ತುಮಕೂರು: ತುಮಕೂರು ಜಿಲ್ಲೆಯಲ್ಲಿ ವಿಶೇಷ ಕೊರಿಯನ್ ಕೈಗಾರಿಕಾ ಪ್ರದೇಶ (ಏoಡಿeಚಿಟಿ Iಟಿಜusಣಡಿiಚಿಟ ಂಡಿeಚಿ) ಸ್ಥಾಪನೆಗೆ ಸಂಬAಧಿಸಿದ ಸಾಧ್ಯತೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಕೊರಿಯಾ ಕನ್ಸೋರ್ಟಿಯಂನ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗವು ಶುಕ್ರವಾರ ತುಮಕೂರಿಗೆ ಭೇಟಿ ನೀಡಿತು.
ಈ ನಿಯೋಗದಲ್ಲಿ ಭಾರತದಲ್ಲಿನ ಕೊರಿಯಾ ಗಣರಾಜ್ಯದ ಕಾನ್ಸುಲೇಟ್ ಪಾಲುದಾರರು ಹಾಗೂ ಅಂತಾರಾಷ್ಟಿçÃಯ ಹೂಡಿಕೆಗಳನ್ನು ಆಕರ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕೊರಿಯಾ ಹೂಡಿಕೆದಾರರು ಭಾಗವಹಿಸಿದ್ದರು.
ನಿಯೋಗದೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತುಮಕೂರು ಅಮಾನಿಕೆರೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯ ಕೈಗಾರಿಕಾ ಪರಿಸರ, ಮೂಲಸೌಕರ್ಯ, ಹೂಡಿಕೆ ಅವಕಾಶಗಳು ಹಾಗೂ ಸರ್ಕಾರದ ನೀತಿ ಬೆಂಬಲ ವ್ಯವಸ್ಥೆಗಳ ಕುರಿತು ವಿವರವಾದ ಮಾಹಿತಿ ನೀಡಿದರು. ಜೊತೆಗೆ, ತುಮಕೂರು ಜಿಲ್ಲೆಯ ಅಭಿವೃದ್ಧಿ ಮಾದರಿ, ಕ್ರೀಡಾ ಚಟುವಟಿಕೆಗಳು ಹಾಗೂ ಹೂಡಿಕೆದಾರರಿಗೆ ಲಭ್ಯವಿರುವ ಅನುಕೂಲಕರ ವಾತಾವರಣದ ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಸೌರಶಕ್ತಿ ಯೋಜನೆಗಳು, ಕುಡಿಯುವ ನೀರಿನ ವ್ಯವಸ್ಥೆ, ಎತ್ತಿನಹೊಳೆ ಯೋಜನೆ, ದಸರಾ ಉತ್ಸವ ಸೇರಿದಂತೆ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕ್ರೀಡಾ ಚಟುವಟಿಕೆಗಳ ಕುರಿತು ನಿಯೋಗಕ್ಕೆ ಸಮಗ್ರ ಮಾಹಿತಿ ನೀಡಲಾಯಿತು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳು ನಿಯೋಗದ ಗಮನ ಸೆಳೆದವು.
ಬಳಿಕ ನಿಯೋಗವು ವಸಂತ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಖಿeಡಿಣiಚಿಡಿಥಿ ಖಿಡಿeಚಿಣmeಟಿಣ Pಟಚಿಟಿಣ) ಸೇರಿದಂತೆ ವಿವಿಧ ಕೈಗಾರಿಕಾ ಘಟಕಗಳು ಹಾಗೂ ಕೈಗಾರಿಕಾ ಚಟುವಟಿಕೆಗಳನ್ನು ವೀಕ್ಷಿಸಿತು. ಕೈಗಾರಿಕಾ ಪ್ರದೇಶದಲ್ಲಿ ಲಭ್ಯವಿರುವ ಮೂಲಭೂತ ಸೌಲಭ್ಯಗಳು, ಸಂಪರ್ಕ ವ್ಯವಸ್ಥೆ ಮತ್ತು ಭವಿಷ್ಯದ ಕೈಗಾರಿಕಾ ವಿಸ್ತರಣೆಯ ಸಾಧ್ಯತೆಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಏIಂಆಃ) ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)