BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಮ ಸಮಾಜದ ಕನಸು ಹೊತ್ತು ದುಡಿದವರು ಬ್ರಹ್ಮರ್ಷಿ ನಾರಾಯಣಗುರುಗಳು: ಅಪರ ಜಿಲ್ಲಾಧಿಕಾರಿ ಹೇಳಿಕೆ
ಇತರೆ ಸುದ್ಧಿಗಳು

ಸಮ ಸಮಾಜದ ಕನಸು ಹೊತ್ತು ದುಡಿದವರು ಬ್ರಹ್ಮರ್ಷಿ ನಾರಾಯಣಗುರುಗಳು: ಅಪರ ಜಿಲ್ಲಾಧಿಕಾರಿ ಹೇಳಿಕೆ

By News Desk BenkiyabaleUpdated:September 08, 2025 3:08 pm

ತುಮಕೂರು: ತುಳಿತಕ್ಕೆ ಒಳಗಾದ ಸಮಾಜಗಳ ಜನರ ಏಳಿಗೆಗಾಗಿ, ಸಮ ಸಮಾಜದ ಕನಸು ಹೊತ್ತು ದುಡಿದ ಮಹನೀಯರಲ್ಲಿ ಬ್ರಹ್ಮರ್ಷಿ ನಾರಾಯಣಗುರುಗಳು ಅಗ್ರಗಣ್ಯರು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್,ಜಿಲ್ಲಾ ಆರ್ಯ ಈಡಿಗರ ಸಂಘ ಹಾಗೂ ಬ್ರಹ್ಮರ್ಷಿ ನಾರಾಯಣಗುರು ಸಮಾಜ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಬ್ರಹ್ಮರ್ಷಿ ನಾರಾಯಣಗುರುಗಳ ೧೭೧ನೇ ಜನ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಸಮಾಜದಲ್ಲಿನ ಮೇಳು, ಕೀಳು, ಜಾತಿ, ಧರ್ಮಗಳ ನಡುವಿನ ತಾರತಮ್ಯ ಹೋಗಿ, ಸಮ ಸಮಾಜ ನಿರ್ಮಾಣವಾಗಬೇಕೆಂಬುದು ಬ್ರಹ್ಮಶ್ರೀ ನಾರಾಯಣಗುರುಗಳ ಕನಸಾಗಿತ್ತು ಎಂದರು.
ದೇವರನಾಡು ಎಂದು ಕರೆಯಿಸಿಕೊಳ್ಳುತ್ತಿದ್ದ ಕೇರಳದಲ್ಲಿ ೧೮೫೫ರಲ್ಲಿ ಹುಟ್ಟಿದ ನಾರಾಯಣಗುರುಗಳು, ಸಮಾಜದಲ್ಲಿದ್ದ ಮೂಡನಂಬಿಕೆ,ಅಶಕ್ತರು, ದೀನ ದಲಿತರು, ಬಡವರ ಮೇಲಿನ ಮೇಲ್ವರ್ಗಗಳ ದಬ್ಬಾಳಿಕೆ, ದೇವಾಲಯ ಪ್ರವೇಶ ನಿರಾಕರಣೆ ಇವುಗಳ ವಿರುದ್ದ ರಕ್ತ ರಹಿತ ಕ್ರಾಂತಿ ಮಾಡಿದವರು, ದೇವರು, ಧರ್ಮ, ಸಮಾಜ ಈ ಮೂರು ವಿಚಾರಗಳು ಅವರ ಸಮಾಜ ಸುಧಾರಣೆಯ ಪ್ರಮುಖ ವಿಷಯಗಳಾಗಿದ್ದವು.ಏಕ ದೇವೋಪಾಸಕರಾಗಿ ಇರುವಂತೆ ಬೋಧನೆ ಮಾಡುತ್ತಿದ್ದ ಅವರು, ಯಾರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶವಿಲ್ಲವೋ ಅವರು, ತಾವೇ ಒಂದು ದೇವಾಲಯ ನಿರ್ಮಿಸಿಕೊಳ್ಳುವಂತೆ ಸಲಹೆ ನೀಡಿ, ಸಮಾಜದಲ್ಲಿ ಶಾಂತಿ ನೆಲೆಸಲು ಕಾರಣರಾದರು.ಶ್ರೀಲಂಕಾದಲ್ಲಿ ಜನರು ಹಿಂದುಳಿಯಲು ಶಿಕ್ಷಣದ ಕೊರತೆ ಕಾರಣ ಎನ್ನುವುದನ್ನು ಅರಿತು ರಾತ್ರಿ ಶಾಲೆ ತೆರೆಯುವಂತೆ ಪ್ರೇರೆಪಿಸಿದ ಕೀರ್ತಿ ನಾರಾಯಣಗುರುಗಳಿಗೆ ಸಲ್ಲುತ್ತದೆ.ಅವರ ದಾರಿಯಲ್ಲಿ ನಾವೆಲ್ಲರೂ ನಡೆಯುವ ಮೂಲಕ ಅವರ ಕನಸನ್ನು ನನಸಾಗಿಸುವತ್ತ ಮುನ್ನೆಡೆಯೋಣ ಎಂಬ ಆಶಯವನ್ನು ಎಡಿಸಿ ಡಾ.ಎನ್.ತಿಪ್ಪೇಸ್ವಾಮಿ ವ್ಯಕ್ತಪಡಿಸಿದರು.
ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ,ಸಮಾಜದಲ್ಲಿ ತುಳಿತಕ್ಕೆ ಒಳಗಾದ, ದುರ್ಬಲ ಸಮುದಾಯಗಳಿಗೆ ತಮ್ಮ ಬೋಧನೆಗಳ ಮೂಲಕ ಬಲ ತುಂಬಿ, ಅವರಲ್ಲಿಯೂ ಸಮಾಜಿಕ ಪರಿವರ್ತನೆಗೆ ಕಾರಣರಾದವರು ಬ್ರಹ್ಮಶ್ರೀ ನಾರಾಯಣಗುರುಗಳು,ಶಿಕ್ಷಣದಿಂದ ಎಲ್ಲಾ ಸಂಕೋಲೆಗಳನ್ನು ತೊಡೆದು ಹಾಕಬಹುದು ಎಂಬ ನಂಬಿಕೆಯಿAದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು. ಇಂತಹ ಮಹನೀಯರು ಜಯಂತಿಯನ್ನು ಸರಕಾರಿ ಕಾರ್ಯಕ್ರಮವನ್ನು ಆಚರಿಸುತ್ತಿರುವುದು ಸಂತೋಷದ ವಿಚಾರ ಎಂದರು.
ತುಮಕೂರು ಜಿಲ್ಲಾ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಸಂದ್ರ ಶಿವಣ್ಣ ಮಾತನಾಡಿ,ಬ್ರಹ್ಮಶ್ರೀ ನಾರಾಯಣ ಗುರುಗಳನ್ನು ಸಮುದಾಯಕ್ಕೆ ಪರಿಚಯಿಸಿದವರು ನಮ್ಮ ಸಮುದಾಯದ ಹಿರಿಯರಾದ ಜೆ.ಪಿ.ನಾರಾಯಣ ಸ್ವಾಮಿಯವರು ಮತ್ತು ಆರ್.ಎಲ್.ಜಾಲಪ್ಪ ಅವರು,ತದನಂತರದಲ್ಲಿ ನಾರಾಯಣಗುರುಗಳ ಬಗ್ಗೆ ಅರಿಯುವ ಕೆಲಸ ಆರಂಭವಾಯಿತು.ಜಿಲ್ಲಾಡಳಿತದ ಸಹಕಾರದೊಂದಿಗೆ ಮುಂದಿನ ಅಕ್ಟೋಬರ್ ೨೬ ರಂದು ಆರ್ಯ ಈಡಿಗರ ಸಂಘದವತಿಯಿAದ ನಗರದ ಗ್ರಂಥಾಲಯ ಸಭಾಂಗಣದಲ್ಲಿ ನಾರಾಯಣಗುರುಗಳ ಜಯಂತಿ ಜೊತೆಗೆ,ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕಾರ ಸಹ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಮಾತನಾಡಿ,೧೯ನೇ ಶತಮಾನದಲ್ಲಿ ಸಮಾಜದಲ್ಲಿದ್ದ ಸಾಮಾಜಿಕ ಪೀಡುಗುಗಳಾಗಿದ್ದ ಮೂಢನಂಬಿಕೆ,ದೌರ್ಜನ್ಯ ದಬ್ಬಾಳಿಕೆ,ದೇವರು, ಧರ್ಮದ ಹೆಸರಿನಲ್ಲಿ ತಳ ಸಮುದಾಯಗಳ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ತಡೆಯಲು ತಮ್ಮದೇ ಆದ ರೀತಿಯಲ್ಲಿ ಪ್ರಯತ್ನಿಸಿದ ಬ್ರಹ್ಮಶ್ರೀ ನಾರಾಯಣಗುರುಗಳ ಈ ಸಮಾಜ ಸುಧಾರಣೆಯ ಕೆಲಸ ಮಹಾತ್ಮಗಾಂಧಿ,ರವೀAದ್ರನಾಥ ಟ್ಯಾಗೋರ್, ವಿನೋಭಾಭಾವೆ ಅವರಂತಹ ಹಿರಿಯರನ್ನು ತಲುಪಿದ್ದು, ವಿಶೇಷ.