BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
news

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

ಜನರಿಗೆ ಬಂದಾಗ ಮಾತ್ರ ನಿಜವಾದ ಅಭಿವೃದ್ಧಿ: ಪ್ರೊ. ಹೆಚ್. ಎಸ್. ಮೋಹನ
By News Desk BenkiyabaleUpdated:June 25, 2026 10:48 am

ತುಮಕೂರು: ಯುವಕರ ಕಣ್ಣಿನಲ್ಲಿ ಭಾರತದ ಭವಿಷ್ಯ ಅಡಗಿದೆ. ದೇಶದ ಸಾಮಾನ್ಯ ಜನರಿಗೂ ಅಗತ್ಯ ವಸ್ತುಗಳನ್ನು ಕೊಳ್ಳುವ ಹಾಗೂ ಹಸಿವನ್ನು ನೀಗಿಸಿಕೊಳ್ಳುವ ಶಕ್ತಿ ಬಂದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ. ಇವೆಲ್ಲವೂ ಸಾಕಾರಗೊಳ್ಳಲು ಕೇಂದ್ರ ಸರ್ಕಾರದ ಪಿಎಂ ಉಷಾ ಯೋಜನೆ ಅತ್ಯಂತ ಸಹಕಾರಿಯಾಗಲಿದೆ ಎಂದು ತುಮಕೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಹೆಚ್. ಎಸ್. ಮೋಹನ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ವ್ಯಾವಹಾರ ಆಡಳಿತ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ, ಪಿಎಂ ಉಷಾ ಯೋಜನೆಯಡಿ ವಿಶ್ವವಿದ್ಯಾನಿಲಯದ ಜ್ಞಾನಸಿರಿ ಆವರಣದಲ್ಲಿ ಜೂ. ೨೪ ಬುಧವಾರ ದಂದು ಹಮ್ಮಿಕೊಳ್ಳಲಾಗಿದ್ದ “ಸುಸ್ಥಿರ ಅಭಿವೃದ್ಧಿ ಗುರಿಗಳು” ಎಂಬ ವಿಷಯದ ಕುರಿತ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕೌಶಲ್ಯಗಳನ್ನು ರೂಢಿಸಿಕೊಂಡಾಗ ಮಾತ್ರ ಸಾಧನೆಯ ಹಾದಿಯಲ್ಲಿ ಸಾಗಲು ಸಾಧ್ಯ. ನಿರಂತರ ಪ್ರಯತ್ನ, ಕಠಿಣ ಶ್ರಮ ಹಾಗೂ ಕಲಿಕೆಯ ಜೊತೆಗೆ ಜೀವನದ ನೋವು-ನಲಿವುಗಳ ಅನುಭವಗಳ ಬಗ್ಗೆ ಅರಿವು ಮೂಡಿಸಿಕೊಂಡಾಗ ಮಾತ್ರ ಯಶಸ್ಸು ಲಭಿಸುತ್ತದೆ. ಸರಿಯಾದ ಬುನಾದಿ ಮತ್ತು ಗುರಿ ಇಲ್ಲದಿದ್ದರೆ ವಿಫಲವಾಗುವುದು ಖಂಡಿತ. ಆದ್ದರಿಂದ ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ವಿದ್ಯಾರ್ಥಿ ಜೀವನದಲ್ಲೇ ಸದುಪಯೋಗಪಡಿಸಿಕೊಳ್ಳಬೇಕು, ಅವಕಾಶ ವಂಚಿತರಾಗಿ ನಂತರ ಮರುಗಬಾರದು ಎಂದರು.
ತುಮಕೂರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರು ಹಾಗೂ ಸಂಶೋಧನಾ ನಿರ್ದೇಶಕರಾದ ಪ್ರೊ. ವಿಲಾಸ್ ಕದ್ರೋಲ್ಕರ್ ಅವರು ಮಾತನಾಡಿ ಇತ್ತೀಚಿನ ಜಾಗತಿಕ ಯುದ್ಧದ ಪರಿಸ್ಥಿತಿಯ ನಡುವೆ ನಾವೆಲ್ಲರೂ ಸುಸ್ಥಿರ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದೇವೆ. ಜ್ಞಾನ, ನಾವೀನ್ಯತೆ ಮತ್ತು ಜವಾಬ್ದಾರಿಯುತ ನಿರ್ವಹಣೆಯ ಮೂಲಕ ಭಾರತದ ಭವಿಷ್ಯದ ನಾಯಕರನ್ನು ಸಬಲೀಕರಣಗೊಳಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಭವಿಷ್ಯದಲ್ಲಿ ನಾವು ಹೇಗೆ ಬಾಳಬೇಕು ಎಂಬುದನ್ನು ಅರಿತುಕೊಳ್ಳುವ ಮಹತ್ವದ ಸ್ಥಿತಿಯಲ್ಲಿ ನಾವಿಂದು ನಿಂತಿದ್ದೇವೆ. ಪ್ರಕೃತಿ ಮತ್ತು ಪರಿಸರದ ಬಗ್ಗೆ ಕಾಳಜಿ ವಹಿಸುವುದು ಹಾಗೂ ಮಹಿಳೆಯರಿಗೆ ಗೌರವ ನೀಡುವ ಕೆಲಸ ನಮ್ಮಿಂದ ಮೊದಲಾಗಬೇಕು ಎಂದರು.
