BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ
  • ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ
  • ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ
  • ಶರಣರ ವಚನಗಳು ಕೇವಲ ಪದಗಳಲ್ಲ ಅಂತರ0ಗದ ಅಮೃತ ಬಿಂದುಗಳು
  • ವಿಜ್ಞಾನದ ಜೊತೆಗೆ ಸಾಹಿತ್ಯಿಕ ಮನೋಭಾವ ಬೆಳೆಸಿಕೊಳ್ಳಿ
  • ದಾಸ್ ವರದಿ ತಿರಸ್ಕರಿಸುವಂತೆ ಒತ್ತಾಯ
  • ಸಾಹಿತ್ಯ ಕ್ಷೇತ್ರದಲ್ಲಿ ಅಸಹನೀಯ ವಾತಾವರಣ
  • ಬಿ.ಸಿ.ಕಾವಲ್ ನಕಲಿ ದಾಖಲೆ: ಕ್ರಮಕ್ಕೆ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ
ತುಮಕೂರು ಜಿಲ್ಲಾ ಸುದ್ಧಿಗಳು

ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ

ಯುವ ಉತ್ಸಾಹಿ ಪಶುವೈದ್ಯ ಡಾ.ಸುಮೀಕ್ಷಾ ರೆಡ್ಡಿ ಸಾವು
By News Desk BenkiyabaleUpdated:March 24, 2026 4:58 pm

