BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹಿಂದೆ ಗುರು ಮುಂದೆ ಗುರಿ ಇದ್ದರೆ ಸಾಧನೆ ಸಾದ್ಯ
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ
  • ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ
  • ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ
  • ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾ ಗಾಂದಿ
  • ಗ್ರಾಮ ಸ್ವರಾಜ್ ಯಶಸ್ವಿಯಾಗಲು ಉತ್ತಮ ಸುಸಜ್ಜಿತ ಕಟ್ಟಡ ಅಗತ್ಯ: ಚಿದಾನಂದ್ ಎಂ.ಗೌಡ
  • ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ
  • ವ್ಯಕ್ತಿ ಮತ್ತು ಘಟನೆಗಳಿಂದ ಅನೇಕರು ಸ್ಪೂರ್ತಿ ಪಡೆದುಕೊಳ್ಳುತ್ತಾರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ
ಇತರೆ ಸುದ್ಧಿಗಳು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ

ನ.೨೮ರಂದು ಬೆಂಗಳೂರಿನ ಬೃಹತ್ ಸಮಾವೇಶದಲ್ಲಿ ಗೃಹಲಕ್ಷ್ಮೀ ಬ್ಯಾಂಕ್‌ಗೆ ಚಾಲನೆ
By News Desk BenkiyabaleUpdated:November 19, 2025 2:43 pm

 

