BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯ
  • ಅರ್ಥಪೂರ್ಣ ವಿಶ್ವ ವಿಕಲಚೇತನರ ದಿನಾಚರಣೆ
  • ದತ್ತಾತ್ರೇಯ ಕ್ಷೇತ್ರ ಯಾತ್ರೆ
  • ವಿಕಲಚೇತನರಿಗೆ ಬೇಕಾದುದು ಸಹಾನುಭೂತಿ ಅಲ್ಲ-ಸಮಾನ ಅವಕಾಶ ಅಗತ್ಯ
  • ಡಿಸೆಂಬರ್ ೫ರಂದು ಗುಬ್ಬಿಯಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
  • ಸರ್ಕಾರದ ವಿರುದ್ಧ ಹೋರಾಟ
  • ವಿವಿಧೆಡೆ ಡೀಸಿ ದಿಢೀರ್ ಭೇಟಿ: ಪರಿಶೀಲನೆ
  • ಸೈನಿಕರಿಗೆ ಆರು ಎಕರೆ ಮೀಸಲು ಶಾಸಕ ಎಸ್. ಆರ್. ಶ್ರೀನಿವಾಸ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರದ ವಿರುದ್ಧ ಹೋರಾಟ
ಇತರೆ ಸುದ್ಧಿಗಳು

ಸರ್ಕಾರದ ವಿರುದ್ಧ ಹೋರಾಟ

ತೆಂಗಿನ ನುಸಿಪೀಡೆ ನಿಯಂತ್ರಣ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ
By News Desk BenkiyabaleUpdated:December 04, 2025 4:02 pm

