ತುಮಕೂರು: ನಗರದ ವಿವೇಕಾನಂದ ಕ್ರೀಡಾ ಸಂಸ್ಥೆ ಹಾಗೂ ರಾಜ್ಯ ಖೋ ಖೋ ಸಂಸ್ಥೆ ಆಶ್ರಯದಲ್ಲಿ ಇಂದಿನಿ0ದ ಎರೆಡು ದಿನಗಳ ಕಾಲ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದ ಎರಡು ಅಂಕಣದಲ್ಲಿ ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಖೋ ಖೋ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.
ವಿವೇಕಾನಂದ ಕ್ರೀಡಾ ಸಂಸ್ಥೆ ಅಧ್ಯಕ್ಷ ಹೆಚ್.ಡಿ.ಕುಮಾರ್ ಅವರು ಗುರುವಾರ ಮೈದಾ ನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಹಾಗೂ ರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಆಡಿರುವ ಹೆಸರಾಂತ ಖೋ ಖೋ ಆಟಗಾ ರರು ಒಳಗೊಂಡ ತಂಡಗಳು ಹಗಲು ಹಾಗೂ ಹೊನಲುಬೆಳಕಿನ ಪಂದ್ಯಾವಳಿಯಲ್ಲಿ ಭಾಗವ ಹಿಸಲಿವೆ. ಪುರುಷರ ೧೩ ಹಾಗೂ ಮಹಿಳೆಯರ ೮ ತಂಡಗಳು ಸೆಣೆಸಾಡುವ ರೋಚಕ ಖೋ ಖೋ ಪಂದ್ಯಾವಳಿಯನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇದೇ ೧೦ರಂದು ಸಂಜೆ ೬ ಗಂಟೆಗೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಗಳ ದಿವ್ಯಸಾನಿಧ್ಯದ ಸಮಾರಂಭದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಖೋ ಖೋ ಪಂದ್ಯಾವಳಿ ಉದ್ಘಾಟಿಸುವರು. ರಾಜ್ಯ ಖೋ ಖೋ ಸಂಸ್ಥೆ ಅಧ್ಯಕ್ಷ ಲೋಕೇಶ್ವರ್, ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತ್ತಿತರರು ಭಾಗವಹಿಸುವರು. ಎರಡು ಅಂಕಣಗಳಲ್ಲಿ ಮ್ಯಾಟ್ ಅಳವಡಿಸಿ ಅಂತರಾಷ್ಟ್ರೀಯ ಗುಣ ಮಟ್ಟದ ಅಂಕಣ ಸಿದ್ಧಪಡಿಸಲಾಗುವುದು. ರಾಜ್ಯ ಸಂಸ್ಥೆಯ ಹೊಸ ನಿಯಮಗಳನ್ನು ಟೂರ್ನಿಯಲ್ಲಿ ಅಳವಡಿಸಲಾಗಿದೆ ಎಂದರು.
ವಿಜೇತ ತಂಡಗಳಿಗೆ ನಗದು ಬಹುಮಾನದ ಜೊತೆ ಟ್ರೋಫಿ ನೀಡಲಾಗುವುದು. ವಿಜೇತ ಪುರುಷ ತಂಡಕ್ಕೆ ಹಿರಿಯ ಕ್ರೀಡಾಪಟು ದಿ.ರವಿ ಸ್ಮಾರಕ ಟ್ರೋಫಿ ಹಾಗೂ ಮಹಿಳಾ ತಂಡದ ವಿಜೇತರಿಗೆ ದಿ.ಚಂದ್ರಕಲಾ ಸ್ಮರಣಾರ್ಥ ಟ್ರೋಪಿ ವಿತರಿಸಲಾಗುವುದು. ೧೨ರಂದು ಸಂಜೆ ೫.೩೦ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ರಾದ ಕೆ.ಎನ್.ರಾಜಣ್ಣ, ಟಿ.ಬಿ.ಜಯಚಂದ್ರ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಎಸ್.ಆರ್. ಶ್ರೀನಿವಾಸ್, ಸುರೇಶ್ಗೌಡ, ಸುರೇಶ್ಬಾಬು ಮೊದಲಾದವರು ಪಾಲ್ಗೊಂಡು ವಿಜೇತ ತಂಡ ಗಳಿಗೆ ಬಹುಮಾನ ವಿತರಿಸುವರು ಎಂದು ಹೆಚ್.ಡಿ.ಕುಮಾರ್ ಹೇಳಿದರು.
ಸಂಸ್ಥೆಯ ಮಾಜಿ ಅಧ್ಯಕ್ಷ ಧನಿಯಾಕುಮಾರ್ ಮಾತನಾಡಿ, ವಿವೇಕಾನಂದ ಕ್ರೀಡಾ ಸಂಸ್ಥೆ ಸುಮಾರು ೪೫ ವರ್ಷಗಳಿಂದ ತಾಲ್ಲೂಕು ಮಟ್ಟ ದಿಂದ ರಾಷ್ಟ್ರೀಯಮಟ್ಟದವರೆಗಿನ ಟೂರ್ನಿಗಳನ್ನು ಆಯೋಜಿಸಿ ಹೆಸರಾಗಿದೆ. ಸಂಸ್ಥೆಯಲ್ಲಿ ತರಬೇತಿ ಪಡೆದ ಹಲವಾರು ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ. ಕ್ರೀಡೆಯನ್ನು ಪ್ರೋತ್ಸಾಹಿಸಲು ಸರ್ಕಾರ ಉದ್ಯೋಗ ನೇಮಕಾತಿಯಲ್ಲಿ ಕ್ರೀಡಾ ಕೋಟಾ ಪ್ರಮಾಣವನ್ನು ಹೆಚ್ಚುಮಾಡಬೇಕು ಎಂದು ಮನವಿ ಮಾಡಿದರು. ರೈಲ್ವೆ ಇಲಾಖೆಯ ನೇಮಕಾತಿಗಳಲ್ಲಿ ಕ್ರೀಡಾ ಕೋಟಾಕ್ಕೆ ಹೆಚ್ಚಿನ ಒತ್ತು ನೀಡಿ, ಎಂದರು.
(Visited 1 times, 1 visits today)