ತುಮಕೂರು: ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ ೫೦ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ೨೮ರಂದು ಬೆಂಗಳೂರಿನಲ್ಲಿ ನಡೆಯುಲಿರುವ ಕಾರ್ಯಕ್ರಮದಲ್ಲಿ ಐದು ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಜಿಜಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದೂ ಸೇರಿದಂತೆ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಪೂರಕ ಮಹತ್ತರ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕಪಡೆ ಲೋಕಾರ್ಪಣೆ ಹಾಗೂ ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತ ರಾಜ್ಯ ಮಟ್ಟದ ಸಮಾವೇಶಕ್ಕೆ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಮಾಜಿ ಪ್ರಧಾನಿ ಇಂದಿರಾಗಾ0ಧಿಯವರು ಬಲಿಷ್ಠ ಭಾರತ ನಿರ್ಮಾಣದ ಕನಸು ಹೊತ್ತು ೧೯೭೫ರಲ್ಲಿ ಆರಂಭಿಸಿದ ಸಮಗ್ರ ಶಿಶು ಅಭಿವದ್ಧಿ ಸೇವೆಗಳ ಯೋಜನೆ ಐಸಿಡಿಎಸ್‌ಗೆ ೫೦ ವರ್ಷ ತುಂಬಿದ ಹಿನ್ನೆಲೆಯಲ್ಲಿ ಇದೇ ೨೮ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಈ ಸುಸಂದರ್ಭದಲ್ಲಿ ರಾಜ್ಯದಲ್ಲಿ ಮತ್ತೊಂದು ಮೈಲಿಗಲ್ಲು ಆಗಲಿದೆ. ಮಹಿಳೆ ಮತ್ತು ಮಕ್ಕಳ ಸಬಲೀಕರಣಕ್ಕಾಗಿ ಪ್ರಮುಖ ಮೂರು ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ರಾಜ್ಯದ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ಪೂರ್ವ ಪ್ರಾಥಮಿಕ ಆರಂಭಿಸಲಾಗುತ್ತಿದೆ ಎಂದರು.
ಖಾಸಗಿ ಶಾಲೆಗಳಲ್ಲಿ ಸಿಗುವಂತಹ ಗುಣಮಟ್ಟದ ಹಾಗೂ ಇಂಗ್ಲಿಷ್ ಶಿಕ್ಷಣ ಬಡಮಕ್ಕಳಿಗೂ ಸಿಗಬೇಕು ಎಂಬುದನ್ನ ಮನಗಂಡ ರಾಜ್ಯ ಸರ್ಕಾರ ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳನ್ನು ಆರಂಭಿಸಲು ಮುಂದಾಗಿದೆ. ರಾಜ್ಯದ ಒಟ್ಟಾರೆ ಎಲ್ಲ ಅಂಗನವಾಡಿಗಳ ಪೈಕಿ ೧೭ ಸಾವಿರ ಕಾರ್ಯಕರ್ತರು ಪದವಿದರರಿದ್ದು ೪ ಸಾವಿರ ಕಾರ್ಯಕರ್ತರು ಸ್ನಾತಕೋತ್ತರ ಪದವಿದರರಿರುವುದನ್ನು ಗುರುತಿಸಲಾಗಿದೆ. ಇವರನ್ನು ಬಳಸಿಕೊಂಡು ಮೊದಲ ಹಂತದಲ್ಲಿ ಐದು ಸಾವಿರ ಅಂಗನವಾಡಿಗಳನ್ನು ಇದೇ ೨೮ರಂದು ಆರಂಭಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಸಮಾಜದಲ್ಲಿ ಕಾನೂನು ಬಾಹಿರವಾಗಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಹೆಣ್ಣು ಮಕ್ಕಳನ್ನು ಚುಡಾಯಿಸುವುದೂ ಸೇರಿದಂತೆ ಹಲವು ರೀತಿಯ ಪೀಡನೆಗಳು ನಡೆಯುತ್ತಿವೆ. ಇವುಗಳನ್ನು ಹತೋಟಿಗೆ ತರಲು ಹಾಗೂ ಇಂತಹ ಸಮಾಜ ಘಾತುಕರನ್ನು ನಿಯಂತ್ರಿಸಿ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲು ಅಕ್ಕಪಡೆಯನ್ನು ರಚಿಸಲಾಗುತ್ತಿದೆ. ೫ ರಿಂದ ೧೦ ಜನರಿರುವ ಎನ್‌ಸಿಸಿ, ಗೃಹರಕ್ಷಕ ಸಿಬ್ಬಂದಿ ಹಾಗು ಕನಿಷ್ಠ ೨ ಮಹಿಳಾ ಪೊಲೀಸ್ ಇರುವ ಅಕ್ಕಪಡೆ ದೇವಸ್ಥಾನ, ಉದ್ಯಾನ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಹಿಳಾ ಹಾಸ್ಟೆಲ್ ಹೀಗೆ ಜನನಿಬಿಡ ಪ್ರದೇಶಗಳಲ್ಲಿ ಗಸ್ತು ತಿರುಗಲಿದೆ. ಅಲ್ಲದೆ ಅಂತಹ ಘಟನೆಗಳು ಕಂಡು ಬಂದಲ್ಲಿ ಅಥವಾ ಅಕ್ಕಪಡೆಯ ದೂರವಾಣಿಗೆ ಕರೆ ಬಂದಲ್ಲಿ ತಕ್ಷಣ ಅಲ್ಲಿಗೆ ಧಾವಿಸಿ ಅಂತಹ ಶಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಹಾಗೂ ಹೆಣ್ಣು ಮಕ್ಕಳಗೆ ರಕ್ಷಣೆ ನೀಡುವ ಕೆಲಸ ಮಾಡಲಿದೆ ಎಂದು ಅವರು ತಿಳಿಸಿದರು.
