BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
  • ೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ
  • ಬುದ್ಧ, ಬಸವ, ಅಂಬೇಡ್ಕರ್ ಹಾದಿಯಲ್ಲಿ ಸಂಘಟನೆ ಸಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗೆ ಮನವಿ
ಇತರೆ ಸುದ್ಧಿಗಳು

ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗೆ ಮನವಿ

By News Desk BenkiyabaleUpdated:November 17, 2025 4:48 pm

ತುಮಕೂರು:  ಪ್ರ‍್ರಕೃತಿಕ ವಿಕೋಪಗಳಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು,ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ತೆರೆಯುವುದು ಸೇರಿದಂತೆ ರೈತರ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಇಂದು ಅಖಿಲ ಭಾರತ ಕಿಸಾನ್ ಸಭಾ ತುಮಕೂರು ಜಿಲ್ಲಾ ಘಟಕದವತಿಯಿಂದ ರಾಜ್ಯ ಉಪಾಕ್ಷರಾದ ಕಂಬೇಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ಕಿಸಾನ ಸಭಾದ ಕಾರ್ಯಕರ್ತರು ಸರಕಾರ ಕೂಡಲೇ ಸಂತ್ರಸ್ಥ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿ,ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ  ಎಐಕೆಎಸ್‌ನ ರಾಜ್ಯ ಉಪಾಧ್ಯಕ್ಷ ಕಂಬೇಗೌಡ, ರಾಜ್ಯದ ಹಲವೆಡೆ ಅಕಾಲಿಕ ಮಳೆಯ ಅತಿವೃಷ್ಟಿಯಿಂದ ಬಹುತೇಕ ವಾಣಿಜ್ಯ ಹಾಗೂ ಆಹಾರ ಬೆಳೆಗಳು ನಾಶವಾಗಿ ರೈತರು ನಷ್ಟ ಅನುಭವಿಸುತ್ತಿದ್ದು, ಇಂತಹ ಹಾನಿಗೊಳಗಾದ ಎಲ್ಲಾ ರೈತರ ಬೆಳೆಗಳನ್ನು ಸರಕಾರ ಸಮೀಕ್ಷೆ ನಡೆಸಿ. ರೈತರಿಗೆ ಆದ ನಿಜವಾದ ನಷ್ಟಕ್ಕೆ ಪರಿಹಾರ ನೀಡಲು ರಾಜ್ಯ ಸರಕಾರ ಏಳಂಬ ಮತ್ತು ನಿರ್ಲಕ್ಷ್ಯವನ್ನು ಕೈ ಬಿಟ್ಟು ಕೂಡಲೇ ನಷ್ಟಕ್ಕೊಳಗಾದ ಬೆಲೆಯ ಮತ್ತು ಪರಿಹಾರ ಮೊತ್ತದ ವಿವರಗಳುಳ್ಳ ಪಟ್ಟಿಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಿ, ಪರಿಹಾರದ ಮೊತ್ತವನ್ನು ಕೂಡಲೇ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಹಾಗೂ ಕೇಂದ್ರ ಸರಕಾರಗಳು ರೈತರ ಬೆಳೆಗಳಿಗೆ ಸಾಮಾನ್ಯ ಬೆಂಬಲ ಬೆಲೆ ಪ್ರಕಟಿಸಿ ಕೆಲವು ಬೆಳೆಗಳ ಖರೀದಿಗೆ ದಿನಾಂಕ ನಿಗದಿ ಮಾಡಿ ರೈತರ ನೋಂದಾವಣೆ ಆರಂಭಿಸಿದ್ದರೂ ಖರೀದಿ ಕೇಂದ್ರಗಳ ಪಟ್ಟಿ ಬಿಡುಗಡೆ ಮಾಡಿದ್ದರೂ ಸಹ ಇದುವರೆವಿಗೂ ಖರೀದಿ ಪ್ರಕ್ರಿಯೆ ಆರಂಭವಾಗಿರುವುದಿಲ್ಲ. ಆದ್ದರಿಂದ ಈಗಾಗಲೇ ಅಳಿದುಳಿದ ಬೆಳೆ ಕಟಾವು ಮುಗಿದಿದ್ದು ರೈತರು ದಾಸ್ತಾನು ಮಾಡಿಟ್ಟುಕೊಳ್ಳಲು ಶಕ್ತಿ ಹಾಗೂ ಅನುಕೂಲವಿಲ್ಲದ ಕಾರಣ ಖಾಸಗಿ ವರ್ತಕರು ಮತ್ತು ದಲ್ಲಾಳಿಗಳಿಗೆ ಮಾರುವ ಒತ್ತಡಕ್ಕೆ ಸಿಲುಕಿದ್ದಾರೆ. ಮಾತ್ರವಲ್ಲ ಇನ್ನೂ ಕಟಾವು ಮಾಡಬೇಕಿರುವ ಬೆಳೆಗಳಿಗೆ ಖರೀದಿ ಕೇಂದ್ರಗಳಿಲ್ಲದೆ ಖಾಸಗಿ ವ್ಯಾಪಾರಿಗಳನ್ನು ಅವಲಂಬಿಸುವ ದುಸ್ಥಿತಿಯಲ್ಲಿದ್ದಾರೆ. ಆದ್ದರಿಂದ ಸರ್ಕಾರಗಳು ಕೂಡಲೇ ಇನ್ನೊಂದು ವಾರದ ಒಳಗೆ ಘೋಷಿಸಿರುವ ಬೆಂಬಲ ಬೆಲೆಯಲ್ಲಿ ರೈತರಿಂದ ಕೊಂಡುಕೊಳ್ಳಲು ಖರೀದಿ ಕೇಂದ್ರಗಳನ್ನು ಕಾರ್ಯಾರಂಭ ಮಾಡಲು ಆದೇಶ ಮತ್ತು ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಸರಕಾರಿ ಭೂವಿಯಲ್ಲಿ ಸಾಗುವಳಿ ಮಾಡಿರುವ ಭೂ ರಹಿತ ರೈತರ ಭೂಮಿಯ ಹಕ್ಕುಪತ್ರ ನೀಡುವ ಅಕ್ರಮ ಸಕ್ರಮ ಸಮಿತಿಗಳಲ್ಲಿ ರಾಜ್ಯಾದ್ಯಂತ ಲಕ್ಷಾಂತರ ಅರ್ಜಿಗಳು ಇನ್ನೂ ವಿಲೇವಾರಿಯಾಗದೆ ಸಂಬAಧಿತ ಸಮಿತಿಗಳನ್ನು ನೇಮಿಸದೆ ಹತ್ತಾರು ವರ್ಷಗಳಿಂದ ಸರಕಾರಗಳು ನಿರ್ಲಕ್ಷ ತೋರಿಸಿದೆ. ರೈತರಿಗೆ ಭೂ ಒಡೆತನ ತ್ರಿಶಂಕು ಸ್ಥಿತಿಯಂತಾಗಿದೆ. ಆದ್ದರಿಂದ ರಾಜ್ಯ ಸರಕಾರ ಈ ದಿವ್ಯ ನಿರ್ಲಕ್ಷ್ಯವನ್ನು ಕೈ ಬಿಟ್ಟು ಬಗರ್ ಹುಕುಂ ಭೂಮಿಗೆ ಹಕ್ಕುಪತ್ರ ನೀಡುವ ಎಲ್ಲಾ ಪ್ರಕ್ರಿಯೆಗಳನ್ನು ಮೊದಲ ಆದ್ಯತೆಯಾಗಿ ಪೂರ್ಣಗೊಳಿಸಬೇಕು.ಕÀಳೆದ ಹತ್ತಾರು ವರ್ಷಗಳಿಂದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕೈಗಾರಿಕೆಗಾಗಿ. ಜನವಸತಿಗಾಗಿ, ಸಾರಿಗೆ, ವಿದ್ಯುತ್, ನೀರಾವರಿ ಮತ್ತಿತರ ಯೋಜನೆಗಳಿಗೆ ರೈತರ ಭೂಮಿಯನ್ನು ಪ್ರಕಟಿಸಿದೆ ಯೋಜನೆಗಳಿಗೆ ಉಪಯೋಗಿಸದೆ. ಒಂದಡೆ ರೈತರ ಭೂಮಿಯನ್ನು ದುರ್ಭಳಕೆಯಾಗುತ್ತಿದ್ದು, ಇನ್ನೊಂದೆಡೆ ಸರಕಾರದ ಯೋಜನೆಗಳನ್ನು ಆರಂಭಿಸಿಲ್ಲ.ಇದರಿAದ ರೈತರಿಗೆ ಅನ್ಯಾಯವಾಗಿದ್ದು ಸರಕಾರಗಳಿಂದ ಭೂ ಸ್ವಾಧೀನ ಕಾಯ್ದೆಯ ದುರ್ಬಳಕೆ ಯಾಗುತ್ತಿದೆ. ಅದ್ದರಿಂದ ರೈತರಿಂದ ಭೂ ಸ್ವಾಧೀನಪಡಿಸಿಕೊಂಡ ಐದು ವರ್ಷಗಳ ನಂತರದ ಅವಧಿಯ ಎಲ್ಲಾ ಭೂಮಿಯನ್ನು, ಆಯಾ ಭೂಮಿಯ ಮೂಲ ಮಾಲೀಕರಿಗೆ ವಾಪಸ್ ಮಾಡಬೇಕು ಅಥವಾ ಅರ್ಹ ಭೂ ರಹಿತರಿಗೆ ಹಂಚಿಕೆ ಮಾಡಬೇಕು ಆಗ್ರಹಿಸಿದರು.

