BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ
ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

By News Desk BenkiyabaleUpdated:March 25, 2026 4:58 pm

ತುಮಕೂರು: ಆಧುನಿಕ ಜಗತ್ತಿನ ಒತ್ತಡದ ಬದುಕಿಗೆ ಡಿ.ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ ಒಂದು ಅತ್ಯುತ್ತಮ ದಿವ್ಯೌಷಧಿಯಾಗಿದೆ ಎಂದು ವೈದ್ಯರು, ಲೇಖಕರು ಹಾಗೂ ಡಿಡಿ ಚಂದನದ ಥಟ್ ಅಂತ ಹೇಳಿ ಕಾರ್ಯಕ್ರಮದ ರೂವಾರಿಗಳಾದ ಡಾ. ನಾ. ಸೋಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಡಿವಿಜಿ ಕಗ್ಗಗಳ ವಾಚನ, ವ್ಯಾಖ್ಯಾನಕಾರರು ಹಾಗೂ ವೈದ್ಯರಾದ ಡಾ.ಕೆ.ರಾಜಶೇಖರ್ ತಿಳಿಸಿದರು.
ತುಮಕೂರು ವಿವಿಯಲ್ಲಿ ಹಿರಿಯ ನಾಗರೀಕರ ಪರಿಸರ ವೇದಿಕೆ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಕನ್ನಡ ವಿಭಾಗ ಇವರ ಸಹಯೋಗದಲ್ಲಿ ಮಾ.24 ಮಂಗಳವಾರ ಆಯೋಜಿಸಲಾಗಿದ್ದ ಡಿ.ವಿ.ಜಿ ಅವರ ಕಗ್ಗಗಳ ವಾಚನ, ವ್ಯಾಖ್ಯಾನ ಮುಕ್ತಾಯ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೇವಲ ನಾಲ್ಕು ಸಾಲುಗಳಲ್ಲಿ ಇಡೀ ಬದುಕಿನ ಸಾರವನ್ನು ಹಿಡಿದಿಡುವ ಕಗ್ಗ, ಕನ್ನಡಿಗರ ಪಾಲಿನ ‘ಆಧುನಿಕ ಭಗವದ್ಗೀತೆ’. ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ಎಂಬ ಸಾಲುಗಳು ಮನುಷ್ಯನಿಗೆ ಇರಬೇಕಾದ ವಿನಯ ಮತ್ತು ಸಮಾಜಕ್ಕೆ ನೀಡಬೇಕಾದ ಕೊಡುಗೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸುತ್ತವೆ ಎಂದರು.
ಇAದಿನ ಸ್ಪರ್ಧಾತ್ಮಕ ಯುಗದಲ್ಲಿ ಸೋಲು-ಗೆಲುವನ್ನು ಸಮಾನ ವಾಗಿ ಸ್ವೀಕರಿಸುವ ಸ್ಥಿತಪ್ರಜ್ಞತೆಯ ಅಗತ್ಯವಿದೆ. ವಿಧಿಯಾಟ ಮತ್ತು ಮನುಷ್ಯನ ಪುರುಷಾರ್ಥದ ನಡುವಿನ ಸಮತೋಲನವನ್ನು ಕಗ್ಗ ನಮಗೆ ಕಲಿಸಿಕೊಡುತ್ತದೆ. ವಿಜ್ಞಾನ ಮತ್ತು ಅಧ್ಯಾತ್ಮದ ಅಪೂರ್ವ ಸಂಗಮವೇ ಈ ಕೃತಿಯ ಯಶಸ್ಸಿನ ಗುಟ್ಟು ಎಂದು ವಿಶ್ಲೇಷಿಸಿದರು.
