
ಕೊರಟಗೆರೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿ ಸಾವಿರಾರು ಸಂಖ್ಯೆ ಡಾ.ಜಿ.ಪರಮೇಶ್ವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯ ಕರ್ತರು, ಮಠಾಧೀಶರುಗಳು, ಸಾರ್ವಜನಿಕರು ಬೃಹತ್ ಪ್ರತಿಭಟನಾ ರ್ಯಾಲಿ ಪಟ್ಟಣದಲ್ಲಿ ನಡೆಸಿದರು.
ಕರ್ನಾಟಕ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗು ತ್ತಿದ್ದಂತೆ ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಸಾವಿರಾರು ಡಾ.ಜಿ. ಪರಮೇಶ್ವರ ಅಭಿಮಾನಿಗಳು ಬೃಹತ್ ಮೆರವಣಿಗೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊ0ದಿಗೆ ಕೊರಟಗೆರೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರಧಾನ ರಸ್ತೆ ಮೂಲಕ ಮುಖ್ಯ ಬಸ್ಸ್ಟಾöಂಡ್ ವೃತ್ತದವರೆಗೆ ಘೊಷನೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು, ಯುವಕರು ಬೈಕ್ ರ್ಯಾಲಿಯೊಂದಿಗೆ ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ರವರೆ ಅಗಬೇಕು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೆ ಮೊದಲ ಆಧ್ಯತೆ ಡಾ.ಜಿ.ಪರಮೇಶ್ವರ್ ರವರಿಗೆ ನೀಡಬೇಕೆಂದು ಘೋಷಣೆ ಕೊಗಿದರು, ಮೆರವಣಿಗೆಯಲ್ಲಿ ಮಹಿಳೆಯರು ಬಹುದೊಡ್ಡ ಸಂಖ್ಯೆಯಲ್ಲಿ ಭಾಗ ವಹಿಸಿ ಡಾ.ಜಿ.ಪರಮೇಶ್ವರರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇ ಬೇಕು, ಕಾಂಗ್ರೆಸ್ ಪಕ್ಷಕ್ಕಾಗಿ ಅವರು ಸಾಕಷ್ಟು ದುಡಿದಿದ್ದಾರೆ, ತ್ಯಾಗ ಮಾಡಿದ್ದಾರೆ, ಸಜ್ಜನ ರಾಜಕಾರಣಿಯಾದ ಅವರನ್ನು ದಲಿತ ನಾಯಕ ಎಂಬುವ ಕಾರಣಕ್ಕೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಹೊರಗಿ ಡಲಾಗಿದೆ, ಇದು ಸಂವಿಧಾನಕ್ಕೆ ಮಾಡಿರುವ ಮೋಸವಾಗಿದ್ದು ಡಾ.ಜಿ. ಪರಮೇಶ್ವರ ರವರನ್ನು ಕೂಡಲೆ ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದರು.
ಈ ಸಂಧರ್ಭದಲ್ಲಿ ವಿವಿಧ ಮಠಾಧೀಶರುಗಳು ಆಗ್ರಹಿಸಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಣೆಯ ಕೂಗು ಜೋರಾಗಿ ಕೇಳಿಬರುತ್ತಿದೆ, ಕರ್ನಾಟಕದಲ್ಲಿ ಇಲ್ಲಿಯವರೆಗೂ ದಲಿತರು ಮುಖ್ಯಮಂತ್ರಿಯಾಗಿಲ್ಲ ಡಾ.ಜಿ.ಪರಮೇಶ್ವರ ರವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದಾರೆ, ಅವರ ಸೇವಾಮನೂಭಾವ, ಸಜ್ಜನಿಕೆ, ಉತ್ತಮ ರಾಜಕಾರಣಿ ಎನ್ನುವ ಅಭಿಪ್ರಾಯದೊಂದಿಗೆ ದೆಹಲಿಯ ವರೀಷ್ಠರು ಅವರನ್ನು ದಲಿತ ಮುಖ್ಯಮಂತ್ರಿ ಎನ್ನುವ ನ್ಯಾಯದೊಂದಿಗೆ ಇವರನ್ನು ಪರಿಗಣಿಸಬೇಕು, ತುಮಕೂರು ಜಿಲ್ಲೆಯ ಪ್ರಬಲ ನಾಯಕರಾದ ಡಾ.ಜಿ.ಪರಮೇಶ್ವರ ಮುಖ್ಯಮಂತ್ರಿಯಾದರೆ ತುಮಕೂರು ಜಿಲ್ಲೆಗೂ ಸಹ ಆಧ್ಯತೆ ನೀಡಿದಂತ್ತಾಗುತ್ತದೆ ಅವರ ಮೇಲೆ ಪ್ರೀತಿಇರುವ, ಆಶೀರ್ವಾದ ಇರುವ, ಮುಖ್ಯಮಂತ್ರಿ ಆಗಬೇಕು ಎಂಬ ಅಭಿಲಾಷೆ ಇರುವ ಹಲವು ಸ್ವಾಮೀಜಿಗಳು ಅವರ ಪರ ಇಂದು ಬೆಂಬಲವಾಗಿ ರ್ಯಾಲಿಯಲ್ಲಿ ಬಾಗವಹಿಸಿದ್ದಾರೆ ಇದನ್ನು ರಾಜ್ಯ ಸರ್ಕಾರ ಮತ್ತು ದೆಹಲಿಯ ವರಿಷ್ಠರು ಗಂಭೀರವಾಗಿ ಪರಿಗಣಿಸಿ ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇಬೇಕು ಎಂದು ಆಗ್ರರಹಿಸಿದರು.
ಪ್ರತಿಭಟನೆಯಲ್ಲಿ ಅಠವಿ ಮಠದ ಶಿವಲಿಂಗಮಹಾಸ್ವಾಮೀಜಿ, ಆದಿಜಾಂಬವ ಮಠದ ಷಡಕ್ಷರಿ ಮಹಾಮುನಿಸ್ವಾಮೀಜಿ, ಬಸವಮ ಹಾಲಿಂಗಸ್ವಾಮೀಜಿ, ನವಗ್ರಹ ಮಠದ ನಾಗೇಂದ್ರಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಶ್ವತ್ಥನಾರಾಯಣ, ಅರಕೆರೆ ಶಂಕರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಮಂಜುಳಾ, ಕವಿತಾ, ವೆಂಕಟೇಶ್, ಕೆಪಿಸಿಸಿ ಸದಸ್ಯರುಗಳಾದ ಪ್ರಸನ್ನ ಕುಮಾರ್, ಎ.ಡಿ.ಬಲರಾಮಯ್ಯ, ರಜಾಕ್ಸಾಬ್ ಮಹಾಲಿಂಗಪ್ಪ, ಬೂಚನಹಳ್ಳಿ ಬಿ.ಎಸ್.ದಿನೇಶ್, ಓಬಳರಾಜು, ಕೆ.ವಿ.ಮಂಜುನಾಥ್, ಗಣೇಶ್, ಕೆಂಪಣ್ಣ, ವಿನಯ್ಕುಮಾರ್, ಗೊಂದಿಹಳ್ಳಿ ರಂಗರಾಜು, ಭೈರೇಶ್, ಕಾರ್ ಮಹೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.