ಮಹಿಳಾ ಸಮಾನತೆ, ಶಿಕ್ಷಣ, ಸ್ವಚ್ಚತೆ,ಪ್ರತ್ಯೇಕ ದೇವಾಲಯಗಳ ನಿರ್ಮಾಣ,ಮಧ್ಯಪಾನ ನಿಷೇಧ ಇನ್ನೂ ಹಲವು ವಿಚಾರಗಳ ಬಗ್ಗೆ ತಮ್ಮ ಹೋರಾಟವನ್ನು ನಾರಾಯಣಗುರುಗಳ ನಡೆಸಿದ್ದರು ಎಂಬುದನ್ನು ಇತಿಹಾಸದಿಂದ ತಿಳಿಯಬಹುದು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶಕುಮಾರ್,ಉಪತಹಶೀಲ್ದಾರ್ ಕಮಲಮ್ಮ, ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಧನಿಯಕುಮಾರ್, ಡಿ.ಎಂ.ಸತೀಶ್,ಟಿ.ಆರ್.ಸದಾಶಿವಯ್ಯ,ಆರ್ಯ ಈಡಿಗರ ಸಮುದಾಯದ ಅಧ್ಯಕ್ಷರಾದ ನಾಗರಾಜು,ಉಪಾಧ್ಯಕ್ಷರಾದ ವೆಂಕಟಸ್ವಾಮಿ, ಬ್ರಹ್ಮಶ್ರೀ ನಾರಾಯಣಗುರು ಸಮಾಜ ಟ್ರಸ್ಟ್ನ ಮಾಧವನ್, ಊರುಕೆರೆ ಪುರುಷೋತ್ತಮ್, ಖಜಾಂಚಿ ಹೆಚ್.ಎಂ.ಕುಮಾರ್, ಎನ್.ಮಂಜುನಾಥ್, ಎಲ್.ಐ.ಸಿ. ನಾರಾಯಣ್, ಸುರಭಿ ನಾಗರಾಜು, ರಾಜೇಶ್, ರಾಜಣ್ಣ ಮತ್ತಿತರರು ಪಾಲ್ಗೊಂಡಿದ್ದರು.

 

(Visited 1 times, 1 visits today)
Previous Articleನ್ಯಾಯ ಇರುವಡೆ ಶಾಂತಿ, ಸಾಮರಸ್ಯದ ಬದುಕು ಸಾಧ್ಯ
Next Article ಆ. ೦೬ ರಿಂದ ನೀರು ಸರಬರಾಜು ನೌಕರರು ಅನಿರ್ಧಿಷ್ಠಾವಧಿ ಮುಷ್ಕರ
News Desk Benkiyabale

Related Posts

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm news

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm news

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm news
ತಾಜಾ ಸುದ್ಧಿಗಳು

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm
Our Youtube Channel
Our Picks

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

By News Desk BenkiyabaleJuly 09, 2026 4:59 pm

ಪಾವಗಡ: ಬಡ ಜನರಿಗಾಗಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆ ಹಾಗೂ ನೆರೆಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು…

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.