BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
  • ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ
  • ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ
  • ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ
  • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ
  • ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
  • ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್
  • ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ
ಇತರೆ ಸುದ್ಧಿಗಳು

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

By News Desk BenkiyabaleUpdated:October 29, 2025 1:48 pm

ತುಮಕೂರು: ಹಳ್ಳಿಗಾಡಿನ ಬಡವರು, ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಮಾತ್ರ ಇದೆ. ಇದನ್ನು ಅರಿತು ಸಹಕಾರಿ ರಂಗದಲ್ಲಿರುವ ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆದ ಶಾಸಕ ಕೆ.ಎನ್. ರಾಜಣ್ಣ ಕರೆ ನೀಡಿದರು.
ನಗರದ ಅರ್ಬನ್ ರೆಸಾರ್ಟ್ನ ಸಭಾಂಗಣದಲ್ಲಿ ತುಮಕೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರಿ ಆಂದೋಲನ ಜನರ ಆಂದೋಲನ. ಸಹಕಾರಿ ಆಂದೋಲನದಲ್ಲಿ ಕೆಲಸ ಮಾಡುವುದು ಹೆಮ್ಮೆಯ ಸಂಗತಿ. ಗ್ರಾಮೀಣ ಭಾಗದ ಜನರ ಬದುಕು ಉತ್ತಮಗೊಳಿಸುವುದು ಸಹಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದರು.
ಸದಾ ಜನರ ನಿಕಟ ಸಂಪರ್ಕ ಸಹಕಾರಿ ಆಂದೋಲನದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಇರುತ್ತದೆ. ಬೇರೆ ಯಾವ ರಾಜಕಾರಣಿಗಳಿಗೂ ಜನರ ನಿಕಟ ಸಂಪರ್ಕ ಹೊಂದಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಸಹಕಾರಿ ತತ್ವ ಸಿದ್ದಾಂತದ ಮೇಲೆ ನಾವೆಲ್ಲರೂ ನಡೆಯಬೇಕು. ಆಗ ಮಾತ್ರ ಸಹಕಾರಿ ರಂಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದ ಅವರು, ಸಹಕಾರಿಗಳು ಮನಸ್ಸು ಮಾಡಿದರೆ ರಾಜಕೀಯವಾಗಿ ಏನು ಬೇಕಾದರೂ ಸಾಧಿಸಬಹುದು ಎಂದರು.
ಸಹಕಾರಿ ಆಂದೋಲನ ಯಾವತ್ತೂ ಸಹ ಜಾತಿ, ಪಕ್ಷದ ಆಧಾರದ ಮೇಲೆ ಕೆಲಸ ಮಾಡಿಲ್ಲ. ಎಲ್ಲ ವರ್ಗದವರ ಪರವಾಗಿ ಹಾಗೂ ಪಕ್ಷಾತೀತವಾಗಿ ಸಹಕಾರಿ ರಂಗ ಕೆಲಸ ಮಾಡುತ್ತಿದೆ. ಹೀಗಿರುವುದರಿಂದಲೇ ಸಹಕಾರಿ ಕ್ಷೇತ್ರ ದಿನದಿಂದ ದಿನಕ್ಕೆ ಪ್ರಗತಿ ಹೊಂದುತ್ತಿದೆ. ಇದನ್ನು ಮತ್ತಷ್ಟು ಪ್ರಗತಿಪಥದತ್ತ ಕೊಂಡೊಯ್ಯಲು ನಾವೆಲ್ಲರೂ ಮನಸ್ಸು ಮಾಡಬೇಕು ಎಂದು ಹೇಳಿದರು.
