ನು ಕೆಲ ಪ್ರಗತಿಪರರೊಂದಿಗೆ ಸೇರಿಕೊಂಡು ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

      ಪಿಣರಾಯಿ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುವುದನ್ನು ಬಿಡಬೇಕಿದೆ, ಹಿಂದೂಗಳನ್ನು ಕೆರಳಿಸಬೇಡಿ, ಹಿಂದೂಗಳು ಕೆರಳಿದರೆ ಗೋಧ್ರಾ ಘಟನೆ ನಂತರ ಪರಿಣಾಮ ಎದುರಿಸಬೇಕಾಗುತ್ತದೆ, ಸುಪ್ರೀಂಕೋರ್ಟ್ ಆದೇಶದ ಹೆಸರಿನಲ್ಲಿ ಕಮ್ಯುನಿಸ್ಟ್ ಸರ್ಕಾರ ಕುತಂತ್ರದ ಹಿಂದೂಗಳನ್ನು ಹಣೆಯುವ ಪ್ರಯತ್ನವನ್ನು ಬಿಡಬೇಕು ಎಂದು ಎಚ್ಚರಿಸಿದರು.

      ಭಜರಂಗ ದಳದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾತನಾಡಿ ಹಿಂದೂಗಳು ಇಂದು ದಾಸ್ಯರಾಗಿರುವುದರಿಂದಲೇ ಕಮ್ಯುನಿಸ್ಟ ಸರ್ಕಾರ ಹಿಂದೂ ದೇವರಿಗೆ ಅಪಚಾರ ಮಾಡುತ್ತಿದೆ. ಮುಸ್ಲಿಂ, ಕ್ರಿಶ್ಚಿಯನ್ ಮಹಿಳೆಯರಿಗೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಪ್ರೇರೇಪಿಸುತ್ತಿದೆ. ಮುಸಲ್ಮಾನರಿಗೆ, ಬ್ರಿಟೀಷರಿಗೆ ಭಾರತವನ್ನಾಳಲು ಅವಕಾಶ ಮಾಡಿಕೊಟ್ಟಿದ್ದು ಸಹ ಹಿಂದೂಗಳು, ಅವರ ಸೌಮ್ಯತ್ವದಿಂದಲೇ ಇಂದು ಕಮ್ಯುನಿಸ್ಟರು ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದರು ವಿರೋಧಿಸದೇ ದಾಸ್ಯದಿಂದ ಬದುಕುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

      ಹಿಂದೂಗಳು ಮೇಲೆ ಎಷ್ಟೇ ದಬ್ಬಾಳಿಕೆ ನಡೆದರೂ, ಹಿಂದೂಗಳು ಒಂದಾಗುವುದಿಲ್ಲ, ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿ ಸಂಪ್ರದಾಯವನ್ನು ಉಲ್ಲಂಘಿಸಿದಂತೆ, ಅನ್ಯ ಧರ್ಮದ ವಿಚಾರದಲ್ಲಿ ನಡೆದಿದ್ದರೆ ಎಲ್ಲರೂ ಒಂದಾಗಿ ವಿರೋಧಿಸುತ್ತಿದ್ದರು, ಹಿಂದೂ ಧರ್ಮವನ್ನು ಕಾಪಾಡಲು ಉಗ್ರ ಹೋರಾಟಕ್ಕೆ ಮುಂದಾಗಬೇಕಿದೆ, ಇದು ಅನಿವಾರ್ಯವಾಗಿದೆ ಎಂದು ಕರೆ ನೀಡಿದರು.

      ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂನ ಮುಖಂಡ ಕೃಷ್ಣಯ್ಯ ಮಾತನಾಡಿ, ಶಬರಿಮಲೆ ದೇಗುಲಕ್ಕೆ ಮುಸ್ಲಿಂ ಮಹಿಳೆಯೊಬ್ಬಳು ಪೊಲೀಸರೊಂದಿಗೆ ಪ್ರವೇಶಿಸಲು ಯತ್ನಿಸಿದಾಗ ಆಕೆ ಇರುಮಂಡಿಯಲ್ಲಿ ಒಳ ಉಡುಪುಗಳನ್ನು ತಂದಿದ್ದಳು, ಅಂತಹ ಧರ್ಮ ವಿರೋಧಿಗಳಿಗೆ ಕೇರಳ ಸರ್ಕಾರ ಬೆಂಬಲ ನೀಡುತ್ತಿದೆ, ಹಿಂದೂ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡಬೇಕೆಂದು ಮಹಿಳೆಯರನ್ನು ದೇಗುಲಕ್ಕೆ ಮಾರುವೇಷದಲ್ಲಿ ಪೊಲೀಸರೊಂದಿಗೆ ಕಳುಹಿಸಿದೆ, ಮಹಿಳೆಯರು ದೇಗುಲಕ್ಕೆ ಹೋದರು ದೇವರ ದರ್ಶನವಾಗಿಲ್ಲ ಎನ್ನುವುದು ವಿಡಿಯೋದಲ್ಲಿಯೇ ಗೊತ್ತಾಗುತ್ತದೆ, ಅಯ್ಯಪ್ಪ ಸ್ವಾಮಿ ಭಕ್ತರು ಇದರ ವಿರುದ್ಧ ಹೋರಾಡದೇ ಇದ್ದಲ್ಲಿ ದೇಗುಲದ ಪವಿತ್ರತೆಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಕಳವಳ ವ್ಯಕ್ತಿಪಡಿಸಿದರು.