ತುಮಕೂರು: ಯುವ ಉತ್ಸಾಹಿ ಪಶುವೈದ್ಯ ಡಾ.ಸುಮೀಕ್ಷಾ ರೆಡ್ಡಿ ಅವರು ಸಾವು, ಪಶುವೈದ್ಯರಿಗೆ ಒಂದು ಪಾಠವಾಗಿದ್ದು,ಸರಕಾರ ಮತ್ತು ಅರಣ್ಯ ಇಲಾಖೆ ಇನ್ನೂ ಮುಂದಾದರೂ ವನ್ಯಜೀವಿಗಳ ಚಿಕಿತ್ಸೆಗೆ ನಿಯೋಜನೆಯಾಗುವ ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಿ ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ.ಹೆಚ್.ಎಂ.ಶಿವಪ್ರಸಾದ್ ಒತ್ತಾಯಿಸಿದ್ದಾರೆ.
ನಗರದ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ತರಬೇತಿ ಸಭಾಂಗಣದಲ್ಲಿ ಇತ್ತೀಚಗೆ ಶಿವಮೊಗ್ಗದ ತಾವರೆಕೊಪ್ಪದ ಲಯನ್ ಸಫಾರಿ ವನ್ಯಧಾಮದಲ್ಲಿ ಚಿಕಿತ್ಸೆ ನೀಡುವ ವೇಳೆ ನೀರಾನೆ(ಹಿಪ್ಪೋಪೊಟೋಮಸ್)ದಾಳಿಗೆ ತುತ್ತಾಗಿ ಜೀವನ್ಮರಣ ಹೋರಾಟ ನಡೆಸಿ, ಸಾವಿಗೀಡಾದ ತರಬೇತಿ ವೈದ್ಯೆ ಡಾ.ಸುಮೀಕ್ಷಾ ರೆಡ್ಡಿ ಅವರ ಶ್ರದ್ದಾಂಜಲಿ ಸಭೆಯಲ್ಲಿ ಪಾಲ್ಗೊಂಡು, ಮೃತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತಿದ್ದ ಅವರು, ಸರಕಾರ ಹಾಗೂ ಅರಣ್ಯ ಇಲಾಖೆಯ ಮೇಲೆ ವನ್ಯ ಜೀವಿ ಚಿಕಿತ್ಸೆಗೆ ನಿಯೋಜನೆಗೊಳ್ಳುವ ಪಶುವೈದ್ಯರ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಡ ತರುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಪಶುವೈದ್ಯರು, ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುವ ಅಗತ್ಯವಿದೆ.ನಿಮ್ಮೊಂದಿಗೆ ನಾವು ಸಹ ಆಗಮಿಸಲಿದ್ದೇವೆ ಎಂದರು.
ರಾತ್ರಿಯ ವೇಳೆ ವನ್ಯ ಜೀವ ಚಿಕಿತ್ಸೆಗೆ ನಿಯಮದಲ್ಲಿ ಅವಕಾಶವೇ ಇಲ್ಲ. ಒಂದು ವೇಳೆ ತುರ್ತು ಅಗತ್ಯ ಕಂಡುಬAದರೆ ಹಿರಿಯ ಆರ್.ಎಫ್.ಓ ಮತ್ತು ನುರಿತ ಡಾಕ್ಟರ್‌ಗಳ ಸಮ್ಮುಖದಲ್ಲಿ ಎಲ್ಲಾ ಅಗತ್ಯ ಮುಜಾಂಗ್ರತಾ ಕ್ರಮಗಳನ್ನು ಕೈಗೊಂಡು ಚಿಕಿತ್ಸೆ ಮಾಡಬೇಕಾಗುತ್ತದೆ.ಆದರೆ ಟ್ರೆöÊನಿ ಪಶು ವೈದ್ಯರನ್ನು ಅಂತಹ ಕ್ರೂರ ಮೃಗದ ಚಿಕಿತ್ಸೆಗೆ ಕಳುಹಿಸಿದವರು ಯಾರು,ಈ ವೇಳೆ ಎಸ್.ಓ.ಪಿ ಅನುಸರಿಸಿಲ್ಲವೇ ಎಂಬ ಇತ್ಯಾದಿ ಪ್ರಶ್ನೆಗಳು ಉದ್ಬವಿಸುತ್ತೇವೆ.ಈ ಬಗ್ಗೆ ಇರುವ ಗೊಂದಲ ಬಗೆಹರಿಸಿಕೊಳ್ಳಲು ಸಿಸಿಟಿವಿ ಪೂಟೇಜ್ ಸಹ ಲಭ್ಯವಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.ನ್ಯಾಯಯುತ ತನಿಖೆ ನಡೆಯುವುದೇ ಅನುಮಾನ ಎಂದು ಹಲವರು ಮಾತನಾಡುತಿದ್ದಾರೆ.ಸರಕಾರ ಇನ್ನೂ ಮುಂದಾದರೂ ಅಗತ್ಯ ಕ್ರಮ ಕೈಗೊಂಡು, ಪಶುವೈದ್ಯರ ಜೀವ ಉಳಿಸಲು ಮುಂದಾಗಲಿ.ನಮ್ಮಲ್ಲಿಯೂ ಕೆಲವೊಮ್ಮೆ ಕಾಡು ಪ್ರಾಣಿಗಳು ಜನವಸತಿ ಪ್ರದೇಶಗಳಿಗೆ ಬಂದಾಗ,ಜಾತ್ರೆ, ಉತ್ಸವಗಳಲ್ಲಿ ಆನೆಗಳ ಬಳಕೆ ಮಾಡುವ ಸಂದರ್ಭದಲ್ಲಿ ಪಶುವೈದ್ಯರನ್ನು ಕಳುಹಿಸಿಕೊಡಲು ಬೇಡಿಕೆ ಬರುತ್ತದೆ.ಆದರೆ ನಮ್ಮಲ್ಲಿ ವನ್ಯಜೀವಿ ತರಬೇತಿ ಪಡೆದ ವೈದ್ಯರಿಲ್ಲದ ಕಾರಣ, ಮನವಿಯನ್ನು ತಿರಸ್ಕರಿಸಲಾಗುತ್ತದೆ ಎಂದು ಡಾ.ಹೆಚ್.ಎಂ.ಶಿವಪ್ರಸಾದ್ ನುಡಿದರು.
ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರುದ್ರಪ್ರಸಾದ್, ಯುವ ಉತ್ಸಾಹಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಸಾವು ನಿಜಕ್ಕೂ ದುಖಃದ ವಿಚಾರ.ವನ್ಯಜೀವಿಗಳ ಸೇವೆಯನ್ನು ಫ್ಯಾಷನ್ ಎಂಬ0ತೆ ತೆಗೆದುಕೊಂಡು ತರಬೇತಿಗಾಗಿ ಶಿವಮೊಗ್ಗ ಜಿಲ್ಲೆಯ ತಾವರೆಕೆರೆ ವನ್ಯಜೀವಿ ಧಾಮಕ್ಕೆ ಕಳೆದ ಒಂದುವರೆಗೆ ತಿಂಗಳ ಹಿಂದೆ ಬಂದಿದ್ದ ಇವರ ಸಾವು ಪಶು ವೈದ್ಯಕೀಯ ವೃತ್ತಿಯಲ್ಲಿ ತೊಡಗಿರುವವರಿಗೆ ನಿಜಕ್ಕೂ ಆಘಾತವನ್ನು ಉಂಟು ಮಾಡಿದೆ.ತಂದೆ, ತಾಯಿಗೆ ಒಬ್ಬಳೇ ಮಗಳಾಗಿ,ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ವನ್ಯಜೀವಿಗಳ ಸೇವೆಗೆ ತನ್ನ ಬದುಕನ್ನು ಮೀಸಲಿಡಬೇಕು ಎಂದುಕೊ0ಡಿದ್ದ ಯುವ ಪ್ರತಿಭೆಯ ಸಾವು ಉತ್ತರ ಸಿಗದ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ ಎಂದರು.
ಅರಣ್ಯ ಇಲಾಖೆಗಾಗಲಿ,ಪ್ರಾಣಿ ಸಂಗ್ರಹಾಲಯಗಳಿಗೆ ತನ್ನದೇ ಆದ ಸ್ವಂತ ಸಿಬ್ಬಂದಿ ಇಲ್ಲ.ಪಶು ವೈದ್ಯಕೀಯ ಇಲಾಖೆಯಿಂದಲೇ ಎರವಲು ಪಡೆಯುತ್ತಾರೆ.ವನ್ಯಜೀವಿಗಳ ಸೇವೆಗೆ ಹೋಗಲು ಹಿಂದು ಮುಂದು ನೋಡುವ ಈ ಕಾಲದಲ್ಲಿ ಡಾ.ಸಮೀಕ್ಷಾ ರೆಡ್ಡಿ ಕಾಡು ಪ್ರಾಣಿಗಳ ಸೇವೆಗೆ ಮುಂದಾಗಿದ್ದರು.ಆವರ ರಕ್ಷಣೆಗೆ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕಿತ್ತು.ಇಂತಹ ಘಟನೆ ಇದೆ ಮೊದಲಲ್ಲ. ಎರಡು ವರ್ಷದ ಹಿಂದೆ ವಿನಯ್ ಎಂಬ ಪಶುವೈದ್ಯರು ಆನೆ ದಾಳಿಗೆ ತುತ್ತಾಗಿ, ಜೀವನ್ಮರಣ ಹೋರಾಟ ನಡೆಸಿ, ಪ್ರಾಣ ಉಳಿಸಿಕೊಂಡಿದ್ದರು. ಸರಕಾರದ ನಿರ್ಲಕ್ಷಕ್ಕೆ ಇನ್ನೆಷ್ಟು ಪಶುವೈದ್ಯರು ಬಲಿಯಾಗಬೇಕು ?, ಯಾವ ನಂಬಿಕೆಯ ಮೇಲೆ ಪಶುವೈದ್ಯರು ಪ್ರಾಣಿ ಸಂಗ್ರಹಾಲಯಗಳಲ್ಲಿ ಕೆಲಸ ಮಾಡಲು ಹೋಗಬೇಕು, ಡಾ.ಸಮೀಕ್ಷಾ ರೆಡ್ಡಿ ಅವರ ಸಾವಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹವಾಗಿದೆ ಎಂದು ಡಾ.ರುದ್ರಪ್ರಸಾದ್ ನುಡಿದರು.
ಪಶುವೈದ್ಯೆ ಡಾ.ಜಯಂತಿ ಮಾತನಾಡಿ,ಯುವ ಉತ್ಸಾಹಿ ಪಶುವೈದ್ಯೆಯೊಬ್ಬರ ಜೀವ,ಅವರ ಅತಿ ಉತ್ಸಾಹಕ್ಕೆ ಬಲಿಯಾಗಿದೆ. ಎಸ್.ಓ.ಪಿ ಇಲ್ಲದೆ ವನ್ಯ ಜೀವಿಗಳ ಚಿಕಿತ್ಸೆ ಅಸಾಧ್ಯ. ಎಷ್ಟೋ ಸಂದರ್ಭಗಳಲ್ಲಿ ಸಾಕು ಪ್ರಾಣಿಗಳೇ ನಿರೀಕ್ಷೆಗೂ ವ್ಯತಿರಕ್ತವಾಗಿ ವರ್ತಿಸಿರುವ ಉದಾಹರಣೆಗಳಿವೆ.ಹಾಗಾಗಿ ವೈದ್ಯರು ಪ್ರಾಣಿಗಳ ಚಿಕಿತ್ಸೆಗೆ ಮುಂದಾಗುವ ವೇಳೆ ಎಷ್ಟೋ ಅನುಭವ ಇದ್ದರೂ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಮೈ ಎಲ್ಲಾ ಕಣ್ಣಾಗಿರಬೇಕು. ಅನ್ಯಮಸ್ಕರಾಗಿ ಪ್ರಾಣಿಗಳ ಚಿಕಿತ್ಸೆಯಲ್ಲಿ ತೊಡಗಬಾರದು.ಇನ್ನೂ ಮುಂದಾದರೂ ಸರಕಾರ ಈ ರೀತಿಯ ಘಟನೆಗಳು ಮರುಕಳುಹಿಸದಂತೆ ಎಚ್ಚರಿಕೆ ವಹಿಸಬೇಕೆಂದರು.
ಕಾರ್ಯಕ್ರಮವನ್ನು ಡಾ.ಶ್ರೀನಿವಾಸ್ ಕುಜ ನಿರೂಪಿಸಿದರು.ವೇದಿಕೆಯಲ್ಲಿ ಪಶುವೈದ್ಯಕೀಯ ತರಬೇತಿ ಶಾಲೆ ಪ್ರಾಂಶುಪಾಲರಾದ ಡಾ.ದಿವಾಕರ್, ಡಾ.ಮಂಜುನಾಥ್ ಹಾಗೂ ಪಶುವೈದ್ಯರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ
Next Article ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ
News Desk Benkiyabale

