
ಚಿಕ್ಕನಾಯಕನಹಳ್ಳಿ: ಜಿಲ್ಲೆಯ ಗಡಿ ಭಾಗದ ತಾಲೂಕಾದ ಚಿಕ್ಕನಾಯಕನಹಳ್ಳಿಯಲ್ಲಿರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರವಾಗಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸುವಲ್ಲಿ ವಿದ್ಯಾರ್ಥಿ ನಿಲಯ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಎಬಿವಿಪಿ ಮುಖಂಡರು, ಸರ್ಕಾರದಿಂದ ಸಾಕಷ್ಟು ಅನುದಾನ ಹಾಗೂ ಯೋಜನೆಗಳು ಜಾರಿಯಾದರೂ ಅವುಗಳ ಪ್ರಯೋಜನ ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ಪೌಷ್ಟಿಕ ಆಹಾರ ವಿತರಿಸುವಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. ತಕ್ಷಣವೇ ಗುಣಮಟ್ಟದ ಮತ್ತು ಪೌಷ್ಟಿಕ ಆಹಾರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನೊಂದೆಡೆ, ವಿದ್ಯಾರ್ಥಿ ನಿಲಯದಲ್ಲಿ ಸುರಕ್ಷತೆಯ ಕೊರತೆ ಕೂಡ ಕಂಡುಬAದಿದೆ. ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸದಿರುವುದು ಹಾಗೂ ವಾಚ್ಮನ್ ಇಲ್ಲದಿರುವುದರಿಂದ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಅನಾಹುತ ಸಂಭವಿಸಿದರೆ ಅದರ ಹೊಣೆ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ,
ವಿದ್ಯಾರ್ಥಿಗಳ ವಸತಿ ಕೊಠಡಿಗಳಲ್ಲಿ ಸರಿಯಾದ ಬೆಳಕು ಹಾಗೂ ಗಾಳಿಯ ವ್ಯವಸ್ಥೆ ಇಲ್ಲದಿರುವುದು, ಫ್ಯಾನ್ಗಳು ಬಳಕೆಗೆ ಯೋಗ್ಯವಾಗಿಲ್ಲದಿರುವುದು ಹಾಗೂ ವಿದ್ಯುತ್ ಸ್ವಿಚ್ ಬಾಕ್ಸ್ಗಳು ಸುರಕ್ಷಿತ ಸ್ಥಿತಿಯಲ್ಲಿ ಇಲ್ಲದಿರುವುದು ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ ಎಂದು ಎಬಿವಿಪಿ ಆರೋಪಿಸಿದೆ. ಹಾಸ್ಟೆಲ್ ಸುತ್ತಮುತ್ತ ಹಸಿರು ತ್ಯಾಜ್ಯ ಮತ್ತು ಕಸದ ರಾಶಿ ಹೆಚ್ಚಾಗಿದ್ದು, ಹಲವು ಬಾರಿ ಹಾವುಗಳು ಕಾಣಿಸಿಕೊಂಡಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಶೌಚಾಲಯಗಳಲ್ಲಿನ ಅಸ್ವಚ್ಛತೆ, ನೀರಿನ ಪೋಲು, ಬಿಸಿ ನೀರಿನ ವ್ಯವಸ್ಥೆಯ ಕೊರತೆ ಹಾಗೂ ನೀರು ಸಂಗ್ರಹಕಗಳನ್ನು ಸ್ವಚ್ಛಗೊಳಿಸದಿರುವ ಕಾರಣ ವಿದ್ಯಾರ್ಥಿಗಳಲ್ಲಿ ಚರ್ಮರೋಗ ಮತ್ತು ಅಲರ್ಜಿ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ತಕ್ಷಣವೇ ನೀರಿನ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸಿ ಆರೋಗ್ಯಕರ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.
ಇದೇ ವೇಳೆ, ವಿದ್ಯಾರ್ಥಿಗಳು ಬಳಸುವ ಹಾಸಿಗೆಗಳು ಧೂಳು ಹಿಡಿದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದ್ದು, ಶ್ವಾಸಕೋಶ ಸಂಬAಧಿತ ಕಾಯಿಲೆಗಳು ಮತ್ತು ಅಸ್ತಮಾದಂತಹ ತೊಂದರೆಗಳಿಗೆ ದಾರಿ ಮಾಡಿಕೊಡುತ್ತಿವೆ ಎಂದು ಎಬಿವಿಪಿ ತಿಳಿಸಿದೆ.
ನಿಲಯಪಾಲಕರು ಹಾಗೂ ಅಡುಗೆಯವರ ನಿರ್ಲಕ್ಷ÷್ಯದಿಂದ ಹಾಸ್ಟೆಲ್ನಲ್ಲಿ ಅನೇಕ ಸಮಸ್ಯೆಗಳು ಉಂಟಾಗಿವೆ ಎಂದು ಆರೋಪಿಸಿರುವ ವಿದ್ಯಾರ್ಥಿ ಪರಿಷತ್, ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದೆ.
ಈ ಎಲ್ಲಾ ಸಮಸ್ಯೆಗಳನ್ನು ೧೫ ದಿನಗಳ ಒಳಗಾಗಿ ಬಗೆಹರಿಸಬೇಕು, ಇಲ್ಲವಾದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಬಿವಿಪಿ ಮುಖಂಡರು ಸಮಾಜ ಕಲ್ಯಾಣ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ವಿದ್ಯಾರ್ಥಿ ನಿಲಯಗಳು ಅಭಿವೃದ್ಧಿಯ ಕೇಂದ್ರಗಳಾಗಬೇಕೇ ಹೊರತು, ಅವ್ಯವಸ್ಥೆಯ ಸಂಕೇತಗಳಾಗಬಾರದು. ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

