
ತುಮಕೂರು: ತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಮಧುಗಿರಿ ಮತ್ತು ಪಾವಗಡ ಕ್ಷೇತ್ರಗಳಿಗೆ ಹೈಕೋರ್ಟ್ ಆದೇಶದ ಮೇರೆಗೆ ಮರು ಮತ ಎಣಿಗೆ ನಡೆದು ಇಬ್ಬರು ನೂತನ ನಿರ್ದೇಶಕರುಗಳು ಆಯ್ಕೆಯಾಗಿದ್ದಾರೆ.
ತುಮಕೂರು ಹಾಲು ಒಕ್ಕೂಟಕ್ಕೆ ೨೦೨೪ರ ನವೆಂಬರ್ ೧೦ ರಂದು ಚುನಾವಣೆ ನಡೆದಿತ್ತು. ಬಳಿಕ ಎರಡು ತಿಂಗಳ ನಂತರ ಮತ ಎಣಿಕೆಯೂ ನಡೆದಿತ್ತು. ಆ ಸಂದರ್ಭದಲ್ಲಿ ಪಾವಗಡ ಕ್ಷೇತ್ರದಿಂದ ಚಂದ್ರಶೇಖರರೆಡ್ಡಿ ಮತ್ತು ಮಧುಗಿರಿ ಕ್ಷೇತ್ರದಿಂದ ಬಿ. ನಾಗೇಶ್ ಬಾಬು ಆಯ್ಕೆಯಾಗಿದ್ದರು. ಇವರುಗಳ ಆಯ್ಕೆಯನ್ನು ಪ್ರಶ್ನಿಸಿ ಮಧುಗಿರಿ ಕ್ಷೇತ್ರದಿಂದ ಪರಾಭವಗೊಂಡಿದ್ದ ಕೊಂಡವಾಡಿ ಚಂದ್ರಶೇ ಖರ್ ಹಾಗೂ ಪಾವಗಡ ಕ್ಷೇತ್ರದಿಂದ ಚನ್ನಮಲ್ಲ ಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ದಾಖ ಲಾಗಿದ್ದ ರಿಟ್ ಅಫೀಲು ಅರ್ಜಿಯ ವಿಚಾರಣೆ ನಡೆದು ತುಮಕೂರು ಹಾಲು ಒಕ್ಕೂಟದ ಆಡಳಿತ ಮಂಡಳಿಯ ಮಧುಗಿರಿ ಮತ್ತು ಪಾವಗಡ ಕ್ಷೇತ್ರಗಳ ನಿರ್ದೇಶಕರ ಸ್ಥಾನದ ಮರು ಮತ ಎಣಿಕೆ ನಡೆಸುವಂತೆ ಆದೇಶ ನೀಡಿತ್ತು.
ತುಮಕೂರು ಹಾಲು ಒಕ್ಕೂಟದ ಚುನಾವಣಾ ಧಿಕಾರಿ ಹಾಗೂ ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಅವರ ನೇತೃತ್ವದಲ್ಲಿ ಬುಧವಾರ ಮರು ಮತ ಎಣಿಕೆ ನಡೆಸಿದಾಗ ಪಾವಗಡ ಕ್ಷೇತ್ರದಿಂದ ಚನ್ನಮಲ್ಲಯ್ಯ ಅವರು ೨೫ ಮತ ಹಾಗೂ ಈ ಹಿಂದೆ ಗೆಲುವು ಸಾಧಿಸಿದ್ದ ಚಂದ್ರಶೇಖರರೆಡ್ಡಿ ೨೧ ಮತ ಪಡೆದಿರುವುದು ಬೆಳಕಿಗೆ ಬಂದಿತು. ಹೀಗಾಗಿ ಈ ಹಿಂದೆ ಪರಾಭವಗೊಂಡಿದ್ದ ಚನ್ನಮಲ್ಲಯ್ಯ ರವರು ಇಂದಿನ ಮರು ಮತ ಎಣಿಕೆಯಲ್ಲಿ ೨೫ ಮತಗಳನ್ನು ಪಡೆದು ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಹಾಗೆಯೇ ಮಧುಗಿರಿ ಕ್ಷೇತ್ರದಿಂದ ನಾಗೇಶ್ ಬಾಬು ಅವರು ಅನರ್ಹಗೊಂಡಿರುವುದರಿ0ದ ಪ್ರತಿಸ್ಪರ್ಧಿ ಕೊಂಡವಾಡಿ ಚಂದ್ರಶೇಖರ್ ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು.
ಬುಧವಾರ ನಡೆದ ಮರು ಮತ ಎಣಿಕೆಯಲ್ಲಿ ಆಯ್ಕೆಯಾದ ನೂತನ ನಿರ್ದೇಶಕರುಗಳನ್ನು ಬೆಂಬಲಿಗರು ಅಭಿನಂದಿಸಿದರು.
ಈ ಸಂದರ್ಭಭದಲ್ಲಿ ತುಮುಲ್ ವ್ಯವ ಸ್ಥಾಪಕ ನಿರ್ದೇಶಕ ಶ್ರೀನಿವಾಸನ್, ನೂತನ ನಿರ್ದೇಶ ಕರುಗಳಾದ ಕೊಂಡವಾಡಿ ಚಂದ್ರಶೇ ಖರ್, ಚನ್ನ ಮಲ್ಲಯ್ಯ ಮತ್ತಿತರರು ಉಪಸ್ಥಿತರಿದ್ದರು.