      ಅಯ್ಯಪ್ಪಸ್ವಾಮಿ ಸೇವಾ ಸಮಾಜಂನ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಹುಲಿನಾಯ್ಕರ್ ಮಾತನಾಡಿದರು, ಪ್ರತಿಭಟನೆಯಲ್ಲಿ ಮುಖಂಡರಾದ ರವೀಶಯ್ಯ, ಜಿ.ಕೆ.ಶ್ರೀನಿವಾಸ್, ಧನುಶ್, ಶಿವಪ್ರಸಾದ್, ಪಾಲಿಕೆ ಸದಸ್ಯರಾದ ರಮೇಶ್, ವಿಷ್ಣು, ಗಿರಿಜಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

  

(Visited 50 times, 1 visits today)
Previous Articleಶ್ರೀಗಳು ಬೇಗ ಹುಷಾರಾಗಲೆಂದು ಬಾಹುಬಲಿ ಪ್ರಾರ್ಥನೆ ಮಾಡಿದ್ದೇವೆ
Next Article 2019ರ ಎಂ.ಪಿ.ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ಪಿ.ಎಂ. ಕಣಕ್ಕೆ
News Desk Benkiyabale

Related Posts

ಅಡಿಕೆ ತೋಟದಲ್ಲಿ ಪತ್ತೆಯಾಯಿತು ಶಾಸನ

July 02, 2026 4:59 pm news

ಎಸ್‌ಐಆರ್: ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸುತ್ತಿರುವ ಬಿಎಲ್‌ಒಗಳು

July 02, 2026 4:36 pm news

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm news
ತಾಜಾ ಸುದ್ಧಿಗಳು

ಅಡಿಕೆ ತೋಟದಲ್ಲಿ ಪತ್ತೆಯಾಯಿತು ಶಾಸನ

July 02, 2026 4:59 pm

ಎಸ್‌ಐಆರ್: ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸುತ್ತಿರುವ ಬಿಎಲ್‌ಒಗಳು

July 02, 2026 4:36 pm

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm

ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ

July 02, 2026 4:29 pm

ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ

July 02, 2026 4:26 pm

ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು

July 02, 2026 4:19 pm
Our Youtube Channel
Our Picks

ಅಡಿಕೆ ತೋಟದಲ್ಲಿ ಪತ್ತೆಯಾಯಿತು ಶಾಸನ

July 02, 2026 4:59 pm

ಎಸ್‌ಐಆರ್: ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸುತ್ತಿರುವ ಬಿಎಲ್‌ಒಗಳು

July 02, 2026 4:36 pm

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm

ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ

July 02, 2026 4:29 pm

ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ

July 02, 2026 4:26 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಅಡಿಕೆ ತೋಟದಲ್ಲಿ ಪತ್ತೆಯಾಯಿತು ಶಾಸನ

By News Desk BenkiyabaleJuly 02, 2026 4:59 pm

ತುಮಕೂರು/ಶಿವಮೊಗ್ಗ: ತುಮಕೂರಿನ ಇತಿಹಾಸ ಸಂಶೋಧಕರ ತಂಡ ಶಿವಮೊಗ್ಗ ತಾಲೂಕಿನ ಬಿದಿರಿ ಗ್ರಾಮದಲ್ಲಿ ವಿಜಯನಗರ ಕಾಲದ ಅತ್ಯಂತ ಮಹತ್ವದ ಹಾಗೂ ಇಂದಿನವರೆಗೂ…

ಎಸ್‌ಐಆರ್: ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸುತ್ತಿರುವ ಬಿಎಲ್‌ಒಗಳು

July 02, 2026 4:36 pm

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm

ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ

July 02, 2026 4:29 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.