ಖಾಸಗಿಯವರು ರೈತರು ಹಾಗೂ ಬಡವರನ್ನು ಶೋಷಣೆ ಮಾಡಬಾರದು ಎಂಬ ಉದ್ದೇಶದಿಂದ ಪತ್ತಿನ ವ್ಯವಸ್ಥೆಯನ್ನು ಪ್ರಾರಂಭಿಸಲಾಯಿತು. ಇಂದು ಪತ್ತಿನ ವ್ಯವಸ್ಥೆ ಸಹಕಾರ ರಂಗದಲ್ಲಿ ಬೃಹತ್ ಆಗಿ ಬೆಳೆದಿರುವುದು ಹೆಮ್ಮೆಯ ವಿಷಯ. ಸಹಕಾರಿ ಸಂಸ್ಥೆಗಳು ರೈತರ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ರೈತರಿಗೆ ದುಬಾರಿಯಾಗದ ರೀತಿಯಲ್ಲಿ ಸಾಲ ಸೌಲಭ್ಯ ಒದಗಿಸಬೇಕು. ಪ್ರತಿಯೊಂದು ವಿಚಾರದಲ್ಲೂ ರೈತರು ಸಹಕಾರಿ ವ್ಯವಸ್ಥೆ ಮೇಲೆ ಅವಲಂಬಿತರಾದಾಗ ಮಾತ್ರ ನಾವು ಅವರಿಗೆ ಸೇವೆ ಸಲ್ಲಿಸಿದಂತಾಗುತ್ತದೆ ಎಂದರು.
ಸಹಕಾರಿ ಸಂಸ್ಥೆಗಳಿಗೆ ಕೇವಲ ಸಾಲ ಕೊಡುವುದರಿಂದ ಲಾಭ ಬರುವುದಿಲ್ಲ. ಹಳ್ಳಿಗಾಡಿನ ರೈತರಿಗೆ ಕಡಿಮೆ ದರದಲ್ಲಿ ಸಾಲ ವಿತರಿಸಬೇಕು. ಜತೆಗೆ ರೈತರ ಅಗತ್ಯತೆಗಳಿಗೂ ಸ್ಪಂದಿಸುವ ಕೆಲಸ ಮಾಡಬೇಕು. ಲಾಭ ಗಳಿಸುವ ಜತೆಗೆ ರೈತರ ಕಷ್ಟಕ್ಕೆ ಸ್ಪಂದಿಸಬೇಕು. ರೈತರು ಹಾಗೂ ಬಡವರನ್ನು ಖಾಸಗಿ ಲೇವಾದೇವಿ ಸಂಸ್ಥೆಗಳಿAದ ಶೋಷಣೆ ಮುಕ್ತರನ್ನಾಗಿ ಮಾಡಬೇಕು ಎಂದು ಹೇಳಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಅದನ್ನು ರೈತಾಪಿ ವರ್ಗದವರಿಗೆ ಸಾಲ ನೀಡಿ ಸಹಾಯ ಮಾಡಬೇಕು. ಅದೇ ರೀತಿ ಸಾಲ ಮರುಪಾವತಿಯತ್ತಲೂ ಗಮನ ಹರಿಸಿ ಸಂಘಗಳ ಪ್ರಗತಿಗೆ ಮುಂದಾಗಬೇಕು ಎಂದು ತಿಳಿಸಿದರು.
ಪತ್ತಿನ ಸಹಕಾರ ಸಂಘಗಳಿಗೆ ತಿಜೋರಿ ವ್ಯವಸ್ಥೆ ಕೂಡ ಮಾಡಿಕೊಡಲಾಗಿದೆ. ಹೆಚ್ಚು ಹೆಚ್ಚು ಚಿನ್ನಾಭರಣ ಸಾಲ ಸಹ ವಿತರಿಸಬೇಕು ಎಂದು ಹೇಳಿದರು.
ರೈತರು ಸದೃಢವಾಗಿದ್ದರೆ ಗ್ರಾಮೀಣ ಪ್ರದೇಶದ ಜನರು ನೆಮ್ಮದಿಯಾಗಿರುತ್ತಾರೆ. ಅದೇ ರೀತಿಯ ರೈತರು ಆರ್ಥಿಕವಾಗಿ ಸದೃಢವಾದಾಗ ಮಾತ್ರ ದೇಶ ಸರ್ವಾಂಗೀಣ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಹಕಾರಿ ರಂಗ ಹಳ್ಳಿಗಾಡಿನ ಜನರ ಜೀವನ ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾಗಿದೆ ಎಂದರು.
ತುಮಕೂರು ತಾಲ್ಲೂಕಿನ ಎಲ್ಲ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನನ್ನನ್ನು ಮತ್ತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಲು ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ತುಮಕೂರು ತಾಲ್ಲೂಕು ಮೊದಲಿನಿಂದಲೂ ಸಹಕಾರಿ ಆಂದೋಲನದಲ್ಲಿ ತೊಡಗಿಸಿಕೊಂಡಿದೆ. ಯಾವತ್ತೂ ಸಹ ಜಾತಿ, ಪಕ್ಷದ ಆಧಾರದ ಮೇಲೆ ಕೆಲಸ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ಎಲ್ಲ ವರ್ಗದ ಬಡವರು, ರೈತರ ಬದುಕು ಉತ್ತಮಗೊಳಿಸುವುದೇ ಸಹಕಾರಿ ಆಂದೋಲನದ ಮುಖ್ಯ ಉದ್ದೇಶ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿ.ಪಂ. ಮಾಜಿ ಅಧ್ಯಕ್ಷ ಕಲ್ಲಹಳ್ಳಿ ದೇವರಾಜು ಅವರು, ಸಹಕಾರಿ ಸಂಘಗಳಲ್ಲಿ ರೈತರಿಗೆ ಹೊಸ ಸಾಲ ನೀಡುವ ಯೋಜನೆಯನ್ನು ಜಾರಿಗೊಳಿಸಬೇಕು. ಅದೇ ರೀತಿ ಡಿಸಿಸಿ ಬ್ಯಾಂಕ್‌ನಲ್ಲಿ ಸಾಲ ಪಡೆದ ರೈತರು ಒಂದು ವೇಳೆ ಮೃತಪಟ್ಟರೆ ಅಂತಹವರ ೨೫ ಸಾವಿರ ರೂ. ವರೆಗಿನ ಸಾಲದ ಮೊತ್ತವನ್ನು ಮನ್ನಾ ಮಾಡಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣನವರಿಗೆ ಮನವಿ ಮಾಡಿದರು.
ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್. ರಾಜಣ್ಣನವರು ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ಈ ವಿಷಯ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಭರವಸೆಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ತುಮಕೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಶಾಸಕ ಕೆ.ಎನ್. ರಾಜಣ್ಣ ದಂಪತಿಗಳು ಸನ್ಮಾನಿಸಿದರು. ನಂತರ ಎಲ್ಲ ಸಹಕಾರ ಸಂಘಗಳ ಅಧ್ಯಕ್ಷರುಗಳು ಶಾಸಕ ಕೆ.ಎನ್. ರಾಜಣ್ಣ ಹಾಗೂ ಶಾಂತಲಾ ರಾಜಣ್ಣ ದಂಪತಿಗಳನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಹಕಾರಿಗಳಾದ ಶಾಂತಲಾ ರಾಜಣ್ಣ, ತಮ್ಮಣ್ಣರೆಡ್ಡಿ, ಗಂಗಣ್ಣ, ವೆಂಕಟೇಗೌಡ, ಕಲ್ಲಹಳ್ಳಿ ದೇವರಾಜು, ಪಿ. ಮೂರ್ತಿ, ಆರ್.ಎನ್. ಗೌಡ, ಡಿಸಿಸಿ ಬ್ಯಾಂಕ್ ಸಿಇಓ ಜಂಗಮಪ್ಪ, ಟಿ.ಪಿ. ಮಂಜುನಾಥ್, ಉಮೇಶ್, ನಾರಾಯಣಗೌಡ, ಲಕ್ಷಿ÷್ಮÃನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

 

(Visited 1 times, 1 visits today)
Previous Articleಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ
Next Article ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ
News Desk Benkiyabale

Related Posts

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm ಇತರೆ ಸುದ್ಧಿಗಳು

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm
ಇತರೆ ಸುದ್ಧಿಗಳು

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm
ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm
ಇತರೆ ಸುದ್ಧಿಗಳು

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
ಇತರೆ ಸುದ್ಧಿಗಳು

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

October 27, 2025 1:23 pm
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm
Our Youtube Channel
Our Picks

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

October 27, 2025 1:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

By News Desk BenkiyabaleOctober 29, 2025 2:01 pm

ತುರುವೇಕೆರೆ: ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದರು. ಪಟ್ಟಣದ ಎಪಿಎಂಸಿ…

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.