ತುಮಕೂರು: ಜಿಲ್ಲೆಯ ತೆಂಗು ಬೆಳೆಗೆ ತಗುಲಿರುವ ನುಸಿಪೀಡೆ ಹಾಗೂ ಬಿಳತಲೆ ಹುಳು ನಿಯಂತ್ರಣದಲ್ಲಿ ಕೃಷಿ ಹಾಗು ತೊಟಗಾರಿಕೆ ಇಲಾಖೆ ವೈಫಲ್ಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ನಿವಾರಣೆ ಮಾಡುವಲ್ಲಿ ನಿರ್ಲಕ್ಷö್ಯವಹಿಸಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ ಮುಖಂಡರು ಬುಧವಾರ ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ನುಸಿಪೀಡಿತ ತೆಂಗು ಹಿಡಿದು ಸ್ವಾತಂತ್ರö್ಯ ಚೌಕದಿಂದ ಕೃಷಿ ಇಲಾಖೆ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಮುಖಂಡರು ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯಿಂದ ರೈತರು ಜೀವನ ಅರಸಿ ಗುಳೆ ಹೋಗುವ ಪರಿಸ್ಥಿತಿ ಬಂದಿದೆ. ಅನ್ನಭಾಗ್ಯ ಕೊಡುತ್ತೇವೆ, ಅಕ್ಕಿ, ಸಕ್ಕರೆ ಕೊಡುತ್ತೇವೆ ಎನ್ನುವ ಕಾಂಗ್ರೆಸ್ ನಾಯಕರು, ಅದನ್ನು ಬೆಳೆಯುವ ರೈತರ ಕಷ್ಟವನ್ನು ಕೇಳುತ್ತಿಲ್ಲ. ಯಾವುದೇ ನೀರಾವರಿ ಯೋಜನೆಗೆ ಹಣ ನೀಡಿಲ್ಲ, ರಸ್ತೆಗಳ ಗುಂಡಿ ಮುಚ್ಚಲೂ ದುಡ್ಡು ಕೊಟ್ಟಿಲ್ಲ. ಬಿಜೆಪಿ ಸರ್ಕಾರದ ಅನೇಕ ರೈತಪರ ಯೋಜನೆಗಳನ್ನು ರದ್ದುಗೊಳಿಸಿ, ಕೇವಲ ಮತ ಬ್ಯಾಂಕಿಗಾಗಿ ಕಾಂಗ್ರೆಸ್ ನಾಯಕರು ಜಾತಿ-ಜಾತಿಗಳನ್ನು ಎತ್ತಿಕಟ್ಟುವ ಕೆಟ್ಟ ರಾಜಕಾರಣ ಮಾಡಿಕೊಂಡು ಬರುತ್ತಿದ್ದಾರೆ ಎಂದು ಹರಿಹಾಯ್ದರು.
ರೈತರಿಗೆ ಯಾವುದೇ ಸಬ್ಸಿಡಿ ಬೇಡ, ಅವರಿಗೆ ನೀರು, ವಿದ್ಯುತ್, ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತೆ ಮಾಡಿದರೆ ಸಾಕು ರೈತರು ಬದುಕುತ್ತಾರೆ. ಆದರೆ ಕಾಂಗ್ರೆಸ್ ಸರ್ಕಾರ ಇದ್ಯಾವುದನ್ನೂ ಮಾಡುವ ಪ್ರಯತ್ನ ಮಾಡಿಲ್ಲ. ಯಡಿಯೂರಪ್ಪನವರ ಸರ್ಕಾರ ಹಲವಾರು ರೈತಪರ ಯೋಜನೆಗಳನ್ನು ರೂಪಿಸಿದ್ದರು. ಈ ಸರ್ಕಾರ ಅಂತಹ ಯಾವುದೇ ಕಾರ್ಯಕ್ರಮ ಮಾಡಿಲ್ಲ. ಈ ಕೆಟ್ಟ ಸರ್ಕಾರ ರೈತರ ಪರ ನಿಲ್ಲದಿದ್ದರೆ ರೈತರ ನೇತೃತ್ವದಲ್ಲಿ ಸರ್ಕಾರವನ್ನು ಕಿತ್ತೊಗೆಯುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ರಸಗೊಬ್ಬರವನ್ನು ದುಬಾರಿ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಅನ್ಯಾಯ ಕೇಳುವವರಿಲ್ಲ. ಗೊಬ್ಬರದ ಅಂಗಡಿಗಳಲ್ಲಿ ದರಪಟ್ಟಿ ಪ್ರದರ್ಶನ ಮಾಡಿಲ್ಲ. ಹಾಲು ಉತ್ಪಾದಕರಿಗೆ ಕೊಡಬಾಕಾಗಿರುವ ೬೫೦ ಕೋಟಿ ರೂ. ಹಾಲಿನ ಪ್ರೋತ್ಸಾಹಧನವನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಯಡಿಯೂರಪ್ಪ ಸರ್ಕಾರದಲ್ಲಿ ೨೫ ಸಾವಿರ ರೂ. ಇದ್ದ ಟಿ.ಸಿ. ಸಂಪರ್ಕಕ್ಕೆ ಈಗ ೩ ಲಕ್ಷ ರೂ. ಮಾಡಿದ್ದಾರೆ ಎಂದು ಆಪಾದಿಸಿದ ಬ್ಯಾಟರಂಗೇಗೌಡರು, ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳ ಬಗ್ಗೆಯೇ ವಿಶೇಷ ಚಚೆ ನಡೆಸಬೇಕು ಎಂದು ಒತ್ತಾಯಿಸಿದರು.
ರೈತರ ಕಡೆಗಣಿಕೆ: ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಸರ್ಕಾರದ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡದೆ ಅನ್ಯಾಯ ಮಾಡಲಾಗುತ್ತದೆ. ಫಲಾನುಭವಿಗಳನ್ನು ಗ್ರಾಮ ಸಭೆಗಳಲ್ಲಿ ಆಯ್ಕೆ ಮಾಡಬೇಕು. ಆದರೆ ಸರ್ಕಾರದ ಪ್ರತಿನಿಧಿಗಳ ಹಿಂಬಾಲಕರಿಗೆ ಸವಲತ್ತು ನೀಡುವ ಕೆಲಸಗಳಾಗುತ್ತಿವೆ. ರಸಗೊಬ್ಬರ ಬೆಲೆಗೆ ೧೦೦ರಿಂದ ೧೫೦ ರೂ. ಹೆಚ್ಚು ಹಣ ವಸೂಲು ಮಾಡುತ್ತಾ ರೈತರನ್ನು ಶೋಷಣೆ ಮಾಡಲಾಗುತ್ತಿದೆ. ಈ ಮೂಲಕ ಸರ್ಕಾರ ರೈತರನ್ನು ಲೂಟಿ ಮಾಡುತ್ತಿದೆ ಎಂದರು.
ಈ ಸರ್ಕಾರ ರೈತರಪರವಾಗಿ ಕೆಲಸ ಮಾಡುತ್ತಿಲ್ಲ. ನಮ್ಮ ಜಿಲ್ಲೆಯ ಹೇಮಾವತಿ ನೀರನ್ನು ಬೇರೆ ಜಿಲ್ಲೆಗೆ ತೆಗೆದುಕೊಂಡು ಹೊರಟಿದ್ದರು, ಹೋರಾಟ ಮಾಡಿ ತಡೆಯಬೇಕಾಯಿತು. ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆ ವ್ಯಾಪಕವಾಗಿದೆ. ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು.
ಮಾಜಿ ಶಾಸಕ ಎಂ.ಡಿ.ಲಕ್ಷಿö್ಮÃನಾರಾಯಣ, ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಮುಖಂಡ ದಿಲೀಪ್‌ಕುಮಾರ್ ಮೊದಲಾ ದವರು ಮಾತನಾಡಿ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿದರು. ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಂಗರಾಜು, ಸಂದೀಪ್‌ಗೌಡ, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎ.ಹೆಚ್.ಆಂಜನಪ್ಪ, ಮುಖಂಡರಾದ ಮೊದಲಾದವರು ಭಾಗವಹಿಸಿದ್ದರು.