ಭಾರತವು ಸುಸ್ಥಿರ ಅಭಿವೃದ್ಧಿಗಾಗಿ ಈಗಾಗಲೇ ಹಲವು ಪ್ರಮುಖ ಅಂಶಗಳನ್ನು ಅಳವಡಿಸಿಕೊಂಡಿದೆ. ಸೌರ ಮತ್ತು ಪವನ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಅಂತರರಾಷ್ಟಿçÃಯ ಸೌರ ಒಕ್ಕೂಟದ ಮೂಲಕ ಭಾರತ ಜಾಗತಿಕ ಮಟ್ಟದಲ್ಲಿ ನಾಯಕತ್ವ ಸಾಧಿಸಿದೆ. ದೇಶದ ಪ್ರತಿ ಪ್ರಜೆಗೂ ನೈರ್ಮಲ್ಯ ಮತ್ತು ಸುರಕ್ಷಿತ ಕುಡಿಯುವ ನೀರನ್ನು ತಲುಪಿಸುವ ನಿಟ್ಟಿನಲ್ಲಿ ಉತ್ತಮ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿ ಹಾಗೂ ಸಾವಯವ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದ್ದು, ನಗರ ಪ್ರದೇಶಗಳಲ್ಲಿ ಮಾಲಿನ್ಯ ನಿಯಂತ್ರಿಸಲು ಎಲೆಕ್ಟಿçಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ. ಆ ಮೂಲಕ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸುವ ಪ್ರಮುಖ ಗುರಿಗಳನ್ನು ದೇಶ ಹೊಂದಿದೆ ಎಂದರು.
ನಮ್ಮ ಕೃಷಿ ವಲಯವು ಇಂದಿಗೂ ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿರುವುದರಿAದ, ಹವಾಮಾನ ಬದಲಾವಣೆಗಳು ಆಹಾರ ಭದ್ರತೆ ಮತ್ತು ಗ್ರಾಮೀಣ ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರುತ್ತಿವೆ ಎಂದರು.
ವ್ಯವಹಾರ ಆಡಳಿತ ಅಧ್ಯಯನ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ಪ್ರಾಧ್ಯಾಪಕರಾದ ಪ್ರೊ. ನೂರ್ ಅಫ್ಜಾ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಮೈಸೂರು ವಿಶ್ವವಿದ್ಯಾನಿಲಯದ ಬಿ.ಎನ್. ಬಹದ್ದೂರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಸಂಸ್ಥೆಯ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಮಹೇಶ್ .ಆರ್. ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿಭಾಗದ ಪ್ರಾಧ್ಯಾಪಕರಾದ ಡಾ. ಶಶಿಧರ್ .ಆರ್. ಉಪಸ್ಥಿತರಿದ್ದರು.

(Visited 1 times, 1 visits today)
karnataka local news tumkur news tumkur university
Previous Articleಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
Next Article ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
News Desk Benkiyabale

Related Posts

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am news

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am news

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news
ತಾಜಾ ಸುದ್ಧಿಗಳು

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm
Our Youtube Channel
Our Picks

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

By News Desk BenkiyabaleJune 25, 2026 10:54 am

ಹುಳಿಯಾರು: ದಶಕಗಳಿಂದ ತ್ಯಾಜ್ಯದ ಕೂಪವಾಗಿ ಮಾರ್ಪಟ್ಟು, ದುರ್ನಾಥ ಬೀರುತ್ತಿದ್ದ ಹುಳಿಯಾರು ಕೆರೆಗೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ. ಕೆರೆಯ…

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.