ಮಹಿಳಾ ಸಬಲೀಕರಣಕ್ಕೆ ನಮ್ಮ ಸರ್ಕಾರ ನಿರಂತರ ಯೋಜನೆಗಳನ್ನು ಹಾಕಿಕೊಂಡಿದೆ ಎಂದ ಅವರು, ಈ ಹಿಂದೆ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ, ಮೋಟಮ್ಮ ಅವರು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಸ್ತ್ರೀಶಕ್ತಿ ಸ್ವಸಹಾಯಕ ಸಂಘಗಳನ್ನು ಆರಂಭಿಸಿ ಯಶಸ್ವಿಗೊಳಿಸಲಾಗಿತ್ತು.
ಮಹಿಳೆಯರಿಗೆ ಆರ್ಥಿಕ ಸ್ವಾವಲಂಭನೆ ಅಲ್ಲಿಂದಲೆ ಆರಂಭವಾಗಿತ್ತು. ಇದೀಗ ಮುಂದುವರಿದ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಗೃಹಲಕ್ಷ್ಮೀ ಹೆಸರಿನಲ್ಲಿ ಅಭೂತಪೂರ್ವ ಯೋಜನೆನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಅದಕ್ಕೆ ಪೂರಕವಾಗಿ ಇದೇ ೨೮ರಂದು ರಾಜ್ಯಾದ್ಯಂತ ಗೃಹಲಕ್ಷ್ಮೀ ವಿವಿದ್ಧೇಶ ಸ್ವಸಹಾಯ ಸಹಕಾರ ಬ್ಯಾಂಕ್ ಆರಂಭಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಮಹಿಳೆಯರು ತಮ್ಮ ಗೃಹಲಕ್ಷ್ಮೀ ಹಣದಿಂದ ನೇರವಾಗಿ ಬ್ಯಾಂಕ್‌ಗೆ ಒಂದು ಸಾವಿರ ರೂ.ಗಳನ್ನು ವರ್ಗಾವಣೆ ಮಾಡುವ ಮೂಲಕ ಷೇರ್ ಪಡೆದುಕೊಳ್ಳಬೇಕು ಹಾಗೂ ಪ್ರತಿ ತಿಂಗಳು ಕನಿಷ್ಠ ೨೦೦ ರೂ.ಗಳನ್ನು ಉಳಿತಾಯ ಮಾಡಿ ಕನಿಷ್ಠ ಆರು ತಿಂಗಳು ಉಳಿತಾಯದಾರರಿಗೆ ಮೂರು ಸಾವಿರ ರೂ.ಗಳಿಂದ ಆರು ಲಕ್ಷಗಳ ವರೆಗೆ ರಾಷ್ಟ್ರೀಕೃತ ಬ್ಯಾಂಕ್ ದರದಲ್ಲಿ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲಸೌಲಭ್ಯಗಳನ್ನು ನೀಡಲಾಗುವುದು ಎಂದು ಅವರು ವಿವರಿಸಿದರು.
ಕಡಿಮೆ ಕಾಗದ ಪತ್ರಗಳಿಂದ ಕಡಿಮೆ ಬಡ್ಡಿದರದಲ್ಲಿ ಸರ್ಕಾರವೇ ಗ್ಯಾರಂಟಿಯಾಗಿ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಇಂತಹ ಉತ್ತಮ ಯೋಜನೆಯನ್ನು ತರಲಾಗಿದ್ದು, ಕನಿಷ್ಠ ೧.೨೭ ಕೋಟಿ ಮಹಿಳೆಯರು ಗೃಹಲಕ್ಷ್ಮೀ ಬ್ಯಾಂಕ್‌ನ ಸದಸ್ಯತ್ವ ಹೊಂದುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು. ಅಂಗನವಾಗಿಗಳಲ್ಲಿ ಆಹಾರ ಪದಾರ್ಥಗಳು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತದೆ, ದುರುಪಯೋಗಪಡಿಸಿಕೊಳ್ಳಲಾಗುತ್ತದೆ ಎಂಬುದನ್ನು ಮನಗಂಡು ಹಾಜರಾತಿಯ ಮೇಲೆ ಆಹಾರ ನೀಡುವ ವ್ಯವಸ್ಥೆ ಫೇಸ್ ರೆಗ್ನಿಷನ್ ಸಿಸ್ಟಂ ಅನ್ನು ಅಂಗನವಾಡಿಗಳಲ್ಲಿ ಜಾರಿಗೆ ತರಲಾಯಿತು. ರಾಜ್ಯದಲ್ಲಿ ಇದು ಶೇ.೯೯.೦೧ರಷ್ಟು ಯಶಸ್ವಿ ಯೋಜನೆಯಾದುದನ್ನು ಗಮನಿಸಿ ಕೇಂದ್ರ ಸರ್ಕಾರ ದೇಶವ್ಯಾಪಿ ಈ ಯೋಜನೆಯನ್ನು ಜಾರಿಗೊಳಿಸಿದ್ದು ಕರ್ನಾಟಕ ಮಾದರಿ ರಾಜ್ಯವಾಗಿದೆ ಎಂದು ಅವರು ಹೇಳಿದರು.
ದೇಶಕ್ಕೆ ಸದೃಢ ಪ್ರಜೆಗಳನ್ನು ನೀಡುವ, ಮಾನವೀಯ ಮೌಲ್ಯಗಳನ್ನು ಬಿತ್ತುವ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಾಗಿದೆ ಎಂಬುದು ನಮ್ಮ ಹೆಮ್ಮೆ ಎಂದ ಅವರು, ಅಂತಹ ಜವಾಬ್ದಾರಿಯುತ ಕರ್ತವ್ಯದಲ್ಲಿ ತೊಡಗಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನವನ್ನು ದಿನಗಳಲ್ಲಿ ಹೆಚ್ಚಿಸಲಾಗುವುದು. ಇದು ನಮ್ಮ ಸರ್ಕಾರದ ಜವಾಬ್ದಾರಿಯೂ ಹೌದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ದೇಶದ ಬೆಳವಣಿಗೆಯಲ್ಲಿ ಮಹಿಳೆಯರ ಪಾಲು ಹೆಚ್ಚು. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಸಹಭಾಗಿತ್ವದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.
ಜಿಲ್ಲಾಧಿಕಾರಿ ಶುಭಕಲ್ಯಾಣ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ್.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಸಿದ್ದರಾಮಣ್ಣ ಎಸ್. ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ
Next Article ಹಿಂದೆ ಗುರು ಮುಂದೆ ಗುರಿ ಇದ್ದರೆ ಸಾಧನೆ ಸಾದ್ಯ
News Desk Benkiyabale