ಸರಕಾರ ರೈತರ ಬೆಳೆ ಸಾಲ ಮನ್ನಾ ಮಾಡುವ ಜೊತೆಗೆ,ರೈತರಿಗೆ ಬಿತ್ತನೆ ಸಂದರ್ಭದಲ್ಲಿ ಗುಣಮಟ್ಟದ ಬಿತ್ತನೆ ಬೀಜ ನೀಡಬೇಕು.ಇಲ್ಲದಿದ್ದರೆ ರೈತರು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚು,ಕಳಪೆ ಬಿತ್ತನೆ ಬೀಜ ವಿತರಿಸುವ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಿ,ರೈತರಿಗೆ ನ್ಯಾಯ ಒದಗಿಸಬೇಕು.ಅಲ್ಲದೆ ಮಳೆ ನೀರಿನಿಂದ ತುಂಬದ ಕೆರೆಗಳಿಗೆ, ನೀರಾವರಿ ಯೋಜನೆಗಳ ಮೂಲಕ ನೀರು ತುಂಬಿಸುವ ಕೆಲಸ ಮಾಡಬೇಕು.ಎತ್ತಿನ ಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ಶೀಘ್ರವಾಗಿ ಜಾರಿ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಕಂಬೇಗೌಡ ಒತ್ತಾಯಿಸಿದರು. ಈ ಸಂಬAಧ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಎಐಕೆಎಸ್ ನ ಪಾವಗಡ ತಾಲೂಕು ಅಧ್ಯಕ್ಷ ಈರದಾಸಪ್ಪ, ಶಿರಾ ತಾಲೂಕು ಅಧ್ಯಕ್ಷರಾದ ಗುರುಸಿದ್ದಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

(Visited 1 times, 1 visits today)
Previous Articleಕ್ರೀಡೆ ಮನುಷ್ಯನಿಗೆ ಜೀವನದ ಪಾಠ ಕಲಿಸುತ್ತದೆ
Next Article ‘ಜ್ಞಾನ ವೃದ್ಧಿ, ವ್ಯಕ್ತಿತ್ವ ರೂಪಿಸಿಕೊಳ್ಳಲು ಓದುವ ಹವ್ಯಾಸ ಸಹಕಾರಿ’
News Desk Benkiyabale

Related Posts

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm news

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm news

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm news
ತಾಜಾ ಸುದ್ಧಿಗಳು

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm

ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ

July 09, 2026 2:28 pm
Our Youtube Channel
Our Picks

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

By News Desk BenkiyabaleJuly 09, 2026 2:53 pm

ಹುಳಿಯಾರು: ಸರ್ಕಾರದ ‘ಮನೆ ಮನೆ ಗಂಗೆ’ ಯೋಜನೆ ಇನ್ನೂ ತಲುಪದ ಆ ಹಳ್ಳಿಯಲ್ಲಿ ಕುಡಿಯುವ ನೀರಿಗೆ ಇರುವುದೇ ಎರಡು ಸಿಸ್ಟನ್‌ಗಳು.…

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.