Related Posts

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

March 24, 2026 5:00 pm ತುಮಕೂರು ಜಿಲ್ಲಾ ಸುದ್ಧಿಗಳು

ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ

March 24, 2026 4:56 pm ತುಮಕೂರು ಜಿಲ್ಲಾ ಸುದ್ಧಿಗಳು

ಶರಣರ ವಚನಗಳು ಕೇವಲ ಪದಗಳಲ್ಲ ಅಂತರ0ಗದ ಅಮೃತ ಬಿಂದುಗಳು

March 24, 2026 4:54 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

March 24, 2026 5:00 pm
ತುಮಕೂರು ಜಿಲ್ಲಾ ಸುದ್ಧಿಗಳು

ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ

March 24, 2026 4:58 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ

March 24, 2026 4:56 pm
ತುಮಕೂರು ಜಿಲ್ಲಾ ಸುದ್ಧಿಗಳು

ಶರಣರ ವಚನಗಳು ಕೇವಲ ಪದಗಳಲ್ಲ ಅಂತರ0ಗದ ಅಮೃತ ಬಿಂದುಗಳು

March 24, 2026 4:54 pm
ತುಮಕೂರು ಜಿಲ್ಲಾ ಸುದ್ಧಿಗಳು

ವಿಜ್ಞಾನದ ಜೊತೆಗೆ ಸಾಹಿತ್ಯಿಕ ಮನೋಭಾವ ಬೆಳೆಸಿಕೊಳ್ಳಿ

March 24, 2026 4:53 pm
ತುಮಕೂರು ಜಿಲ್ಲಾ ಸುದ್ಧಿಗಳು

ದಾಸ್ ವರದಿ ತಿರಸ್ಕರಿಸುವಂತೆ ಒತ್ತಾಯ

March 24, 2026 4:52 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

By News Desk BenkiyabaleMarch 24, 2026 5:00 pm

ತುಮಕೂರು: ಇಂದಿನಿ0ದ ರಾಷ್ಟ್ರಾದ್ಯಂತ ಕ್ಷಯ ಮುಕ್ತ ಭಾರತ ಅಭಿಯಾನದಡಿ ೧೦೦ ದಿನಗಳ ಕಾಲ ಸಕ್ರಿಯವಾಗಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯಕ್ರಮ…

ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ

March 24, 2026 4:58 pm

ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ

March 24, 2026 4:56 pm

ಶರಣರ ವಚನಗಳು ಕೇವಲ ಪದಗಳಲ್ಲ ಅಂತರ0ಗದ ಅಮೃತ ಬಿಂದುಗಳು

March 24, 2026 4:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.