(Visited 1 times, 1 visits today)
Previous Articleವಿವಿಧೆಡೆ ಡೀಸಿ ದಿಢೀರ್ ಭೇಟಿ: ಪರಿಶೀಲನೆ
Next Article ಡಿಸೆಂಬರ್ ೫ರಂದು ಗುಬ್ಬಿಯಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
News Desk Benkiyabale

Related Posts

ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯ

December 04, 2025 4:10 pm ಇತರೆ ಸುದ್ಧಿಗಳು

ಅರ್ಥಪೂರ್ಣ ವಿಶ್ವ ವಿಕಲಚೇತನರ ದಿನಾಚರಣೆ

December 04, 2025 4:09 pm ಇತರೆ ಸುದ್ಧಿಗಳು

ದತ್ತಾತ್ರೇಯ ಕ್ಷೇತ್ರ ಯಾತ್ರೆ

December 04, 2025 4:07 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯ

December 04, 2025 4:10 pm
ಇತರೆ ಸುದ್ಧಿಗಳು

ಅರ್ಥಪೂರ್ಣ ವಿಶ್ವ ವಿಕಲಚೇತನರ ದಿನಾಚರಣೆ

December 04, 2025 4:09 pm
ಇತರೆ ಸುದ್ಧಿಗಳು

ದತ್ತಾತ್ರೇಯ ಕ್ಷೇತ್ರ ಯಾತ್ರೆ

December 04, 2025 4:07 pm
ಇತರೆ ಸುದ್ಧಿಗಳು

ವಿಕಲಚೇತನರಿಗೆ ಬೇಕಾದುದು ಸಹಾನುಭೂತಿ ಅಲ್ಲ-ಸಮಾನ ಅವಕಾಶ ಅಗತ್ಯ

December 04, 2025 4:06 pm
ಇತರೆ ಸುದ್ಧಿಗಳು

ಡಿಸೆಂಬರ್ ೫ರಂದು ಗುಬ್ಬಿಯಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

December 04, 2025 4:05 pm
ಇತರೆ ಸುದ್ಧಿಗಳು

ಸರ್ಕಾರದ ವಿರುದ್ಧ ಹೋರಾಟ

December 04, 2025 4:02 pm
Our Youtube Channel
Our Picks

ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯ

December 04, 2025 4:10 pm

ಅರ್ಥಪೂರ್ಣ ವಿಶ್ವ ವಿಕಲಚೇತನರ ದಿನಾಚರಣೆ

December 04, 2025 4:09 pm

ದತ್ತಾತ್ರೇಯ ಕ್ಷೇತ್ರ ಯಾತ್ರೆ

December 04, 2025 4:07 pm

ವಿಕಲಚೇತನರಿಗೆ ಬೇಕಾದುದು ಸಹಾನುಭೂತಿ ಅಲ್ಲ-ಸಮಾನ ಅವಕಾಶ ಅಗತ್ಯ

December 04, 2025 4:06 pm

ಡಿಸೆಂಬರ್ ೫ರಂದು ಗುಬ್ಬಿಯಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

December 04, 2025 4:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯ

By News Desk BenkiyabaleDecember 04, 2025 4:10 pm

ತುಮಕೂರು: ರಾಜ್ಯ ಗೃಹ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೇನೆ ವತಿಯಿಂದ…

ಅರ್ಥಪೂರ್ಣ ವಿಶ್ವ ವಿಕಲಚೇತನರ ದಿನಾಚರಣೆ

December 04, 2025 4:09 pm

ದತ್ತಾತ್ರೇಯ ಕ್ಷೇತ್ರ ಯಾತ್ರೆ

December 04, 2025 4:07 pm

ವಿಕಲಚೇತನರಿಗೆ ಬೇಕಾದುದು ಸಹಾನುಭೂತಿ ಅಲ್ಲ-ಸಮಾನ ಅವಕಾಶ ಅಗತ್ಯ

December 04, 2025 4:06 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.