ಕನ್ನಡ ಸಾಹಿತ್ಯ ಲೋಕದ ಅಮೂಲ್ಯ ರತ್ನವಾಗಿರುವ ಈ ಕೃತಿಯನ್ನು ಕೇವಲ ಓದುವುದಷ್ಟೇ ಅಲ್ಲದೆ, ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ. ಯುವ ಪೀಳಿಗೆಯು ಇಂತಹ ಮೌಲ್ಯಯುತ ಸಾಹಿತ್ಯದತ್ತ ಒಲವು ತೋರಿದಾಗ ಮಾತ್ರ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಡಿವಿಜಿ ಕಗ್ಗಗಳ ವಾಚನ, ವ್ಯಾಖ್ಯಾನಕಾರರು ಹಾಗೂ ವೈದ್ಯರಾದ ಡಾ.ಕೆ.ರಾಜಶೇಖರ್ ಮಾತನಾಡಿ ಇಂದಿನ ವೇಗದ ಬದುಕಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಯುವ ಪೀಳಿಗೆಗೆ ಡಿ.ವಿ. ಗುಂಡಪ್ಪನವರ ಮಂಕುತಿಮ್ಮನ ಕಗ್ಗದ ವಿಚಾರಗಳ ಅರಿವು ಅತ್ಯಂತ ಅಗತ್ಯವಾಗಿದೆ. ವೃತ್ತಿಯಲ್ಲಿ ವೈದ್ಯರಾಗಿದ್ದರೂ ಸಾಹಿತ್ಯದ ಮೇಲೆ ಅಪಾರ ಅಭಿಮಾನ ಹೊಂದಿರುವ ಡಾ. ರಾಜಶೇಖರ್ ಅವರು, ಕಳೆದ ೯ ರಿಂದ 10 ವರ್ಷಗಳ ಕಾಲ ಹಿರಿಯ ನಾಗರಿಕರಿಗೆ ಕಗ್ಗವನ್ನು ಪರಿಚಯ ಮಾಡಿಕೊಟ್ಟ ಸಾರ್ಥಕ ಕ್ಷಣಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು. ಬದುಕು ಜಟಕಬಂಡಿ, ವಿಧಿ ಅದರ ಸಾಹೇಬ ಎಂಬ ಅಮೋಘ ಸಾಲುಗಳ ಮೂಲಕ ಜನಪ್ರಿಯರಾದ ಡಿವಿಜಿಯವರ ಸಾಹಿತ್ಯವು ಸಕಾಲಿಕವಾಗಿದೆ ಎಂದರು.
ಮ0ಕುತಿಮ್ಮನ ಕಗ್ಗ ಕೇವಲ ಪದ್ಯಗಳ ಸಂಕಲನವಲ್ಲ, ಅದು ಕನ್ನಡಿಗರ ಪಾಲಿನ ಆಧುನಿಕ ಭಗವದ್ಗೀತೆ. ಇದರಲ್ಲಿ ಆತ್ಮ, ಕರ್ಮ ಮತ್ತು ವಿಧಿಯ ಕುರಿತಾದ ಗಹನವಾದ ವಿಚಾರಗಳನ್ನು ಅತ್ಯಂತ ಸರಳವಾಗಿ ತಿಳಿಸಲಾಗಿದೆ. ಬದುಕಿನಲ್ಲಿ ಅಹಂಕಾರ ಮತ್ತು ಮಮಕಾರವನ್ನು ಬಿಟ್ಟು ಹೇಗೆ ಬಾಳಬೇಕು ಎಂಬುದೇ ಕಗ್ಗದ ನೈಜ ಅರ್ಥ ಎಂದು ಅವರು ವಿವರಿಸಿದರು.
ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜು ಪ್ರಾಂಶುಪಾಲರಾದ ಡಾ.ಜಿ.ದಾಕ್ಷಾಯಣಿ, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಹೆಚ್. ಆರ್. ರೇಣುಕ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಸಿಬಂತಿಪದ್ಮನಾಭ ಕೆ.ವಿ., ನಿವೃತ್ತ ಪ್ರಾಂಶುಪಾಲರಾದ ಪ್ರೊ.ಬಿ.ಕರಿಯಣ್ಣ, ಪ್ರಕಾಶ್ ಕುಮಾರ್ ಮತ್ತು ವಿವೇಕಾನಂದ ಶೆಟ್ಟಿ ಸೇರಿದಂತೆ ಹಿರಿಯ ನಾಗರೀಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತುಮಕೂರು ವಿಶ್ವವಿದ್ಯಾನಿಲಯ ತುಮಕೂರು:
Previous Articleಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
Next Article ತಾಂತ್ರಿಕ ವಿಶ್ವವಿದ್ಯಾಲಯ ಪಠ್ಯಕ್ರಮ ಜಗತ್ತಿಗೆ ಮಾದರಿ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.