ತುಮಕೂರು: ತಾಲ್ಲೂಕಿನ ಚಿಕ್ಕತೊಟ್ಲುಕೆರೆಯ ಶ್ರೀ ಅಟವೀ ಸುಕ್ಷೇತ್ರದಲ್ಲಿ ಗುರುವಾರ ಮಕರ ಸಂಕ್ರಾ0ತಿಯ ಉತ್ತರಾಯಣ ಪುಣ್ಯಕಾಲದ ಜಾತ್ರಾಮಹೋತ್ಸವ ಹಾಗೂ ಲಿಂಗೈಕ್ಯ ಅಟವೀ ಸಿದ್ಧಲಿಂಗ ಸ್ವಾಮೀಜಿಗಳ ೭೬ನೇ ಪುಣ್ಯ ಸ್ಮರಣೋತ್ಸವ ಭಕ್ತಿ ಸಡಗರದಿಂದ ನೆರವೇರಿತು. ಸುತ್ತಮುತ್ತಲ ಗ್ರಾಮಗಳ ಸಹಸ್ರಾರು ಭಕ್ತರು ಆಗಮಿಸಿ ಶ್ರೀಕ್ಷೇತ್ರದ ಮಹಾಶಿವಯೋಗಿಗಳ ಗದ್ದುಗೆ ದರ್ಶನ ಮಾಡಿ ಪೂಜೆ ಸಲ್ಲಿಸಿದರು.
ಆಗಮಿಸಿದ್ದ ಎಲ್ಲಾ ಭಕ್ತರಿಗೂ ಸುಕ್ಷೇತ್ರದ ಅಟವೀ ಶಿವಲಿಂಗ ಸ್ವಾಮೀಜಿ, ಅಟವೀ ಮಲ್ಲಿಕಾರ್ಜುನ ಸ್ವಾಮೀಜಿ, ಗುಬ್ಬಿ ತೊರೇಮಠದ ಅಟವೀ ಚನ್ನಬಸವ ಸ್ವಾಮೀಜಿಗಳು ಎಳ್ಳು, ಬೆಲ್ಲ ಹಂಚಿ ಆಶೀರ್ವಾದ ಮಾಡಿದರು.
ಅಟವೀ ಕ್ಷೇತ್ರದ ಶಿವಲಿಂಗ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಬೆಳಿಗ್ಗೆ ೬.೩೦ರಿಂದ ಓಂಕಾ ರೇಶ್ವರ ಮಹಾಶಿವಯೋಗಿಗಳು, ಜಡೆಶಾಂತ ಬಸವ ಮಹಾ ಶಿವಯೋಗಿಗಳು, ಅಟವೀ ಮಹಾಶಿವಯೋ ಗಿಗಳು, ಅಟವೀ ಸಿದ್ಧಲಿಂಗ ಮಹಾಸ್ವಾಮಿಗಳವರ ಗದ್ದುಗೆಗಳಿಗೆ ಮಹಾರುದ್ರಾಭಿಷೇಕ, ಪುಷ್ಪಾಲಂಕಾರ, ಅಷ್ಟೋತ್ತರ, ಶತಬಿಲ್ವಾರ್ಚನೆ, ಮಹಾಮಂಗಳಾರತಿ ನೆರವೇರಿತು. ನಂತರ ಚಿಕ್ಕತೊಟ್ಲುಕೆರೆ ಗ್ರಾಮದ ಬಸವೇಶ್ವರ ದೇವಸ್ಥಾನದಿಂದ ಸುಮಂಗಲೆಯರ ಕಳಸ ಕನ್ನಡ ಆರತಿಯೊಂದಿಗೆ ಓಂಕಾರ ಶಿವಯೋಗಿಗಳವರ ಹಾಗು ಅಟವೀ ಮಹಾಶಿವಯೋಗಿಗಳ ಉತ್ಸವವು ವೈಭವದಿಂದ ನಡೆಯಿತು. ವಿವಿಧ ವಾದ್ಯ ವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ಉತ್ಸವ ಅಟವೀ ಮಠ ತಲುಪಿತು. ಆನಂತರ ಸ್ವಾಮೀಜಿಗಳು ಷಟ್ ಸ್ಥಳ ಧ್ವಜಾರೋಹಣ ಹಾಗೂ ನಂದಿ ಧ್ವಜ, ರಾಷ್ಟç ಧ್ವಜಾ ರೋಹಣ ನೆರವೇರಿಸಿದರು. ಇದರ ನಂತರ ಶ್ರೀಗುರು ಅಟವೀಶ್ವರರ ಪಲ್ಲಕ್ಕಿ ಮಹೋತ್ಸವ ನಡೆಯಿತು.