Related Posts

ಹಿಂದೆ ಗುರು ಮುಂದೆ ಗುರಿ ಇದ್ದರೆ ಸಾಧನೆ ಸಾದ್ಯ

November 19, 2025 3:39 pm ಇತರೆ ಸುದ್ಧಿಗಳು

ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ

November 19, 2025 2:35 pm ಇತರೆ ಸುದ್ಧಿಗಳು

ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ

November 19, 2025 2:33 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಹಿಂದೆ ಗುರು ಮುಂದೆ ಗುರಿ ಇದ್ದರೆ ಸಾಧನೆ ಸಾದ್ಯ

November 19, 2025 3:39 pm
ಇತರೆ ಸುದ್ಧಿಗಳು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ

November 19, 2025 2:43 pm
ಇತರೆ ಸುದ್ಧಿಗಳು

ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ

November 19, 2025 2:35 pm
ಇತರೆ ಸುದ್ಧಿಗಳು

ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ

November 19, 2025 2:33 pm
ಇತರೆ ಸುದ್ಧಿಗಳು

ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾ ಗಾಂದಿ

November 19, 2025 2:30 pm
ಇತರೆ ಸುದ್ಧಿಗಳು

ಗ್ರಾಮ ಸ್ವರಾಜ್ ಯಶಸ್ವಿಯಾಗಲು ಉತ್ತಮ ಸುಸಜ್ಜಿತ ಕಟ್ಟಡ ಅಗತ್ಯ: ಚಿದಾನಂದ್ ಎಂ.ಗೌಡ

November 18, 2025 3:53 pm
Our Youtube Channel
Our Picks

ಹಿಂದೆ ಗುರು ಮುಂದೆ ಗುರಿ ಇದ್ದರೆ ಸಾಧನೆ ಸಾದ್ಯ

November 19, 2025 3:39 pm

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ

November 19, 2025 2:43 pm

ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ

November 19, 2025 2:35 pm

ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ

November 19, 2025 2:33 pm

ಭಾರತಕ್ಕಾಗಿ ದುಡಿದು, ಮಡಿದವರು ಇಂದಿರಾ ಗಾಂದಿ

November 19, 2025 2:30 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಹಿಂದೆ ಗುರು ಮುಂದೆ ಗುರಿ ಇದ್ದರೆ ಸಾಧನೆ ಸಾದ್ಯ

By News Desk BenkiyabaleNovember 19, 2025 3:39 pm

ಚಿಕ್ಕನಾಯಕನಹಳ್ಳಿ: ನಮ್ಮ ದೇಸಿ ಕ್ರೀಡೆಗಳಿಗೆ ಅವಕಾಶಗಳನ್ನು ನೀಡಿ ಅವುಗಳನ್ನು ಉಳಿಸಿ ಬೆಳೆಸುತ್ತಿರುವುದು ನಮ್ಮ ಗ್ರಾಮೀಣ ಭಾಗದಲ್ಲಿ ಅಂತಹ ಕೆಲಸವನ್ನು ಗೋಡೆಕೆರೆಯ…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮುಂದಾದ ಅಕ್ಕಪಡೆ

November 19, 2025 2:43 pm

ಪಾಲಿಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ

November 19, 2025 2:35 pm

ಎನ್‌ಎಸ್‌ಎಸ್ ಪುನಶ್ಚೇತನ ಕಾರ್ಯಕ್ರಮ ಉದ್ಘಾಟನೆ

November 19, 2025 2:33 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.