ಈ ವೇಳೆ ಮಾತನಾಡಿದ ಅಟವೀ ಶಿವಲಿಂಗ ಸ್ವಾಮೀಜಿ, ಸುಕ್ಷೇತ್ರದಲ್ಲಿ ಮಕರ ಸಂಕ್ರಾ0ತಿಯ ಉತ್ತರಾಯಣ ಪುಣ್ಯಕಾಲದ ಜಾತ್ರಾಮಹೋತ್ಸವ ಯಾವಾಗಿನಿಂದ ಆರಂಭವಾಯಿತೋ ಗೊತ್ತಿಲ್ಲ, ಹಲ ವಾರು ವರ್ಷಗಳಿಂದ ಅದೇ ಸಂಪ್ರದಾಯದೊ0ದಿಗೆ ಮಠದ ಪರಂಪರೆಯ0ತೆ ಮುಂದುವರೆದುಕೊAಡು ಬಂದಿದೆ. ತಾವು ಈ ಕ್ಷೇತ್ರದ ಪಟ್ಟಾಧಿಕಾರ ಸ್ವೀಕಾರ ಮಾಡಿದ ನಂತರ ೨೦೦೦ದಿಂದ ಸಮಿತಿ ರಚನೆ ಮಾಡಿ ಅದರ ಸಹಕಾರದೊಂದಿಗೆ ಜಾತ್ರೋತ್ಸವ ಆಚರಿಸಿಕೊಂಡು ಬರಲಾಗುತ್ತದೆ ಎಂದರು.
ಶ್ರೀ ಮಠಕ್ಕೆ ಬಂದು ಮಹಾಯೋಗಿಗಳ ಗದ್ದುಗೆ ದರ್ಶನ ಮಾಡಿದರೆ ಭಕ್ತರ ಕೋರಿಕೆ ಈಡೇರುತ್ತದೆ ಯಾವುದೇ ಸಮಸ್ಯೆ, ಕಾಯಿಲೆ ನಿವಾರಣೆ, ಸಂತಾನ ಪ್ರಾಪ್ತಿಗಾಗಿ ಸಂಕಲ್ಪ ಮಾಡಿಕೊಂಡರೆ ಹರಕೆ ಫಲಿಸುತ್ತದೆ ಎಂಬ ಭಕ್ತರ ನಂಬಿಕೆ ಅಂದಿನಿ0ದಲೂ ನಡೆದುಕೊಂಡು ಬರುತ್ತಿದೆ. ಅದೇ ರೀತಿ ಪ್ರತಿವರ್ಷ ಸಾವಿರಾರು ಭಕ್ತರು ಭಕ್ತಿ, ಸಂಭ್ರಮದಿ0ದ ಜಾತ್ರೋತ್ಸವದಲ್ಲಿ ಭಾಗಿಯಾ ಗುತ್ತಾರೆ ಎಂದು ಅಟವೀ ಶಿವಲಿಂಗ ಸ್ವಾಮೀಜಿ ಹೇಳಿದರು.
ಅಟವಿ ಸುಕ್ಷೇತ್ರದ ಕಾರ್ಯಾಧ್ಯಕ್ಷ ಟಿ.ಬಿ.ಶೇಖರ್ ಅವರು ಮಾತನಾಡಿ, ಅಟವೀ ಕ್ಷೇತ್ರದ ಮಕರ ಸಂಕ್ರಾ0ತಿ ಜಾತ್ರೋತ್ಸವ ಇತಿಹಾಸ ಪ್ರಸಿದ್ಧವಾಗಿದೆ. ಸಾವಿರಾರು ಭಕ್ತಿರು ಆಗಮಿಸಿ, ಮಹಾಯೋಗಿಗಳ ಗದ್ದುಗೆ ದರ್ಶನ ಮಾಡಿ, ಜಾತ್ರಾ ಸಡಗರದಲ್ಲಿ ಪಾಲ್ಗೊಳ್ಳುತ್ತಾರೆ. ಆಗಮಿ ಸಿದ ಎಲ್ಲಾ ಭಕ್ತರಿಗೂ ಸ್ವಾಮೀಜಿಗಳೇ ಖುದ್ದು ಎಳ್ಳು ಬೆಲ್ಲ ಹಂಚಿ ಆಶೀರ್ವಾದ ಮಾಡುತ್ತಾರೆ. ಬಂದಿರುವ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಸಮಿತಿಯ ಖಜಾಂಚಿ ಜಗದೀಶ್ಚಂದ್ರ, ಅಟವೀ ಜ್ಞಾನ ಪ್ರಸಾರ ಕೇಂದ್ರದ ಸಂಚಾಲಕ ಕೆ.ವಿ.ಬೆಟ್ಟಯ್ಯ, ಮುಖಂಡರಾದ ಮಹದೇವಪ್ಪ, ವಿಶ್ವನಾಥ್ ಅಪ್ಪಾಜಪ್ಪ, ಬೆಟ್ಟಲಿಂಗಯ್ಯ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.

(Visited 1 times, 1 visits today)